Homeಮುಖಪುಟಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ...

ಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ…

- Advertisement -
- Advertisement -

ಇತ್ತೀಚಿಗಷ್ಟೇ ನಡೆದ #ಬಾಡೇನಮ್‌ಗಾಡು ಅಭಿಯಾನದ ಬಗ್ಗೆ ತಿಳಿದು, ನಮ್ಮ ಆಫೀಸಿನಲ್ಲಿ ಎಲ್ಲರೂ ಒಟ್ಟಿಗೆ ಬಾಡು ಸೇವಿಸುತ್ತಿದ್ದ ಫೋಟೋಗಳನ್ನ ನೋಡಿದಾಗ, ಇದೇ ನೆಪದಲ್ಲಿ ನಾನು ಸಂಶೋಧನೆ ಇನ್ಸ್ಟಿಟ್ಯೂಟಿನವರೆಲ್ಲರೂ ಒಂದು ದಿನ ಒಟ್ಟಿಗೆ ಬಾಡು ತಿನ್ನಬಹುದಲ್ಲಾ ಅನ್ನಿಸಿತು. ನಾಳೆ ನಾವು ಒಂದಷ್ಟು ಜನ ಮತ್ತಿಕೆರೆಯ ಚಂದ್ರಪ್ಪ ಹೋಟೆಲಿನಲ್ಲಿ ಬಾಡು ತಿನ್ನಲಿದ್ದೇವೆ, ನೀವೂ ಜೊತೆಯಾಗಿ ಎಂದು ಒಂದು ಸ್ಟೇಟಸ್ ಬರೆದು ಹಾಕಿದೆ. ಅದನ್ನು ಗಮನಿಸಿದ ಕಿರಿಯ ಸಂಬಂಧಿಕರೊಬ್ಬರು, ನಮ್ಮ ಕುಟುಂಬದಲ್ಲಿ ಹಿರಿಯರೆನಿಸಿರುವ ಸಂಬಂಧಿಕರಿಗೆ ಆ ಸ್ಟೇಟಸ್‌ಅನ್ನು ಕಳುಹಿಸಿಕೊಟ್ಟು, ನೋಡಿ ನಮ್ಮ ಮನೆತನದ ಗೌರವ ಏನಾಗಬೇಕು, ನೀವಾದರೂ ಬುದ್ಧಿ ಹೇಳಿ ಅಂದರಂತೆ!

ಅದಕ್ಕವರು ನನಗೆ ಕರೆ ಮಾಡಿ, ಹಾಗೆ-ಹೀಗೆ ಅಂತ ’ಬುದ್ಧಿವಾದ’ ಹೇಳಲು ಶುರುವಿಟ್ಟರು. ಅವರು ಹೇಳಿದ್ದು ಇಷ್ಟು. ’ಈಗಿನ ಕಾಲದಲ್ಲಿ ನೀನು ಇದು ತಿನ್ನು ಅದು ತಿನ್ನು ಎಂದೆಲ್ಲಾ ಹೇಳಿದರೆ ನೀವು ಕೇಳುವುದಿಲ್ಲ, ನಾವು ಹೇಳುವುದಕ್ಕೂ ಆಗುವುದಿಲ್ಲ. ತಿನ್ನುವುದು ನಿಮ್ಮ ಹಕ್ಕು ಎನ್ನುತ್ತೀರಿ. ಆದರೆ ಅದನ್ನು ಪ್ರಚಾರ ಮಾಡಬಾರದಿತ್ತು. ಅದು ಅಗತ್ಯವಿರಲಿಲ್ಲ’ ಎಂದರು. ಹಾಗೆಲ್ಲ ಹಾಕಬೇಡ, ಜೋಯಿಸರ ಮನೆಯವರೇ ಹೀಗಾದರೆ ಹೇಗೆ ಎಂದು ಜನ ನಮ್ಮನ್ನು ಆಡಿಕೊಂಡು ನಗುತ್ತಾರೆ, ಪ್ರಶ್ನಿಸುತ್ತಾರೆ. ಅದಕ್ಕೇನು ಹೇಳುವುದು? ನಮಗೆ ಅವಮಾನವಾಗುತ್ತೆ. ಅದು ನಿಮ್ಮ ತಂದೆ-ತಾಯಿಯರಿಗೆ ಎಷ್ಟು ನೋವಾಗಿರಬಹುದು ಎಂದು ಯೋಚಿಸು ಎಂದರು. ಅದೂಅಲ್ಲದೆ, ಅವರು ನಾವು ಬಾಡು ತಿನ್ನಲಿದ್ದ ಜಾಗಕ್ಕೆ ಬಂದು ಅದನ್ನು ನಿಲ್ಲಿಸಲಿಕ್ಕೆ ಹೊರಡುವ ಯೋಚನೆಯಲ್ಲಿದ್ದಾಗ ಅವರನ್ನು ಅವರ ಪತ್ನಿ ತಡೆದರಂತೆ.

ನಾನು ಅವರಿಗೆ ಕೇಳಿದ್ದಿಷ್ಟು. ನಮ್ಮ ಸಂಬಂಧಿಕರೇ ಉಪ್ಪಿಟ್ಟು, ಮೊಸರನ್ನದ ಫೋಟೋಗಳನ್ನ ದಿನನಿತ್ಯ ಹಂಚಿಕೊಂಡಾಗ ಬೇಸರ ಎನಿಸದ ನಮಗೆ, ಬಾಡಿನ ಫೋಟೋಗಳು ನೋಡಿದಾಗ ಯಾಕಿಷ್ಟು ಕಸಿವಿಸಿ ಆಗುತ್ತದೆ? ನನ್ನ ಆಹಾರ ನನ್ನ ಹಕ್ಕು. ನಿಮಗೆ ನಾನು ಬಾಡು ತಿನ್ನುವುದರಿಂದ ಅವಮಾನವಾಗುವುದಾದರೆ ಅದನ್ನು ನೀವೇ ಬಗೆಹರಿಸಿಕೊಳ್ಳಿ. ಒಂದು ಕುಟುಂಬದ ’ಶ್ರೇಷ್ಠ’ತೆಗೂ ಅವರ ಊಟಕ್ಕೂ ಸಂಬಂಧ ಕಟ್ಟುವುದನ್ನೇ ನಾವು ಇಲ್ಲಿ ಪ್ರಶ್ನಿಸುತ್ತಿರುವುದು ಎಂದೆ. ’ನೀನು, ನಿನ್ನ ಬುದ್ಧಿಯಂತೆ, ಇಚ್ಛೆಯಂತೆ ನಡೆದುಕೊಂಡರೂ, ನಮ್ಮ ಕುಟುಂಬಕ್ಕೆ (ಅವರು ಇಲ್ಲಿ ಕುಟುಂಬ ಎಂದು ಹೇಳುತ್ತಿರುವುದು, ನಿಜವಾಗಿ ಜಾತಿಯೇ ಆಗಿದೆ) ಅದು ಬಂದಿಲ್ಲ’ ಎಂಬುದು ಅವರ ವಾದವಾಗಿತ್ತು.

ಇದು ಇಂದಿನ ದಮನಕಾರಿ ವ್ಯವಸ್ಥೆಯ ಮುಖ್ಯ ಲಕ್ಷಣವೊಂದನ್ನು ಮುಂದಿಡುತ್ತಿದೆ. ಜಾತೀಯತೆ, ಪಿತೃಪ್ರಧಾನತೆ ಮತ್ತು ಮತಧರ್ಮಗಳು ಸೇರಿದಂತೆ ಇತರೆ ವ್ಯವಸ್ಥೆಗಳು ಜನರ ಜೀವನವನ್ನು ಮತ್ತು ನಡವಳಿಕೆಗಳನ್ನು ಪ್ರಭಾವಿಸುತ್ತವೆ ಎಂಬುದು ಒಂದು ಸಿದ್ಧಾಂತ. ಅದಕ್ಕೆ ಪ್ರತಿಯಾಗಿ ವ್ಯಕ್ತಿಗಳೇ ತಮ್ಮ ಜೀವನವನ್ನು ನಿರ್ಧರಿಸಿಕೊಳ್ಳುತ್ತಾರೆ ಎಂಬ ವ್ಯಕ್ತಿವಾದದ ಸಿದ್ಧಾಂತವೂ ಇದೆ. ಇಂದು ವ್ಯಕ್ತಿವಾದವನ್ನೇ ಮುಂದಿಡುತ್ತಾ, ನಿಮ್ಮ ಜೀವನವನ್ನು ನೀವು ಕಟ್ಟಿಕೊಳ್ಳುವುದು, ನಿಮ್ಮ ಶ್ರಮವೇ ನಿಮ್ಮ ಜೀವನವನ್ನು ನಿರ್ಧರಿಸುವುದು ಎಂದು ಜನರಿಗೆ ಹೇಳುತ್ತಾ, ವ್ಯಕ್ತಿಯೊಬ್ಬನಿಗೆ ತಾನು ಉಣ್ಣುವ ಆಹಾರವನ್ನು ಆಯ್ದುಕೊಳ್ಳುವ ’ಆಯ್ಕೆ’ಯಿದೆ ಎಂದು ನಂಬಿಸುತ್ತಲೇ, ಮತ್ತೊಂದೆಡೆ ’ಕುಟುಂಬ’ (ಜಾತಿ) ಎಂಬ ವ್ಯವಸ್ಥೆಯ ಕಟ್ಟಲೆಯನ್ನು ಒಟ್ಟೊಟ್ಟಿಗೆ ಮುಂದುವರೆಸಿಕೊಂಡು ಹೋಗುತ್ತಿದೆ. ಈ ವ್ಯವಸ್ಥೆಯು ತನಗೆ ಹಿತವೆನಿಸುವ ರೀತಿಯಲ್ಲಿ ವ್ಯಕ್ತಿವಾದ ಮತ್ತು ದಮನಕಾರಿ ವ್ಯವಸ್ಥೆಗಳನ್ನು ಒಟ್ಟೊಟ್ಟಿಗೆ ಮುಂದೆ ಕೊಂಡೊಯ್ಯುತ್ತಿದೆ. ಈ ವ್ಯವಸ್ಥೆಯಲ್ಲಿ ನನ್ನಂತ ಒಂದಷ್ಟು ಜನರು ಮಾತ್ರವೇ ತಮ್ಮ ’ಆಯ್ಕೆ’ಯನ್ನು ಚಲಾಯಿಸಬಹುದಾಗಿದೆ. ಅವರು ಯಾರು ಎಂಬುದು ಕೂಡ ಜಾತಿ ಮತ್ತು ಇತರೆ ದಮನಕಾರಿ ವ್ಯವಸ್ಥೆಗಳಿಂದಲೇ ನಿರ್ಧಾರವಾಗುತ್ತದೆ. ಹೀಗಿರುವಾಗ, ಆ ’ಆಯ್ಕೆ’ ಸಾಧ್ಯವಿದ್ದಾಗ ನನ್ನಂತೆ ಬ್ರಾಹ್ಮಣ ಜಾತಿಯ-ಮೇಲುಜಾತಿಯೆಂದು ಕರೆದುಕೊಳ್ಳಲ್ಪಟ್ಟ ಶೋಷಕ ಜಾತಿಯ ಮನೆಗಳ-ಮನಸ್ಸುಗಳ ಕೊಳಕನ್ನು ಪ್ರಶ್ನಿಸುವುದಕ್ಕೆ ಆ ’ಆಯ್ಕೆ’ಯನ್ನು ಬಳಸುವುದು ಸೂಕ್ತ ಎಂದು ನಾನು ನಂಬಿದ್ದೇನೆ.

ಇನ್ನೊಂದು ವಿಷಯವಿದೆ. ಪಾಪ ನನ್ನ ಆ ಸಂಬಂಧಿಕರು, ನಾನು ಇದೇ ಮೊದಲಬಾರಿ ಬಾಡು ತಿನ್ನುತ್ತಿರುವುದು ಎಂದು ಎಣಿಸಿರಬೇಕು. ಅದಕ್ಕೆ ಅಷ್ಟು ಕೋಪ, ಸಿಟ್ಟು, ಆಕ್ರೋಶ. ನಾನು ಹೈದರಾಬಾದಿನ ಟಿಸ್‌ನಲ್ಲಿ (TISS) ಕಮ್ಯುನಿಸ್ಟರು, ಅಂಬೇಡ್ಕರವಾದಿಗಳ ಜೊತೆ ಸೇರಿಯೇ ಹೀಗಾದೆ ಎಂದು ಅವರೂ ಸೇರಿದಂತೆ ನನ್ನ ಹೆತ್ತವರೂ ನಂಬಿ ತಿಳಿದಿರುವುದುಂಟು. ಆದರೆ, ಹಾಗೇನಿಲ್ಲ. ಸಸ್ಯಾಹಾರಿತ್ವದ ಬಗ್ಗೆ ಬಹಳ ಹೆಮ್ಮೆಪಡುತ್ತಿದ್ದ ನಾನು, ಒಮ್ಮೆ ಮೈಸೂರಿನಿಂದ ಮಧ್ಯರಾತ್ರಿ ಸೈಕಲಿನಲ್ಲಿ ಬೆಂಗಳೂರಿನ ಕಡೆಗೆ ಹೊರಟೆ. ಶ್ರೀರಂಗಪಟ್ಟಣದ ಬಳಿ ಬರುವ ಹೊತ್ತಿಗೆ ಸುಮಾರು 2 ಗಂಟೆಯಾಗಿತ್ತು. ಹಸಿದಿತ್ತು. ಕಾಸು ಕಡಿಮೆಯಿತ್ತು. ದೊಡ್ಡ ಹೋಟೆಲುಗಳಿಗೆ ಹೋಗುವಷ್ಟಿರಲಿಲ್ಲ. Omn ಗಾಡಿಯೊಂದರಲ್ಲಿ ಊಟ ಸಿಗುತ್ತಿತ್ತು. ಹೋಗಿ ನೋಡಿದೆ. ಪರೋಟ ಮತ್ತು ಚಿಕನ್ ಕರಿಯಷ್ಟೇ ಇದ್ದದ್ದು. ಒಂದು ಕ್ಷಣ ಯೋಚಿಸಿದೆ. ಹಸಿವಿಗೆ ಆಹಾರವೇ ಮುಖ್ಯ. ಏನಾದರೇನು? ಎಂದು ತಿಂದೆ. ಬಹಳ ರುಚಿಕರವಾಗಿದ್ದ ಚಿಕನ್ ತಿಂದ ನನಗೆ, ಇಷ್ಟು ವರ್ಷ ಇಷ್ಟು ರುಚಿಯಾದ ಆಹಾರವನ್ನು ಏಕೆ ತಿನ್ನಲಿಲ್ಲ ಅನ್ನಿಸಿತು. ಅಲ್ಲಿಂದ ಇಲ್ಲಿಗೆ, ಅವಕಾಶ ಸಿಕ್ಕಾಗಲೆಲ್ಲಾ ಚಿಕನ್, ಮಟನ್ ಅಷ್ಟೇ ಅಲ್ಲದೆ ಪೋರ್ಕ್ ಮತ್ತು ಬೀಫ್ ಸೇರಿದಂತೆ ಎಲ್ಲಾ ಬಾಡನ್ನು ಮಿಸ್ ಮಾಡದೆ ತಿನ್ನುತ್ತೇನೆ. ಇಂದು ನನಗೆ ವೈಯಕ್ತಿಕವಾಗಿ, ಮಾಂಸಾಹಾರದಲ್ಲಿರುವಷ್ಟು ರುಚಿ ಮತ್ತು ವೆರೈಟಿಯ ಖಾದ್ಯಗಳು ಸಸ್ಯಾಹಾರದಲ್ಲಿಲ್ಲ ಎನಿಸುತ್ತದೆ. ಮಾಂಸಾಹಾರ ಸೇವನೆ ಇಂದು ನನ್ನ ಸಿದ್ಧಾಂತದ ಒಂದು ಭಾಗ ಎಂಬುದು ಎಷ್ಟು ಸತ್ಯವೋ ನಾನು ಮಾಂಸಾಹಾರ ಸೇವನೆಗೆ ಇಳಿದಿದ್ದು ಹಸಿವಿನಿಂದ, ಸಿದ್ಧಾಂತಗಳಿಂದಲ್ಲ ಎಂಬುದೂ ಅಷ್ಟೇ ಸತ್ಯ.

ಅದರಂತೆಯೇ, ಎಲ್ಲಾ ಜಾತಿ, ವರ್ಗಗಳ ಮಕ್ಕಳು ಸೇರಿ ಬೆರೆಯಬೇಕಿರುವ ಶಾಲಾ-ಕಾಲೇಜುಗಳ ಬಹಳಷ್ಟು ಕ್ಯಾಂಟೀನುಗಳಲ್ಲಿ ದುಡ್ಡುಕೊಟ್ಟರೂ ಮಾಂಸಾಹಾರವೇಕೆ ಸಿಗುವುದಿಲ್ಲ ಎಂಬ ಪ್ರಶ್ನೆಯನ್ನೂ #ಬಾಡೇನಮ್‌ಗಾಡು ಹಿನ್ನೆಲೆಯಲ್ಲಿ ಕೇಳಬೇಕೆನ್ನಿಸಿತು.

  • ಶಶಾಂಕ್, NIASನಲ್ಲಿ ಸಂಶೋಧನಾ ವಿದ್ಯಾರ್ಥಿ

ಇದನ್ನೂ ಓದಿ: ಆಹಾರ ಶ್ರೇಷ್ಠತೆಯ ರಾಜಕೀಯದ ವಿವಿಧ ಮುಖಗಳು

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...