Homeಮುಖಪುಟಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ದರ್ಶನ್-ಸುದೀಪ್ ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ ಎಂದು ಕೆ.ಪಿ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಕರ್ನಾಟಕದ ವಿಧಾನಸಭಾ ಚುನಾವಣೆ ಕೇವಲ ಒಂದು ತಿಂಗಳು ಇರುವಾಗ ಕನ್ನಡದ ಖ್ಯಾತ ನಟರಾದ ದರ್ಶನ್ ತೂಗುದೀಪ ಮತ್ತು ಸುದೀಪ್ ಬಿಜೆಪಿ ಪಕ್ಷ ಸೇರುತ್ತಾರೆ ಎಂಬ ವರದಿಗಳು ಪ್ರಕಟವಾಗುತ್ತಿವೆ. ಹಾಗಾಗಿ ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ ಎಂಬ ಚರ್ಚೆಗಳು ಸಹ ಆರಂಭವಾಗಿವೆ.

ಕೆಲ ತಿಂಗಳ ಹಿಂದೆ ಸುದೀಪ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆಗ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗಳು ಆರಂಭವಾಗಿದ್ದವು. ಆದರೆ ತನಿಖಾ ಸಂಸ್ಥೆಗಳ ಬೆದರಿಕೆಯಿಂದ ಅವರು ಬಿಜೆಪಿ ಸೇರುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಖ್ಯಾತ ಬಹುಭಾಷ ನಟ ಪ್ರಕಾಶ್ ರಾಜ್ ಇದು ಸುಳ್ಳು ಸುದ್ದಿ ಇರಬೇಕು ಎಂದಿದ್ದಾರೆ. “ಸುದೀಪ್ ಬಿಜೆಪಿ ಸೇರ್ಪಡೆ ಎಂಬುದು ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ BJP ಪಕ್ಷ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಸಂವೇದನಶೀಲ ನಾಗರೀಕರಾಗಿದ್ದು, ಈ ಸಂಚಿಗೆ ಬಲಿಯಾಗುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಚಿಂತಕ ಕೆ.ಪಿ ಸುರೇಶ್‌ರವರು ದರ್ಶನ್ ಮತ್ತು ಸುದೀಪ್‌ರವರಿಗೆ ಬಹಿರಂಗ ಪತ್ರ ಬರೆದಿದ್ದು ಡಾ.ರಾಜ್‌ಕುಮಾರ್ ಪರಂಪರೆಗೆ ಅವಮಾನ ಮಾಡಬೇಡಿ ಎಂದಿದ್ದಾರೆ. ಅದರ ಪೂರ್ಣ ಪಾಠ ಈ ಕೆಳಗಿನಂತಿದೆ.

“ಸುದೀಪ್- ದರ್ಶನ್ ಅವರೇ, ಅಣ್ಣಾವ್ರು ತೋರಿದ ನೈತಿಕ ಹಾದಿಗೆ ಅಪಚಾರವೆಸಗಬೇಡಿ

ಕನ್ನಡದ ಹೆಮ್ಮೆಯ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಭಾಜಪ ಸೇರುತ್ತಿರುವ ಸುದ್ದಿ ಬಂದಿದೆ.
ಇದರ ಹಿಂದೆ, ED ಬೆದರಿಕೆ ಇದೆಯೋ ಗೊತ್ತಿಲ್ಲ. ತೆರೆಯ ಮೇಲೆ ಸುಪರ್ ಮ್ಯಾನ್ ಆಗುವ ನಟರು ನಿಜ ಜೀವನದಲ್ಲಿ ಪ್ರಭುತ್ವದ ನೆರಳಿಗೇ ಬೆದರುವುದಿದೆ.

ಆದರೆ ಕನ್ನಡದ ಕಲಾವಿದರಿಗೊಂದು ಧೀಮಂತ ಹಾದಿಯನ್ನು ಡಾ. ರಾಜಕುಮಾರ್, ಮತ್ರು ಅವರ ಮಗ ಅಪ್ಪು ಹಾಕಿಕೊಟ್ಟಿದ್ದಾರೆ. ಕನ್ನಡದ ನಾಡು ನುಡಿಯ ಪರವಾಗಿ ಬೀದಿಗಳಿದು ಜನ ಜಾಗೃತಿ ಮಾಡಿದ ಅಣ್ಣಾವ್ರು , ಯಾವ ರಾಜಕೀಯ ಪಕ್ಷಕ್ಕೂ ಸೇರಲಿಲ್ಲ. ಬೆಂಬಲಿಸಲೂ ಇಲ್ಲ.

“ಅಭಿಮಾನಿ ದೇವರುಗಳು ಎಲ್ಲಾ ಪಕ್ಷಗಳಲ್ಲೂ ಇದ್ದಾರೆ. ಅವರಿಗೆ ಅಪಚಾರ ಮಾಡಲಾರೆ” ಎಂಬ ಖಚಿತ ನಿಲುವು ಅಣ್ಣಾವರಿಗಿತ್ತು.

60ರ ದಶಕದಲ್ಲಿ ಅನಕೃ, ರಾಮಮೂರ್ತಿ ಮುಂತಾದ ಕನ್ನಡದ ಲೇಖಕರ ಆಶಯಕ್ಕೆ ಮನ್ನಣೆ ಕೊಟ್ಟು ಡಾ. ರಾಜಕುಮಾರ್ ಕನ್ನಡದ ಹಿತಾಸಕ್ತಿಗೆ ಕಂಕಣಬದ್ಧರಾಗಿದ್ದರು. ಕೊನೆ ಉಸಿರಿನ ವರೆಗೂ ಹಾಗೆಯೇ ಇದ್ದರು.
ಈ ಆದರ್ಶ- ಸುದೀಪ್, ದರ್ಶನ್ ಅವರೊಳಗೆ ಇಳಿದಿದ್ದರೆ ಅವರು ಈ ನಿರ್ಧಾರದಿಂದ ಹಿಂದೆ ಸರಿಯಬೇಕು.

ಇದಕ್ಕೆ ಇನ್ನೊಂದು ಆಯಾಮವಿದೆ. ಸ್ವತಃ ತಮ್ಮ ಬೀಗರಾದ ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ರಾಜ್ ಕುಮಾರ್ ಅವರು ಜೀವನ ಚೈತ್ರ ಸಿನೆಮಾದಲ್ಲಿ ಹೆಂಡದ ವಿರುದ್ಧ ಸೆಟೆದು ಹೋರಾಡುವ ಪಾತ್ರ ನಿರ್ವಹಿಸಿದ್ದರು.
ಇದು ನೈತಿಕ ನಿಲುವು.

ಕರ್ನಾಟಕದ ಇತಿಹಾಸದಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಕೋಮು ವಿಷ ಹರಡುವ ಕೆಲಸವನ್ನು ಲಜ್ಜೆಗೆಟ್ಟು ಮಾಡಿದ ಪಕ್ಷ ಭಾಜಪ.

ಸ್ವತಃ ದರ್ಶನ್ ಸರಕಾರಿ ಶಾಲೆಗಳ ಇಶ್ಯೂ ಇದ್ದ ಕ್ರಾಂತಿ ಎಂಬ ಸಿನೆಮಾದಲ್ಲಿ ಸೂಪರ್ ಹೀರೋ ಆಗಿ ನಟಿಸಿದ್ದರು. ಆದರೆ ಕನ್ನಡ / ಸರಕಾರಿ ಶಾಲೆಗಳಿಗೆ ಆತ್ಯಂತಿಕ ಕೊಡಲಿಯೇಟು ಕೊಟ್ಟ ಪಕ್ಷ ಭಾಜಪ. ಕನ್ನಡ ಶಿಕ್ಷಣ ಮಾಧ್ಯಮವಾಗದಂತೆ ಸಂಘ ಪರಿವಾರದ ಸಂಸ್ಥೆ ಮೂಲಕ ತಡೆಯೊಡ್ಡಿದ್ದು ಹೌದಷ್ಟೇ.

ಇನ್ನು ಈ ಇಬ್ಬರ ಸಿನೆಮಾಗಳಲ್ಲೂ ಹಿಂದೂ- ಮುಸ್ಲಿಮ್ ಬಾಂಧವ್ಯ ಗಾಢವಾಗಿ ಪ್ರಸ್ತುತಪಡಿಸಿದ ಉದಾಹರಣೆಗಳಿವೆ. ಆದರೆ ಈ ಸರಕಾರ ಹೆಜ್ಜೆ ಹೆಜ್ಜೆಗೆ‌ ಮುಸ್ಲಿಮರನ್ನು ದುಷ್ಟೀಕರಿಸುತ್ತಾ ಮೀಸಲಾತಿಯನ್ನೂ ಕಿತ್ತುಕೊಂಡು ಅವರನ್ನು ಅಂಚಿಗೆ ಸರಿಸುವ ಕೆಲಸ ಮಾಡಿದೆ.

ಉರಿ- ನಂಜು ಸೃಷ್ಟಿ ಸ್ವತಃ ಮಂಡ್ಯದ ನಿರ್ವ್ಯಾಜ ಪ್ರೀತಿ ಪಡೆದಿರುವ ದರ್ಶನ್ ಗೆ ಗೊತ್ತಿರಬಹುದಷ್ಟೇ.
ಹೀಗಿರುವಾಗ ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ಈ ಇಬ್ಬರು ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ.

ಈ ಇಬ್ಬರೂ ನೆನಪಿಡಬೇಕಾದ ಇನ್ನೊಂದು ಸತ್ಯವಿದೆ. ಜನಾಗ್ರಹಕ್ಕೆ ತುತ್ತಾಗಿರುವ ಪಕ್ಷಕ್ಕೆ ಈಗ ಸೇರಿದರೆ, ಆ ಪಕ್ಷದೊಂದಿಗೆ ನೀವೂ ಜನರ ತಿರಸ್ಕಾರಕ್ಕೊಳಗಾಗುವುದು ಖಂಡಿತ” ಎಂದು ಕೆ.ಪಿ.ಸುರೇಶ್‌ರವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳು ಕರ್ನಾಟಕಕ್ಕೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...