Homeಮುಖಪುಟಕೊರೊನಾ ವೈರಸ್‌ ಹುಟ್ಟಿದ್ದು ಹೇಗೆ? ಅದರಿಂದ ದೂರವಿರುವುದು ಹೇಗೆ? - ಡಾ.ಕೆ.ಸಿ ರಘು

ಕೊರೊನಾ ವೈರಸ್‌ ಹುಟ್ಟಿದ್ದು ಹೇಗೆ? ಅದರಿಂದ ದೂರವಿರುವುದು ಹೇಗೆ? – ಡಾ.ಕೆ.ಸಿ ರಘು

ಕೇರಳ ಕಳೆದ ಬಾರಿ ಕಂಡು ಬಂದ ನಿಫಾ ವೈರಸ್‌ನ್ನು ಮತ್ತು ಇತ್ತೀಚೆಗೆ ಕರೋನಾ ಕಂಡುಬಂದಾಗ ವ್ಯವಹರಿಸಿದ ರೀತಿ ಇಡೀ ದೇಶಕ್ಕೆ ಮಾದರಿಯಾಗಿದೆ.

- Advertisement -
- Advertisement -

ಕೊರೊನಾ ವೈರಸ್‌ ಇದಾಗಲೇ ಜಾಗತೀಕರಣಗೊಂಡಿದೆ. 76 ದೇಶಗಳಿಗೆ ಹಬ್ಬಿ ಸುಮಾರು 3200 ಜನರನ್ನು ಬಲಿ ತೆಗೆದುಕೊಂಡಿದೆ. ಈ ಸೋಂಕು ತಗುಲಿದ 100 ಜನರಲ್ಲಿ ಸುಮಾರು 4 ಜನ ಮರಣ ಹೊಂದುತ್ತಾರೆಂದು ಅಂದಾಜುಮಾಡಲಾಗಿದೆ. ಅಂದರೆ ಉಳಿದ 96 ಜನ ಗುಣಮುಖರಾಗುತ್ತಾರೆ. 30ಕ್ಕೂ ಹೆಚ್ಚು ವಯಸ್ಸಿನವರಿಗೆ ಸಾಮಾನ್ಯವಾಗಿ ಕಾಯಿಲೆ ಕಂಡುಬರುವುದಾಗಿದೆ. 60 ದಾಟಿದವರಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿರುವುದಾಗಿದೆ. ಅದರಲ್ಲೂ ಸಿಗರೇಟ್ ಸೇವನೆಯಿಂದ ಶ್ವಾಸಕೋಶ ಹಾನಿಯಾಗಿದ್ದರೆ ಅಥವಾ ಅಸ್ತಮಾ ಮತ್ತು ಇತರೆ ಶ್ವಾಸಕೋಶದ ಕಾಯಿಲೆಗಳಿದ್ದರೆ ಸಾವಿಗೀಡಾಗುವ ಸಾಧ್ಯತೆ ಹೆಚ್ಚು.

ಈ ವೈರಾಣು ಒಂದು ಗುಂಪಿಗೆ ಸಂಬಂಧಪಟ್ಟಿದ್ದಾಗಿದ್ದರು ಇದು ಹೊಸತೇ ಆಗಿದೆ. ಗುಂಪು ಹಳೆಯದು ಅದರ ವೈರಾಣು ಇದುವರೆಗೂ ತಿಳಿದಿದ್ದಾಗಿಲ್ಲ. ಮೊನ್ನೆ ತಾನೆ ಇದಕ್ಕೆ ಕೋವಿಡ್-19 ಎಂದು ನಾಮಕರಣ ಮಾಡಲಾಗಿದೆ. ಇದರ ಹುಟ್ಟು ಚೈನಾದ ವೂಹಾನ್ ಪ್ರಾಂತ್ಯದಲ್ಲಿ ಮಾಂಸದ ಮಾರುಕಟ್ಟೆಯಲ್ಲಿ. ಅಲ್ಲಿ ಸಾಕಿದ ಪ್ರಾಣಿಗಳ ಮಾಂಸ, ಕಾಡು ಪ್ರಾಣಿಗಳ ಮಾಂಸ ಎಲ್ಲವನ್ನೂ ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲಿ ಜನಜಂಗುಳಿಯ ನಡುವೆ ಮಾರಾಟ ಮಾಡಲಾಗುತ್ತದೆ. ಕಾಡು ಪ್ರಾಣಿಗಳ ಜೊತೆ ಹೊಂದಿಕೊಂಡು ಯಾವ ಕಾಟವೂ ಕೊಡದೇ ಶತಮಾನಗಳಿಂದ ಬದುಕುವ ವೈರಾಣುಗಳು ಬೇರೆ ಪ್ರಾಣಿಗಳ ಮಾಂಸಕ್ಕೆ ಸೇರಿ ರೋಗಾಣುವಾಗಿ ಪರಿಣಮಿಸುತ್ತವೆ. ಇವುಗಳು ಇಂತಹ ಸ್ಥಳಗಳಲ್ಲಿ ಹೊಸದಾಗಿ ಮಾರ್ಪಾಡಾಗುವ ಸಾಧ್ಯತೆಗಳು ಹೆಚ್ಚು.

ರೋಗಶಾಸ್ತ್ರದ ಹಳೆಯ ಮಾತಿನಂತೆ ವಿಚ್ಛೇದನ ಪಡೆದ ಗಂಡು ಮತ್ತು ಹೆಂಗಸು ಮರುಮದುವೆಯಾಗಿ ಸಂಸಾರ ಮಾಡುತ್ತಿದ್ದಾಗ ಮನೆಯಲ್ಲೊಂದು ದಿನ ಎಲ್ಲಿಲ್ಲದ ಗಲಾಟೆ ಗದ್ದಲ. ಆಗ ಹೆಂಡತಿ ಗಂಡನಿಗೆ “ನೋಡಿ ಇಲ್ಲಿ ನನ್ನೆರಡು ಮಕ್ಕಳು ನಿಮ್ಮೆರಡು ಮಕ್ಕಳು ನಮ್ಮಿಬ್ಬರ ಮಕ್ಕಳ ಜೊತೆ ಗಲಾಟೆ ಮಾಡುತ್ತಿದ್ದಾರೆ ಎನ್ನುತ್ತಾಳೆ” ಹೀಗೆ ಮಿಶ್ರಣಗೊಂಡ ವೈರಾಣುಗಳು ಹೊಸಜಾಗ, ಹೊಸತಾಣದಲ್ಲಿ ತನ್ನನ್ನು ತಾನು ಉಳುಸಿಕೊಳ್ಳಲು ಹೊಸದಾಗಿ ಮಾರ್ಪಾಟಾಗುತ್ತವೆ.

ಜಗತ್ತಿನಲ್ಲಿ ವೈರಾಣುಗಳೇ ಮೊದಲ ಜೀವಿಗಳೆಂದು ಪರಿಗಣಿಸುತ್ತಾರೆ. ಅವುಗಳು ಜೀವಿಗಳೆಂದು ಹೇಳುವುದು ಸುಲಭವಲ್ಲ. ಆದರೆ ಜೀವಕ್ಕೆ ಬೇಕಾಗಿರುವ ಮೂಲಧಾತು ಅಥವಾ Code ಎನ್ನಲಾಗುವ ಡಿಎನ್‌ಎ ಅಥವಾ ಆರ್‌ಎನ್‌ಎ ಯನ್ನು ಮಾತ್ರ ಒಳಗೊಂಡಿರುತ್ತದೆ. ಆದರೆ ಅದು ಅದರ ಸಂತಾನೋತ್ಪತ್ತಿಗೆ ಇನ್ನೊಂದು ಜೀವಿಯ ಜೀವಕೋಶಕ್ಕೆ ಹೊಕ್ಕು ಅದರ ಜೈವಿಕ ತಂತ್ರಗಾರಿಕೆಯನ್ನು ಅಪಹರಿಸಿ ತನ್ನದಾಗಿಸಿಕೊಂಡು ತನ್ನನ್ನು ತಾನೇ ಮಿಲಿಯನ್‌ ಗಟ್ಟಲೆ ವರ್ಷಗಳಲ್ಲಿ ಮರುಸೃಷ್ಟಿ ಮಾಡಿಕೊಳ್ಳುತ್ತದೆ. ಹಾಗೆ ಮಾಡಿದ ನಂತರ ತನಗೆ ಆಶ್ರಯ ಕೊಟ್ಟ ಜೀವಕೋಶವನ್ನು ಒಡೆದು ಪುಡಿ ಮಾಡುತ್ತದೆ. ಈ ಕರೋನಾ ವೈರಸ್‌ ಶ್ವಾಸಕೋಶಕ್ಕೆ ತಗುಲಿ ಅಲ್ಲಿ ದೇಹದ ರೋಗನಿರೋಧಕ ಶಕ್ತಿಯ ಹೋರಾಟದಿಂದ ದ್ರವಶ್ರಾವ್ಯ ಉಂಟಾಗಿ ಶ್ವಾಸಕೋಶದ ಮೂಲಕೆಲಸವಾದ ರಕ್ತಕ್ಕೆ ಆಮ್ಲಜನಕವನ್ನು ಪ್ರತಿ ಉಸಿರಿನಲ್ಲೂ ಒದಗಿಸುವ ಕಾರ್ಯಕ್ಕೆ ಕುತ್ತು ಬರುತ್ತದೆ. ಹಾಗೆಯೇ ವಿಷ ಅನಿಲ ಇಂಗಾಲದ ಡೈ ಆಕ್ಸೈಡನ್ನು ಹೊರಹಾಕುವ ಪ್ರಕ್ರಿಯೆಗೂ ತೊಂದರೆಯಾಗುತ್ತದೆ.

ಇಂತಹ ಸಂದರ್ಭದಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಅತ್ಯಂತ ಅವಶ್ಯಕ. ಭಾರತ ದೇಶದಲ್ಲಿ ಇದು ಹರಡಿದಲ್ಲಿ ಎಷ್ಟರ ಮಟ್ಟಿಗೆ ಆಸ್ಪತ್ರೆಯ ಹಾಸಿಗೆ, ಕೃತಕ ಉಸಿರಾಟದ ವ್ಯವಸ್ಥೆ, ರೋಗಿಗಳನ್ನು ಪ್ರತ್ಯೇಕಿಸಿ ಇಡುವ ವ್ಯವಸ್ಥೆಗೆ ನಾವು ಸಿದ್ಧರಾಗಿದ್ದೇವೆ ಎನ್ನುವುದು ದೊಡ್ಡ ಪ್ರಶ್ನೆಯೇ ಹೌದು. ಕೇರಳ ಕಳೆದ ಬಾರಿ ಕಂಡು ಬಂದ ನಿಫಾ ವೈರಸ್‌ನ್ನು ಮತ್ತು ಇತ್ತೀಚೆಗೆ ಕರೋನಾ ಕಂಡುಬಂದಾಗ ವ್ಯವಹರಿಸಿದ ರೀತಿ ಇಡೀ ದೇಶಕ್ಕೆ ಮಾದರಿಯಾಗಿದೆ.

ಕೃತಕ ಉಸಿರಾಟದ ಪ್ರಾತಿನಿಧಿಕ ಚಿತ್ರ

ಇಂತಹ ಸಂದರ್ಭದಲ್ಲಿ ಜ್ವರ, ಕೆಮ್ಮು, ಶೀತ ಅಥವಾ ಉಸಿರಾಟದ ತೊಂದರೆ ಕಂಡುಬಂದಾಗ ವೈದ್ಯರ ಬಳಿ ಹೋಗಿ ಪರೀಕ್ಷಿಸಿಕೊಳ್ಳುವುದು ಬಹಳ ಮುಖ್ಯ. ಇದಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ, ಮೊನ್ನೆ ಹುಟ್ಟಿದ ಕಾಯಿಲೆಗೆ ನಮ್ಮಲ್ಲಿ ಶತಮಾನಗಳಿಂದ ಔಷಧವಿದೆ ಎಂದೂ, ಕ್ರಿಸ್ತ ಪೂರ್ವದಲ್ಲೇ ಇದು ನಮಗೆ ತಿಳಿದಿತ್ತೆಂದು ಹೇಳುವವರಿದ್ದಾರೆ. ಗೋಮೂತ್ರ ಕುಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ. ಇವುಗಳನ್ನಾಗಲಿ ಅಥವಾ ಸಿರಿಧಾನ್ಯಗಳನ್ನು ತಿನ್ನಿ, ಕರೋನಾ ದೂರವಿಡಿ ಎನ್ನುವ ಮಾತುಗಳನ್ನು ನಂಬುವಂತದ್ದಲ್ಲ. ಆಯುರ್ವೇದ, ಹೋಮಿಯೋಪತಿ, ಇಲ್ಲವಾದಲ್ಲಿ ತಿರುಪತಿ ಎನ್ನುವ ಸಲಹೆಗಳೆಲ್ಲ ಉಂಟು.

ರೋಗ ನಿರೋಧಕ ಶಕ್ತಿಯನ್ನು ವೃದ್ಧಿಪಡಿಸಿಕೊಳ್ಳಲು ಉತ್ತಮ ಆಹಾರ, ಗಾಳಿ, ಬೆಳಕು, ಶುದ್ಧ ನೀರು ಅವಶ್ಯಕ. ಈ ಕಾಯಿಲೆ ಹರಡುವುದಕ್ಕೆ ಮುಖ್ಯ ಕಾರಣ: ಕೈ ತೊಳೆಯದೇ, ಬಾಯಿ, ಮೂಗು ಮತ್ತು ಕಣ್ಣನ್ನು ಸವರಿಕೊಳ್ಳುವುದರಿಂದ ದೇಹಕ್ಕೆ ರೋಗಾಣು ಸೇರಿಕೊಳ್ಳುವುದು. ಮಾಸ್ಕ್ ಹಾಕಿಕೊಳ್ಳುವುದು ಮುಖ್ಯವಾದರು ಕಣ್ಣಿಗೆ ಮಾಸ್ಕ್ ಹಾಕಿಕೊಳ್ಳಲಾಗುವುದಿಲ್ಲ. ಕಣ್ಣನ್ನು ಉಜ್ಜಿಕೊಂಡರು ಕಾಯಿಲೆ ತಗುಲಬಹುದು. ರೋಗ ಲಕ್ಷಣ ಚಿಹ್ನೆ ಇರುವವರು ಮಾಸ್ಕ್‌ ಹಾಕಿಕೊಳ್ಳುವುದು ಉತ್ತಮ. ಆಗಾಗ ಕೈ ತೊಳೆದುಕೊಳ್ಳುವುದು, ಹ್ಯಾಂಡ್‌ ಸ್ಯಾನಿಟೈಜರ್‌ಗಳನ್ನು ಬಳಸುವುದು ಇಲ್ಲವಾದಲ್ಲಿ ಶುದ್ಧ ನೀರಿನಲ್ಲಿ ಕೈ ತೊಳೆದರು ಸಾಕು. ಏಡ್ಸ್ ವೈರಾಣುವನ್ನು ಕಂಡು ಹಿಡಿದ ಜಾನ್‌ ಲೂಕ್ “ಇಂತಹ ವೈರಾಣು ಎಷ್ಟೇ ಭಯಾನಕವಾದರೂ ಶುದ್ಧ ನೀರಿನಲ್ಲಿ ತೊಳೆದರೆ ನಾಶವಾಗುತ್ತದೆ ಎನ್ನುತ್ತಿದ್ದ”.

ಈ ಕಾಯಿಲೆಯ ಬಗ್ಗೆ ನಾವು ನಮ್ಮ ವೈಯುಕ್ತಿಕ ಆಯ್ಕೆ, ಆಸಕ್ತಿಯನ್ನು ಮೀರಿ ಸಾಮಾಜಿಕ ಜವಬ್ದಾರಿಯಿಂದ ವರ್ತಿಸಿದಲ್ಲಿ ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಬಹುದು ಎನ್ನುವುದರಲ್ಲಿ ಸಂಶಯವಿಲ್ಲ. ಇಂತಹ ಅನೇಕ ವೈರಾಣುಗಳು ಇಡೀ ಜಗತ್ತನ್ನೇ ನಡುಗಿಸಿ ನಾವು ಲಸಿಕೆ ಹುಡುಕಿಕೊಳ್ಳುವುದರೊಳಗೆ ಮಾಯವಾಗಿರುವುದು ಉಂಟು. Better be safe then sorry.

(ಲೇಖಕರು ವಿಜ್ಞಾನಿ, ಉದ್ಯಮಿ ಮತ್ತು ಚಿಂತಕರು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...