Homeಮುಖಪುಟಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ದರ್ಶನ್-ಸುದೀಪ್ ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ ಎಂದು ಕೆ.ಪಿ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಕರ್ನಾಟಕದ ವಿಧಾನಸಭಾ ಚುನಾವಣೆ ಕೇವಲ ಒಂದು ತಿಂಗಳು ಇರುವಾಗ ಕನ್ನಡದ ಖ್ಯಾತ ನಟರಾದ ದರ್ಶನ್ ತೂಗುದೀಪ ಮತ್ತು ಸುದೀಪ್ ಬಿಜೆಪಿ ಪಕ್ಷ ಸೇರುತ್ತಾರೆ ಎಂಬ ವರದಿಗಳು ಪ್ರಕಟವಾಗುತ್ತಿವೆ. ಹಾಗಾಗಿ ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ ಎಂಬ ಚರ್ಚೆಗಳು ಸಹ ಆರಂಭವಾಗಿವೆ.

ಕೆಲ ತಿಂಗಳ ಹಿಂದೆ ಸುದೀಪ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆಗ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗಳು ಆರಂಭವಾಗಿದ್ದವು. ಆದರೆ ತನಿಖಾ ಸಂಸ್ಥೆಗಳ ಬೆದರಿಕೆಯಿಂದ ಅವರು ಬಿಜೆಪಿ ಸೇರುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಖ್ಯಾತ ಬಹುಭಾಷ ನಟ ಪ್ರಕಾಶ್ ರಾಜ್ ಇದು ಸುಳ್ಳು ಸುದ್ದಿ ಇರಬೇಕು ಎಂದಿದ್ದಾರೆ. “ಸುದೀಪ್ ಬಿಜೆಪಿ ಸೇರ್ಪಡೆ ಎಂಬುದು ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ BJP ಪಕ್ಷ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಸಂವೇದನಶೀಲ ನಾಗರೀಕರಾಗಿದ್ದು, ಈ ಸಂಚಿಗೆ ಬಲಿಯಾಗುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಚಿಂತಕ ಕೆ.ಪಿ ಸುರೇಶ್‌ರವರು ದರ್ಶನ್ ಮತ್ತು ಸುದೀಪ್‌ರವರಿಗೆ ಬಹಿರಂಗ ಪತ್ರ ಬರೆದಿದ್ದು ಡಾ.ರಾಜ್‌ಕುಮಾರ್ ಪರಂಪರೆಗೆ ಅವಮಾನ ಮಾಡಬೇಡಿ ಎಂದಿದ್ದಾರೆ. ಅದರ ಪೂರ್ಣ ಪಾಠ ಈ ಕೆಳಗಿನಂತಿದೆ.

“ಸುದೀಪ್- ದರ್ಶನ್ ಅವರೇ, ಅಣ್ಣಾವ್ರು ತೋರಿದ ನೈತಿಕ ಹಾದಿಗೆ ಅಪಚಾರವೆಸಗಬೇಡಿ

ಕನ್ನಡದ ಹೆಮ್ಮೆಯ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಭಾಜಪ ಸೇರುತ್ತಿರುವ ಸುದ್ದಿ ಬಂದಿದೆ.
ಇದರ ಹಿಂದೆ, ED ಬೆದರಿಕೆ ಇದೆಯೋ ಗೊತ್ತಿಲ್ಲ. ತೆರೆಯ ಮೇಲೆ ಸುಪರ್ ಮ್ಯಾನ್ ಆಗುವ ನಟರು ನಿಜ ಜೀವನದಲ್ಲಿ ಪ್ರಭುತ್ವದ ನೆರಳಿಗೇ ಬೆದರುವುದಿದೆ.

ಆದರೆ ಕನ್ನಡದ ಕಲಾವಿದರಿಗೊಂದು ಧೀಮಂತ ಹಾದಿಯನ್ನು ಡಾ. ರಾಜಕುಮಾರ್, ಮತ್ರು ಅವರ ಮಗ ಅಪ್ಪು ಹಾಕಿಕೊಟ್ಟಿದ್ದಾರೆ. ಕನ್ನಡದ ನಾಡು ನುಡಿಯ ಪರವಾಗಿ ಬೀದಿಗಳಿದು ಜನ ಜಾಗೃತಿ ಮಾಡಿದ ಅಣ್ಣಾವ್ರು , ಯಾವ ರಾಜಕೀಯ ಪಕ್ಷಕ್ಕೂ ಸೇರಲಿಲ್ಲ. ಬೆಂಬಲಿಸಲೂ ಇಲ್ಲ.

“ಅಭಿಮಾನಿ ದೇವರುಗಳು ಎಲ್ಲಾ ಪಕ್ಷಗಳಲ್ಲೂ ಇದ್ದಾರೆ. ಅವರಿಗೆ ಅಪಚಾರ ಮಾಡಲಾರೆ” ಎಂಬ ಖಚಿತ ನಿಲುವು ಅಣ್ಣಾವರಿಗಿತ್ತು.

60ರ ದಶಕದಲ್ಲಿ ಅನಕೃ, ರಾಮಮೂರ್ತಿ ಮುಂತಾದ ಕನ್ನಡದ ಲೇಖಕರ ಆಶಯಕ್ಕೆ ಮನ್ನಣೆ ಕೊಟ್ಟು ಡಾ. ರಾಜಕುಮಾರ್ ಕನ್ನಡದ ಹಿತಾಸಕ್ತಿಗೆ ಕಂಕಣಬದ್ಧರಾಗಿದ್ದರು. ಕೊನೆ ಉಸಿರಿನ ವರೆಗೂ ಹಾಗೆಯೇ ಇದ್ದರು.
ಈ ಆದರ್ಶ- ಸುದೀಪ್, ದರ್ಶನ್ ಅವರೊಳಗೆ ಇಳಿದಿದ್ದರೆ ಅವರು ಈ ನಿರ್ಧಾರದಿಂದ ಹಿಂದೆ ಸರಿಯಬೇಕು.

ಇದಕ್ಕೆ ಇನ್ನೊಂದು ಆಯಾಮವಿದೆ. ಸ್ವತಃ ತಮ್ಮ ಬೀಗರಾದ ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ರಾಜ್ ಕುಮಾರ್ ಅವರು ಜೀವನ ಚೈತ್ರ ಸಿನೆಮಾದಲ್ಲಿ ಹೆಂಡದ ವಿರುದ್ಧ ಸೆಟೆದು ಹೋರಾಡುವ ಪಾತ್ರ ನಿರ್ವಹಿಸಿದ್ದರು.
ಇದು ನೈತಿಕ ನಿಲುವು.

ಕರ್ನಾಟಕದ ಇತಿಹಾಸದಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಕೋಮು ವಿಷ ಹರಡುವ ಕೆಲಸವನ್ನು ಲಜ್ಜೆಗೆಟ್ಟು ಮಾಡಿದ ಪಕ್ಷ ಭಾಜಪ.

ಸ್ವತಃ ದರ್ಶನ್ ಸರಕಾರಿ ಶಾಲೆಗಳ ಇಶ್ಯೂ ಇದ್ದ ಕ್ರಾಂತಿ ಎಂಬ ಸಿನೆಮಾದಲ್ಲಿ ಸೂಪರ್ ಹೀರೋ ಆಗಿ ನಟಿಸಿದ್ದರು. ಆದರೆ ಕನ್ನಡ / ಸರಕಾರಿ ಶಾಲೆಗಳಿಗೆ ಆತ್ಯಂತಿಕ ಕೊಡಲಿಯೇಟು ಕೊಟ್ಟ ಪಕ್ಷ ಭಾಜಪ. ಕನ್ನಡ ಶಿಕ್ಷಣ ಮಾಧ್ಯಮವಾಗದಂತೆ ಸಂಘ ಪರಿವಾರದ ಸಂಸ್ಥೆ ಮೂಲಕ ತಡೆಯೊಡ್ಡಿದ್ದು ಹೌದಷ್ಟೇ.

ಇನ್ನು ಈ ಇಬ್ಬರ ಸಿನೆಮಾಗಳಲ್ಲೂ ಹಿಂದೂ- ಮುಸ್ಲಿಮ್ ಬಾಂಧವ್ಯ ಗಾಢವಾಗಿ ಪ್ರಸ್ತುತಪಡಿಸಿದ ಉದಾಹರಣೆಗಳಿವೆ. ಆದರೆ ಈ ಸರಕಾರ ಹೆಜ್ಜೆ ಹೆಜ್ಜೆಗೆ‌ ಮುಸ್ಲಿಮರನ್ನು ದುಷ್ಟೀಕರಿಸುತ್ತಾ ಮೀಸಲಾತಿಯನ್ನೂ ಕಿತ್ತುಕೊಂಡು ಅವರನ್ನು ಅಂಚಿಗೆ ಸರಿಸುವ ಕೆಲಸ ಮಾಡಿದೆ.

ಉರಿ- ನಂಜು ಸೃಷ್ಟಿ ಸ್ವತಃ ಮಂಡ್ಯದ ನಿರ್ವ್ಯಾಜ ಪ್ರೀತಿ ಪಡೆದಿರುವ ದರ್ಶನ್ ಗೆ ಗೊತ್ತಿರಬಹುದಷ್ಟೇ.
ಹೀಗಿರುವಾಗ ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ಈ ಇಬ್ಬರು ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ.

ಈ ಇಬ್ಬರೂ ನೆನಪಿಡಬೇಕಾದ ಇನ್ನೊಂದು ಸತ್ಯವಿದೆ. ಜನಾಗ್ರಹಕ್ಕೆ ತುತ್ತಾಗಿರುವ ಪಕ್ಷಕ್ಕೆ ಈಗ ಸೇರಿದರೆ, ಆ ಪಕ್ಷದೊಂದಿಗೆ ನೀವೂ ಜನರ ತಿರಸ್ಕಾರಕ್ಕೊಳಗಾಗುವುದು ಖಂಡಿತ” ಎಂದು ಕೆ.ಪಿ.ಸುರೇಶ್‌ರವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳು ಕರ್ನಾಟಕಕ್ಕೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...