Homeಮುಖಪುಟಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ...

ಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ…

- Advertisement -
- Advertisement -

ಇತ್ತೀಚಿಗಷ್ಟೇ ನಡೆದ #ಬಾಡೇನಮ್‌ಗಾಡು ಅಭಿಯಾನದ ಬಗ್ಗೆ ತಿಳಿದು, ನಮ್ಮ ಆಫೀಸಿನಲ್ಲಿ ಎಲ್ಲರೂ ಒಟ್ಟಿಗೆ ಬಾಡು ಸೇವಿಸುತ್ತಿದ್ದ ಫೋಟೋಗಳನ್ನ ನೋಡಿದಾಗ, ಇದೇ ನೆಪದಲ್ಲಿ ನಾನು ಸಂಶೋಧನೆ ಇನ್ಸ್ಟಿಟ್ಯೂಟಿನವರೆಲ್ಲರೂ ಒಂದು ದಿನ ಒಟ್ಟಿಗೆ ಬಾಡು ತಿನ್ನಬಹುದಲ್ಲಾ ಅನ್ನಿಸಿತು. ನಾಳೆ ನಾವು ಒಂದಷ್ಟು ಜನ ಮತ್ತಿಕೆರೆಯ ಚಂದ್ರಪ್ಪ ಹೋಟೆಲಿನಲ್ಲಿ ಬಾಡು ತಿನ್ನಲಿದ್ದೇವೆ, ನೀವೂ ಜೊತೆಯಾಗಿ ಎಂದು ಒಂದು ಸ್ಟೇಟಸ್ ಬರೆದು ಹಾಕಿದೆ. ಅದನ್ನು ಗಮನಿಸಿದ ಕಿರಿಯ ಸಂಬಂಧಿಕರೊಬ್ಬರು, ನಮ್ಮ ಕುಟುಂಬದಲ್ಲಿ ಹಿರಿಯರೆನಿಸಿರುವ ಸಂಬಂಧಿಕರಿಗೆ ಆ ಸ್ಟೇಟಸ್‌ಅನ್ನು ಕಳುಹಿಸಿಕೊಟ್ಟು, ನೋಡಿ ನಮ್ಮ ಮನೆತನದ ಗೌರವ ಏನಾಗಬೇಕು, ನೀವಾದರೂ ಬುದ್ಧಿ ಹೇಳಿ ಅಂದರಂತೆ!

ಅದಕ್ಕವರು ನನಗೆ ಕರೆ ಮಾಡಿ, ಹಾಗೆ-ಹೀಗೆ ಅಂತ ’ಬುದ್ಧಿವಾದ’ ಹೇಳಲು ಶುರುವಿಟ್ಟರು. ಅವರು ಹೇಳಿದ್ದು ಇಷ್ಟು. ’ಈಗಿನ ಕಾಲದಲ್ಲಿ ನೀನು ಇದು ತಿನ್ನು ಅದು ತಿನ್ನು ಎಂದೆಲ್ಲಾ ಹೇಳಿದರೆ ನೀವು ಕೇಳುವುದಿಲ್ಲ, ನಾವು ಹೇಳುವುದಕ್ಕೂ ಆಗುವುದಿಲ್ಲ. ತಿನ್ನುವುದು ನಿಮ್ಮ ಹಕ್ಕು ಎನ್ನುತ್ತೀರಿ. ಆದರೆ ಅದನ್ನು ಪ್ರಚಾರ ಮಾಡಬಾರದಿತ್ತು. ಅದು ಅಗತ್ಯವಿರಲಿಲ್ಲ’ ಎಂದರು. ಹಾಗೆಲ್ಲ ಹಾಕಬೇಡ, ಜೋಯಿಸರ ಮನೆಯವರೇ ಹೀಗಾದರೆ ಹೇಗೆ ಎಂದು ಜನ ನಮ್ಮನ್ನು ಆಡಿಕೊಂಡು ನಗುತ್ತಾರೆ, ಪ್ರಶ್ನಿಸುತ್ತಾರೆ. ಅದಕ್ಕೇನು ಹೇಳುವುದು? ನಮಗೆ ಅವಮಾನವಾಗುತ್ತೆ. ಅದು ನಿಮ್ಮ ತಂದೆ-ತಾಯಿಯರಿಗೆ ಎಷ್ಟು ನೋವಾಗಿರಬಹುದು ಎಂದು ಯೋಚಿಸು ಎಂದರು. ಅದೂಅಲ್ಲದೆ, ಅವರು ನಾವು ಬಾಡು ತಿನ್ನಲಿದ್ದ ಜಾಗಕ್ಕೆ ಬಂದು ಅದನ್ನು ನಿಲ್ಲಿಸಲಿಕ್ಕೆ ಹೊರಡುವ ಯೋಚನೆಯಲ್ಲಿದ್ದಾಗ ಅವರನ್ನು ಅವರ ಪತ್ನಿ ತಡೆದರಂತೆ.

ನಾನು ಅವರಿಗೆ ಕೇಳಿದ್ದಿಷ್ಟು. ನಮ್ಮ ಸಂಬಂಧಿಕರೇ ಉಪ್ಪಿಟ್ಟು, ಮೊಸರನ್ನದ ಫೋಟೋಗಳನ್ನ ದಿನನಿತ್ಯ ಹಂಚಿಕೊಂಡಾಗ ಬೇಸರ ಎನಿಸದ ನಮಗೆ, ಬಾಡಿನ ಫೋಟೋಗಳು ನೋಡಿದಾಗ ಯಾಕಿಷ್ಟು ಕಸಿವಿಸಿ ಆಗುತ್ತದೆ? ನನ್ನ ಆಹಾರ ನನ್ನ ಹಕ್ಕು. ನಿಮಗೆ ನಾನು ಬಾಡು ತಿನ್ನುವುದರಿಂದ ಅವಮಾನವಾಗುವುದಾದರೆ ಅದನ್ನು ನೀವೇ ಬಗೆಹರಿಸಿಕೊಳ್ಳಿ. ಒಂದು ಕುಟುಂಬದ ’ಶ್ರೇಷ್ಠ’ತೆಗೂ ಅವರ ಊಟಕ್ಕೂ ಸಂಬಂಧ ಕಟ್ಟುವುದನ್ನೇ ನಾವು ಇಲ್ಲಿ ಪ್ರಶ್ನಿಸುತ್ತಿರುವುದು ಎಂದೆ. ’ನೀನು, ನಿನ್ನ ಬುದ್ಧಿಯಂತೆ, ಇಚ್ಛೆಯಂತೆ ನಡೆದುಕೊಂಡರೂ, ನಮ್ಮ ಕುಟುಂಬಕ್ಕೆ (ಅವರು ಇಲ್ಲಿ ಕುಟುಂಬ ಎಂದು ಹೇಳುತ್ತಿರುವುದು, ನಿಜವಾಗಿ ಜಾತಿಯೇ ಆಗಿದೆ) ಅದು ಬಂದಿಲ್ಲ’ ಎಂಬುದು ಅವರ ವಾದವಾಗಿತ್ತು.

ಇದು ಇಂದಿನ ದಮನಕಾರಿ ವ್ಯವಸ್ಥೆಯ ಮುಖ್ಯ ಲಕ್ಷಣವೊಂದನ್ನು ಮುಂದಿಡುತ್ತಿದೆ. ಜಾತೀಯತೆ, ಪಿತೃಪ್ರಧಾನತೆ ಮತ್ತು ಮತಧರ್ಮಗಳು ಸೇರಿದಂತೆ ಇತರೆ ವ್ಯವಸ್ಥೆಗಳು ಜನರ ಜೀವನವನ್ನು ಮತ್ತು ನಡವಳಿಕೆಗಳನ್ನು ಪ್ರಭಾವಿಸುತ್ತವೆ ಎಂಬುದು ಒಂದು ಸಿದ್ಧಾಂತ. ಅದಕ್ಕೆ ಪ್ರತಿಯಾಗಿ ವ್ಯಕ್ತಿಗಳೇ ತಮ್ಮ ಜೀವನವನ್ನು ನಿರ್ಧರಿಸಿಕೊಳ್ಳುತ್ತಾರೆ ಎಂಬ ವ್ಯಕ್ತಿವಾದದ ಸಿದ್ಧಾಂತವೂ ಇದೆ. ಇಂದು ವ್ಯಕ್ತಿವಾದವನ್ನೇ ಮುಂದಿಡುತ್ತಾ, ನಿಮ್ಮ ಜೀವನವನ್ನು ನೀವು ಕಟ್ಟಿಕೊಳ್ಳುವುದು, ನಿಮ್ಮ ಶ್ರಮವೇ ನಿಮ್ಮ ಜೀವನವನ್ನು ನಿರ್ಧರಿಸುವುದು ಎಂದು ಜನರಿಗೆ ಹೇಳುತ್ತಾ, ವ್ಯಕ್ತಿಯೊಬ್ಬನಿಗೆ ತಾನು ಉಣ್ಣುವ ಆಹಾರವನ್ನು ಆಯ್ದುಕೊಳ್ಳುವ ’ಆಯ್ಕೆ’ಯಿದೆ ಎಂದು ನಂಬಿಸುತ್ತಲೇ, ಮತ್ತೊಂದೆಡೆ ’ಕುಟುಂಬ’ (ಜಾತಿ) ಎಂಬ ವ್ಯವಸ್ಥೆಯ ಕಟ್ಟಲೆಯನ್ನು ಒಟ್ಟೊಟ್ಟಿಗೆ ಮುಂದುವರೆಸಿಕೊಂಡು ಹೋಗುತ್ತಿದೆ. ಈ ವ್ಯವಸ್ಥೆಯು ತನಗೆ ಹಿತವೆನಿಸುವ ರೀತಿಯಲ್ಲಿ ವ್ಯಕ್ತಿವಾದ ಮತ್ತು ದಮನಕಾರಿ ವ್ಯವಸ್ಥೆಗಳನ್ನು ಒಟ್ಟೊಟ್ಟಿಗೆ ಮುಂದೆ ಕೊಂಡೊಯ್ಯುತ್ತಿದೆ. ಈ ವ್ಯವಸ್ಥೆಯಲ್ಲಿ ನನ್ನಂತ ಒಂದಷ್ಟು ಜನರು ಮಾತ್ರವೇ ತಮ್ಮ ’ಆಯ್ಕೆ’ಯನ್ನು ಚಲಾಯಿಸಬಹುದಾಗಿದೆ. ಅವರು ಯಾರು ಎಂಬುದು ಕೂಡ ಜಾತಿ ಮತ್ತು ಇತರೆ ದಮನಕಾರಿ ವ್ಯವಸ್ಥೆಗಳಿಂದಲೇ ನಿರ್ಧಾರವಾಗುತ್ತದೆ. ಹೀಗಿರುವಾಗ, ಆ ’ಆಯ್ಕೆ’ ಸಾಧ್ಯವಿದ್ದಾಗ ನನ್ನಂತೆ ಬ್ರಾಹ್ಮಣ ಜಾತಿಯ-ಮೇಲುಜಾತಿಯೆಂದು ಕರೆದುಕೊಳ್ಳಲ್ಪಟ್ಟ ಶೋಷಕ ಜಾತಿಯ ಮನೆಗಳ-ಮನಸ್ಸುಗಳ ಕೊಳಕನ್ನು ಪ್ರಶ್ನಿಸುವುದಕ್ಕೆ ಆ ’ಆಯ್ಕೆ’ಯನ್ನು ಬಳಸುವುದು ಸೂಕ್ತ ಎಂದು ನಾನು ನಂಬಿದ್ದೇನೆ.

ಇನ್ನೊಂದು ವಿಷಯವಿದೆ. ಪಾಪ ನನ್ನ ಆ ಸಂಬಂಧಿಕರು, ನಾನು ಇದೇ ಮೊದಲಬಾರಿ ಬಾಡು ತಿನ್ನುತ್ತಿರುವುದು ಎಂದು ಎಣಿಸಿರಬೇಕು. ಅದಕ್ಕೆ ಅಷ್ಟು ಕೋಪ, ಸಿಟ್ಟು, ಆಕ್ರೋಶ. ನಾನು ಹೈದರಾಬಾದಿನ ಟಿಸ್‌ನಲ್ಲಿ (TISS) ಕಮ್ಯುನಿಸ್ಟರು, ಅಂಬೇಡ್ಕರವಾದಿಗಳ ಜೊತೆ ಸೇರಿಯೇ ಹೀಗಾದೆ ಎಂದು ಅವರೂ ಸೇರಿದಂತೆ ನನ್ನ ಹೆತ್ತವರೂ ನಂಬಿ ತಿಳಿದಿರುವುದುಂಟು. ಆದರೆ, ಹಾಗೇನಿಲ್ಲ. ಸಸ್ಯಾಹಾರಿತ್ವದ ಬಗ್ಗೆ ಬಹಳ ಹೆಮ್ಮೆಪಡುತ್ತಿದ್ದ ನಾನು, ಒಮ್ಮೆ ಮೈಸೂರಿನಿಂದ ಮಧ್ಯರಾತ್ರಿ ಸೈಕಲಿನಲ್ಲಿ ಬೆಂಗಳೂರಿನ ಕಡೆಗೆ ಹೊರಟೆ. ಶ್ರೀರಂಗಪಟ್ಟಣದ ಬಳಿ ಬರುವ ಹೊತ್ತಿಗೆ ಸುಮಾರು 2 ಗಂಟೆಯಾಗಿತ್ತು. ಹಸಿದಿತ್ತು. ಕಾಸು ಕಡಿಮೆಯಿತ್ತು. ದೊಡ್ಡ ಹೋಟೆಲುಗಳಿಗೆ ಹೋಗುವಷ್ಟಿರಲಿಲ್ಲ. Omn ಗಾಡಿಯೊಂದರಲ್ಲಿ ಊಟ ಸಿಗುತ್ತಿತ್ತು. ಹೋಗಿ ನೋಡಿದೆ. ಪರೋಟ ಮತ್ತು ಚಿಕನ್ ಕರಿಯಷ್ಟೇ ಇದ್ದದ್ದು. ಒಂದು ಕ್ಷಣ ಯೋಚಿಸಿದೆ. ಹಸಿವಿಗೆ ಆಹಾರವೇ ಮುಖ್ಯ. ಏನಾದರೇನು? ಎಂದು ತಿಂದೆ. ಬಹಳ ರುಚಿಕರವಾಗಿದ್ದ ಚಿಕನ್ ತಿಂದ ನನಗೆ, ಇಷ್ಟು ವರ್ಷ ಇಷ್ಟು ರುಚಿಯಾದ ಆಹಾರವನ್ನು ಏಕೆ ತಿನ್ನಲಿಲ್ಲ ಅನ್ನಿಸಿತು. ಅಲ್ಲಿಂದ ಇಲ್ಲಿಗೆ, ಅವಕಾಶ ಸಿಕ್ಕಾಗಲೆಲ್ಲಾ ಚಿಕನ್, ಮಟನ್ ಅಷ್ಟೇ ಅಲ್ಲದೆ ಪೋರ್ಕ್ ಮತ್ತು ಬೀಫ್ ಸೇರಿದಂತೆ ಎಲ್ಲಾ ಬಾಡನ್ನು ಮಿಸ್ ಮಾಡದೆ ತಿನ್ನುತ್ತೇನೆ. ಇಂದು ನನಗೆ ವೈಯಕ್ತಿಕವಾಗಿ, ಮಾಂಸಾಹಾರದಲ್ಲಿರುವಷ್ಟು ರುಚಿ ಮತ್ತು ವೆರೈಟಿಯ ಖಾದ್ಯಗಳು ಸಸ್ಯಾಹಾರದಲ್ಲಿಲ್ಲ ಎನಿಸುತ್ತದೆ. ಮಾಂಸಾಹಾರ ಸೇವನೆ ಇಂದು ನನ್ನ ಸಿದ್ಧಾಂತದ ಒಂದು ಭಾಗ ಎಂಬುದು ಎಷ್ಟು ಸತ್ಯವೋ ನಾನು ಮಾಂಸಾಹಾರ ಸೇವನೆಗೆ ಇಳಿದಿದ್ದು ಹಸಿವಿನಿಂದ, ಸಿದ್ಧಾಂತಗಳಿಂದಲ್ಲ ಎಂಬುದೂ ಅಷ್ಟೇ ಸತ್ಯ.

ಅದರಂತೆಯೇ, ಎಲ್ಲಾ ಜಾತಿ, ವರ್ಗಗಳ ಮಕ್ಕಳು ಸೇರಿ ಬೆರೆಯಬೇಕಿರುವ ಶಾಲಾ-ಕಾಲೇಜುಗಳ ಬಹಳಷ್ಟು ಕ್ಯಾಂಟೀನುಗಳಲ್ಲಿ ದುಡ್ಡುಕೊಟ್ಟರೂ ಮಾಂಸಾಹಾರವೇಕೆ ಸಿಗುವುದಿಲ್ಲ ಎಂಬ ಪ್ರಶ್ನೆಯನ್ನೂ #ಬಾಡೇನಮ್‌ಗಾಡು ಹಿನ್ನೆಲೆಯಲ್ಲಿ ಕೇಳಬೇಕೆನ್ನಿಸಿತು.

  • ಶಶಾಂಕ್, NIASನಲ್ಲಿ ಸಂಶೋಧನಾ ವಿದ್ಯಾರ್ಥಿ

ಇದನ್ನೂ ಓದಿ: ಆಹಾರ ಶ್ರೇಷ್ಠತೆಯ ರಾಜಕೀಯದ ವಿವಿಧ ಮುಖಗಳು

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...