Homeಮುಖಪುಟಕೊರೊನಾ ವೈರಸ್‌ ಹುಟ್ಟಿದ್ದು ಹೇಗೆ? ಅದರಿಂದ ದೂರವಿರುವುದು ಹೇಗೆ? - ಡಾ.ಕೆ.ಸಿ ರಘು

ಕೊರೊನಾ ವೈರಸ್‌ ಹುಟ್ಟಿದ್ದು ಹೇಗೆ? ಅದರಿಂದ ದೂರವಿರುವುದು ಹೇಗೆ? – ಡಾ.ಕೆ.ಸಿ ರಘು

ಕೇರಳ ಕಳೆದ ಬಾರಿ ಕಂಡು ಬಂದ ನಿಫಾ ವೈರಸ್‌ನ್ನು ಮತ್ತು ಇತ್ತೀಚೆಗೆ ಕರೋನಾ ಕಂಡುಬಂದಾಗ ವ್ಯವಹರಿಸಿದ ರೀತಿ ಇಡೀ ದೇಶಕ್ಕೆ ಮಾದರಿಯಾಗಿದೆ.

- Advertisement -
- Advertisement -

ಕೊರೊನಾ ವೈರಸ್‌ ಇದಾಗಲೇ ಜಾಗತೀಕರಣಗೊಂಡಿದೆ. 76 ದೇಶಗಳಿಗೆ ಹಬ್ಬಿ ಸುಮಾರು 3200 ಜನರನ್ನು ಬಲಿ ತೆಗೆದುಕೊಂಡಿದೆ. ಈ ಸೋಂಕು ತಗುಲಿದ 100 ಜನರಲ್ಲಿ ಸುಮಾರು 4 ಜನ ಮರಣ ಹೊಂದುತ್ತಾರೆಂದು ಅಂದಾಜುಮಾಡಲಾಗಿದೆ. ಅಂದರೆ ಉಳಿದ 96 ಜನ ಗುಣಮುಖರಾಗುತ್ತಾರೆ. 30ಕ್ಕೂ ಹೆಚ್ಚು ವಯಸ್ಸಿನವರಿಗೆ ಸಾಮಾನ್ಯವಾಗಿ ಕಾಯಿಲೆ ಕಂಡುಬರುವುದಾಗಿದೆ. 60 ದಾಟಿದವರಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿರುವುದಾಗಿದೆ. ಅದರಲ್ಲೂ ಸಿಗರೇಟ್ ಸೇವನೆಯಿಂದ ಶ್ವಾಸಕೋಶ ಹಾನಿಯಾಗಿದ್ದರೆ ಅಥವಾ ಅಸ್ತಮಾ ಮತ್ತು ಇತರೆ ಶ್ವಾಸಕೋಶದ ಕಾಯಿಲೆಗಳಿದ್ದರೆ ಸಾವಿಗೀಡಾಗುವ ಸಾಧ್ಯತೆ ಹೆಚ್ಚು.

ಈ ವೈರಾಣು ಒಂದು ಗುಂಪಿಗೆ ಸಂಬಂಧಪಟ್ಟಿದ್ದಾಗಿದ್ದರು ಇದು ಹೊಸತೇ ಆಗಿದೆ. ಗುಂಪು ಹಳೆಯದು ಅದರ ವೈರಾಣು ಇದುವರೆಗೂ ತಿಳಿದಿದ್ದಾಗಿಲ್ಲ. ಮೊನ್ನೆ ತಾನೆ ಇದಕ್ಕೆ ಕೋವಿಡ್-19 ಎಂದು ನಾಮಕರಣ ಮಾಡಲಾಗಿದೆ. ಇದರ ಹುಟ್ಟು ಚೈನಾದ ವೂಹಾನ್ ಪ್ರಾಂತ್ಯದಲ್ಲಿ ಮಾಂಸದ ಮಾರುಕಟ್ಟೆಯಲ್ಲಿ. ಅಲ್ಲಿ ಸಾಕಿದ ಪ್ರಾಣಿಗಳ ಮಾಂಸ, ಕಾಡು ಪ್ರಾಣಿಗಳ ಮಾಂಸ ಎಲ್ಲವನ್ನೂ ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲಿ ಜನಜಂಗುಳಿಯ ನಡುವೆ ಮಾರಾಟ ಮಾಡಲಾಗುತ್ತದೆ. ಕಾಡು ಪ್ರಾಣಿಗಳ ಜೊತೆ ಹೊಂದಿಕೊಂಡು ಯಾವ ಕಾಟವೂ ಕೊಡದೇ ಶತಮಾನಗಳಿಂದ ಬದುಕುವ ವೈರಾಣುಗಳು ಬೇರೆ ಪ್ರಾಣಿಗಳ ಮಾಂಸಕ್ಕೆ ಸೇರಿ ರೋಗಾಣುವಾಗಿ ಪರಿಣಮಿಸುತ್ತವೆ. ಇವುಗಳು ಇಂತಹ ಸ್ಥಳಗಳಲ್ಲಿ ಹೊಸದಾಗಿ ಮಾರ್ಪಾಡಾಗುವ ಸಾಧ್ಯತೆಗಳು ಹೆಚ್ಚು.

ರೋಗಶಾಸ್ತ್ರದ ಹಳೆಯ ಮಾತಿನಂತೆ ವಿಚ್ಛೇದನ ಪಡೆದ ಗಂಡು ಮತ್ತು ಹೆಂಗಸು ಮರುಮದುವೆಯಾಗಿ ಸಂಸಾರ ಮಾಡುತ್ತಿದ್ದಾಗ ಮನೆಯಲ್ಲೊಂದು ದಿನ ಎಲ್ಲಿಲ್ಲದ ಗಲಾಟೆ ಗದ್ದಲ. ಆಗ ಹೆಂಡತಿ ಗಂಡನಿಗೆ “ನೋಡಿ ಇಲ್ಲಿ ನನ್ನೆರಡು ಮಕ್ಕಳು ನಿಮ್ಮೆರಡು ಮಕ್ಕಳು ನಮ್ಮಿಬ್ಬರ ಮಕ್ಕಳ ಜೊತೆ ಗಲಾಟೆ ಮಾಡುತ್ತಿದ್ದಾರೆ ಎನ್ನುತ್ತಾಳೆ” ಹೀಗೆ ಮಿಶ್ರಣಗೊಂಡ ವೈರಾಣುಗಳು ಹೊಸಜಾಗ, ಹೊಸತಾಣದಲ್ಲಿ ತನ್ನನ್ನು ತಾನು ಉಳುಸಿಕೊಳ್ಳಲು ಹೊಸದಾಗಿ ಮಾರ್ಪಾಟಾಗುತ್ತವೆ.

ಜಗತ್ತಿನಲ್ಲಿ ವೈರಾಣುಗಳೇ ಮೊದಲ ಜೀವಿಗಳೆಂದು ಪರಿಗಣಿಸುತ್ತಾರೆ. ಅವುಗಳು ಜೀವಿಗಳೆಂದು ಹೇಳುವುದು ಸುಲಭವಲ್ಲ. ಆದರೆ ಜೀವಕ್ಕೆ ಬೇಕಾಗಿರುವ ಮೂಲಧಾತು ಅಥವಾ Code ಎನ್ನಲಾಗುವ ಡಿಎನ್‌ಎ ಅಥವಾ ಆರ್‌ಎನ್‌ಎ ಯನ್ನು ಮಾತ್ರ ಒಳಗೊಂಡಿರುತ್ತದೆ. ಆದರೆ ಅದು ಅದರ ಸಂತಾನೋತ್ಪತ್ತಿಗೆ ಇನ್ನೊಂದು ಜೀವಿಯ ಜೀವಕೋಶಕ್ಕೆ ಹೊಕ್ಕು ಅದರ ಜೈವಿಕ ತಂತ್ರಗಾರಿಕೆಯನ್ನು ಅಪಹರಿಸಿ ತನ್ನದಾಗಿಸಿಕೊಂಡು ತನ್ನನ್ನು ತಾನೇ ಮಿಲಿಯನ್‌ ಗಟ್ಟಲೆ ವರ್ಷಗಳಲ್ಲಿ ಮರುಸೃಷ್ಟಿ ಮಾಡಿಕೊಳ್ಳುತ್ತದೆ. ಹಾಗೆ ಮಾಡಿದ ನಂತರ ತನಗೆ ಆಶ್ರಯ ಕೊಟ್ಟ ಜೀವಕೋಶವನ್ನು ಒಡೆದು ಪುಡಿ ಮಾಡುತ್ತದೆ. ಈ ಕರೋನಾ ವೈರಸ್‌ ಶ್ವಾಸಕೋಶಕ್ಕೆ ತಗುಲಿ ಅಲ್ಲಿ ದೇಹದ ರೋಗನಿರೋಧಕ ಶಕ್ತಿಯ ಹೋರಾಟದಿಂದ ದ್ರವಶ್ರಾವ್ಯ ಉಂಟಾಗಿ ಶ್ವಾಸಕೋಶದ ಮೂಲಕೆಲಸವಾದ ರಕ್ತಕ್ಕೆ ಆಮ್ಲಜನಕವನ್ನು ಪ್ರತಿ ಉಸಿರಿನಲ್ಲೂ ಒದಗಿಸುವ ಕಾರ್ಯಕ್ಕೆ ಕುತ್ತು ಬರುತ್ತದೆ. ಹಾಗೆಯೇ ವಿಷ ಅನಿಲ ಇಂಗಾಲದ ಡೈ ಆಕ್ಸೈಡನ್ನು ಹೊರಹಾಕುವ ಪ್ರಕ್ರಿಯೆಗೂ ತೊಂದರೆಯಾಗುತ್ತದೆ.

ಇಂತಹ ಸಂದರ್ಭದಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಅತ್ಯಂತ ಅವಶ್ಯಕ. ಭಾರತ ದೇಶದಲ್ಲಿ ಇದು ಹರಡಿದಲ್ಲಿ ಎಷ್ಟರ ಮಟ್ಟಿಗೆ ಆಸ್ಪತ್ರೆಯ ಹಾಸಿಗೆ, ಕೃತಕ ಉಸಿರಾಟದ ವ್ಯವಸ್ಥೆ, ರೋಗಿಗಳನ್ನು ಪ್ರತ್ಯೇಕಿಸಿ ಇಡುವ ವ್ಯವಸ್ಥೆಗೆ ನಾವು ಸಿದ್ಧರಾಗಿದ್ದೇವೆ ಎನ್ನುವುದು ದೊಡ್ಡ ಪ್ರಶ್ನೆಯೇ ಹೌದು. ಕೇರಳ ಕಳೆದ ಬಾರಿ ಕಂಡು ಬಂದ ನಿಫಾ ವೈರಸ್‌ನ್ನು ಮತ್ತು ಇತ್ತೀಚೆಗೆ ಕರೋನಾ ಕಂಡುಬಂದಾಗ ವ್ಯವಹರಿಸಿದ ರೀತಿ ಇಡೀ ದೇಶಕ್ಕೆ ಮಾದರಿಯಾಗಿದೆ.

ಕೃತಕ ಉಸಿರಾಟದ ಪ್ರಾತಿನಿಧಿಕ ಚಿತ್ರ

ಇಂತಹ ಸಂದರ್ಭದಲ್ಲಿ ಜ್ವರ, ಕೆಮ್ಮು, ಶೀತ ಅಥವಾ ಉಸಿರಾಟದ ತೊಂದರೆ ಕಂಡುಬಂದಾಗ ವೈದ್ಯರ ಬಳಿ ಹೋಗಿ ಪರೀಕ್ಷಿಸಿಕೊಳ್ಳುವುದು ಬಹಳ ಮುಖ್ಯ. ಇದಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ, ಮೊನ್ನೆ ಹುಟ್ಟಿದ ಕಾಯಿಲೆಗೆ ನಮ್ಮಲ್ಲಿ ಶತಮಾನಗಳಿಂದ ಔಷಧವಿದೆ ಎಂದೂ, ಕ್ರಿಸ್ತ ಪೂರ್ವದಲ್ಲೇ ಇದು ನಮಗೆ ತಿಳಿದಿತ್ತೆಂದು ಹೇಳುವವರಿದ್ದಾರೆ. ಗೋಮೂತ್ರ ಕುಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ. ಇವುಗಳನ್ನಾಗಲಿ ಅಥವಾ ಸಿರಿಧಾನ್ಯಗಳನ್ನು ತಿನ್ನಿ, ಕರೋನಾ ದೂರವಿಡಿ ಎನ್ನುವ ಮಾತುಗಳನ್ನು ನಂಬುವಂತದ್ದಲ್ಲ. ಆಯುರ್ವೇದ, ಹೋಮಿಯೋಪತಿ, ಇಲ್ಲವಾದಲ್ಲಿ ತಿರುಪತಿ ಎನ್ನುವ ಸಲಹೆಗಳೆಲ್ಲ ಉಂಟು.

ರೋಗ ನಿರೋಧಕ ಶಕ್ತಿಯನ್ನು ವೃದ್ಧಿಪಡಿಸಿಕೊಳ್ಳಲು ಉತ್ತಮ ಆಹಾರ, ಗಾಳಿ, ಬೆಳಕು, ಶುದ್ಧ ನೀರು ಅವಶ್ಯಕ. ಈ ಕಾಯಿಲೆ ಹರಡುವುದಕ್ಕೆ ಮುಖ್ಯ ಕಾರಣ: ಕೈ ತೊಳೆಯದೇ, ಬಾಯಿ, ಮೂಗು ಮತ್ತು ಕಣ್ಣನ್ನು ಸವರಿಕೊಳ್ಳುವುದರಿಂದ ದೇಹಕ್ಕೆ ರೋಗಾಣು ಸೇರಿಕೊಳ್ಳುವುದು. ಮಾಸ್ಕ್ ಹಾಕಿಕೊಳ್ಳುವುದು ಮುಖ್ಯವಾದರು ಕಣ್ಣಿಗೆ ಮಾಸ್ಕ್ ಹಾಕಿಕೊಳ್ಳಲಾಗುವುದಿಲ್ಲ. ಕಣ್ಣನ್ನು ಉಜ್ಜಿಕೊಂಡರು ಕಾಯಿಲೆ ತಗುಲಬಹುದು. ರೋಗ ಲಕ್ಷಣ ಚಿಹ್ನೆ ಇರುವವರು ಮಾಸ್ಕ್‌ ಹಾಕಿಕೊಳ್ಳುವುದು ಉತ್ತಮ. ಆಗಾಗ ಕೈ ತೊಳೆದುಕೊಳ್ಳುವುದು, ಹ್ಯಾಂಡ್‌ ಸ್ಯಾನಿಟೈಜರ್‌ಗಳನ್ನು ಬಳಸುವುದು ಇಲ್ಲವಾದಲ್ಲಿ ಶುದ್ಧ ನೀರಿನಲ್ಲಿ ಕೈ ತೊಳೆದರು ಸಾಕು. ಏಡ್ಸ್ ವೈರಾಣುವನ್ನು ಕಂಡು ಹಿಡಿದ ಜಾನ್‌ ಲೂಕ್ “ಇಂತಹ ವೈರಾಣು ಎಷ್ಟೇ ಭಯಾನಕವಾದರೂ ಶುದ್ಧ ನೀರಿನಲ್ಲಿ ತೊಳೆದರೆ ನಾಶವಾಗುತ್ತದೆ ಎನ್ನುತ್ತಿದ್ದ”.

ಈ ಕಾಯಿಲೆಯ ಬಗ್ಗೆ ನಾವು ನಮ್ಮ ವೈಯುಕ್ತಿಕ ಆಯ್ಕೆ, ಆಸಕ್ತಿಯನ್ನು ಮೀರಿ ಸಾಮಾಜಿಕ ಜವಬ್ದಾರಿಯಿಂದ ವರ್ತಿಸಿದಲ್ಲಿ ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಬಹುದು ಎನ್ನುವುದರಲ್ಲಿ ಸಂಶಯವಿಲ್ಲ. ಇಂತಹ ಅನೇಕ ವೈರಾಣುಗಳು ಇಡೀ ಜಗತ್ತನ್ನೇ ನಡುಗಿಸಿ ನಾವು ಲಸಿಕೆ ಹುಡುಕಿಕೊಳ್ಳುವುದರೊಳಗೆ ಮಾಯವಾಗಿರುವುದು ಉಂಟು. Better be safe then sorry.

(ಲೇಖಕರು ವಿಜ್ಞಾನಿ, ಉದ್ಯಮಿ ಮತ್ತು ಚಿಂತಕರು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...