Homeಅಂತರಾಷ್ಟ್ರೀಯಭಾರತ ವಿಭಜನೆ ಆಗಿರದಿದ್ದರೆ ಮೋದಿ-ಶಾ ಪರಿಸ್ಥಿತಿ ಹೇಗಿರುತ್ತಿತ್ತು? ಭಕ್ತರಿಗೊಂದು ಉತ್ತರ

ಭಾರತ ವಿಭಜನೆ ಆಗಿರದಿದ್ದರೆ ಮೋದಿ-ಶಾ ಪರಿಸ್ಥಿತಿ ಹೇಗಿರುತ್ತಿತ್ತು? ಭಕ್ತರಿಗೊಂದು ಉತ್ತರ

- Advertisement -
- Advertisement -

| ಪ್ರವೀಣ್ ಎಸ್ ಶೆಟ್ಟಿ |

ಯಾವುದೇ ಆರೆಸ್ಸೆಸ್ ಕಾರ್ಯಕರ್ತನಿಗೆ ಕೇಳಿ ನೋಡಿ- ಗೋಡ್ಸೆ ಗಾಂಧೀಜಿಯನ್ನು ಕೊಲ್ಲಲು ಕಾರಣವೇನು ಎಂದು.  ಪ್ರತಿಯೊಬ್ಬ ಆರೆಸ್ಸೆಸ್ಸ್ ಕಾರ್ಯಕರ್ತನೂ ಒಂದೇ ತರದ ಉತ್ತರ ಕೊಡುತ್ತಾನೆ – ಗಾಂಧೀಜಿ ಭಾರತದ ವಿಭಜನೆ ಆಗಲು ಕಾರಣ, ಅದಕ್ಕಾಗಿ ಗೋಡ್ಸೆ ದೇಶದ ಮೇಲಿನ ಪ್ರೇಮದಿಂದ ಗಾಂಧೀಜಿಯನ್ನು ಕೊಂದಿದ್ದು ಎಂದು.  ಆರೆಸ್ಸೆಸ್ಸಿನವರು ಕೊಡುವ ಈ ಕಾರಣ ನಿಜವಲ್ಲವಾದರೂ ಒಂದು ಕ್ಷಣ ಈ ಕಾರಣವನ್ನು ಹಿಮ್ಮುಖವಾಗಿ ಸಾಗಿ ವಿಶ್ಲೇಶಿಸುವುದು ಒಳಿತು.  ಒಂದು ವೇಳೆ 1947 ರಲ್ಲಿ ಭಾರತದ ವಿಭಜನೆ ಆಗಿರದಿದ್ದರೆ ಇಂದಿನ ಅಖಂಡ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಸ್ಥಿತಿ ಹೇಗಿರುತ್ತಿತ್ತು ಎಂದು ಸ್ವಲ್ಪ ಕಲ್ಪಿಸಿಕೊಳ್ಳಿ.

ಭಾರತದ 130 ಕೋಟಿ, ಬಾಂಗ್ಲಾದೇಶದ 16 ಕೋಟಿ ಮತ್ತು ಪಾಕಿಸ್ತಾನದ 14 ಕೋಟಿ ಜನಸಂಖ್ಯೆ ಕೂಡಿ ಒಟ್ಟು ಜನ ಸಂಖ್ಯೆ ಒಟ್ಟು 160 ಕೋಟಿ ಆಗುತ್ತಿತ್ತು. ಭೌಗೋಳಿಕ ವಿಸ್ತಾರದಲ್ಲಿ ಚೀನಾ ನಮಗಿಂತ ಎರಡು ಪಟ್ಟು ದೊಡ್ಡದಿದ್ದರೂ ಜನಸಂಖ್ಯೆಯಲ್ಲಿ ನಾವು ವಿಶ್ವಗುರು ಆಗಿರುತ್ತಿದ್ದೆವು. ಇನ್ನು ಧರ್ಮವಾರು ಜನಸಂಖ್ಯೆ ನೋಡಿದರೆ, 160 ಕೋಟಿ ಜನಸಂಖ್ಯೆಯಲ್ಲಿ ಮುಸ್ಲಿಮರ ಸಂಖ್ಯೆ 50 ಕೋಟಿಗೂ ಹೆಚ್ಚಿರುತ್ತಿತ್ತು. ಇಂತಹಾ ಸನ್ನಿವೇಶದಲ್ಲಿ ಒಂದು ವೇಳೆ ಅಡ್ವಾಣಿ ರಾಮ ಜನ್ಮಭೂಮಿ ರಥಯಾತ್ರಾ ಹೊರಡಿಸುತ್ತಿದ್ದರೆ ಅವರ ಗತಿ ಎನಾಗುತ್ತಿತ್ತು ಊಹಿಸಿ.

2002 ರಲ್ಲಿ ಮೋದಿ ಗೋಧ್ರಾದಲ್ಲಿ ತನ್ನವರಿಂದಲೇ ಕರಸೇವಕರ ರೈಲಿಗೆ ಬೆಂಕಿ ಹಾಕಿಸಿ ನಂತರ ಭೀಕರ ಕೋಮು ಗಲಭೆ ಹಬ್ಬಿಸಿದ್ದರೆ ಮೋದಿ ಸಹಿತ ಎಲ್ಲಾ ಬನಿಯಾ ಮತ್ತು ಜೈನರು ಗುಜರಾತ್ ಬಿಟ್ಟು ಓಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಜನಾಂಗೀಯ ಯುದ್ಧ ನಡೆಯುತ್ತಿತ್ತು, ಬ್ರಿಟಿಷರು ಮುಸ್ಲಿಮರನ್ನು “ಮಾರ್ಷಿಯಲ್ ರೇಸ್” ಎಂದು ವರ್ಗೀಕರಿಸಿದ್ದು ಸುಮ್ಮನೆ ಅಲ್ಲ. ಗುಜರಾತಿಗಳು ಬಾಲ ಬಿಚ್ಚಿದ್ದರೆ ಬಲೂಚಿಸ್ತಾನದ ಪಠಾಣರು ಗುಜರಾತಿಗೆ ನುಗ್ಗಿ ಬುದ್ದಿ ಕಲಿಸಿ ಮೋದಿ ಅಮಿತ್ ಶಾ ಇಬ್ಬರನ್ನೂ ಗುಜರಾತಿನಿಂದ ಓಡಿಸುತ್ತಿದ್ದರು. ಅಖ್ಲಾಕ್ ಮುಂತಾದವರನ್ನು ಗೋಮಾಂಸದ ಹೆಸರಲ್ಲಿ ಬಜರಂಗಿಗಳು ಚಚ್ಚಿ ಕೊಂದಾಗ ಅದಕ್ಕೆ ಪ್ರತಿಕಾರವನ್ನು ಉತ್ತರ ಪ್ರದೇಶದ ಮುಸ್ಲಿಮರೇ ತೀರಿಸಿಕೊಳ್ಳುತ್ತಿದ್ದರು. ಬೀಫ್-ಗೋಮೂತ್ರದ ಹೆಸರಲ್ಲಿ ಮುಸ್ಲಿಮರ ರಕ್ತಪಾತ ಮಾಡಿದ್ದರೆ ಅವರೂ ತಿರುಗಿ ಸೇಡು ತೀರಿಸಿಕೊಳ್ಳುತ್ತಿದ್ದರು. ಯೋಗಿಯಂತವರು ಎಂದೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಲು ಸಾಧ್ಯವಾಗುತ್ತಿರಲಿಲ್ಲ. ಮೋದಿಗಂತೂ ಆರು ತಿಂಗಳೂ ಗುಜರಾತ್ ಮುಖ್ಯಮಂತ್ರಿ ಆಗಿರಲು ಕೇಂದ್ರ ಸರಕಾರ ಬಿಡುತ್ತಿರಲಿಲ್ಲ. ಆರೆಸ್ಸೆಸ್ಸಿನ ನಾಗಪುರ ಹೆಡ್ ಆಫೀಸ್ ಪಕೋಡಾ ಮಾರುವ ಕೇಂದ್ರವಾಗಿರುತ್ತಿತ್ತು. ಮುಸ್ಲಿಮರ ಹೆಸರಲ್ಲಿ ದ್ವೇಷ ಸಾಧಿಸಿ ಬಿ‌ಜೆ‌ಪಿ ಅಧಿಕಾರಕ್ಕೆ ಬರಲು ಸಾಧ್ಯವೇ ಆಗುತ್ತಿರಲಿಲ್ಲ. ಅಷ್ಟೇ ಅಲ್ಲ ಮೋದಿಯಂತಹಾ ಗುಜರಾತಿ ವ್ಯಾಪಾರಿ ಭಾರತದ ಜನತೆಗೆ ಅತ್ತ ಪಾಕಿಸ್ತಾನ ತೋರಿಸಿ ಇತ್ತ ದೇಶದ ಖನಿಜ ಸಂಪತ್ತನ್ನು ಹಾಗೂ ಸಾರ್ವಜನಿಕ  ಉದ್ಯಮಗಳನ್ನು ಕವಡೆ ಕಾಸಿಗೆ ತನ್ನ ಬನಿಯಾ ಉದ್ಯಮಿಗಳಿಗೆ ಮಾರಲು ಸಾಧ್ಯ ಆಗುತ್ತಲೇ ಇರಲಿಲ್ಲ.

ಪಾಕಿಸ್ತಾನವೇ ಇರದಿದ್ದರೆ ತನ್ನ ವಿಫಲತೆಗೆ ಮೋದಿ ಯಾರನ್ನು ಹೊಣೆ ಮಾಡಿ ಬಯ್ಯುತ್ತಿದ್ದರು? “ಘರ್ ಮೆ ಗುಸ್ ಕೆ ಮಾರೇಂಗೆ” ಎಂದು ಯಾರ ಮುಂದೆ ಮೋದಿ ಬಡಾಯಿ ಕೊಚ್ಚಲು ಸಾಧ್ಯವಾಗುತ್ತಿತ್ತು? ಭಾರತದ ಸೇನೆಯಲ್ಲಿ ಅರ್ಧಕರ್ಧ ಮುಸ್ಲಿಮರೇ ಇರುತ್ತಿದ್ದರು. ಕಾರಣ ಉತ್ತಮ ದೇಹ ಧಾರ್ಢ್ಯ ಹೊಂದಿರುವ ಮ್ಜುಸ್ಲಿಮರೇ ಮಿಲಿಟರಿಯಲ್ಲಿ  ಹೆಚ್ಚಿರುತ್ತಿದ್ದರು. 1947 ರಲ್ಲಿ ಭಾರತ ವಿಭಜನೆ ಆಗಿರದಿದ್ದರೆ ಯಾರ ವಿರುದ್ಧ ದ್ವೇಷ ಭೋಧಿಸಿ ಬಿ‌ಜೆ‌ಪಿ ಅಧಿಕಾರಕ್ಕೆ ಬರಲು ಸಾಧ್ಯವಿತ್ತು? ಭಾರತದಲ್ಲಿ ಯಾವುದೇ ಹಿಂದುತ್ವವಾದಿ ಸರಕಾರ ಎಂದೂ ಅಧಿಕಾರಕ್ಕೆ ಬರುತ್ತಿರಲಿಲ್ಲ.

1857ರಲ್ಲಿ ಝಾನ್ಸಿ ಲಕ್ಷ್ಮೀಬಾಯಿ ಮತ್ತು ಮೋಘಲರ ಕೊನೆಯ ದೊರೆ ಬಹದೂರ್ ಶಾ ಜಫರ್ ಬ್ರಿಟಿಷರ ವಿರುದ್ಧ ಎದ್ದ ಬಂಡಾಯ ಹಾಗೂ ಸಿಪಾಯಿ ದಂಗೆಯನ್ನು “ಮೊದಲನೇ ಸ್ವಾತಂತ್ರ್ಯ ಯುದ್ಧ” ಎಂದು ಕರೆಯಲಾಗುತ್ತದೆ. ಒಂದು ವೇಳೆ ಅಂದು ಝಾನ್ಸಿ ಲಕ್ಷ್ಮೀಬಾಯಿ, ಮೋಘಲರು ಮತ್ತು ಇತರ ರಾಜರ-ನವಾಬರ ಒಕ್ಕೂಟ ಬ್ರಿಟಿಷರ ವಿರುದ್ಧ ಗೆದ್ದು ಬ್ರಿಟಿಷರನ್ನು ಭಾರತದಿಂದ ತೊಲಗಿಸಿದ್ದರೆ ಎನಾಗುತ್ತಿತ್ತು ಊಹಿಸಿ. ಝಾನ್ಸಿ ಲಕ್ಷ್ಮಿ ಅಥವಾ ಮೋಘಲರು ಅಂದು ಬ್ರಿಟಿಷರ ವಿರುದ್ಧ ಬಂಡಾಯ ಎದ್ದಿದ್ದು ಭಾರತ ದೇಶವನ್ನು ಬ್ರಿಟಿಷರಿಂದ ಮುಕ್ತಗೊಳಿಸಿ ಪ್ರಜಾಪ್ರಭುತ್ವ ಸ್ಥಾಪಿಸಲು ಅಲ್ಲವೇ ಅಲ್ಲ. ಅವರು ಬಂಡಾಯ ಎದ್ದಿದ್ದು ತಮ್ಮ ತಮ್ಮ ರಾಜ್ಯಗಳನ್ನು ಬ್ರಿಟಿಷರಿಂದ ಉಳಿಸಿಕೊಳ್ಳಲು. ಅಂದು ಈ ರಾಜರು-ನವಾಬರು ಗೆದ್ದಿದ್ದರೆ, ನಂತರ ಅವರು ತಮ್ಮ ತಮ್ಮ ರಾಜಗಳನ್ನು ಪ್ರತ್ಯೇಕವಾಗಿಯೇ ಉಳಿಸಿ ಕೊಳ್ಳುತ್ತಿದ್ದರು. ಆಗ ಭಾರತದಲ್ಲಿ ಸುಮಾರು 550 ಸಂಸ್ಥಾನಗಳು ಹಾಗೂ ನವಾಬರು ಇರುತ್ತಿದ್ದರು. ಒಂದೊಂದು ಸಂಸ್ಥಾನಕ್ಕೆ ಒಂದೊಂದು ಕರೆನ್ಸಿ ಇರುತ್ತಿತ್ತು, ಬೆಂಗಳೂರಿನಿಂದ ಮುಂಬೈ ಗೆ ಹೋಗಲು ಪಾಸ್ಪೋರ್ಟಿನ ಅಗತ್ಯ ಬೀಳುತ್ತಿತ್ತು. ಕಾಶ್ಮೀರ ಎಂದೋ ಪ್ರತ್ಯಕವಾಗಿ ಹೋಗಿರುತ್ತಿತ್ತು. ಪ್ರತಿಯೊಂದು ಸಂಸ್ಥಾನವೂ ತಮ್ಮದೇ ಆದ ಪ್ರತ್ಯೇಕ ಮಿಲಿಟರಿ ಹೊಂದಿರುತ್ತಿದ್ದವು, ಜತೆಗೆ ಗಡಿ ಕಲಹದಿಂದಾಗಿ ಯಾವಾಗಲೂ ಸಂಸ್ಥಾನಗಳ ನಡುವೆ ಯುದ್ಧ ನಡೆಯುತ್ತಲೇ ಇರುತ್ತಿತ್ತು. ಸಮಸ್ತ ಭಾರತ ಸೊಮಾಲಿಯಾಕ್ಕಿಂತ ಕಡೆಯಾಗಿರುತ್ತಿತ್ತು. ಮುಕ್ಕಾಲು ಪಾಲು ಜನತೆ ಹಸಿವಿನಿಂದ ಬಳಲುತ್ತಿತ್ತು. “ಘರ್ ಮೆ ಗುಸ್ ಕೆ ಮಾರೆಂಗೆ” ಅನ್ನುವ ಪುಕ್ಕಲು ಬನಿಯಾ ಎಲ್ಲಿಯೋ ಒಂದು ಸಣ್ಣ ನಗರದಲ್ಲಿ ಪಕೋಡಾ ಅಂಗಡಿ ನಡೆಸುತ್ತಾ ಜನರನ್ನು ಯಾಮಾರಿಸುತ್ತಾ ಜೀವನ ನಡೆಸುತ್ತಿದ್ದ ಅಷ್ಟೇ. 550 ರಾಜ ಸಂಸ್ಥಾನಗಳಿದ್ದ ಇಷ್ಟು ದೊಡ್ಡ ಭಾರತ ದೇಶ ವಿಛಿದ್ರವಾಗದೇ ಇಂದು ಒಂದಾಗಿ ಇದ್ದರೆ ಅದಕ್ಕೆ ನಾವು ಬ್ರಿಟಿಷರಿಗೆ ಹಾಗೂ ಗಾಂಧೀಜಿಗೆ ಋಣಿಯಾಗಿರಬೇಕು. ಗೋಡ್ಸೆ ಭಕ್ತ ಆರೆಸ್ಸೆಸ್ಸಿನವರಿಗೆ ಮತ್ತು ವಾಟ್ಸಪ್ ಯೂನಿವರ್ಸಿಟಿಯ ವಿದ್ಯಾರ್ಥಿಗಳಿಗೆ ಇಷ್ಟೆಲ್ಲಾ ದೂರಗಾಮಿ ವಿಶ್ಲೇಷಣೆ ಸಾಧ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ ತುಂಬಾ ಉಪಯುಕ್ತ ವಿಚಾರಗಳನ್ನು
    ತಿಳಿಸಿದ್ದೀರಿ ಧನ್ಯವಾದಗಳು

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...