Homeಅಂತರಾಷ್ಟ್ರೀಯಭಾರತ ವಿಭಜನೆ ಆಗಿರದಿದ್ದರೆ ಮೋದಿ-ಶಾ ಪರಿಸ್ಥಿತಿ ಹೇಗಿರುತ್ತಿತ್ತು? ಭಕ್ತರಿಗೊಂದು ಉತ್ತರ

ಭಾರತ ವಿಭಜನೆ ಆಗಿರದಿದ್ದರೆ ಮೋದಿ-ಶಾ ಪರಿಸ್ಥಿತಿ ಹೇಗಿರುತ್ತಿತ್ತು? ಭಕ್ತರಿಗೊಂದು ಉತ್ತರ

- Advertisement -
- Advertisement -

| ಪ್ರವೀಣ್ ಎಸ್ ಶೆಟ್ಟಿ |

ಯಾವುದೇ ಆರೆಸ್ಸೆಸ್ ಕಾರ್ಯಕರ್ತನಿಗೆ ಕೇಳಿ ನೋಡಿ- ಗೋಡ್ಸೆ ಗಾಂಧೀಜಿಯನ್ನು ಕೊಲ್ಲಲು ಕಾರಣವೇನು ಎಂದು.  ಪ್ರತಿಯೊಬ್ಬ ಆರೆಸ್ಸೆಸ್ಸ್ ಕಾರ್ಯಕರ್ತನೂ ಒಂದೇ ತರದ ಉತ್ತರ ಕೊಡುತ್ತಾನೆ – ಗಾಂಧೀಜಿ ಭಾರತದ ವಿಭಜನೆ ಆಗಲು ಕಾರಣ, ಅದಕ್ಕಾಗಿ ಗೋಡ್ಸೆ ದೇಶದ ಮೇಲಿನ ಪ್ರೇಮದಿಂದ ಗಾಂಧೀಜಿಯನ್ನು ಕೊಂದಿದ್ದು ಎಂದು.  ಆರೆಸ್ಸೆಸ್ಸಿನವರು ಕೊಡುವ ಈ ಕಾರಣ ನಿಜವಲ್ಲವಾದರೂ ಒಂದು ಕ್ಷಣ ಈ ಕಾರಣವನ್ನು ಹಿಮ್ಮುಖವಾಗಿ ಸಾಗಿ ವಿಶ್ಲೇಶಿಸುವುದು ಒಳಿತು.  ಒಂದು ವೇಳೆ 1947 ರಲ್ಲಿ ಭಾರತದ ವಿಭಜನೆ ಆಗಿರದಿದ್ದರೆ ಇಂದಿನ ಅಖಂಡ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಸ್ಥಿತಿ ಹೇಗಿರುತ್ತಿತ್ತು ಎಂದು ಸ್ವಲ್ಪ ಕಲ್ಪಿಸಿಕೊಳ್ಳಿ.

ಭಾರತದ 130 ಕೋಟಿ, ಬಾಂಗ್ಲಾದೇಶದ 16 ಕೋಟಿ ಮತ್ತು ಪಾಕಿಸ್ತಾನದ 14 ಕೋಟಿ ಜನಸಂಖ್ಯೆ ಕೂಡಿ ಒಟ್ಟು ಜನ ಸಂಖ್ಯೆ ಒಟ್ಟು 160 ಕೋಟಿ ಆಗುತ್ತಿತ್ತು. ಭೌಗೋಳಿಕ ವಿಸ್ತಾರದಲ್ಲಿ ಚೀನಾ ನಮಗಿಂತ ಎರಡು ಪಟ್ಟು ದೊಡ್ಡದಿದ್ದರೂ ಜನಸಂಖ್ಯೆಯಲ್ಲಿ ನಾವು ವಿಶ್ವಗುರು ಆಗಿರುತ್ತಿದ್ದೆವು. ಇನ್ನು ಧರ್ಮವಾರು ಜನಸಂಖ್ಯೆ ನೋಡಿದರೆ, 160 ಕೋಟಿ ಜನಸಂಖ್ಯೆಯಲ್ಲಿ ಮುಸ್ಲಿಮರ ಸಂಖ್ಯೆ 50 ಕೋಟಿಗೂ ಹೆಚ್ಚಿರುತ್ತಿತ್ತು. ಇಂತಹಾ ಸನ್ನಿವೇಶದಲ್ಲಿ ಒಂದು ವೇಳೆ ಅಡ್ವಾಣಿ ರಾಮ ಜನ್ಮಭೂಮಿ ರಥಯಾತ್ರಾ ಹೊರಡಿಸುತ್ತಿದ್ದರೆ ಅವರ ಗತಿ ಎನಾಗುತ್ತಿತ್ತು ಊಹಿಸಿ.

2002 ರಲ್ಲಿ ಮೋದಿ ಗೋಧ್ರಾದಲ್ಲಿ ತನ್ನವರಿಂದಲೇ ಕರಸೇವಕರ ರೈಲಿಗೆ ಬೆಂಕಿ ಹಾಕಿಸಿ ನಂತರ ಭೀಕರ ಕೋಮು ಗಲಭೆ ಹಬ್ಬಿಸಿದ್ದರೆ ಮೋದಿ ಸಹಿತ ಎಲ್ಲಾ ಬನಿಯಾ ಮತ್ತು ಜೈನರು ಗುಜರಾತ್ ಬಿಟ್ಟು ಓಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಜನಾಂಗೀಯ ಯುದ್ಧ ನಡೆಯುತ್ತಿತ್ತು, ಬ್ರಿಟಿಷರು ಮುಸ್ಲಿಮರನ್ನು “ಮಾರ್ಷಿಯಲ್ ರೇಸ್” ಎಂದು ವರ್ಗೀಕರಿಸಿದ್ದು ಸುಮ್ಮನೆ ಅಲ್ಲ. ಗುಜರಾತಿಗಳು ಬಾಲ ಬಿಚ್ಚಿದ್ದರೆ ಬಲೂಚಿಸ್ತಾನದ ಪಠಾಣರು ಗುಜರಾತಿಗೆ ನುಗ್ಗಿ ಬುದ್ದಿ ಕಲಿಸಿ ಮೋದಿ ಅಮಿತ್ ಶಾ ಇಬ್ಬರನ್ನೂ ಗುಜರಾತಿನಿಂದ ಓಡಿಸುತ್ತಿದ್ದರು. ಅಖ್ಲಾಕ್ ಮುಂತಾದವರನ್ನು ಗೋಮಾಂಸದ ಹೆಸರಲ್ಲಿ ಬಜರಂಗಿಗಳು ಚಚ್ಚಿ ಕೊಂದಾಗ ಅದಕ್ಕೆ ಪ್ರತಿಕಾರವನ್ನು ಉತ್ತರ ಪ್ರದೇಶದ ಮುಸ್ಲಿಮರೇ ತೀರಿಸಿಕೊಳ್ಳುತ್ತಿದ್ದರು. ಬೀಫ್-ಗೋಮೂತ್ರದ ಹೆಸರಲ್ಲಿ ಮುಸ್ಲಿಮರ ರಕ್ತಪಾತ ಮಾಡಿದ್ದರೆ ಅವರೂ ತಿರುಗಿ ಸೇಡು ತೀರಿಸಿಕೊಳ್ಳುತ್ತಿದ್ದರು. ಯೋಗಿಯಂತವರು ಎಂದೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಲು ಸಾಧ್ಯವಾಗುತ್ತಿರಲಿಲ್ಲ. ಮೋದಿಗಂತೂ ಆರು ತಿಂಗಳೂ ಗುಜರಾತ್ ಮುಖ್ಯಮಂತ್ರಿ ಆಗಿರಲು ಕೇಂದ್ರ ಸರಕಾರ ಬಿಡುತ್ತಿರಲಿಲ್ಲ. ಆರೆಸ್ಸೆಸ್ಸಿನ ನಾಗಪುರ ಹೆಡ್ ಆಫೀಸ್ ಪಕೋಡಾ ಮಾರುವ ಕೇಂದ್ರವಾಗಿರುತ್ತಿತ್ತು. ಮುಸ್ಲಿಮರ ಹೆಸರಲ್ಲಿ ದ್ವೇಷ ಸಾಧಿಸಿ ಬಿ‌ಜೆ‌ಪಿ ಅಧಿಕಾರಕ್ಕೆ ಬರಲು ಸಾಧ್ಯವೇ ಆಗುತ್ತಿರಲಿಲ್ಲ. ಅಷ್ಟೇ ಅಲ್ಲ ಮೋದಿಯಂತಹಾ ಗುಜರಾತಿ ವ್ಯಾಪಾರಿ ಭಾರತದ ಜನತೆಗೆ ಅತ್ತ ಪಾಕಿಸ್ತಾನ ತೋರಿಸಿ ಇತ್ತ ದೇಶದ ಖನಿಜ ಸಂಪತ್ತನ್ನು ಹಾಗೂ ಸಾರ್ವಜನಿಕ  ಉದ್ಯಮಗಳನ್ನು ಕವಡೆ ಕಾಸಿಗೆ ತನ್ನ ಬನಿಯಾ ಉದ್ಯಮಿಗಳಿಗೆ ಮಾರಲು ಸಾಧ್ಯ ಆಗುತ್ತಲೇ ಇರಲಿಲ್ಲ.

ಪಾಕಿಸ್ತಾನವೇ ಇರದಿದ್ದರೆ ತನ್ನ ವಿಫಲತೆಗೆ ಮೋದಿ ಯಾರನ್ನು ಹೊಣೆ ಮಾಡಿ ಬಯ್ಯುತ್ತಿದ್ದರು? “ಘರ್ ಮೆ ಗುಸ್ ಕೆ ಮಾರೇಂಗೆ” ಎಂದು ಯಾರ ಮುಂದೆ ಮೋದಿ ಬಡಾಯಿ ಕೊಚ್ಚಲು ಸಾಧ್ಯವಾಗುತ್ತಿತ್ತು? ಭಾರತದ ಸೇನೆಯಲ್ಲಿ ಅರ್ಧಕರ್ಧ ಮುಸ್ಲಿಮರೇ ಇರುತ್ತಿದ್ದರು. ಕಾರಣ ಉತ್ತಮ ದೇಹ ಧಾರ್ಢ್ಯ ಹೊಂದಿರುವ ಮ್ಜುಸ್ಲಿಮರೇ ಮಿಲಿಟರಿಯಲ್ಲಿ  ಹೆಚ್ಚಿರುತ್ತಿದ್ದರು. 1947 ರಲ್ಲಿ ಭಾರತ ವಿಭಜನೆ ಆಗಿರದಿದ್ದರೆ ಯಾರ ವಿರುದ್ಧ ದ್ವೇಷ ಭೋಧಿಸಿ ಬಿ‌ಜೆ‌ಪಿ ಅಧಿಕಾರಕ್ಕೆ ಬರಲು ಸಾಧ್ಯವಿತ್ತು? ಭಾರತದಲ್ಲಿ ಯಾವುದೇ ಹಿಂದುತ್ವವಾದಿ ಸರಕಾರ ಎಂದೂ ಅಧಿಕಾರಕ್ಕೆ ಬರುತ್ತಿರಲಿಲ್ಲ.

1857ರಲ್ಲಿ ಝಾನ್ಸಿ ಲಕ್ಷ್ಮೀಬಾಯಿ ಮತ್ತು ಮೋಘಲರ ಕೊನೆಯ ದೊರೆ ಬಹದೂರ್ ಶಾ ಜಫರ್ ಬ್ರಿಟಿಷರ ವಿರುದ್ಧ ಎದ್ದ ಬಂಡಾಯ ಹಾಗೂ ಸಿಪಾಯಿ ದಂಗೆಯನ್ನು “ಮೊದಲನೇ ಸ್ವಾತಂತ್ರ್ಯ ಯುದ್ಧ” ಎಂದು ಕರೆಯಲಾಗುತ್ತದೆ. ಒಂದು ವೇಳೆ ಅಂದು ಝಾನ್ಸಿ ಲಕ್ಷ್ಮೀಬಾಯಿ, ಮೋಘಲರು ಮತ್ತು ಇತರ ರಾಜರ-ನವಾಬರ ಒಕ್ಕೂಟ ಬ್ರಿಟಿಷರ ವಿರುದ್ಧ ಗೆದ್ದು ಬ್ರಿಟಿಷರನ್ನು ಭಾರತದಿಂದ ತೊಲಗಿಸಿದ್ದರೆ ಎನಾಗುತ್ತಿತ್ತು ಊಹಿಸಿ. ಝಾನ್ಸಿ ಲಕ್ಷ್ಮಿ ಅಥವಾ ಮೋಘಲರು ಅಂದು ಬ್ರಿಟಿಷರ ವಿರುದ್ಧ ಬಂಡಾಯ ಎದ್ದಿದ್ದು ಭಾರತ ದೇಶವನ್ನು ಬ್ರಿಟಿಷರಿಂದ ಮುಕ್ತಗೊಳಿಸಿ ಪ್ರಜಾಪ್ರಭುತ್ವ ಸ್ಥಾಪಿಸಲು ಅಲ್ಲವೇ ಅಲ್ಲ. ಅವರು ಬಂಡಾಯ ಎದ್ದಿದ್ದು ತಮ್ಮ ತಮ್ಮ ರಾಜ್ಯಗಳನ್ನು ಬ್ರಿಟಿಷರಿಂದ ಉಳಿಸಿಕೊಳ್ಳಲು. ಅಂದು ಈ ರಾಜರು-ನವಾಬರು ಗೆದ್ದಿದ್ದರೆ, ನಂತರ ಅವರು ತಮ್ಮ ತಮ್ಮ ರಾಜಗಳನ್ನು ಪ್ರತ್ಯೇಕವಾಗಿಯೇ ಉಳಿಸಿ ಕೊಳ್ಳುತ್ತಿದ್ದರು. ಆಗ ಭಾರತದಲ್ಲಿ ಸುಮಾರು 550 ಸಂಸ್ಥಾನಗಳು ಹಾಗೂ ನವಾಬರು ಇರುತ್ತಿದ್ದರು. ಒಂದೊಂದು ಸಂಸ್ಥಾನಕ್ಕೆ ಒಂದೊಂದು ಕರೆನ್ಸಿ ಇರುತ್ತಿತ್ತು, ಬೆಂಗಳೂರಿನಿಂದ ಮುಂಬೈ ಗೆ ಹೋಗಲು ಪಾಸ್ಪೋರ್ಟಿನ ಅಗತ್ಯ ಬೀಳುತ್ತಿತ್ತು. ಕಾಶ್ಮೀರ ಎಂದೋ ಪ್ರತ್ಯಕವಾಗಿ ಹೋಗಿರುತ್ತಿತ್ತು. ಪ್ರತಿಯೊಂದು ಸಂಸ್ಥಾನವೂ ತಮ್ಮದೇ ಆದ ಪ್ರತ್ಯೇಕ ಮಿಲಿಟರಿ ಹೊಂದಿರುತ್ತಿದ್ದವು, ಜತೆಗೆ ಗಡಿ ಕಲಹದಿಂದಾಗಿ ಯಾವಾಗಲೂ ಸಂಸ್ಥಾನಗಳ ನಡುವೆ ಯುದ್ಧ ನಡೆಯುತ್ತಲೇ ಇರುತ್ತಿತ್ತು. ಸಮಸ್ತ ಭಾರತ ಸೊಮಾಲಿಯಾಕ್ಕಿಂತ ಕಡೆಯಾಗಿರುತ್ತಿತ್ತು. ಮುಕ್ಕಾಲು ಪಾಲು ಜನತೆ ಹಸಿವಿನಿಂದ ಬಳಲುತ್ತಿತ್ತು. “ಘರ್ ಮೆ ಗುಸ್ ಕೆ ಮಾರೆಂಗೆ” ಅನ್ನುವ ಪುಕ್ಕಲು ಬನಿಯಾ ಎಲ್ಲಿಯೋ ಒಂದು ಸಣ್ಣ ನಗರದಲ್ಲಿ ಪಕೋಡಾ ಅಂಗಡಿ ನಡೆಸುತ್ತಾ ಜನರನ್ನು ಯಾಮಾರಿಸುತ್ತಾ ಜೀವನ ನಡೆಸುತ್ತಿದ್ದ ಅಷ್ಟೇ. 550 ರಾಜ ಸಂಸ್ಥಾನಗಳಿದ್ದ ಇಷ್ಟು ದೊಡ್ಡ ಭಾರತ ದೇಶ ವಿಛಿದ್ರವಾಗದೇ ಇಂದು ಒಂದಾಗಿ ಇದ್ದರೆ ಅದಕ್ಕೆ ನಾವು ಬ್ರಿಟಿಷರಿಗೆ ಹಾಗೂ ಗಾಂಧೀಜಿಗೆ ಋಣಿಯಾಗಿರಬೇಕು. ಗೋಡ್ಸೆ ಭಕ್ತ ಆರೆಸ್ಸೆಸ್ಸಿನವರಿಗೆ ಮತ್ತು ವಾಟ್ಸಪ್ ಯೂನಿವರ್ಸಿಟಿಯ ವಿದ್ಯಾರ್ಥಿಗಳಿಗೆ ಇಷ್ಟೆಲ್ಲಾ ದೂರಗಾಮಿ ವಿಶ್ಲೇಷಣೆ ಸಾಧ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ ತುಂಬಾ ಉಪಯುಕ್ತ ವಿಚಾರಗಳನ್ನು
    ತಿಳಿಸಿದ್ದೀರಿ ಧನ್ಯವಾದಗಳು

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...