Homeಮುಖಪುಟಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ...

ಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ…

- Advertisement -
- Advertisement -

ಇತ್ತೀಚಿಗಷ್ಟೇ ನಡೆದ #ಬಾಡೇನಮ್‌ಗಾಡು ಅಭಿಯಾನದ ಬಗ್ಗೆ ತಿಳಿದು, ನಮ್ಮ ಆಫೀಸಿನಲ್ಲಿ ಎಲ್ಲರೂ ಒಟ್ಟಿಗೆ ಬಾಡು ಸೇವಿಸುತ್ತಿದ್ದ ಫೋಟೋಗಳನ್ನ ನೋಡಿದಾಗ, ಇದೇ ನೆಪದಲ್ಲಿ ನಾನು ಸಂಶೋಧನೆ ಇನ್ಸ್ಟಿಟ್ಯೂಟಿನವರೆಲ್ಲರೂ ಒಂದು ದಿನ ಒಟ್ಟಿಗೆ ಬಾಡು ತಿನ್ನಬಹುದಲ್ಲಾ ಅನ್ನಿಸಿತು. ನಾಳೆ ನಾವು ಒಂದಷ್ಟು ಜನ ಮತ್ತಿಕೆರೆಯ ಚಂದ್ರಪ್ಪ ಹೋಟೆಲಿನಲ್ಲಿ ಬಾಡು ತಿನ್ನಲಿದ್ದೇವೆ, ನೀವೂ ಜೊತೆಯಾಗಿ ಎಂದು ಒಂದು ಸ್ಟೇಟಸ್ ಬರೆದು ಹಾಕಿದೆ. ಅದನ್ನು ಗಮನಿಸಿದ ಕಿರಿಯ ಸಂಬಂಧಿಕರೊಬ್ಬರು, ನಮ್ಮ ಕುಟುಂಬದಲ್ಲಿ ಹಿರಿಯರೆನಿಸಿರುವ ಸಂಬಂಧಿಕರಿಗೆ ಆ ಸ್ಟೇಟಸ್‌ಅನ್ನು ಕಳುಹಿಸಿಕೊಟ್ಟು, ನೋಡಿ ನಮ್ಮ ಮನೆತನದ ಗೌರವ ಏನಾಗಬೇಕು, ನೀವಾದರೂ ಬುದ್ಧಿ ಹೇಳಿ ಅಂದರಂತೆ!

ಅದಕ್ಕವರು ನನಗೆ ಕರೆ ಮಾಡಿ, ಹಾಗೆ-ಹೀಗೆ ಅಂತ ’ಬುದ್ಧಿವಾದ’ ಹೇಳಲು ಶುರುವಿಟ್ಟರು. ಅವರು ಹೇಳಿದ್ದು ಇಷ್ಟು. ’ಈಗಿನ ಕಾಲದಲ್ಲಿ ನೀನು ಇದು ತಿನ್ನು ಅದು ತಿನ್ನು ಎಂದೆಲ್ಲಾ ಹೇಳಿದರೆ ನೀವು ಕೇಳುವುದಿಲ್ಲ, ನಾವು ಹೇಳುವುದಕ್ಕೂ ಆಗುವುದಿಲ್ಲ. ತಿನ್ನುವುದು ನಿಮ್ಮ ಹಕ್ಕು ಎನ್ನುತ್ತೀರಿ. ಆದರೆ ಅದನ್ನು ಪ್ರಚಾರ ಮಾಡಬಾರದಿತ್ತು. ಅದು ಅಗತ್ಯವಿರಲಿಲ್ಲ’ ಎಂದರು. ಹಾಗೆಲ್ಲ ಹಾಕಬೇಡ, ಜೋಯಿಸರ ಮನೆಯವರೇ ಹೀಗಾದರೆ ಹೇಗೆ ಎಂದು ಜನ ನಮ್ಮನ್ನು ಆಡಿಕೊಂಡು ನಗುತ್ತಾರೆ, ಪ್ರಶ್ನಿಸುತ್ತಾರೆ. ಅದಕ್ಕೇನು ಹೇಳುವುದು? ನಮಗೆ ಅವಮಾನವಾಗುತ್ತೆ. ಅದು ನಿಮ್ಮ ತಂದೆ-ತಾಯಿಯರಿಗೆ ಎಷ್ಟು ನೋವಾಗಿರಬಹುದು ಎಂದು ಯೋಚಿಸು ಎಂದರು. ಅದೂಅಲ್ಲದೆ, ಅವರು ನಾವು ಬಾಡು ತಿನ್ನಲಿದ್ದ ಜಾಗಕ್ಕೆ ಬಂದು ಅದನ್ನು ನಿಲ್ಲಿಸಲಿಕ್ಕೆ ಹೊರಡುವ ಯೋಚನೆಯಲ್ಲಿದ್ದಾಗ ಅವರನ್ನು ಅವರ ಪತ್ನಿ ತಡೆದರಂತೆ.

ನಾನು ಅವರಿಗೆ ಕೇಳಿದ್ದಿಷ್ಟು. ನಮ್ಮ ಸಂಬಂಧಿಕರೇ ಉಪ್ಪಿಟ್ಟು, ಮೊಸರನ್ನದ ಫೋಟೋಗಳನ್ನ ದಿನನಿತ್ಯ ಹಂಚಿಕೊಂಡಾಗ ಬೇಸರ ಎನಿಸದ ನಮಗೆ, ಬಾಡಿನ ಫೋಟೋಗಳು ನೋಡಿದಾಗ ಯಾಕಿಷ್ಟು ಕಸಿವಿಸಿ ಆಗುತ್ತದೆ? ನನ್ನ ಆಹಾರ ನನ್ನ ಹಕ್ಕು. ನಿಮಗೆ ನಾನು ಬಾಡು ತಿನ್ನುವುದರಿಂದ ಅವಮಾನವಾಗುವುದಾದರೆ ಅದನ್ನು ನೀವೇ ಬಗೆಹರಿಸಿಕೊಳ್ಳಿ. ಒಂದು ಕುಟುಂಬದ ’ಶ್ರೇಷ್ಠ’ತೆಗೂ ಅವರ ಊಟಕ್ಕೂ ಸಂಬಂಧ ಕಟ್ಟುವುದನ್ನೇ ನಾವು ಇಲ್ಲಿ ಪ್ರಶ್ನಿಸುತ್ತಿರುವುದು ಎಂದೆ. ’ನೀನು, ನಿನ್ನ ಬುದ್ಧಿಯಂತೆ, ಇಚ್ಛೆಯಂತೆ ನಡೆದುಕೊಂಡರೂ, ನಮ್ಮ ಕುಟುಂಬಕ್ಕೆ (ಅವರು ಇಲ್ಲಿ ಕುಟುಂಬ ಎಂದು ಹೇಳುತ್ತಿರುವುದು, ನಿಜವಾಗಿ ಜಾತಿಯೇ ಆಗಿದೆ) ಅದು ಬಂದಿಲ್ಲ’ ಎಂಬುದು ಅವರ ವಾದವಾಗಿತ್ತು.

ಇದು ಇಂದಿನ ದಮನಕಾರಿ ವ್ಯವಸ್ಥೆಯ ಮುಖ್ಯ ಲಕ್ಷಣವೊಂದನ್ನು ಮುಂದಿಡುತ್ತಿದೆ. ಜಾತೀಯತೆ, ಪಿತೃಪ್ರಧಾನತೆ ಮತ್ತು ಮತಧರ್ಮಗಳು ಸೇರಿದಂತೆ ಇತರೆ ವ್ಯವಸ್ಥೆಗಳು ಜನರ ಜೀವನವನ್ನು ಮತ್ತು ನಡವಳಿಕೆಗಳನ್ನು ಪ್ರಭಾವಿಸುತ್ತವೆ ಎಂಬುದು ಒಂದು ಸಿದ್ಧಾಂತ. ಅದಕ್ಕೆ ಪ್ರತಿಯಾಗಿ ವ್ಯಕ್ತಿಗಳೇ ತಮ್ಮ ಜೀವನವನ್ನು ನಿರ್ಧರಿಸಿಕೊಳ್ಳುತ್ತಾರೆ ಎಂಬ ವ್ಯಕ್ತಿವಾದದ ಸಿದ್ಧಾಂತವೂ ಇದೆ. ಇಂದು ವ್ಯಕ್ತಿವಾದವನ್ನೇ ಮುಂದಿಡುತ್ತಾ, ನಿಮ್ಮ ಜೀವನವನ್ನು ನೀವು ಕಟ್ಟಿಕೊಳ್ಳುವುದು, ನಿಮ್ಮ ಶ್ರಮವೇ ನಿಮ್ಮ ಜೀವನವನ್ನು ನಿರ್ಧರಿಸುವುದು ಎಂದು ಜನರಿಗೆ ಹೇಳುತ್ತಾ, ವ್ಯಕ್ತಿಯೊಬ್ಬನಿಗೆ ತಾನು ಉಣ್ಣುವ ಆಹಾರವನ್ನು ಆಯ್ದುಕೊಳ್ಳುವ ’ಆಯ್ಕೆ’ಯಿದೆ ಎಂದು ನಂಬಿಸುತ್ತಲೇ, ಮತ್ತೊಂದೆಡೆ ’ಕುಟುಂಬ’ (ಜಾತಿ) ಎಂಬ ವ್ಯವಸ್ಥೆಯ ಕಟ್ಟಲೆಯನ್ನು ಒಟ್ಟೊಟ್ಟಿಗೆ ಮುಂದುವರೆಸಿಕೊಂಡು ಹೋಗುತ್ತಿದೆ. ಈ ವ್ಯವಸ್ಥೆಯು ತನಗೆ ಹಿತವೆನಿಸುವ ರೀತಿಯಲ್ಲಿ ವ್ಯಕ್ತಿವಾದ ಮತ್ತು ದಮನಕಾರಿ ವ್ಯವಸ್ಥೆಗಳನ್ನು ಒಟ್ಟೊಟ್ಟಿಗೆ ಮುಂದೆ ಕೊಂಡೊಯ್ಯುತ್ತಿದೆ. ಈ ವ್ಯವಸ್ಥೆಯಲ್ಲಿ ನನ್ನಂತ ಒಂದಷ್ಟು ಜನರು ಮಾತ್ರವೇ ತಮ್ಮ ’ಆಯ್ಕೆ’ಯನ್ನು ಚಲಾಯಿಸಬಹುದಾಗಿದೆ. ಅವರು ಯಾರು ಎಂಬುದು ಕೂಡ ಜಾತಿ ಮತ್ತು ಇತರೆ ದಮನಕಾರಿ ವ್ಯವಸ್ಥೆಗಳಿಂದಲೇ ನಿರ್ಧಾರವಾಗುತ್ತದೆ. ಹೀಗಿರುವಾಗ, ಆ ’ಆಯ್ಕೆ’ ಸಾಧ್ಯವಿದ್ದಾಗ ನನ್ನಂತೆ ಬ್ರಾಹ್ಮಣ ಜಾತಿಯ-ಮೇಲುಜಾತಿಯೆಂದು ಕರೆದುಕೊಳ್ಳಲ್ಪಟ್ಟ ಶೋಷಕ ಜಾತಿಯ ಮನೆಗಳ-ಮನಸ್ಸುಗಳ ಕೊಳಕನ್ನು ಪ್ರಶ್ನಿಸುವುದಕ್ಕೆ ಆ ’ಆಯ್ಕೆ’ಯನ್ನು ಬಳಸುವುದು ಸೂಕ್ತ ಎಂದು ನಾನು ನಂಬಿದ್ದೇನೆ.

ಇನ್ನೊಂದು ವಿಷಯವಿದೆ. ಪಾಪ ನನ್ನ ಆ ಸಂಬಂಧಿಕರು, ನಾನು ಇದೇ ಮೊದಲಬಾರಿ ಬಾಡು ತಿನ್ನುತ್ತಿರುವುದು ಎಂದು ಎಣಿಸಿರಬೇಕು. ಅದಕ್ಕೆ ಅಷ್ಟು ಕೋಪ, ಸಿಟ್ಟು, ಆಕ್ರೋಶ. ನಾನು ಹೈದರಾಬಾದಿನ ಟಿಸ್‌ನಲ್ಲಿ (TISS) ಕಮ್ಯುನಿಸ್ಟರು, ಅಂಬೇಡ್ಕರವಾದಿಗಳ ಜೊತೆ ಸೇರಿಯೇ ಹೀಗಾದೆ ಎಂದು ಅವರೂ ಸೇರಿದಂತೆ ನನ್ನ ಹೆತ್ತವರೂ ನಂಬಿ ತಿಳಿದಿರುವುದುಂಟು. ಆದರೆ, ಹಾಗೇನಿಲ್ಲ. ಸಸ್ಯಾಹಾರಿತ್ವದ ಬಗ್ಗೆ ಬಹಳ ಹೆಮ್ಮೆಪಡುತ್ತಿದ್ದ ನಾನು, ಒಮ್ಮೆ ಮೈಸೂರಿನಿಂದ ಮಧ್ಯರಾತ್ರಿ ಸೈಕಲಿನಲ್ಲಿ ಬೆಂಗಳೂರಿನ ಕಡೆಗೆ ಹೊರಟೆ. ಶ್ರೀರಂಗಪಟ್ಟಣದ ಬಳಿ ಬರುವ ಹೊತ್ತಿಗೆ ಸುಮಾರು 2 ಗಂಟೆಯಾಗಿತ್ತು. ಹಸಿದಿತ್ತು. ಕಾಸು ಕಡಿಮೆಯಿತ್ತು. ದೊಡ್ಡ ಹೋಟೆಲುಗಳಿಗೆ ಹೋಗುವಷ್ಟಿರಲಿಲ್ಲ. Omn ಗಾಡಿಯೊಂದರಲ್ಲಿ ಊಟ ಸಿಗುತ್ತಿತ್ತು. ಹೋಗಿ ನೋಡಿದೆ. ಪರೋಟ ಮತ್ತು ಚಿಕನ್ ಕರಿಯಷ್ಟೇ ಇದ್ದದ್ದು. ಒಂದು ಕ್ಷಣ ಯೋಚಿಸಿದೆ. ಹಸಿವಿಗೆ ಆಹಾರವೇ ಮುಖ್ಯ. ಏನಾದರೇನು? ಎಂದು ತಿಂದೆ. ಬಹಳ ರುಚಿಕರವಾಗಿದ್ದ ಚಿಕನ್ ತಿಂದ ನನಗೆ, ಇಷ್ಟು ವರ್ಷ ಇಷ್ಟು ರುಚಿಯಾದ ಆಹಾರವನ್ನು ಏಕೆ ತಿನ್ನಲಿಲ್ಲ ಅನ್ನಿಸಿತು. ಅಲ್ಲಿಂದ ಇಲ್ಲಿಗೆ, ಅವಕಾಶ ಸಿಕ್ಕಾಗಲೆಲ್ಲಾ ಚಿಕನ್, ಮಟನ್ ಅಷ್ಟೇ ಅಲ್ಲದೆ ಪೋರ್ಕ್ ಮತ್ತು ಬೀಫ್ ಸೇರಿದಂತೆ ಎಲ್ಲಾ ಬಾಡನ್ನು ಮಿಸ್ ಮಾಡದೆ ತಿನ್ನುತ್ತೇನೆ. ಇಂದು ನನಗೆ ವೈಯಕ್ತಿಕವಾಗಿ, ಮಾಂಸಾಹಾರದಲ್ಲಿರುವಷ್ಟು ರುಚಿ ಮತ್ತು ವೆರೈಟಿಯ ಖಾದ್ಯಗಳು ಸಸ್ಯಾಹಾರದಲ್ಲಿಲ್ಲ ಎನಿಸುತ್ತದೆ. ಮಾಂಸಾಹಾರ ಸೇವನೆ ಇಂದು ನನ್ನ ಸಿದ್ಧಾಂತದ ಒಂದು ಭಾಗ ಎಂಬುದು ಎಷ್ಟು ಸತ್ಯವೋ ನಾನು ಮಾಂಸಾಹಾರ ಸೇವನೆಗೆ ಇಳಿದಿದ್ದು ಹಸಿವಿನಿಂದ, ಸಿದ್ಧಾಂತಗಳಿಂದಲ್ಲ ಎಂಬುದೂ ಅಷ್ಟೇ ಸತ್ಯ.

ಅದರಂತೆಯೇ, ಎಲ್ಲಾ ಜಾತಿ, ವರ್ಗಗಳ ಮಕ್ಕಳು ಸೇರಿ ಬೆರೆಯಬೇಕಿರುವ ಶಾಲಾ-ಕಾಲೇಜುಗಳ ಬಹಳಷ್ಟು ಕ್ಯಾಂಟೀನುಗಳಲ್ಲಿ ದುಡ್ಡುಕೊಟ್ಟರೂ ಮಾಂಸಾಹಾರವೇಕೆ ಸಿಗುವುದಿಲ್ಲ ಎಂಬ ಪ್ರಶ್ನೆಯನ್ನೂ #ಬಾಡೇನಮ್‌ಗಾಡು ಹಿನ್ನೆಲೆಯಲ್ಲಿ ಕೇಳಬೇಕೆನ್ನಿಸಿತು.

  • ಶಶಾಂಕ್, NIASನಲ್ಲಿ ಸಂಶೋಧನಾ ವಿದ್ಯಾರ್ಥಿ

ಇದನ್ನೂ ಓದಿ: ಆಹಾರ ಶ್ರೇಷ್ಠತೆಯ ರಾಜಕೀಯದ ವಿವಿಧ ಮುಖಗಳು

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...