Homeಮುಖಪುಟಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ದರ್ಶನ್-ಸುದೀಪ್ ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ ಎಂದು ಕೆ.ಪಿ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಕರ್ನಾಟಕದ ವಿಧಾನಸಭಾ ಚುನಾವಣೆ ಕೇವಲ ಒಂದು ತಿಂಗಳು ಇರುವಾಗ ಕನ್ನಡದ ಖ್ಯಾತ ನಟರಾದ ದರ್ಶನ್ ತೂಗುದೀಪ ಮತ್ತು ಸುದೀಪ್ ಬಿಜೆಪಿ ಪಕ್ಷ ಸೇರುತ್ತಾರೆ ಎಂಬ ವರದಿಗಳು ಪ್ರಕಟವಾಗುತ್ತಿವೆ. ಹಾಗಾಗಿ ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ ಎಂಬ ಚರ್ಚೆಗಳು ಸಹ ಆರಂಭವಾಗಿವೆ.

ಕೆಲ ತಿಂಗಳ ಹಿಂದೆ ಸುದೀಪ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆಗ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗಳು ಆರಂಭವಾಗಿದ್ದವು. ಆದರೆ ತನಿಖಾ ಸಂಸ್ಥೆಗಳ ಬೆದರಿಕೆಯಿಂದ ಅವರು ಬಿಜೆಪಿ ಸೇರುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಖ್ಯಾತ ಬಹುಭಾಷ ನಟ ಪ್ರಕಾಶ್ ರಾಜ್ ಇದು ಸುಳ್ಳು ಸುದ್ದಿ ಇರಬೇಕು ಎಂದಿದ್ದಾರೆ. “ಸುದೀಪ್ ಬಿಜೆಪಿ ಸೇರ್ಪಡೆ ಎಂಬುದು ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ BJP ಪಕ್ಷ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಸಂವೇದನಶೀಲ ನಾಗರೀಕರಾಗಿದ್ದು, ಈ ಸಂಚಿಗೆ ಬಲಿಯಾಗುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಚಿಂತಕ ಕೆ.ಪಿ ಸುರೇಶ್‌ರವರು ದರ್ಶನ್ ಮತ್ತು ಸುದೀಪ್‌ರವರಿಗೆ ಬಹಿರಂಗ ಪತ್ರ ಬರೆದಿದ್ದು ಡಾ.ರಾಜ್‌ಕುಮಾರ್ ಪರಂಪರೆಗೆ ಅವಮಾನ ಮಾಡಬೇಡಿ ಎಂದಿದ್ದಾರೆ. ಅದರ ಪೂರ್ಣ ಪಾಠ ಈ ಕೆಳಗಿನಂತಿದೆ.

“ಸುದೀಪ್- ದರ್ಶನ್ ಅವರೇ, ಅಣ್ಣಾವ್ರು ತೋರಿದ ನೈತಿಕ ಹಾದಿಗೆ ಅಪಚಾರವೆಸಗಬೇಡಿ

ಕನ್ನಡದ ಹೆಮ್ಮೆಯ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಭಾಜಪ ಸೇರುತ್ತಿರುವ ಸುದ್ದಿ ಬಂದಿದೆ.
ಇದರ ಹಿಂದೆ, ED ಬೆದರಿಕೆ ಇದೆಯೋ ಗೊತ್ತಿಲ್ಲ. ತೆರೆಯ ಮೇಲೆ ಸುಪರ್ ಮ್ಯಾನ್ ಆಗುವ ನಟರು ನಿಜ ಜೀವನದಲ್ಲಿ ಪ್ರಭುತ್ವದ ನೆರಳಿಗೇ ಬೆದರುವುದಿದೆ.

ಆದರೆ ಕನ್ನಡದ ಕಲಾವಿದರಿಗೊಂದು ಧೀಮಂತ ಹಾದಿಯನ್ನು ಡಾ. ರಾಜಕುಮಾರ್, ಮತ್ರು ಅವರ ಮಗ ಅಪ್ಪು ಹಾಕಿಕೊಟ್ಟಿದ್ದಾರೆ. ಕನ್ನಡದ ನಾಡು ನುಡಿಯ ಪರವಾಗಿ ಬೀದಿಗಳಿದು ಜನ ಜಾಗೃತಿ ಮಾಡಿದ ಅಣ್ಣಾವ್ರು , ಯಾವ ರಾಜಕೀಯ ಪಕ್ಷಕ್ಕೂ ಸೇರಲಿಲ್ಲ. ಬೆಂಬಲಿಸಲೂ ಇಲ್ಲ.

“ಅಭಿಮಾನಿ ದೇವರುಗಳು ಎಲ್ಲಾ ಪಕ್ಷಗಳಲ್ಲೂ ಇದ್ದಾರೆ. ಅವರಿಗೆ ಅಪಚಾರ ಮಾಡಲಾರೆ” ಎಂಬ ಖಚಿತ ನಿಲುವು ಅಣ್ಣಾವರಿಗಿತ್ತು.

60ರ ದಶಕದಲ್ಲಿ ಅನಕೃ, ರಾಮಮೂರ್ತಿ ಮುಂತಾದ ಕನ್ನಡದ ಲೇಖಕರ ಆಶಯಕ್ಕೆ ಮನ್ನಣೆ ಕೊಟ್ಟು ಡಾ. ರಾಜಕುಮಾರ್ ಕನ್ನಡದ ಹಿತಾಸಕ್ತಿಗೆ ಕಂಕಣಬದ್ಧರಾಗಿದ್ದರು. ಕೊನೆ ಉಸಿರಿನ ವರೆಗೂ ಹಾಗೆಯೇ ಇದ್ದರು.
ಈ ಆದರ್ಶ- ಸುದೀಪ್, ದರ್ಶನ್ ಅವರೊಳಗೆ ಇಳಿದಿದ್ದರೆ ಅವರು ಈ ನಿರ್ಧಾರದಿಂದ ಹಿಂದೆ ಸರಿಯಬೇಕು.

ಇದಕ್ಕೆ ಇನ್ನೊಂದು ಆಯಾಮವಿದೆ. ಸ್ವತಃ ತಮ್ಮ ಬೀಗರಾದ ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ರಾಜ್ ಕುಮಾರ್ ಅವರು ಜೀವನ ಚೈತ್ರ ಸಿನೆಮಾದಲ್ಲಿ ಹೆಂಡದ ವಿರುದ್ಧ ಸೆಟೆದು ಹೋರಾಡುವ ಪಾತ್ರ ನಿರ್ವಹಿಸಿದ್ದರು.
ಇದು ನೈತಿಕ ನಿಲುವು.

ಕರ್ನಾಟಕದ ಇತಿಹಾಸದಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಕೋಮು ವಿಷ ಹರಡುವ ಕೆಲಸವನ್ನು ಲಜ್ಜೆಗೆಟ್ಟು ಮಾಡಿದ ಪಕ್ಷ ಭಾಜಪ.

ಸ್ವತಃ ದರ್ಶನ್ ಸರಕಾರಿ ಶಾಲೆಗಳ ಇಶ್ಯೂ ಇದ್ದ ಕ್ರಾಂತಿ ಎಂಬ ಸಿನೆಮಾದಲ್ಲಿ ಸೂಪರ್ ಹೀರೋ ಆಗಿ ನಟಿಸಿದ್ದರು. ಆದರೆ ಕನ್ನಡ / ಸರಕಾರಿ ಶಾಲೆಗಳಿಗೆ ಆತ್ಯಂತಿಕ ಕೊಡಲಿಯೇಟು ಕೊಟ್ಟ ಪಕ್ಷ ಭಾಜಪ. ಕನ್ನಡ ಶಿಕ್ಷಣ ಮಾಧ್ಯಮವಾಗದಂತೆ ಸಂಘ ಪರಿವಾರದ ಸಂಸ್ಥೆ ಮೂಲಕ ತಡೆಯೊಡ್ಡಿದ್ದು ಹೌದಷ್ಟೇ.

ಇನ್ನು ಈ ಇಬ್ಬರ ಸಿನೆಮಾಗಳಲ್ಲೂ ಹಿಂದೂ- ಮುಸ್ಲಿಮ್ ಬಾಂಧವ್ಯ ಗಾಢವಾಗಿ ಪ್ರಸ್ತುತಪಡಿಸಿದ ಉದಾಹರಣೆಗಳಿವೆ. ಆದರೆ ಈ ಸರಕಾರ ಹೆಜ್ಜೆ ಹೆಜ್ಜೆಗೆ‌ ಮುಸ್ಲಿಮರನ್ನು ದುಷ್ಟೀಕರಿಸುತ್ತಾ ಮೀಸಲಾತಿಯನ್ನೂ ಕಿತ್ತುಕೊಂಡು ಅವರನ್ನು ಅಂಚಿಗೆ ಸರಿಸುವ ಕೆಲಸ ಮಾಡಿದೆ.

ಉರಿ- ನಂಜು ಸೃಷ್ಟಿ ಸ್ವತಃ ಮಂಡ್ಯದ ನಿರ್ವ್ಯಾಜ ಪ್ರೀತಿ ಪಡೆದಿರುವ ದರ್ಶನ್ ಗೆ ಗೊತ್ತಿರಬಹುದಷ್ಟೇ.
ಹೀಗಿರುವಾಗ ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ಈ ಇಬ್ಬರು ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ.

ಈ ಇಬ್ಬರೂ ನೆನಪಿಡಬೇಕಾದ ಇನ್ನೊಂದು ಸತ್ಯವಿದೆ. ಜನಾಗ್ರಹಕ್ಕೆ ತುತ್ತಾಗಿರುವ ಪಕ್ಷಕ್ಕೆ ಈಗ ಸೇರಿದರೆ, ಆ ಪಕ್ಷದೊಂದಿಗೆ ನೀವೂ ಜನರ ತಿರಸ್ಕಾರಕ್ಕೊಳಗಾಗುವುದು ಖಂಡಿತ” ಎಂದು ಕೆ.ಪಿ.ಸುರೇಶ್‌ರವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳು ಕರ್ನಾಟಕಕ್ಕೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...