Homeಮುಖಪುಟಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ದರ್ಶನ್-ಸುದೀಪ್ ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ ಎಂದು ಕೆ.ಪಿ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಕರ್ನಾಟಕದ ವಿಧಾನಸಭಾ ಚುನಾವಣೆ ಕೇವಲ ಒಂದು ತಿಂಗಳು ಇರುವಾಗ ಕನ್ನಡದ ಖ್ಯಾತ ನಟರಾದ ದರ್ಶನ್ ತೂಗುದೀಪ ಮತ್ತು ಸುದೀಪ್ ಬಿಜೆಪಿ ಪಕ್ಷ ಸೇರುತ್ತಾರೆ ಎಂಬ ವರದಿಗಳು ಪ್ರಕಟವಾಗುತ್ತಿವೆ. ಹಾಗಾಗಿ ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ ಎಂಬ ಚರ್ಚೆಗಳು ಸಹ ಆರಂಭವಾಗಿವೆ.

ಕೆಲ ತಿಂಗಳ ಹಿಂದೆ ಸುದೀಪ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆಗ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗಳು ಆರಂಭವಾಗಿದ್ದವು. ಆದರೆ ತನಿಖಾ ಸಂಸ್ಥೆಗಳ ಬೆದರಿಕೆಯಿಂದ ಅವರು ಬಿಜೆಪಿ ಸೇರುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಖ್ಯಾತ ಬಹುಭಾಷ ನಟ ಪ್ರಕಾಶ್ ರಾಜ್ ಇದು ಸುಳ್ಳು ಸುದ್ದಿ ಇರಬೇಕು ಎಂದಿದ್ದಾರೆ. “ಸುದೀಪ್ ಬಿಜೆಪಿ ಸೇರ್ಪಡೆ ಎಂಬುದು ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ BJP ಪಕ್ಷ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಸಂವೇದನಶೀಲ ನಾಗರೀಕರಾಗಿದ್ದು, ಈ ಸಂಚಿಗೆ ಬಲಿಯಾಗುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಚಿಂತಕ ಕೆ.ಪಿ ಸುರೇಶ್‌ರವರು ದರ್ಶನ್ ಮತ್ತು ಸುದೀಪ್‌ರವರಿಗೆ ಬಹಿರಂಗ ಪತ್ರ ಬರೆದಿದ್ದು ಡಾ.ರಾಜ್‌ಕುಮಾರ್ ಪರಂಪರೆಗೆ ಅವಮಾನ ಮಾಡಬೇಡಿ ಎಂದಿದ್ದಾರೆ. ಅದರ ಪೂರ್ಣ ಪಾಠ ಈ ಕೆಳಗಿನಂತಿದೆ.

“ಸುದೀಪ್- ದರ್ಶನ್ ಅವರೇ, ಅಣ್ಣಾವ್ರು ತೋರಿದ ನೈತಿಕ ಹಾದಿಗೆ ಅಪಚಾರವೆಸಗಬೇಡಿ

ಕನ್ನಡದ ಹೆಮ್ಮೆಯ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಭಾಜಪ ಸೇರುತ್ತಿರುವ ಸುದ್ದಿ ಬಂದಿದೆ.
ಇದರ ಹಿಂದೆ, ED ಬೆದರಿಕೆ ಇದೆಯೋ ಗೊತ್ತಿಲ್ಲ. ತೆರೆಯ ಮೇಲೆ ಸುಪರ್ ಮ್ಯಾನ್ ಆಗುವ ನಟರು ನಿಜ ಜೀವನದಲ್ಲಿ ಪ್ರಭುತ್ವದ ನೆರಳಿಗೇ ಬೆದರುವುದಿದೆ.

ಆದರೆ ಕನ್ನಡದ ಕಲಾವಿದರಿಗೊಂದು ಧೀಮಂತ ಹಾದಿಯನ್ನು ಡಾ. ರಾಜಕುಮಾರ್, ಮತ್ರು ಅವರ ಮಗ ಅಪ್ಪು ಹಾಕಿಕೊಟ್ಟಿದ್ದಾರೆ. ಕನ್ನಡದ ನಾಡು ನುಡಿಯ ಪರವಾಗಿ ಬೀದಿಗಳಿದು ಜನ ಜಾಗೃತಿ ಮಾಡಿದ ಅಣ್ಣಾವ್ರು , ಯಾವ ರಾಜಕೀಯ ಪಕ್ಷಕ್ಕೂ ಸೇರಲಿಲ್ಲ. ಬೆಂಬಲಿಸಲೂ ಇಲ್ಲ.

“ಅಭಿಮಾನಿ ದೇವರುಗಳು ಎಲ್ಲಾ ಪಕ್ಷಗಳಲ್ಲೂ ಇದ್ದಾರೆ. ಅವರಿಗೆ ಅಪಚಾರ ಮಾಡಲಾರೆ” ಎಂಬ ಖಚಿತ ನಿಲುವು ಅಣ್ಣಾವರಿಗಿತ್ತು.

60ರ ದಶಕದಲ್ಲಿ ಅನಕೃ, ರಾಮಮೂರ್ತಿ ಮುಂತಾದ ಕನ್ನಡದ ಲೇಖಕರ ಆಶಯಕ್ಕೆ ಮನ್ನಣೆ ಕೊಟ್ಟು ಡಾ. ರಾಜಕುಮಾರ್ ಕನ್ನಡದ ಹಿತಾಸಕ್ತಿಗೆ ಕಂಕಣಬದ್ಧರಾಗಿದ್ದರು. ಕೊನೆ ಉಸಿರಿನ ವರೆಗೂ ಹಾಗೆಯೇ ಇದ್ದರು.
ಈ ಆದರ್ಶ- ಸುದೀಪ್, ದರ್ಶನ್ ಅವರೊಳಗೆ ಇಳಿದಿದ್ದರೆ ಅವರು ಈ ನಿರ್ಧಾರದಿಂದ ಹಿಂದೆ ಸರಿಯಬೇಕು.

ಇದಕ್ಕೆ ಇನ್ನೊಂದು ಆಯಾಮವಿದೆ. ಸ್ವತಃ ತಮ್ಮ ಬೀಗರಾದ ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ರಾಜ್ ಕುಮಾರ್ ಅವರು ಜೀವನ ಚೈತ್ರ ಸಿನೆಮಾದಲ್ಲಿ ಹೆಂಡದ ವಿರುದ್ಧ ಸೆಟೆದು ಹೋರಾಡುವ ಪಾತ್ರ ನಿರ್ವಹಿಸಿದ್ದರು.
ಇದು ನೈತಿಕ ನಿಲುವು.

ಕರ್ನಾಟಕದ ಇತಿಹಾಸದಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಕೋಮು ವಿಷ ಹರಡುವ ಕೆಲಸವನ್ನು ಲಜ್ಜೆಗೆಟ್ಟು ಮಾಡಿದ ಪಕ್ಷ ಭಾಜಪ.

ಸ್ವತಃ ದರ್ಶನ್ ಸರಕಾರಿ ಶಾಲೆಗಳ ಇಶ್ಯೂ ಇದ್ದ ಕ್ರಾಂತಿ ಎಂಬ ಸಿನೆಮಾದಲ್ಲಿ ಸೂಪರ್ ಹೀರೋ ಆಗಿ ನಟಿಸಿದ್ದರು. ಆದರೆ ಕನ್ನಡ / ಸರಕಾರಿ ಶಾಲೆಗಳಿಗೆ ಆತ್ಯಂತಿಕ ಕೊಡಲಿಯೇಟು ಕೊಟ್ಟ ಪಕ್ಷ ಭಾಜಪ. ಕನ್ನಡ ಶಿಕ್ಷಣ ಮಾಧ್ಯಮವಾಗದಂತೆ ಸಂಘ ಪರಿವಾರದ ಸಂಸ್ಥೆ ಮೂಲಕ ತಡೆಯೊಡ್ಡಿದ್ದು ಹೌದಷ್ಟೇ.

ಇನ್ನು ಈ ಇಬ್ಬರ ಸಿನೆಮಾಗಳಲ್ಲೂ ಹಿಂದೂ- ಮುಸ್ಲಿಮ್ ಬಾಂಧವ್ಯ ಗಾಢವಾಗಿ ಪ್ರಸ್ತುತಪಡಿಸಿದ ಉದಾಹರಣೆಗಳಿವೆ. ಆದರೆ ಈ ಸರಕಾರ ಹೆಜ್ಜೆ ಹೆಜ್ಜೆಗೆ‌ ಮುಸ್ಲಿಮರನ್ನು ದುಷ್ಟೀಕರಿಸುತ್ತಾ ಮೀಸಲಾತಿಯನ್ನೂ ಕಿತ್ತುಕೊಂಡು ಅವರನ್ನು ಅಂಚಿಗೆ ಸರಿಸುವ ಕೆಲಸ ಮಾಡಿದೆ.

ಉರಿ- ನಂಜು ಸೃಷ್ಟಿ ಸ್ವತಃ ಮಂಡ್ಯದ ನಿರ್ವ್ಯಾಜ ಪ್ರೀತಿ ಪಡೆದಿರುವ ದರ್ಶನ್ ಗೆ ಗೊತ್ತಿರಬಹುದಷ್ಟೇ.
ಹೀಗಿರುವಾಗ ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ಈ ಇಬ್ಬರು ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ.

ಈ ಇಬ್ಬರೂ ನೆನಪಿಡಬೇಕಾದ ಇನ್ನೊಂದು ಸತ್ಯವಿದೆ. ಜನಾಗ್ರಹಕ್ಕೆ ತುತ್ತಾಗಿರುವ ಪಕ್ಷಕ್ಕೆ ಈಗ ಸೇರಿದರೆ, ಆ ಪಕ್ಷದೊಂದಿಗೆ ನೀವೂ ಜನರ ತಿರಸ್ಕಾರಕ್ಕೊಳಗಾಗುವುದು ಖಂಡಿತ” ಎಂದು ಕೆ.ಪಿ.ಸುರೇಶ್‌ರವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳು ಕರ್ನಾಟಕಕ್ಕೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...