Homeಮುಖಪುಟಕೊರೊನಾ ವೈರಸ್‌ ಹುಟ್ಟಿದ್ದು ಹೇಗೆ? ಅದರಿಂದ ದೂರವಿರುವುದು ಹೇಗೆ? - ಡಾ.ಕೆ.ಸಿ ರಘು

ಕೊರೊನಾ ವೈರಸ್‌ ಹುಟ್ಟಿದ್ದು ಹೇಗೆ? ಅದರಿಂದ ದೂರವಿರುವುದು ಹೇಗೆ? – ಡಾ.ಕೆ.ಸಿ ರಘು

ಕೇರಳ ಕಳೆದ ಬಾರಿ ಕಂಡು ಬಂದ ನಿಫಾ ವೈರಸ್‌ನ್ನು ಮತ್ತು ಇತ್ತೀಚೆಗೆ ಕರೋನಾ ಕಂಡುಬಂದಾಗ ವ್ಯವಹರಿಸಿದ ರೀತಿ ಇಡೀ ದೇಶಕ್ಕೆ ಮಾದರಿಯಾಗಿದೆ.

- Advertisement -
- Advertisement -

ಕೊರೊನಾ ವೈರಸ್‌ ಇದಾಗಲೇ ಜಾಗತೀಕರಣಗೊಂಡಿದೆ. 76 ದೇಶಗಳಿಗೆ ಹಬ್ಬಿ ಸುಮಾರು 3200 ಜನರನ್ನು ಬಲಿ ತೆಗೆದುಕೊಂಡಿದೆ. ಈ ಸೋಂಕು ತಗುಲಿದ 100 ಜನರಲ್ಲಿ ಸುಮಾರು 4 ಜನ ಮರಣ ಹೊಂದುತ್ತಾರೆಂದು ಅಂದಾಜುಮಾಡಲಾಗಿದೆ. ಅಂದರೆ ಉಳಿದ 96 ಜನ ಗುಣಮುಖರಾಗುತ್ತಾರೆ. 30ಕ್ಕೂ ಹೆಚ್ಚು ವಯಸ್ಸಿನವರಿಗೆ ಸಾಮಾನ್ಯವಾಗಿ ಕಾಯಿಲೆ ಕಂಡುಬರುವುದಾಗಿದೆ. 60 ದಾಟಿದವರಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿರುವುದಾಗಿದೆ. ಅದರಲ್ಲೂ ಸಿಗರೇಟ್ ಸೇವನೆಯಿಂದ ಶ್ವಾಸಕೋಶ ಹಾನಿಯಾಗಿದ್ದರೆ ಅಥವಾ ಅಸ್ತಮಾ ಮತ್ತು ಇತರೆ ಶ್ವಾಸಕೋಶದ ಕಾಯಿಲೆಗಳಿದ್ದರೆ ಸಾವಿಗೀಡಾಗುವ ಸಾಧ್ಯತೆ ಹೆಚ್ಚು.

ಈ ವೈರಾಣು ಒಂದು ಗುಂಪಿಗೆ ಸಂಬಂಧಪಟ್ಟಿದ್ದಾಗಿದ್ದರು ಇದು ಹೊಸತೇ ಆಗಿದೆ. ಗುಂಪು ಹಳೆಯದು ಅದರ ವೈರಾಣು ಇದುವರೆಗೂ ತಿಳಿದಿದ್ದಾಗಿಲ್ಲ. ಮೊನ್ನೆ ತಾನೆ ಇದಕ್ಕೆ ಕೋವಿಡ್-19 ಎಂದು ನಾಮಕರಣ ಮಾಡಲಾಗಿದೆ. ಇದರ ಹುಟ್ಟು ಚೈನಾದ ವೂಹಾನ್ ಪ್ರಾಂತ್ಯದಲ್ಲಿ ಮಾಂಸದ ಮಾರುಕಟ್ಟೆಯಲ್ಲಿ. ಅಲ್ಲಿ ಸಾಕಿದ ಪ್ರಾಣಿಗಳ ಮಾಂಸ, ಕಾಡು ಪ್ರಾಣಿಗಳ ಮಾಂಸ ಎಲ್ಲವನ್ನೂ ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲಿ ಜನಜಂಗುಳಿಯ ನಡುವೆ ಮಾರಾಟ ಮಾಡಲಾಗುತ್ತದೆ. ಕಾಡು ಪ್ರಾಣಿಗಳ ಜೊತೆ ಹೊಂದಿಕೊಂಡು ಯಾವ ಕಾಟವೂ ಕೊಡದೇ ಶತಮಾನಗಳಿಂದ ಬದುಕುವ ವೈರಾಣುಗಳು ಬೇರೆ ಪ್ರಾಣಿಗಳ ಮಾಂಸಕ್ಕೆ ಸೇರಿ ರೋಗಾಣುವಾಗಿ ಪರಿಣಮಿಸುತ್ತವೆ. ಇವುಗಳು ಇಂತಹ ಸ್ಥಳಗಳಲ್ಲಿ ಹೊಸದಾಗಿ ಮಾರ್ಪಾಡಾಗುವ ಸಾಧ್ಯತೆಗಳು ಹೆಚ್ಚು.

ರೋಗಶಾಸ್ತ್ರದ ಹಳೆಯ ಮಾತಿನಂತೆ ವಿಚ್ಛೇದನ ಪಡೆದ ಗಂಡು ಮತ್ತು ಹೆಂಗಸು ಮರುಮದುವೆಯಾಗಿ ಸಂಸಾರ ಮಾಡುತ್ತಿದ್ದಾಗ ಮನೆಯಲ್ಲೊಂದು ದಿನ ಎಲ್ಲಿಲ್ಲದ ಗಲಾಟೆ ಗದ್ದಲ. ಆಗ ಹೆಂಡತಿ ಗಂಡನಿಗೆ “ನೋಡಿ ಇಲ್ಲಿ ನನ್ನೆರಡು ಮಕ್ಕಳು ನಿಮ್ಮೆರಡು ಮಕ್ಕಳು ನಮ್ಮಿಬ್ಬರ ಮಕ್ಕಳ ಜೊತೆ ಗಲಾಟೆ ಮಾಡುತ್ತಿದ್ದಾರೆ ಎನ್ನುತ್ತಾಳೆ” ಹೀಗೆ ಮಿಶ್ರಣಗೊಂಡ ವೈರಾಣುಗಳು ಹೊಸಜಾಗ, ಹೊಸತಾಣದಲ್ಲಿ ತನ್ನನ್ನು ತಾನು ಉಳುಸಿಕೊಳ್ಳಲು ಹೊಸದಾಗಿ ಮಾರ್ಪಾಟಾಗುತ್ತವೆ.

ಜಗತ್ತಿನಲ್ಲಿ ವೈರಾಣುಗಳೇ ಮೊದಲ ಜೀವಿಗಳೆಂದು ಪರಿಗಣಿಸುತ್ತಾರೆ. ಅವುಗಳು ಜೀವಿಗಳೆಂದು ಹೇಳುವುದು ಸುಲಭವಲ್ಲ. ಆದರೆ ಜೀವಕ್ಕೆ ಬೇಕಾಗಿರುವ ಮೂಲಧಾತು ಅಥವಾ Code ಎನ್ನಲಾಗುವ ಡಿಎನ್‌ಎ ಅಥವಾ ಆರ್‌ಎನ್‌ಎ ಯನ್ನು ಮಾತ್ರ ಒಳಗೊಂಡಿರುತ್ತದೆ. ಆದರೆ ಅದು ಅದರ ಸಂತಾನೋತ್ಪತ್ತಿಗೆ ಇನ್ನೊಂದು ಜೀವಿಯ ಜೀವಕೋಶಕ್ಕೆ ಹೊಕ್ಕು ಅದರ ಜೈವಿಕ ತಂತ್ರಗಾರಿಕೆಯನ್ನು ಅಪಹರಿಸಿ ತನ್ನದಾಗಿಸಿಕೊಂಡು ತನ್ನನ್ನು ತಾನೇ ಮಿಲಿಯನ್‌ ಗಟ್ಟಲೆ ವರ್ಷಗಳಲ್ಲಿ ಮರುಸೃಷ್ಟಿ ಮಾಡಿಕೊಳ್ಳುತ್ತದೆ. ಹಾಗೆ ಮಾಡಿದ ನಂತರ ತನಗೆ ಆಶ್ರಯ ಕೊಟ್ಟ ಜೀವಕೋಶವನ್ನು ಒಡೆದು ಪುಡಿ ಮಾಡುತ್ತದೆ. ಈ ಕರೋನಾ ವೈರಸ್‌ ಶ್ವಾಸಕೋಶಕ್ಕೆ ತಗುಲಿ ಅಲ್ಲಿ ದೇಹದ ರೋಗನಿರೋಧಕ ಶಕ್ತಿಯ ಹೋರಾಟದಿಂದ ದ್ರವಶ್ರಾವ್ಯ ಉಂಟಾಗಿ ಶ್ವಾಸಕೋಶದ ಮೂಲಕೆಲಸವಾದ ರಕ್ತಕ್ಕೆ ಆಮ್ಲಜನಕವನ್ನು ಪ್ರತಿ ಉಸಿರಿನಲ್ಲೂ ಒದಗಿಸುವ ಕಾರ್ಯಕ್ಕೆ ಕುತ್ತು ಬರುತ್ತದೆ. ಹಾಗೆಯೇ ವಿಷ ಅನಿಲ ಇಂಗಾಲದ ಡೈ ಆಕ್ಸೈಡನ್ನು ಹೊರಹಾಕುವ ಪ್ರಕ್ರಿಯೆಗೂ ತೊಂದರೆಯಾಗುತ್ತದೆ.

ಇಂತಹ ಸಂದರ್ಭದಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಅತ್ಯಂತ ಅವಶ್ಯಕ. ಭಾರತ ದೇಶದಲ್ಲಿ ಇದು ಹರಡಿದಲ್ಲಿ ಎಷ್ಟರ ಮಟ್ಟಿಗೆ ಆಸ್ಪತ್ರೆಯ ಹಾಸಿಗೆ, ಕೃತಕ ಉಸಿರಾಟದ ವ್ಯವಸ್ಥೆ, ರೋಗಿಗಳನ್ನು ಪ್ರತ್ಯೇಕಿಸಿ ಇಡುವ ವ್ಯವಸ್ಥೆಗೆ ನಾವು ಸಿದ್ಧರಾಗಿದ್ದೇವೆ ಎನ್ನುವುದು ದೊಡ್ಡ ಪ್ರಶ್ನೆಯೇ ಹೌದು. ಕೇರಳ ಕಳೆದ ಬಾರಿ ಕಂಡು ಬಂದ ನಿಫಾ ವೈರಸ್‌ನ್ನು ಮತ್ತು ಇತ್ತೀಚೆಗೆ ಕರೋನಾ ಕಂಡುಬಂದಾಗ ವ್ಯವಹರಿಸಿದ ರೀತಿ ಇಡೀ ದೇಶಕ್ಕೆ ಮಾದರಿಯಾಗಿದೆ.

ಕೃತಕ ಉಸಿರಾಟದ ಪ್ರಾತಿನಿಧಿಕ ಚಿತ್ರ

ಇಂತಹ ಸಂದರ್ಭದಲ್ಲಿ ಜ್ವರ, ಕೆಮ್ಮು, ಶೀತ ಅಥವಾ ಉಸಿರಾಟದ ತೊಂದರೆ ಕಂಡುಬಂದಾಗ ವೈದ್ಯರ ಬಳಿ ಹೋಗಿ ಪರೀಕ್ಷಿಸಿಕೊಳ್ಳುವುದು ಬಹಳ ಮುಖ್ಯ. ಇದಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ, ಮೊನ್ನೆ ಹುಟ್ಟಿದ ಕಾಯಿಲೆಗೆ ನಮ್ಮಲ್ಲಿ ಶತಮಾನಗಳಿಂದ ಔಷಧವಿದೆ ಎಂದೂ, ಕ್ರಿಸ್ತ ಪೂರ್ವದಲ್ಲೇ ಇದು ನಮಗೆ ತಿಳಿದಿತ್ತೆಂದು ಹೇಳುವವರಿದ್ದಾರೆ. ಗೋಮೂತ್ರ ಕುಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ. ಇವುಗಳನ್ನಾಗಲಿ ಅಥವಾ ಸಿರಿಧಾನ್ಯಗಳನ್ನು ತಿನ್ನಿ, ಕರೋನಾ ದೂರವಿಡಿ ಎನ್ನುವ ಮಾತುಗಳನ್ನು ನಂಬುವಂತದ್ದಲ್ಲ. ಆಯುರ್ವೇದ, ಹೋಮಿಯೋಪತಿ, ಇಲ್ಲವಾದಲ್ಲಿ ತಿರುಪತಿ ಎನ್ನುವ ಸಲಹೆಗಳೆಲ್ಲ ಉಂಟು.

ರೋಗ ನಿರೋಧಕ ಶಕ್ತಿಯನ್ನು ವೃದ್ಧಿಪಡಿಸಿಕೊಳ್ಳಲು ಉತ್ತಮ ಆಹಾರ, ಗಾಳಿ, ಬೆಳಕು, ಶುದ್ಧ ನೀರು ಅವಶ್ಯಕ. ಈ ಕಾಯಿಲೆ ಹರಡುವುದಕ್ಕೆ ಮುಖ್ಯ ಕಾರಣ: ಕೈ ತೊಳೆಯದೇ, ಬಾಯಿ, ಮೂಗು ಮತ್ತು ಕಣ್ಣನ್ನು ಸವರಿಕೊಳ್ಳುವುದರಿಂದ ದೇಹಕ್ಕೆ ರೋಗಾಣು ಸೇರಿಕೊಳ್ಳುವುದು. ಮಾಸ್ಕ್ ಹಾಕಿಕೊಳ್ಳುವುದು ಮುಖ್ಯವಾದರು ಕಣ್ಣಿಗೆ ಮಾಸ್ಕ್ ಹಾಕಿಕೊಳ್ಳಲಾಗುವುದಿಲ್ಲ. ಕಣ್ಣನ್ನು ಉಜ್ಜಿಕೊಂಡರು ಕಾಯಿಲೆ ತಗುಲಬಹುದು. ರೋಗ ಲಕ್ಷಣ ಚಿಹ್ನೆ ಇರುವವರು ಮಾಸ್ಕ್‌ ಹಾಕಿಕೊಳ್ಳುವುದು ಉತ್ತಮ. ಆಗಾಗ ಕೈ ತೊಳೆದುಕೊಳ್ಳುವುದು, ಹ್ಯಾಂಡ್‌ ಸ್ಯಾನಿಟೈಜರ್‌ಗಳನ್ನು ಬಳಸುವುದು ಇಲ್ಲವಾದಲ್ಲಿ ಶುದ್ಧ ನೀರಿನಲ್ಲಿ ಕೈ ತೊಳೆದರು ಸಾಕು. ಏಡ್ಸ್ ವೈರಾಣುವನ್ನು ಕಂಡು ಹಿಡಿದ ಜಾನ್‌ ಲೂಕ್ “ಇಂತಹ ವೈರಾಣು ಎಷ್ಟೇ ಭಯಾನಕವಾದರೂ ಶುದ್ಧ ನೀರಿನಲ್ಲಿ ತೊಳೆದರೆ ನಾಶವಾಗುತ್ತದೆ ಎನ್ನುತ್ತಿದ್ದ”.

ಈ ಕಾಯಿಲೆಯ ಬಗ್ಗೆ ನಾವು ನಮ್ಮ ವೈಯುಕ್ತಿಕ ಆಯ್ಕೆ, ಆಸಕ್ತಿಯನ್ನು ಮೀರಿ ಸಾಮಾಜಿಕ ಜವಬ್ದಾರಿಯಿಂದ ವರ್ತಿಸಿದಲ್ಲಿ ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಬಹುದು ಎನ್ನುವುದರಲ್ಲಿ ಸಂಶಯವಿಲ್ಲ. ಇಂತಹ ಅನೇಕ ವೈರಾಣುಗಳು ಇಡೀ ಜಗತ್ತನ್ನೇ ನಡುಗಿಸಿ ನಾವು ಲಸಿಕೆ ಹುಡುಕಿಕೊಳ್ಳುವುದರೊಳಗೆ ಮಾಯವಾಗಿರುವುದು ಉಂಟು. Better be safe then sorry.

(ಲೇಖಕರು ವಿಜ್ಞಾನಿ, ಉದ್ಯಮಿ ಮತ್ತು ಚಿಂತಕರು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...