Homeಮುಖಪುಟಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ...

ಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ…

- Advertisement -
- Advertisement -

ಇತ್ತೀಚಿಗಷ್ಟೇ ನಡೆದ #ಬಾಡೇನಮ್‌ಗಾಡು ಅಭಿಯಾನದ ಬಗ್ಗೆ ತಿಳಿದು, ನಮ್ಮ ಆಫೀಸಿನಲ್ಲಿ ಎಲ್ಲರೂ ಒಟ್ಟಿಗೆ ಬಾಡು ಸೇವಿಸುತ್ತಿದ್ದ ಫೋಟೋಗಳನ್ನ ನೋಡಿದಾಗ, ಇದೇ ನೆಪದಲ್ಲಿ ನಾನು ಸಂಶೋಧನೆ ಇನ್ಸ್ಟಿಟ್ಯೂಟಿನವರೆಲ್ಲರೂ ಒಂದು ದಿನ ಒಟ್ಟಿಗೆ ಬಾಡು ತಿನ್ನಬಹುದಲ್ಲಾ ಅನ್ನಿಸಿತು. ನಾಳೆ ನಾವು ಒಂದಷ್ಟು ಜನ ಮತ್ತಿಕೆರೆಯ ಚಂದ್ರಪ್ಪ ಹೋಟೆಲಿನಲ್ಲಿ ಬಾಡು ತಿನ್ನಲಿದ್ದೇವೆ, ನೀವೂ ಜೊತೆಯಾಗಿ ಎಂದು ಒಂದು ಸ್ಟೇಟಸ್ ಬರೆದು ಹಾಕಿದೆ. ಅದನ್ನು ಗಮನಿಸಿದ ಕಿರಿಯ ಸಂಬಂಧಿಕರೊಬ್ಬರು, ನಮ್ಮ ಕುಟುಂಬದಲ್ಲಿ ಹಿರಿಯರೆನಿಸಿರುವ ಸಂಬಂಧಿಕರಿಗೆ ಆ ಸ್ಟೇಟಸ್‌ಅನ್ನು ಕಳುಹಿಸಿಕೊಟ್ಟು, ನೋಡಿ ನಮ್ಮ ಮನೆತನದ ಗೌರವ ಏನಾಗಬೇಕು, ನೀವಾದರೂ ಬುದ್ಧಿ ಹೇಳಿ ಅಂದರಂತೆ!

ಅದಕ್ಕವರು ನನಗೆ ಕರೆ ಮಾಡಿ, ಹಾಗೆ-ಹೀಗೆ ಅಂತ ’ಬುದ್ಧಿವಾದ’ ಹೇಳಲು ಶುರುವಿಟ್ಟರು. ಅವರು ಹೇಳಿದ್ದು ಇಷ್ಟು. ’ಈಗಿನ ಕಾಲದಲ್ಲಿ ನೀನು ಇದು ತಿನ್ನು ಅದು ತಿನ್ನು ಎಂದೆಲ್ಲಾ ಹೇಳಿದರೆ ನೀವು ಕೇಳುವುದಿಲ್ಲ, ನಾವು ಹೇಳುವುದಕ್ಕೂ ಆಗುವುದಿಲ್ಲ. ತಿನ್ನುವುದು ನಿಮ್ಮ ಹಕ್ಕು ಎನ್ನುತ್ತೀರಿ. ಆದರೆ ಅದನ್ನು ಪ್ರಚಾರ ಮಾಡಬಾರದಿತ್ತು. ಅದು ಅಗತ್ಯವಿರಲಿಲ್ಲ’ ಎಂದರು. ಹಾಗೆಲ್ಲ ಹಾಕಬೇಡ, ಜೋಯಿಸರ ಮನೆಯವರೇ ಹೀಗಾದರೆ ಹೇಗೆ ಎಂದು ಜನ ನಮ್ಮನ್ನು ಆಡಿಕೊಂಡು ನಗುತ್ತಾರೆ, ಪ್ರಶ್ನಿಸುತ್ತಾರೆ. ಅದಕ್ಕೇನು ಹೇಳುವುದು? ನಮಗೆ ಅವಮಾನವಾಗುತ್ತೆ. ಅದು ನಿಮ್ಮ ತಂದೆ-ತಾಯಿಯರಿಗೆ ಎಷ್ಟು ನೋವಾಗಿರಬಹುದು ಎಂದು ಯೋಚಿಸು ಎಂದರು. ಅದೂಅಲ್ಲದೆ, ಅವರು ನಾವು ಬಾಡು ತಿನ್ನಲಿದ್ದ ಜಾಗಕ್ಕೆ ಬಂದು ಅದನ್ನು ನಿಲ್ಲಿಸಲಿಕ್ಕೆ ಹೊರಡುವ ಯೋಚನೆಯಲ್ಲಿದ್ದಾಗ ಅವರನ್ನು ಅವರ ಪತ್ನಿ ತಡೆದರಂತೆ.

ನಾನು ಅವರಿಗೆ ಕೇಳಿದ್ದಿಷ್ಟು. ನಮ್ಮ ಸಂಬಂಧಿಕರೇ ಉಪ್ಪಿಟ್ಟು, ಮೊಸರನ್ನದ ಫೋಟೋಗಳನ್ನ ದಿನನಿತ್ಯ ಹಂಚಿಕೊಂಡಾಗ ಬೇಸರ ಎನಿಸದ ನಮಗೆ, ಬಾಡಿನ ಫೋಟೋಗಳು ನೋಡಿದಾಗ ಯಾಕಿಷ್ಟು ಕಸಿವಿಸಿ ಆಗುತ್ತದೆ? ನನ್ನ ಆಹಾರ ನನ್ನ ಹಕ್ಕು. ನಿಮಗೆ ನಾನು ಬಾಡು ತಿನ್ನುವುದರಿಂದ ಅವಮಾನವಾಗುವುದಾದರೆ ಅದನ್ನು ನೀವೇ ಬಗೆಹರಿಸಿಕೊಳ್ಳಿ. ಒಂದು ಕುಟುಂಬದ ’ಶ್ರೇಷ್ಠ’ತೆಗೂ ಅವರ ಊಟಕ್ಕೂ ಸಂಬಂಧ ಕಟ್ಟುವುದನ್ನೇ ನಾವು ಇಲ್ಲಿ ಪ್ರಶ್ನಿಸುತ್ತಿರುವುದು ಎಂದೆ. ’ನೀನು, ನಿನ್ನ ಬುದ್ಧಿಯಂತೆ, ಇಚ್ಛೆಯಂತೆ ನಡೆದುಕೊಂಡರೂ, ನಮ್ಮ ಕುಟುಂಬಕ್ಕೆ (ಅವರು ಇಲ್ಲಿ ಕುಟುಂಬ ಎಂದು ಹೇಳುತ್ತಿರುವುದು, ನಿಜವಾಗಿ ಜಾತಿಯೇ ಆಗಿದೆ) ಅದು ಬಂದಿಲ್ಲ’ ಎಂಬುದು ಅವರ ವಾದವಾಗಿತ್ತು.

ಇದು ಇಂದಿನ ದಮನಕಾರಿ ವ್ಯವಸ್ಥೆಯ ಮುಖ್ಯ ಲಕ್ಷಣವೊಂದನ್ನು ಮುಂದಿಡುತ್ತಿದೆ. ಜಾತೀಯತೆ, ಪಿತೃಪ್ರಧಾನತೆ ಮತ್ತು ಮತಧರ್ಮಗಳು ಸೇರಿದಂತೆ ಇತರೆ ವ್ಯವಸ್ಥೆಗಳು ಜನರ ಜೀವನವನ್ನು ಮತ್ತು ನಡವಳಿಕೆಗಳನ್ನು ಪ್ರಭಾವಿಸುತ್ತವೆ ಎಂಬುದು ಒಂದು ಸಿದ್ಧಾಂತ. ಅದಕ್ಕೆ ಪ್ರತಿಯಾಗಿ ವ್ಯಕ್ತಿಗಳೇ ತಮ್ಮ ಜೀವನವನ್ನು ನಿರ್ಧರಿಸಿಕೊಳ್ಳುತ್ತಾರೆ ಎಂಬ ವ್ಯಕ್ತಿವಾದದ ಸಿದ್ಧಾಂತವೂ ಇದೆ. ಇಂದು ವ್ಯಕ್ತಿವಾದವನ್ನೇ ಮುಂದಿಡುತ್ತಾ, ನಿಮ್ಮ ಜೀವನವನ್ನು ನೀವು ಕಟ್ಟಿಕೊಳ್ಳುವುದು, ನಿಮ್ಮ ಶ್ರಮವೇ ನಿಮ್ಮ ಜೀವನವನ್ನು ನಿರ್ಧರಿಸುವುದು ಎಂದು ಜನರಿಗೆ ಹೇಳುತ್ತಾ, ವ್ಯಕ್ತಿಯೊಬ್ಬನಿಗೆ ತಾನು ಉಣ್ಣುವ ಆಹಾರವನ್ನು ಆಯ್ದುಕೊಳ್ಳುವ ’ಆಯ್ಕೆ’ಯಿದೆ ಎಂದು ನಂಬಿಸುತ್ತಲೇ, ಮತ್ತೊಂದೆಡೆ ’ಕುಟುಂಬ’ (ಜಾತಿ) ಎಂಬ ವ್ಯವಸ್ಥೆಯ ಕಟ್ಟಲೆಯನ್ನು ಒಟ್ಟೊಟ್ಟಿಗೆ ಮುಂದುವರೆಸಿಕೊಂಡು ಹೋಗುತ್ತಿದೆ. ಈ ವ್ಯವಸ್ಥೆಯು ತನಗೆ ಹಿತವೆನಿಸುವ ರೀತಿಯಲ್ಲಿ ವ್ಯಕ್ತಿವಾದ ಮತ್ತು ದಮನಕಾರಿ ವ್ಯವಸ್ಥೆಗಳನ್ನು ಒಟ್ಟೊಟ್ಟಿಗೆ ಮುಂದೆ ಕೊಂಡೊಯ್ಯುತ್ತಿದೆ. ಈ ವ್ಯವಸ್ಥೆಯಲ್ಲಿ ನನ್ನಂತ ಒಂದಷ್ಟು ಜನರು ಮಾತ್ರವೇ ತಮ್ಮ ’ಆಯ್ಕೆ’ಯನ್ನು ಚಲಾಯಿಸಬಹುದಾಗಿದೆ. ಅವರು ಯಾರು ಎಂಬುದು ಕೂಡ ಜಾತಿ ಮತ್ತು ಇತರೆ ದಮನಕಾರಿ ವ್ಯವಸ್ಥೆಗಳಿಂದಲೇ ನಿರ್ಧಾರವಾಗುತ್ತದೆ. ಹೀಗಿರುವಾಗ, ಆ ’ಆಯ್ಕೆ’ ಸಾಧ್ಯವಿದ್ದಾಗ ನನ್ನಂತೆ ಬ್ರಾಹ್ಮಣ ಜಾತಿಯ-ಮೇಲುಜಾತಿಯೆಂದು ಕರೆದುಕೊಳ್ಳಲ್ಪಟ್ಟ ಶೋಷಕ ಜಾತಿಯ ಮನೆಗಳ-ಮನಸ್ಸುಗಳ ಕೊಳಕನ್ನು ಪ್ರಶ್ನಿಸುವುದಕ್ಕೆ ಆ ’ಆಯ್ಕೆ’ಯನ್ನು ಬಳಸುವುದು ಸೂಕ್ತ ಎಂದು ನಾನು ನಂಬಿದ್ದೇನೆ.

ಇನ್ನೊಂದು ವಿಷಯವಿದೆ. ಪಾಪ ನನ್ನ ಆ ಸಂಬಂಧಿಕರು, ನಾನು ಇದೇ ಮೊದಲಬಾರಿ ಬಾಡು ತಿನ್ನುತ್ತಿರುವುದು ಎಂದು ಎಣಿಸಿರಬೇಕು. ಅದಕ್ಕೆ ಅಷ್ಟು ಕೋಪ, ಸಿಟ್ಟು, ಆಕ್ರೋಶ. ನಾನು ಹೈದರಾಬಾದಿನ ಟಿಸ್‌ನಲ್ಲಿ (TISS) ಕಮ್ಯುನಿಸ್ಟರು, ಅಂಬೇಡ್ಕರವಾದಿಗಳ ಜೊತೆ ಸೇರಿಯೇ ಹೀಗಾದೆ ಎಂದು ಅವರೂ ಸೇರಿದಂತೆ ನನ್ನ ಹೆತ್ತವರೂ ನಂಬಿ ತಿಳಿದಿರುವುದುಂಟು. ಆದರೆ, ಹಾಗೇನಿಲ್ಲ. ಸಸ್ಯಾಹಾರಿತ್ವದ ಬಗ್ಗೆ ಬಹಳ ಹೆಮ್ಮೆಪಡುತ್ತಿದ್ದ ನಾನು, ಒಮ್ಮೆ ಮೈಸೂರಿನಿಂದ ಮಧ್ಯರಾತ್ರಿ ಸೈಕಲಿನಲ್ಲಿ ಬೆಂಗಳೂರಿನ ಕಡೆಗೆ ಹೊರಟೆ. ಶ್ರೀರಂಗಪಟ್ಟಣದ ಬಳಿ ಬರುವ ಹೊತ್ತಿಗೆ ಸುಮಾರು 2 ಗಂಟೆಯಾಗಿತ್ತು. ಹಸಿದಿತ್ತು. ಕಾಸು ಕಡಿಮೆಯಿತ್ತು. ದೊಡ್ಡ ಹೋಟೆಲುಗಳಿಗೆ ಹೋಗುವಷ್ಟಿರಲಿಲ್ಲ. Omn ಗಾಡಿಯೊಂದರಲ್ಲಿ ಊಟ ಸಿಗುತ್ತಿತ್ತು. ಹೋಗಿ ನೋಡಿದೆ. ಪರೋಟ ಮತ್ತು ಚಿಕನ್ ಕರಿಯಷ್ಟೇ ಇದ್ದದ್ದು. ಒಂದು ಕ್ಷಣ ಯೋಚಿಸಿದೆ. ಹಸಿವಿಗೆ ಆಹಾರವೇ ಮುಖ್ಯ. ಏನಾದರೇನು? ಎಂದು ತಿಂದೆ. ಬಹಳ ರುಚಿಕರವಾಗಿದ್ದ ಚಿಕನ್ ತಿಂದ ನನಗೆ, ಇಷ್ಟು ವರ್ಷ ಇಷ್ಟು ರುಚಿಯಾದ ಆಹಾರವನ್ನು ಏಕೆ ತಿನ್ನಲಿಲ್ಲ ಅನ್ನಿಸಿತು. ಅಲ್ಲಿಂದ ಇಲ್ಲಿಗೆ, ಅವಕಾಶ ಸಿಕ್ಕಾಗಲೆಲ್ಲಾ ಚಿಕನ್, ಮಟನ್ ಅಷ್ಟೇ ಅಲ್ಲದೆ ಪೋರ್ಕ್ ಮತ್ತು ಬೀಫ್ ಸೇರಿದಂತೆ ಎಲ್ಲಾ ಬಾಡನ್ನು ಮಿಸ್ ಮಾಡದೆ ತಿನ್ನುತ್ತೇನೆ. ಇಂದು ನನಗೆ ವೈಯಕ್ತಿಕವಾಗಿ, ಮಾಂಸಾಹಾರದಲ್ಲಿರುವಷ್ಟು ರುಚಿ ಮತ್ತು ವೆರೈಟಿಯ ಖಾದ್ಯಗಳು ಸಸ್ಯಾಹಾರದಲ್ಲಿಲ್ಲ ಎನಿಸುತ್ತದೆ. ಮಾಂಸಾಹಾರ ಸೇವನೆ ಇಂದು ನನ್ನ ಸಿದ್ಧಾಂತದ ಒಂದು ಭಾಗ ಎಂಬುದು ಎಷ್ಟು ಸತ್ಯವೋ ನಾನು ಮಾಂಸಾಹಾರ ಸೇವನೆಗೆ ಇಳಿದಿದ್ದು ಹಸಿವಿನಿಂದ, ಸಿದ್ಧಾಂತಗಳಿಂದಲ್ಲ ಎಂಬುದೂ ಅಷ್ಟೇ ಸತ್ಯ.

ಅದರಂತೆಯೇ, ಎಲ್ಲಾ ಜಾತಿ, ವರ್ಗಗಳ ಮಕ್ಕಳು ಸೇರಿ ಬೆರೆಯಬೇಕಿರುವ ಶಾಲಾ-ಕಾಲೇಜುಗಳ ಬಹಳಷ್ಟು ಕ್ಯಾಂಟೀನುಗಳಲ್ಲಿ ದುಡ್ಡುಕೊಟ್ಟರೂ ಮಾಂಸಾಹಾರವೇಕೆ ಸಿಗುವುದಿಲ್ಲ ಎಂಬ ಪ್ರಶ್ನೆಯನ್ನೂ #ಬಾಡೇನಮ್‌ಗಾಡು ಹಿನ್ನೆಲೆಯಲ್ಲಿ ಕೇಳಬೇಕೆನ್ನಿಸಿತು.

  • ಶಶಾಂಕ್, NIASನಲ್ಲಿ ಸಂಶೋಧನಾ ವಿದ್ಯಾರ್ಥಿ

ಇದನ್ನೂ ಓದಿ: ಆಹಾರ ಶ್ರೇಷ್ಠತೆಯ ರಾಜಕೀಯದ ವಿವಿಧ ಮುಖಗಳು

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...