Homeಮುಖಪುಟಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ...

ಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ…

- Advertisement -
- Advertisement -

ಇತ್ತೀಚಿಗಷ್ಟೇ ನಡೆದ #ಬಾಡೇನಮ್‌ಗಾಡು ಅಭಿಯಾನದ ಬಗ್ಗೆ ತಿಳಿದು, ನಮ್ಮ ಆಫೀಸಿನಲ್ಲಿ ಎಲ್ಲರೂ ಒಟ್ಟಿಗೆ ಬಾಡು ಸೇವಿಸುತ್ತಿದ್ದ ಫೋಟೋಗಳನ್ನ ನೋಡಿದಾಗ, ಇದೇ ನೆಪದಲ್ಲಿ ನಾನು ಸಂಶೋಧನೆ ಇನ್ಸ್ಟಿಟ್ಯೂಟಿನವರೆಲ್ಲರೂ ಒಂದು ದಿನ ಒಟ್ಟಿಗೆ ಬಾಡು ತಿನ್ನಬಹುದಲ್ಲಾ ಅನ್ನಿಸಿತು. ನಾಳೆ ನಾವು ಒಂದಷ್ಟು ಜನ ಮತ್ತಿಕೆರೆಯ ಚಂದ್ರಪ್ಪ ಹೋಟೆಲಿನಲ್ಲಿ ಬಾಡು ತಿನ್ನಲಿದ್ದೇವೆ, ನೀವೂ ಜೊತೆಯಾಗಿ ಎಂದು ಒಂದು ಸ್ಟೇಟಸ್ ಬರೆದು ಹಾಕಿದೆ. ಅದನ್ನು ಗಮನಿಸಿದ ಕಿರಿಯ ಸಂಬಂಧಿಕರೊಬ್ಬರು, ನಮ್ಮ ಕುಟುಂಬದಲ್ಲಿ ಹಿರಿಯರೆನಿಸಿರುವ ಸಂಬಂಧಿಕರಿಗೆ ಆ ಸ್ಟೇಟಸ್‌ಅನ್ನು ಕಳುಹಿಸಿಕೊಟ್ಟು, ನೋಡಿ ನಮ್ಮ ಮನೆತನದ ಗೌರವ ಏನಾಗಬೇಕು, ನೀವಾದರೂ ಬುದ್ಧಿ ಹೇಳಿ ಅಂದರಂತೆ!

ಅದಕ್ಕವರು ನನಗೆ ಕರೆ ಮಾಡಿ, ಹಾಗೆ-ಹೀಗೆ ಅಂತ ’ಬುದ್ಧಿವಾದ’ ಹೇಳಲು ಶುರುವಿಟ್ಟರು. ಅವರು ಹೇಳಿದ್ದು ಇಷ್ಟು. ’ಈಗಿನ ಕಾಲದಲ್ಲಿ ನೀನು ಇದು ತಿನ್ನು ಅದು ತಿನ್ನು ಎಂದೆಲ್ಲಾ ಹೇಳಿದರೆ ನೀವು ಕೇಳುವುದಿಲ್ಲ, ನಾವು ಹೇಳುವುದಕ್ಕೂ ಆಗುವುದಿಲ್ಲ. ತಿನ್ನುವುದು ನಿಮ್ಮ ಹಕ್ಕು ಎನ್ನುತ್ತೀರಿ. ಆದರೆ ಅದನ್ನು ಪ್ರಚಾರ ಮಾಡಬಾರದಿತ್ತು. ಅದು ಅಗತ್ಯವಿರಲಿಲ್ಲ’ ಎಂದರು. ಹಾಗೆಲ್ಲ ಹಾಕಬೇಡ, ಜೋಯಿಸರ ಮನೆಯವರೇ ಹೀಗಾದರೆ ಹೇಗೆ ಎಂದು ಜನ ನಮ್ಮನ್ನು ಆಡಿಕೊಂಡು ನಗುತ್ತಾರೆ, ಪ್ರಶ್ನಿಸುತ್ತಾರೆ. ಅದಕ್ಕೇನು ಹೇಳುವುದು? ನಮಗೆ ಅವಮಾನವಾಗುತ್ತೆ. ಅದು ನಿಮ್ಮ ತಂದೆ-ತಾಯಿಯರಿಗೆ ಎಷ್ಟು ನೋವಾಗಿರಬಹುದು ಎಂದು ಯೋಚಿಸು ಎಂದರು. ಅದೂಅಲ್ಲದೆ, ಅವರು ನಾವು ಬಾಡು ತಿನ್ನಲಿದ್ದ ಜಾಗಕ್ಕೆ ಬಂದು ಅದನ್ನು ನಿಲ್ಲಿಸಲಿಕ್ಕೆ ಹೊರಡುವ ಯೋಚನೆಯಲ್ಲಿದ್ದಾಗ ಅವರನ್ನು ಅವರ ಪತ್ನಿ ತಡೆದರಂತೆ.

ನಾನು ಅವರಿಗೆ ಕೇಳಿದ್ದಿಷ್ಟು. ನಮ್ಮ ಸಂಬಂಧಿಕರೇ ಉಪ್ಪಿಟ್ಟು, ಮೊಸರನ್ನದ ಫೋಟೋಗಳನ್ನ ದಿನನಿತ್ಯ ಹಂಚಿಕೊಂಡಾಗ ಬೇಸರ ಎನಿಸದ ನಮಗೆ, ಬಾಡಿನ ಫೋಟೋಗಳು ನೋಡಿದಾಗ ಯಾಕಿಷ್ಟು ಕಸಿವಿಸಿ ಆಗುತ್ತದೆ? ನನ್ನ ಆಹಾರ ನನ್ನ ಹಕ್ಕು. ನಿಮಗೆ ನಾನು ಬಾಡು ತಿನ್ನುವುದರಿಂದ ಅವಮಾನವಾಗುವುದಾದರೆ ಅದನ್ನು ನೀವೇ ಬಗೆಹರಿಸಿಕೊಳ್ಳಿ. ಒಂದು ಕುಟುಂಬದ ’ಶ್ರೇಷ್ಠ’ತೆಗೂ ಅವರ ಊಟಕ್ಕೂ ಸಂಬಂಧ ಕಟ್ಟುವುದನ್ನೇ ನಾವು ಇಲ್ಲಿ ಪ್ರಶ್ನಿಸುತ್ತಿರುವುದು ಎಂದೆ. ’ನೀನು, ನಿನ್ನ ಬುದ್ಧಿಯಂತೆ, ಇಚ್ಛೆಯಂತೆ ನಡೆದುಕೊಂಡರೂ, ನಮ್ಮ ಕುಟುಂಬಕ್ಕೆ (ಅವರು ಇಲ್ಲಿ ಕುಟುಂಬ ಎಂದು ಹೇಳುತ್ತಿರುವುದು, ನಿಜವಾಗಿ ಜಾತಿಯೇ ಆಗಿದೆ) ಅದು ಬಂದಿಲ್ಲ’ ಎಂಬುದು ಅವರ ವಾದವಾಗಿತ್ತು.

ಇದು ಇಂದಿನ ದಮನಕಾರಿ ವ್ಯವಸ್ಥೆಯ ಮುಖ್ಯ ಲಕ್ಷಣವೊಂದನ್ನು ಮುಂದಿಡುತ್ತಿದೆ. ಜಾತೀಯತೆ, ಪಿತೃಪ್ರಧಾನತೆ ಮತ್ತು ಮತಧರ್ಮಗಳು ಸೇರಿದಂತೆ ಇತರೆ ವ್ಯವಸ್ಥೆಗಳು ಜನರ ಜೀವನವನ್ನು ಮತ್ತು ನಡವಳಿಕೆಗಳನ್ನು ಪ್ರಭಾವಿಸುತ್ತವೆ ಎಂಬುದು ಒಂದು ಸಿದ್ಧಾಂತ. ಅದಕ್ಕೆ ಪ್ರತಿಯಾಗಿ ವ್ಯಕ್ತಿಗಳೇ ತಮ್ಮ ಜೀವನವನ್ನು ನಿರ್ಧರಿಸಿಕೊಳ್ಳುತ್ತಾರೆ ಎಂಬ ವ್ಯಕ್ತಿವಾದದ ಸಿದ್ಧಾಂತವೂ ಇದೆ. ಇಂದು ವ್ಯಕ್ತಿವಾದವನ್ನೇ ಮುಂದಿಡುತ್ತಾ, ನಿಮ್ಮ ಜೀವನವನ್ನು ನೀವು ಕಟ್ಟಿಕೊಳ್ಳುವುದು, ನಿಮ್ಮ ಶ್ರಮವೇ ನಿಮ್ಮ ಜೀವನವನ್ನು ನಿರ್ಧರಿಸುವುದು ಎಂದು ಜನರಿಗೆ ಹೇಳುತ್ತಾ, ವ್ಯಕ್ತಿಯೊಬ್ಬನಿಗೆ ತಾನು ಉಣ್ಣುವ ಆಹಾರವನ್ನು ಆಯ್ದುಕೊಳ್ಳುವ ’ಆಯ್ಕೆ’ಯಿದೆ ಎಂದು ನಂಬಿಸುತ್ತಲೇ, ಮತ್ತೊಂದೆಡೆ ’ಕುಟುಂಬ’ (ಜಾತಿ) ಎಂಬ ವ್ಯವಸ್ಥೆಯ ಕಟ್ಟಲೆಯನ್ನು ಒಟ್ಟೊಟ್ಟಿಗೆ ಮುಂದುವರೆಸಿಕೊಂಡು ಹೋಗುತ್ತಿದೆ. ಈ ವ್ಯವಸ್ಥೆಯು ತನಗೆ ಹಿತವೆನಿಸುವ ರೀತಿಯಲ್ಲಿ ವ್ಯಕ್ತಿವಾದ ಮತ್ತು ದಮನಕಾರಿ ವ್ಯವಸ್ಥೆಗಳನ್ನು ಒಟ್ಟೊಟ್ಟಿಗೆ ಮುಂದೆ ಕೊಂಡೊಯ್ಯುತ್ತಿದೆ. ಈ ವ್ಯವಸ್ಥೆಯಲ್ಲಿ ನನ್ನಂತ ಒಂದಷ್ಟು ಜನರು ಮಾತ್ರವೇ ತಮ್ಮ ’ಆಯ್ಕೆ’ಯನ್ನು ಚಲಾಯಿಸಬಹುದಾಗಿದೆ. ಅವರು ಯಾರು ಎಂಬುದು ಕೂಡ ಜಾತಿ ಮತ್ತು ಇತರೆ ದಮನಕಾರಿ ವ್ಯವಸ್ಥೆಗಳಿಂದಲೇ ನಿರ್ಧಾರವಾಗುತ್ತದೆ. ಹೀಗಿರುವಾಗ, ಆ ’ಆಯ್ಕೆ’ ಸಾಧ್ಯವಿದ್ದಾಗ ನನ್ನಂತೆ ಬ್ರಾಹ್ಮಣ ಜಾತಿಯ-ಮೇಲುಜಾತಿಯೆಂದು ಕರೆದುಕೊಳ್ಳಲ್ಪಟ್ಟ ಶೋಷಕ ಜಾತಿಯ ಮನೆಗಳ-ಮನಸ್ಸುಗಳ ಕೊಳಕನ್ನು ಪ್ರಶ್ನಿಸುವುದಕ್ಕೆ ಆ ’ಆಯ್ಕೆ’ಯನ್ನು ಬಳಸುವುದು ಸೂಕ್ತ ಎಂದು ನಾನು ನಂಬಿದ್ದೇನೆ.

ಇನ್ನೊಂದು ವಿಷಯವಿದೆ. ಪಾಪ ನನ್ನ ಆ ಸಂಬಂಧಿಕರು, ನಾನು ಇದೇ ಮೊದಲಬಾರಿ ಬಾಡು ತಿನ್ನುತ್ತಿರುವುದು ಎಂದು ಎಣಿಸಿರಬೇಕು. ಅದಕ್ಕೆ ಅಷ್ಟು ಕೋಪ, ಸಿಟ್ಟು, ಆಕ್ರೋಶ. ನಾನು ಹೈದರಾಬಾದಿನ ಟಿಸ್‌ನಲ್ಲಿ (TISS) ಕಮ್ಯುನಿಸ್ಟರು, ಅಂಬೇಡ್ಕರವಾದಿಗಳ ಜೊತೆ ಸೇರಿಯೇ ಹೀಗಾದೆ ಎಂದು ಅವರೂ ಸೇರಿದಂತೆ ನನ್ನ ಹೆತ್ತವರೂ ನಂಬಿ ತಿಳಿದಿರುವುದುಂಟು. ಆದರೆ, ಹಾಗೇನಿಲ್ಲ. ಸಸ್ಯಾಹಾರಿತ್ವದ ಬಗ್ಗೆ ಬಹಳ ಹೆಮ್ಮೆಪಡುತ್ತಿದ್ದ ನಾನು, ಒಮ್ಮೆ ಮೈಸೂರಿನಿಂದ ಮಧ್ಯರಾತ್ರಿ ಸೈಕಲಿನಲ್ಲಿ ಬೆಂಗಳೂರಿನ ಕಡೆಗೆ ಹೊರಟೆ. ಶ್ರೀರಂಗಪಟ್ಟಣದ ಬಳಿ ಬರುವ ಹೊತ್ತಿಗೆ ಸುಮಾರು 2 ಗಂಟೆಯಾಗಿತ್ತು. ಹಸಿದಿತ್ತು. ಕಾಸು ಕಡಿಮೆಯಿತ್ತು. ದೊಡ್ಡ ಹೋಟೆಲುಗಳಿಗೆ ಹೋಗುವಷ್ಟಿರಲಿಲ್ಲ. Omn ಗಾಡಿಯೊಂದರಲ್ಲಿ ಊಟ ಸಿಗುತ್ತಿತ್ತು. ಹೋಗಿ ನೋಡಿದೆ. ಪರೋಟ ಮತ್ತು ಚಿಕನ್ ಕರಿಯಷ್ಟೇ ಇದ್ದದ್ದು. ಒಂದು ಕ್ಷಣ ಯೋಚಿಸಿದೆ. ಹಸಿವಿಗೆ ಆಹಾರವೇ ಮುಖ್ಯ. ಏನಾದರೇನು? ಎಂದು ತಿಂದೆ. ಬಹಳ ರುಚಿಕರವಾಗಿದ್ದ ಚಿಕನ್ ತಿಂದ ನನಗೆ, ಇಷ್ಟು ವರ್ಷ ಇಷ್ಟು ರುಚಿಯಾದ ಆಹಾರವನ್ನು ಏಕೆ ತಿನ್ನಲಿಲ್ಲ ಅನ್ನಿಸಿತು. ಅಲ್ಲಿಂದ ಇಲ್ಲಿಗೆ, ಅವಕಾಶ ಸಿಕ್ಕಾಗಲೆಲ್ಲಾ ಚಿಕನ್, ಮಟನ್ ಅಷ್ಟೇ ಅಲ್ಲದೆ ಪೋರ್ಕ್ ಮತ್ತು ಬೀಫ್ ಸೇರಿದಂತೆ ಎಲ್ಲಾ ಬಾಡನ್ನು ಮಿಸ್ ಮಾಡದೆ ತಿನ್ನುತ್ತೇನೆ. ಇಂದು ನನಗೆ ವೈಯಕ್ತಿಕವಾಗಿ, ಮಾಂಸಾಹಾರದಲ್ಲಿರುವಷ್ಟು ರುಚಿ ಮತ್ತು ವೆರೈಟಿಯ ಖಾದ್ಯಗಳು ಸಸ್ಯಾಹಾರದಲ್ಲಿಲ್ಲ ಎನಿಸುತ್ತದೆ. ಮಾಂಸಾಹಾರ ಸೇವನೆ ಇಂದು ನನ್ನ ಸಿದ್ಧಾಂತದ ಒಂದು ಭಾಗ ಎಂಬುದು ಎಷ್ಟು ಸತ್ಯವೋ ನಾನು ಮಾಂಸಾಹಾರ ಸೇವನೆಗೆ ಇಳಿದಿದ್ದು ಹಸಿವಿನಿಂದ, ಸಿದ್ಧಾಂತಗಳಿಂದಲ್ಲ ಎಂಬುದೂ ಅಷ್ಟೇ ಸತ್ಯ.

ಅದರಂತೆಯೇ, ಎಲ್ಲಾ ಜಾತಿ, ವರ್ಗಗಳ ಮಕ್ಕಳು ಸೇರಿ ಬೆರೆಯಬೇಕಿರುವ ಶಾಲಾ-ಕಾಲೇಜುಗಳ ಬಹಳಷ್ಟು ಕ್ಯಾಂಟೀನುಗಳಲ್ಲಿ ದುಡ್ಡುಕೊಟ್ಟರೂ ಮಾಂಸಾಹಾರವೇಕೆ ಸಿಗುವುದಿಲ್ಲ ಎಂಬ ಪ್ರಶ್ನೆಯನ್ನೂ #ಬಾಡೇನಮ್‌ಗಾಡು ಹಿನ್ನೆಲೆಯಲ್ಲಿ ಕೇಳಬೇಕೆನ್ನಿಸಿತು.

  • ಶಶಾಂಕ್, NIASನಲ್ಲಿ ಸಂಶೋಧನಾ ವಿದ್ಯಾರ್ಥಿ

ಇದನ್ನೂ ಓದಿ: ಆಹಾರ ಶ್ರೇಷ್ಠತೆಯ ರಾಜಕೀಯದ ವಿವಿಧ ಮುಖಗಳು

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...