Homeಅಂತರಾಷ್ಟ್ರೀಯಭಾರತ ವಿಭಜನೆ ಆಗಿರದಿದ್ದರೆ ಮೋದಿ-ಶಾ ಪರಿಸ್ಥಿತಿ ಹೇಗಿರುತ್ತಿತ್ತು? ಭಕ್ತರಿಗೊಂದು ಉತ್ತರ

ಭಾರತ ವಿಭಜನೆ ಆಗಿರದಿದ್ದರೆ ಮೋದಿ-ಶಾ ಪರಿಸ್ಥಿತಿ ಹೇಗಿರುತ್ತಿತ್ತು? ಭಕ್ತರಿಗೊಂದು ಉತ್ತರ

- Advertisement -
- Advertisement -

| ಪ್ರವೀಣ್ ಎಸ್ ಶೆಟ್ಟಿ |

ಯಾವುದೇ ಆರೆಸ್ಸೆಸ್ ಕಾರ್ಯಕರ್ತನಿಗೆ ಕೇಳಿ ನೋಡಿ- ಗೋಡ್ಸೆ ಗಾಂಧೀಜಿಯನ್ನು ಕೊಲ್ಲಲು ಕಾರಣವೇನು ಎಂದು.  ಪ್ರತಿಯೊಬ್ಬ ಆರೆಸ್ಸೆಸ್ಸ್ ಕಾರ್ಯಕರ್ತನೂ ಒಂದೇ ತರದ ಉತ್ತರ ಕೊಡುತ್ತಾನೆ – ಗಾಂಧೀಜಿ ಭಾರತದ ವಿಭಜನೆ ಆಗಲು ಕಾರಣ, ಅದಕ್ಕಾಗಿ ಗೋಡ್ಸೆ ದೇಶದ ಮೇಲಿನ ಪ್ರೇಮದಿಂದ ಗಾಂಧೀಜಿಯನ್ನು ಕೊಂದಿದ್ದು ಎಂದು.  ಆರೆಸ್ಸೆಸ್ಸಿನವರು ಕೊಡುವ ಈ ಕಾರಣ ನಿಜವಲ್ಲವಾದರೂ ಒಂದು ಕ್ಷಣ ಈ ಕಾರಣವನ್ನು ಹಿಮ್ಮುಖವಾಗಿ ಸಾಗಿ ವಿಶ್ಲೇಶಿಸುವುದು ಒಳಿತು.  ಒಂದು ವೇಳೆ 1947 ರಲ್ಲಿ ಭಾರತದ ವಿಭಜನೆ ಆಗಿರದಿದ್ದರೆ ಇಂದಿನ ಅಖಂಡ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಸ್ಥಿತಿ ಹೇಗಿರುತ್ತಿತ್ತು ಎಂದು ಸ್ವಲ್ಪ ಕಲ್ಪಿಸಿಕೊಳ್ಳಿ.

ಭಾರತದ 130 ಕೋಟಿ, ಬಾಂಗ್ಲಾದೇಶದ 16 ಕೋಟಿ ಮತ್ತು ಪಾಕಿಸ್ತಾನದ 14 ಕೋಟಿ ಜನಸಂಖ್ಯೆ ಕೂಡಿ ಒಟ್ಟು ಜನ ಸಂಖ್ಯೆ ಒಟ್ಟು 160 ಕೋಟಿ ಆಗುತ್ತಿತ್ತು. ಭೌಗೋಳಿಕ ವಿಸ್ತಾರದಲ್ಲಿ ಚೀನಾ ನಮಗಿಂತ ಎರಡು ಪಟ್ಟು ದೊಡ್ಡದಿದ್ದರೂ ಜನಸಂಖ್ಯೆಯಲ್ಲಿ ನಾವು ವಿಶ್ವಗುರು ಆಗಿರುತ್ತಿದ್ದೆವು. ಇನ್ನು ಧರ್ಮವಾರು ಜನಸಂಖ್ಯೆ ನೋಡಿದರೆ, 160 ಕೋಟಿ ಜನಸಂಖ್ಯೆಯಲ್ಲಿ ಮುಸ್ಲಿಮರ ಸಂಖ್ಯೆ 50 ಕೋಟಿಗೂ ಹೆಚ್ಚಿರುತ್ತಿತ್ತು. ಇಂತಹಾ ಸನ್ನಿವೇಶದಲ್ಲಿ ಒಂದು ವೇಳೆ ಅಡ್ವಾಣಿ ರಾಮ ಜನ್ಮಭೂಮಿ ರಥಯಾತ್ರಾ ಹೊರಡಿಸುತ್ತಿದ್ದರೆ ಅವರ ಗತಿ ಎನಾಗುತ್ತಿತ್ತು ಊಹಿಸಿ.

2002 ರಲ್ಲಿ ಮೋದಿ ಗೋಧ್ರಾದಲ್ಲಿ ತನ್ನವರಿಂದಲೇ ಕರಸೇವಕರ ರೈಲಿಗೆ ಬೆಂಕಿ ಹಾಕಿಸಿ ನಂತರ ಭೀಕರ ಕೋಮು ಗಲಭೆ ಹಬ್ಬಿಸಿದ್ದರೆ ಮೋದಿ ಸಹಿತ ಎಲ್ಲಾ ಬನಿಯಾ ಮತ್ತು ಜೈನರು ಗುಜರಾತ್ ಬಿಟ್ಟು ಓಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಜನಾಂಗೀಯ ಯುದ್ಧ ನಡೆಯುತ್ತಿತ್ತು, ಬ್ರಿಟಿಷರು ಮುಸ್ಲಿಮರನ್ನು “ಮಾರ್ಷಿಯಲ್ ರೇಸ್” ಎಂದು ವರ್ಗೀಕರಿಸಿದ್ದು ಸುಮ್ಮನೆ ಅಲ್ಲ. ಗುಜರಾತಿಗಳು ಬಾಲ ಬಿಚ್ಚಿದ್ದರೆ ಬಲೂಚಿಸ್ತಾನದ ಪಠಾಣರು ಗುಜರಾತಿಗೆ ನುಗ್ಗಿ ಬುದ್ದಿ ಕಲಿಸಿ ಮೋದಿ ಅಮಿತ್ ಶಾ ಇಬ್ಬರನ್ನೂ ಗುಜರಾತಿನಿಂದ ಓಡಿಸುತ್ತಿದ್ದರು. ಅಖ್ಲಾಕ್ ಮುಂತಾದವರನ್ನು ಗೋಮಾಂಸದ ಹೆಸರಲ್ಲಿ ಬಜರಂಗಿಗಳು ಚಚ್ಚಿ ಕೊಂದಾಗ ಅದಕ್ಕೆ ಪ್ರತಿಕಾರವನ್ನು ಉತ್ತರ ಪ್ರದೇಶದ ಮುಸ್ಲಿಮರೇ ತೀರಿಸಿಕೊಳ್ಳುತ್ತಿದ್ದರು. ಬೀಫ್-ಗೋಮೂತ್ರದ ಹೆಸರಲ್ಲಿ ಮುಸ್ಲಿಮರ ರಕ್ತಪಾತ ಮಾಡಿದ್ದರೆ ಅವರೂ ತಿರುಗಿ ಸೇಡು ತೀರಿಸಿಕೊಳ್ಳುತ್ತಿದ್ದರು. ಯೋಗಿಯಂತವರು ಎಂದೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಲು ಸಾಧ್ಯವಾಗುತ್ತಿರಲಿಲ್ಲ. ಮೋದಿಗಂತೂ ಆರು ತಿಂಗಳೂ ಗುಜರಾತ್ ಮುಖ್ಯಮಂತ್ರಿ ಆಗಿರಲು ಕೇಂದ್ರ ಸರಕಾರ ಬಿಡುತ್ತಿರಲಿಲ್ಲ. ಆರೆಸ್ಸೆಸ್ಸಿನ ನಾಗಪುರ ಹೆಡ್ ಆಫೀಸ್ ಪಕೋಡಾ ಮಾರುವ ಕೇಂದ್ರವಾಗಿರುತ್ತಿತ್ತು. ಮುಸ್ಲಿಮರ ಹೆಸರಲ್ಲಿ ದ್ವೇಷ ಸಾಧಿಸಿ ಬಿ‌ಜೆ‌ಪಿ ಅಧಿಕಾರಕ್ಕೆ ಬರಲು ಸಾಧ್ಯವೇ ಆಗುತ್ತಿರಲಿಲ್ಲ. ಅಷ್ಟೇ ಅಲ್ಲ ಮೋದಿಯಂತಹಾ ಗುಜರಾತಿ ವ್ಯಾಪಾರಿ ಭಾರತದ ಜನತೆಗೆ ಅತ್ತ ಪಾಕಿಸ್ತಾನ ತೋರಿಸಿ ಇತ್ತ ದೇಶದ ಖನಿಜ ಸಂಪತ್ತನ್ನು ಹಾಗೂ ಸಾರ್ವಜನಿಕ  ಉದ್ಯಮಗಳನ್ನು ಕವಡೆ ಕಾಸಿಗೆ ತನ್ನ ಬನಿಯಾ ಉದ್ಯಮಿಗಳಿಗೆ ಮಾರಲು ಸಾಧ್ಯ ಆಗುತ್ತಲೇ ಇರಲಿಲ್ಲ.

ಪಾಕಿಸ್ತಾನವೇ ಇರದಿದ್ದರೆ ತನ್ನ ವಿಫಲತೆಗೆ ಮೋದಿ ಯಾರನ್ನು ಹೊಣೆ ಮಾಡಿ ಬಯ್ಯುತ್ತಿದ್ದರು? “ಘರ್ ಮೆ ಗುಸ್ ಕೆ ಮಾರೇಂಗೆ” ಎಂದು ಯಾರ ಮುಂದೆ ಮೋದಿ ಬಡಾಯಿ ಕೊಚ್ಚಲು ಸಾಧ್ಯವಾಗುತ್ತಿತ್ತು? ಭಾರತದ ಸೇನೆಯಲ್ಲಿ ಅರ್ಧಕರ್ಧ ಮುಸ್ಲಿಮರೇ ಇರುತ್ತಿದ್ದರು. ಕಾರಣ ಉತ್ತಮ ದೇಹ ಧಾರ್ಢ್ಯ ಹೊಂದಿರುವ ಮ್ಜುಸ್ಲಿಮರೇ ಮಿಲಿಟರಿಯಲ್ಲಿ  ಹೆಚ್ಚಿರುತ್ತಿದ್ದರು. 1947 ರಲ್ಲಿ ಭಾರತ ವಿಭಜನೆ ಆಗಿರದಿದ್ದರೆ ಯಾರ ವಿರುದ್ಧ ದ್ವೇಷ ಭೋಧಿಸಿ ಬಿ‌ಜೆ‌ಪಿ ಅಧಿಕಾರಕ್ಕೆ ಬರಲು ಸಾಧ್ಯವಿತ್ತು? ಭಾರತದಲ್ಲಿ ಯಾವುದೇ ಹಿಂದುತ್ವವಾದಿ ಸರಕಾರ ಎಂದೂ ಅಧಿಕಾರಕ್ಕೆ ಬರುತ್ತಿರಲಿಲ್ಲ.

1857ರಲ್ಲಿ ಝಾನ್ಸಿ ಲಕ್ಷ್ಮೀಬಾಯಿ ಮತ್ತು ಮೋಘಲರ ಕೊನೆಯ ದೊರೆ ಬಹದೂರ್ ಶಾ ಜಫರ್ ಬ್ರಿಟಿಷರ ವಿರುದ್ಧ ಎದ್ದ ಬಂಡಾಯ ಹಾಗೂ ಸಿಪಾಯಿ ದಂಗೆಯನ್ನು “ಮೊದಲನೇ ಸ್ವಾತಂತ್ರ್ಯ ಯುದ್ಧ” ಎಂದು ಕರೆಯಲಾಗುತ್ತದೆ. ಒಂದು ವೇಳೆ ಅಂದು ಝಾನ್ಸಿ ಲಕ್ಷ್ಮೀಬಾಯಿ, ಮೋಘಲರು ಮತ್ತು ಇತರ ರಾಜರ-ನವಾಬರ ಒಕ್ಕೂಟ ಬ್ರಿಟಿಷರ ವಿರುದ್ಧ ಗೆದ್ದು ಬ್ರಿಟಿಷರನ್ನು ಭಾರತದಿಂದ ತೊಲಗಿಸಿದ್ದರೆ ಎನಾಗುತ್ತಿತ್ತು ಊಹಿಸಿ. ಝಾನ್ಸಿ ಲಕ್ಷ್ಮಿ ಅಥವಾ ಮೋಘಲರು ಅಂದು ಬ್ರಿಟಿಷರ ವಿರುದ್ಧ ಬಂಡಾಯ ಎದ್ದಿದ್ದು ಭಾರತ ದೇಶವನ್ನು ಬ್ರಿಟಿಷರಿಂದ ಮುಕ್ತಗೊಳಿಸಿ ಪ್ರಜಾಪ್ರಭುತ್ವ ಸ್ಥಾಪಿಸಲು ಅಲ್ಲವೇ ಅಲ್ಲ. ಅವರು ಬಂಡಾಯ ಎದ್ದಿದ್ದು ತಮ್ಮ ತಮ್ಮ ರಾಜ್ಯಗಳನ್ನು ಬ್ರಿಟಿಷರಿಂದ ಉಳಿಸಿಕೊಳ್ಳಲು. ಅಂದು ಈ ರಾಜರು-ನವಾಬರು ಗೆದ್ದಿದ್ದರೆ, ನಂತರ ಅವರು ತಮ್ಮ ತಮ್ಮ ರಾಜಗಳನ್ನು ಪ್ರತ್ಯೇಕವಾಗಿಯೇ ಉಳಿಸಿ ಕೊಳ್ಳುತ್ತಿದ್ದರು. ಆಗ ಭಾರತದಲ್ಲಿ ಸುಮಾರು 550 ಸಂಸ್ಥಾನಗಳು ಹಾಗೂ ನವಾಬರು ಇರುತ್ತಿದ್ದರು. ಒಂದೊಂದು ಸಂಸ್ಥಾನಕ್ಕೆ ಒಂದೊಂದು ಕರೆನ್ಸಿ ಇರುತ್ತಿತ್ತು, ಬೆಂಗಳೂರಿನಿಂದ ಮುಂಬೈ ಗೆ ಹೋಗಲು ಪಾಸ್ಪೋರ್ಟಿನ ಅಗತ್ಯ ಬೀಳುತ್ತಿತ್ತು. ಕಾಶ್ಮೀರ ಎಂದೋ ಪ್ರತ್ಯಕವಾಗಿ ಹೋಗಿರುತ್ತಿತ್ತು. ಪ್ರತಿಯೊಂದು ಸಂಸ್ಥಾನವೂ ತಮ್ಮದೇ ಆದ ಪ್ರತ್ಯೇಕ ಮಿಲಿಟರಿ ಹೊಂದಿರುತ್ತಿದ್ದವು, ಜತೆಗೆ ಗಡಿ ಕಲಹದಿಂದಾಗಿ ಯಾವಾಗಲೂ ಸಂಸ್ಥಾನಗಳ ನಡುವೆ ಯುದ್ಧ ನಡೆಯುತ್ತಲೇ ಇರುತ್ತಿತ್ತು. ಸಮಸ್ತ ಭಾರತ ಸೊಮಾಲಿಯಾಕ್ಕಿಂತ ಕಡೆಯಾಗಿರುತ್ತಿತ್ತು. ಮುಕ್ಕಾಲು ಪಾಲು ಜನತೆ ಹಸಿವಿನಿಂದ ಬಳಲುತ್ತಿತ್ತು. “ಘರ್ ಮೆ ಗುಸ್ ಕೆ ಮಾರೆಂಗೆ” ಅನ್ನುವ ಪುಕ್ಕಲು ಬನಿಯಾ ಎಲ್ಲಿಯೋ ಒಂದು ಸಣ್ಣ ನಗರದಲ್ಲಿ ಪಕೋಡಾ ಅಂಗಡಿ ನಡೆಸುತ್ತಾ ಜನರನ್ನು ಯಾಮಾರಿಸುತ್ತಾ ಜೀವನ ನಡೆಸುತ್ತಿದ್ದ ಅಷ್ಟೇ. 550 ರಾಜ ಸಂಸ್ಥಾನಗಳಿದ್ದ ಇಷ್ಟು ದೊಡ್ಡ ಭಾರತ ದೇಶ ವಿಛಿದ್ರವಾಗದೇ ಇಂದು ಒಂದಾಗಿ ಇದ್ದರೆ ಅದಕ್ಕೆ ನಾವು ಬ್ರಿಟಿಷರಿಗೆ ಹಾಗೂ ಗಾಂಧೀಜಿಗೆ ಋಣಿಯಾಗಿರಬೇಕು. ಗೋಡ್ಸೆ ಭಕ್ತ ಆರೆಸ್ಸೆಸ್ಸಿನವರಿಗೆ ಮತ್ತು ವಾಟ್ಸಪ್ ಯೂನಿವರ್ಸಿಟಿಯ ವಿದ್ಯಾರ್ಥಿಗಳಿಗೆ ಇಷ್ಟೆಲ್ಲಾ ದೂರಗಾಮಿ ವಿಶ್ಲೇಷಣೆ ಸಾಧ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ ತುಂಬಾ ಉಪಯುಕ್ತ ವಿಚಾರಗಳನ್ನು
    ತಿಳಿಸಿದ್ದೀರಿ ಧನ್ಯವಾದಗಳು

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...