Homeಅಂತರಾಷ್ಟ್ರೀಯಭಾರತ ವಿಭಜನೆ ಆಗಿರದಿದ್ದರೆ ಮೋದಿ-ಶಾ ಪರಿಸ್ಥಿತಿ ಹೇಗಿರುತ್ತಿತ್ತು? ಭಕ್ತರಿಗೊಂದು ಉತ್ತರ

ಭಾರತ ವಿಭಜನೆ ಆಗಿರದಿದ್ದರೆ ಮೋದಿ-ಶಾ ಪರಿಸ್ಥಿತಿ ಹೇಗಿರುತ್ತಿತ್ತು? ಭಕ್ತರಿಗೊಂದು ಉತ್ತರ

- Advertisement -
- Advertisement -

| ಪ್ರವೀಣ್ ಎಸ್ ಶೆಟ್ಟಿ |

ಯಾವುದೇ ಆರೆಸ್ಸೆಸ್ ಕಾರ್ಯಕರ್ತನಿಗೆ ಕೇಳಿ ನೋಡಿ- ಗೋಡ್ಸೆ ಗಾಂಧೀಜಿಯನ್ನು ಕೊಲ್ಲಲು ಕಾರಣವೇನು ಎಂದು.  ಪ್ರತಿಯೊಬ್ಬ ಆರೆಸ್ಸೆಸ್ಸ್ ಕಾರ್ಯಕರ್ತನೂ ಒಂದೇ ತರದ ಉತ್ತರ ಕೊಡುತ್ತಾನೆ – ಗಾಂಧೀಜಿ ಭಾರತದ ವಿಭಜನೆ ಆಗಲು ಕಾರಣ, ಅದಕ್ಕಾಗಿ ಗೋಡ್ಸೆ ದೇಶದ ಮೇಲಿನ ಪ್ರೇಮದಿಂದ ಗಾಂಧೀಜಿಯನ್ನು ಕೊಂದಿದ್ದು ಎಂದು.  ಆರೆಸ್ಸೆಸ್ಸಿನವರು ಕೊಡುವ ಈ ಕಾರಣ ನಿಜವಲ್ಲವಾದರೂ ಒಂದು ಕ್ಷಣ ಈ ಕಾರಣವನ್ನು ಹಿಮ್ಮುಖವಾಗಿ ಸಾಗಿ ವಿಶ್ಲೇಶಿಸುವುದು ಒಳಿತು.  ಒಂದು ವೇಳೆ 1947 ರಲ್ಲಿ ಭಾರತದ ವಿಭಜನೆ ಆಗಿರದಿದ್ದರೆ ಇಂದಿನ ಅಖಂಡ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಸ್ಥಿತಿ ಹೇಗಿರುತ್ತಿತ್ತು ಎಂದು ಸ್ವಲ್ಪ ಕಲ್ಪಿಸಿಕೊಳ್ಳಿ.

ಭಾರತದ 130 ಕೋಟಿ, ಬಾಂಗ್ಲಾದೇಶದ 16 ಕೋಟಿ ಮತ್ತು ಪಾಕಿಸ್ತಾನದ 14 ಕೋಟಿ ಜನಸಂಖ್ಯೆ ಕೂಡಿ ಒಟ್ಟು ಜನ ಸಂಖ್ಯೆ ಒಟ್ಟು 160 ಕೋಟಿ ಆಗುತ್ತಿತ್ತು. ಭೌಗೋಳಿಕ ವಿಸ್ತಾರದಲ್ಲಿ ಚೀನಾ ನಮಗಿಂತ ಎರಡು ಪಟ್ಟು ದೊಡ್ಡದಿದ್ದರೂ ಜನಸಂಖ್ಯೆಯಲ್ಲಿ ನಾವು ವಿಶ್ವಗುರು ಆಗಿರುತ್ತಿದ್ದೆವು. ಇನ್ನು ಧರ್ಮವಾರು ಜನಸಂಖ್ಯೆ ನೋಡಿದರೆ, 160 ಕೋಟಿ ಜನಸಂಖ್ಯೆಯಲ್ಲಿ ಮುಸ್ಲಿಮರ ಸಂಖ್ಯೆ 50 ಕೋಟಿಗೂ ಹೆಚ್ಚಿರುತ್ತಿತ್ತು. ಇಂತಹಾ ಸನ್ನಿವೇಶದಲ್ಲಿ ಒಂದು ವೇಳೆ ಅಡ್ವಾಣಿ ರಾಮ ಜನ್ಮಭೂಮಿ ರಥಯಾತ್ರಾ ಹೊರಡಿಸುತ್ತಿದ್ದರೆ ಅವರ ಗತಿ ಎನಾಗುತ್ತಿತ್ತು ಊಹಿಸಿ.

2002 ರಲ್ಲಿ ಮೋದಿ ಗೋಧ್ರಾದಲ್ಲಿ ತನ್ನವರಿಂದಲೇ ಕರಸೇವಕರ ರೈಲಿಗೆ ಬೆಂಕಿ ಹಾಕಿಸಿ ನಂತರ ಭೀಕರ ಕೋಮು ಗಲಭೆ ಹಬ್ಬಿಸಿದ್ದರೆ ಮೋದಿ ಸಹಿತ ಎಲ್ಲಾ ಬನಿಯಾ ಮತ್ತು ಜೈನರು ಗುಜರಾತ್ ಬಿಟ್ಟು ಓಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಜನಾಂಗೀಯ ಯುದ್ಧ ನಡೆಯುತ್ತಿತ್ತು, ಬ್ರಿಟಿಷರು ಮುಸ್ಲಿಮರನ್ನು “ಮಾರ್ಷಿಯಲ್ ರೇಸ್” ಎಂದು ವರ್ಗೀಕರಿಸಿದ್ದು ಸುಮ್ಮನೆ ಅಲ್ಲ. ಗುಜರಾತಿಗಳು ಬಾಲ ಬಿಚ್ಚಿದ್ದರೆ ಬಲೂಚಿಸ್ತಾನದ ಪಠಾಣರು ಗುಜರಾತಿಗೆ ನುಗ್ಗಿ ಬುದ್ದಿ ಕಲಿಸಿ ಮೋದಿ ಅಮಿತ್ ಶಾ ಇಬ್ಬರನ್ನೂ ಗುಜರಾತಿನಿಂದ ಓಡಿಸುತ್ತಿದ್ದರು. ಅಖ್ಲಾಕ್ ಮುಂತಾದವರನ್ನು ಗೋಮಾಂಸದ ಹೆಸರಲ್ಲಿ ಬಜರಂಗಿಗಳು ಚಚ್ಚಿ ಕೊಂದಾಗ ಅದಕ್ಕೆ ಪ್ರತಿಕಾರವನ್ನು ಉತ್ತರ ಪ್ರದೇಶದ ಮುಸ್ಲಿಮರೇ ತೀರಿಸಿಕೊಳ್ಳುತ್ತಿದ್ದರು. ಬೀಫ್-ಗೋಮೂತ್ರದ ಹೆಸರಲ್ಲಿ ಮುಸ್ಲಿಮರ ರಕ್ತಪಾತ ಮಾಡಿದ್ದರೆ ಅವರೂ ತಿರುಗಿ ಸೇಡು ತೀರಿಸಿಕೊಳ್ಳುತ್ತಿದ್ದರು. ಯೋಗಿಯಂತವರು ಎಂದೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಲು ಸಾಧ್ಯವಾಗುತ್ತಿರಲಿಲ್ಲ. ಮೋದಿಗಂತೂ ಆರು ತಿಂಗಳೂ ಗುಜರಾತ್ ಮುಖ್ಯಮಂತ್ರಿ ಆಗಿರಲು ಕೇಂದ್ರ ಸರಕಾರ ಬಿಡುತ್ತಿರಲಿಲ್ಲ. ಆರೆಸ್ಸೆಸ್ಸಿನ ನಾಗಪುರ ಹೆಡ್ ಆಫೀಸ್ ಪಕೋಡಾ ಮಾರುವ ಕೇಂದ್ರವಾಗಿರುತ್ತಿತ್ತು. ಮುಸ್ಲಿಮರ ಹೆಸರಲ್ಲಿ ದ್ವೇಷ ಸಾಧಿಸಿ ಬಿ‌ಜೆ‌ಪಿ ಅಧಿಕಾರಕ್ಕೆ ಬರಲು ಸಾಧ್ಯವೇ ಆಗುತ್ತಿರಲಿಲ್ಲ. ಅಷ್ಟೇ ಅಲ್ಲ ಮೋದಿಯಂತಹಾ ಗುಜರಾತಿ ವ್ಯಾಪಾರಿ ಭಾರತದ ಜನತೆಗೆ ಅತ್ತ ಪಾಕಿಸ್ತಾನ ತೋರಿಸಿ ಇತ್ತ ದೇಶದ ಖನಿಜ ಸಂಪತ್ತನ್ನು ಹಾಗೂ ಸಾರ್ವಜನಿಕ  ಉದ್ಯಮಗಳನ್ನು ಕವಡೆ ಕಾಸಿಗೆ ತನ್ನ ಬನಿಯಾ ಉದ್ಯಮಿಗಳಿಗೆ ಮಾರಲು ಸಾಧ್ಯ ಆಗುತ್ತಲೇ ಇರಲಿಲ್ಲ.

ಪಾಕಿಸ್ತಾನವೇ ಇರದಿದ್ದರೆ ತನ್ನ ವಿಫಲತೆಗೆ ಮೋದಿ ಯಾರನ್ನು ಹೊಣೆ ಮಾಡಿ ಬಯ್ಯುತ್ತಿದ್ದರು? “ಘರ್ ಮೆ ಗುಸ್ ಕೆ ಮಾರೇಂಗೆ” ಎಂದು ಯಾರ ಮುಂದೆ ಮೋದಿ ಬಡಾಯಿ ಕೊಚ್ಚಲು ಸಾಧ್ಯವಾಗುತ್ತಿತ್ತು? ಭಾರತದ ಸೇನೆಯಲ್ಲಿ ಅರ್ಧಕರ್ಧ ಮುಸ್ಲಿಮರೇ ಇರುತ್ತಿದ್ದರು. ಕಾರಣ ಉತ್ತಮ ದೇಹ ಧಾರ್ಢ್ಯ ಹೊಂದಿರುವ ಮ್ಜುಸ್ಲಿಮರೇ ಮಿಲಿಟರಿಯಲ್ಲಿ  ಹೆಚ್ಚಿರುತ್ತಿದ್ದರು. 1947 ರಲ್ಲಿ ಭಾರತ ವಿಭಜನೆ ಆಗಿರದಿದ್ದರೆ ಯಾರ ವಿರುದ್ಧ ದ್ವೇಷ ಭೋಧಿಸಿ ಬಿ‌ಜೆ‌ಪಿ ಅಧಿಕಾರಕ್ಕೆ ಬರಲು ಸಾಧ್ಯವಿತ್ತು? ಭಾರತದಲ್ಲಿ ಯಾವುದೇ ಹಿಂದುತ್ವವಾದಿ ಸರಕಾರ ಎಂದೂ ಅಧಿಕಾರಕ್ಕೆ ಬರುತ್ತಿರಲಿಲ್ಲ.

1857ರಲ್ಲಿ ಝಾನ್ಸಿ ಲಕ್ಷ್ಮೀಬಾಯಿ ಮತ್ತು ಮೋಘಲರ ಕೊನೆಯ ದೊರೆ ಬಹದೂರ್ ಶಾ ಜಫರ್ ಬ್ರಿಟಿಷರ ವಿರುದ್ಧ ಎದ್ದ ಬಂಡಾಯ ಹಾಗೂ ಸಿಪಾಯಿ ದಂಗೆಯನ್ನು “ಮೊದಲನೇ ಸ್ವಾತಂತ್ರ್ಯ ಯುದ್ಧ” ಎಂದು ಕರೆಯಲಾಗುತ್ತದೆ. ಒಂದು ವೇಳೆ ಅಂದು ಝಾನ್ಸಿ ಲಕ್ಷ್ಮೀಬಾಯಿ, ಮೋಘಲರು ಮತ್ತು ಇತರ ರಾಜರ-ನವಾಬರ ಒಕ್ಕೂಟ ಬ್ರಿಟಿಷರ ವಿರುದ್ಧ ಗೆದ್ದು ಬ್ರಿಟಿಷರನ್ನು ಭಾರತದಿಂದ ತೊಲಗಿಸಿದ್ದರೆ ಎನಾಗುತ್ತಿತ್ತು ಊಹಿಸಿ. ಝಾನ್ಸಿ ಲಕ್ಷ್ಮಿ ಅಥವಾ ಮೋಘಲರು ಅಂದು ಬ್ರಿಟಿಷರ ವಿರುದ್ಧ ಬಂಡಾಯ ಎದ್ದಿದ್ದು ಭಾರತ ದೇಶವನ್ನು ಬ್ರಿಟಿಷರಿಂದ ಮುಕ್ತಗೊಳಿಸಿ ಪ್ರಜಾಪ್ರಭುತ್ವ ಸ್ಥಾಪಿಸಲು ಅಲ್ಲವೇ ಅಲ್ಲ. ಅವರು ಬಂಡಾಯ ಎದ್ದಿದ್ದು ತಮ್ಮ ತಮ್ಮ ರಾಜ್ಯಗಳನ್ನು ಬ್ರಿಟಿಷರಿಂದ ಉಳಿಸಿಕೊಳ್ಳಲು. ಅಂದು ಈ ರಾಜರು-ನವಾಬರು ಗೆದ್ದಿದ್ದರೆ, ನಂತರ ಅವರು ತಮ್ಮ ತಮ್ಮ ರಾಜಗಳನ್ನು ಪ್ರತ್ಯೇಕವಾಗಿಯೇ ಉಳಿಸಿ ಕೊಳ್ಳುತ್ತಿದ್ದರು. ಆಗ ಭಾರತದಲ್ಲಿ ಸುಮಾರು 550 ಸಂಸ್ಥಾನಗಳು ಹಾಗೂ ನವಾಬರು ಇರುತ್ತಿದ್ದರು. ಒಂದೊಂದು ಸಂಸ್ಥಾನಕ್ಕೆ ಒಂದೊಂದು ಕರೆನ್ಸಿ ಇರುತ್ತಿತ್ತು, ಬೆಂಗಳೂರಿನಿಂದ ಮುಂಬೈ ಗೆ ಹೋಗಲು ಪಾಸ್ಪೋರ್ಟಿನ ಅಗತ್ಯ ಬೀಳುತ್ತಿತ್ತು. ಕಾಶ್ಮೀರ ಎಂದೋ ಪ್ರತ್ಯಕವಾಗಿ ಹೋಗಿರುತ್ತಿತ್ತು. ಪ್ರತಿಯೊಂದು ಸಂಸ್ಥಾನವೂ ತಮ್ಮದೇ ಆದ ಪ್ರತ್ಯೇಕ ಮಿಲಿಟರಿ ಹೊಂದಿರುತ್ತಿದ್ದವು, ಜತೆಗೆ ಗಡಿ ಕಲಹದಿಂದಾಗಿ ಯಾವಾಗಲೂ ಸಂಸ್ಥಾನಗಳ ನಡುವೆ ಯುದ್ಧ ನಡೆಯುತ್ತಲೇ ಇರುತ್ತಿತ್ತು. ಸಮಸ್ತ ಭಾರತ ಸೊಮಾಲಿಯಾಕ್ಕಿಂತ ಕಡೆಯಾಗಿರುತ್ತಿತ್ತು. ಮುಕ್ಕಾಲು ಪಾಲು ಜನತೆ ಹಸಿವಿನಿಂದ ಬಳಲುತ್ತಿತ್ತು. “ಘರ್ ಮೆ ಗುಸ್ ಕೆ ಮಾರೆಂಗೆ” ಅನ್ನುವ ಪುಕ್ಕಲು ಬನಿಯಾ ಎಲ್ಲಿಯೋ ಒಂದು ಸಣ್ಣ ನಗರದಲ್ಲಿ ಪಕೋಡಾ ಅಂಗಡಿ ನಡೆಸುತ್ತಾ ಜನರನ್ನು ಯಾಮಾರಿಸುತ್ತಾ ಜೀವನ ನಡೆಸುತ್ತಿದ್ದ ಅಷ್ಟೇ. 550 ರಾಜ ಸಂಸ್ಥಾನಗಳಿದ್ದ ಇಷ್ಟು ದೊಡ್ಡ ಭಾರತ ದೇಶ ವಿಛಿದ್ರವಾಗದೇ ಇಂದು ಒಂದಾಗಿ ಇದ್ದರೆ ಅದಕ್ಕೆ ನಾವು ಬ್ರಿಟಿಷರಿಗೆ ಹಾಗೂ ಗಾಂಧೀಜಿಗೆ ಋಣಿಯಾಗಿರಬೇಕು. ಗೋಡ್ಸೆ ಭಕ್ತ ಆರೆಸ್ಸೆಸ್ಸಿನವರಿಗೆ ಮತ್ತು ವಾಟ್ಸಪ್ ಯೂನಿವರ್ಸಿಟಿಯ ವಿದ್ಯಾರ್ಥಿಗಳಿಗೆ ಇಷ್ಟೆಲ್ಲಾ ದೂರಗಾಮಿ ವಿಶ್ಲೇಷಣೆ ಸಾಧ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ ತುಂಬಾ ಉಪಯುಕ್ತ ವಿಚಾರಗಳನ್ನು
    ತಿಳಿಸಿದ್ದೀರಿ ಧನ್ಯವಾದಗಳು

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...