Homeಮುಖಪುಟಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ದರ್ಶನ್-ಸುದೀಪ್ ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ ಎಂದು ಕೆ.ಪಿ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಕರ್ನಾಟಕದ ವಿಧಾನಸಭಾ ಚುನಾವಣೆ ಕೇವಲ ಒಂದು ತಿಂಗಳು ಇರುವಾಗ ಕನ್ನಡದ ಖ್ಯಾತ ನಟರಾದ ದರ್ಶನ್ ತೂಗುದೀಪ ಮತ್ತು ಸುದೀಪ್ ಬಿಜೆಪಿ ಪಕ್ಷ ಸೇರುತ್ತಾರೆ ಎಂಬ ವರದಿಗಳು ಪ್ರಕಟವಾಗುತ್ತಿವೆ. ಹಾಗಾಗಿ ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ ಎಂಬ ಚರ್ಚೆಗಳು ಸಹ ಆರಂಭವಾಗಿವೆ.

ಕೆಲ ತಿಂಗಳ ಹಿಂದೆ ಸುದೀಪ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆಗ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗಳು ಆರಂಭವಾಗಿದ್ದವು. ಆದರೆ ತನಿಖಾ ಸಂಸ್ಥೆಗಳ ಬೆದರಿಕೆಯಿಂದ ಅವರು ಬಿಜೆಪಿ ಸೇರುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಖ್ಯಾತ ಬಹುಭಾಷ ನಟ ಪ್ರಕಾಶ್ ರಾಜ್ ಇದು ಸುಳ್ಳು ಸುದ್ದಿ ಇರಬೇಕು ಎಂದಿದ್ದಾರೆ. “ಸುದೀಪ್ ಬಿಜೆಪಿ ಸೇರ್ಪಡೆ ಎಂಬುದು ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ BJP ಪಕ್ಷ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಸಂವೇದನಶೀಲ ನಾಗರೀಕರಾಗಿದ್ದು, ಈ ಸಂಚಿಗೆ ಬಲಿಯಾಗುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಚಿಂತಕ ಕೆ.ಪಿ ಸುರೇಶ್‌ರವರು ದರ್ಶನ್ ಮತ್ತು ಸುದೀಪ್‌ರವರಿಗೆ ಬಹಿರಂಗ ಪತ್ರ ಬರೆದಿದ್ದು ಡಾ.ರಾಜ್‌ಕುಮಾರ್ ಪರಂಪರೆಗೆ ಅವಮಾನ ಮಾಡಬೇಡಿ ಎಂದಿದ್ದಾರೆ. ಅದರ ಪೂರ್ಣ ಪಾಠ ಈ ಕೆಳಗಿನಂತಿದೆ.

“ಸುದೀಪ್- ದರ್ಶನ್ ಅವರೇ, ಅಣ್ಣಾವ್ರು ತೋರಿದ ನೈತಿಕ ಹಾದಿಗೆ ಅಪಚಾರವೆಸಗಬೇಡಿ

ಕನ್ನಡದ ಹೆಮ್ಮೆಯ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಭಾಜಪ ಸೇರುತ್ತಿರುವ ಸುದ್ದಿ ಬಂದಿದೆ.
ಇದರ ಹಿಂದೆ, ED ಬೆದರಿಕೆ ಇದೆಯೋ ಗೊತ್ತಿಲ್ಲ. ತೆರೆಯ ಮೇಲೆ ಸುಪರ್ ಮ್ಯಾನ್ ಆಗುವ ನಟರು ನಿಜ ಜೀವನದಲ್ಲಿ ಪ್ರಭುತ್ವದ ನೆರಳಿಗೇ ಬೆದರುವುದಿದೆ.

ಆದರೆ ಕನ್ನಡದ ಕಲಾವಿದರಿಗೊಂದು ಧೀಮಂತ ಹಾದಿಯನ್ನು ಡಾ. ರಾಜಕುಮಾರ್, ಮತ್ರು ಅವರ ಮಗ ಅಪ್ಪು ಹಾಕಿಕೊಟ್ಟಿದ್ದಾರೆ. ಕನ್ನಡದ ನಾಡು ನುಡಿಯ ಪರವಾಗಿ ಬೀದಿಗಳಿದು ಜನ ಜಾಗೃತಿ ಮಾಡಿದ ಅಣ್ಣಾವ್ರು , ಯಾವ ರಾಜಕೀಯ ಪಕ್ಷಕ್ಕೂ ಸೇರಲಿಲ್ಲ. ಬೆಂಬಲಿಸಲೂ ಇಲ್ಲ.

“ಅಭಿಮಾನಿ ದೇವರುಗಳು ಎಲ್ಲಾ ಪಕ್ಷಗಳಲ್ಲೂ ಇದ್ದಾರೆ. ಅವರಿಗೆ ಅಪಚಾರ ಮಾಡಲಾರೆ” ಎಂಬ ಖಚಿತ ನಿಲುವು ಅಣ್ಣಾವರಿಗಿತ್ತು.

60ರ ದಶಕದಲ್ಲಿ ಅನಕೃ, ರಾಮಮೂರ್ತಿ ಮುಂತಾದ ಕನ್ನಡದ ಲೇಖಕರ ಆಶಯಕ್ಕೆ ಮನ್ನಣೆ ಕೊಟ್ಟು ಡಾ. ರಾಜಕುಮಾರ್ ಕನ್ನಡದ ಹಿತಾಸಕ್ತಿಗೆ ಕಂಕಣಬದ್ಧರಾಗಿದ್ದರು. ಕೊನೆ ಉಸಿರಿನ ವರೆಗೂ ಹಾಗೆಯೇ ಇದ್ದರು.
ಈ ಆದರ್ಶ- ಸುದೀಪ್, ದರ್ಶನ್ ಅವರೊಳಗೆ ಇಳಿದಿದ್ದರೆ ಅವರು ಈ ನಿರ್ಧಾರದಿಂದ ಹಿಂದೆ ಸರಿಯಬೇಕು.

ಇದಕ್ಕೆ ಇನ್ನೊಂದು ಆಯಾಮವಿದೆ. ಸ್ವತಃ ತಮ್ಮ ಬೀಗರಾದ ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ರಾಜ್ ಕುಮಾರ್ ಅವರು ಜೀವನ ಚೈತ್ರ ಸಿನೆಮಾದಲ್ಲಿ ಹೆಂಡದ ವಿರುದ್ಧ ಸೆಟೆದು ಹೋರಾಡುವ ಪಾತ್ರ ನಿರ್ವಹಿಸಿದ್ದರು.
ಇದು ನೈತಿಕ ನಿಲುವು.

ಕರ್ನಾಟಕದ ಇತಿಹಾಸದಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಕೋಮು ವಿಷ ಹರಡುವ ಕೆಲಸವನ್ನು ಲಜ್ಜೆಗೆಟ್ಟು ಮಾಡಿದ ಪಕ್ಷ ಭಾಜಪ.

ಸ್ವತಃ ದರ್ಶನ್ ಸರಕಾರಿ ಶಾಲೆಗಳ ಇಶ್ಯೂ ಇದ್ದ ಕ್ರಾಂತಿ ಎಂಬ ಸಿನೆಮಾದಲ್ಲಿ ಸೂಪರ್ ಹೀರೋ ಆಗಿ ನಟಿಸಿದ್ದರು. ಆದರೆ ಕನ್ನಡ / ಸರಕಾರಿ ಶಾಲೆಗಳಿಗೆ ಆತ್ಯಂತಿಕ ಕೊಡಲಿಯೇಟು ಕೊಟ್ಟ ಪಕ್ಷ ಭಾಜಪ. ಕನ್ನಡ ಶಿಕ್ಷಣ ಮಾಧ್ಯಮವಾಗದಂತೆ ಸಂಘ ಪರಿವಾರದ ಸಂಸ್ಥೆ ಮೂಲಕ ತಡೆಯೊಡ್ಡಿದ್ದು ಹೌದಷ್ಟೇ.

ಇನ್ನು ಈ ಇಬ್ಬರ ಸಿನೆಮಾಗಳಲ್ಲೂ ಹಿಂದೂ- ಮುಸ್ಲಿಮ್ ಬಾಂಧವ್ಯ ಗಾಢವಾಗಿ ಪ್ರಸ್ತುತಪಡಿಸಿದ ಉದಾಹರಣೆಗಳಿವೆ. ಆದರೆ ಈ ಸರಕಾರ ಹೆಜ್ಜೆ ಹೆಜ್ಜೆಗೆ‌ ಮುಸ್ಲಿಮರನ್ನು ದುಷ್ಟೀಕರಿಸುತ್ತಾ ಮೀಸಲಾತಿಯನ್ನೂ ಕಿತ್ತುಕೊಂಡು ಅವರನ್ನು ಅಂಚಿಗೆ ಸರಿಸುವ ಕೆಲಸ ಮಾಡಿದೆ.

ಉರಿ- ನಂಜು ಸೃಷ್ಟಿ ಸ್ವತಃ ಮಂಡ್ಯದ ನಿರ್ವ್ಯಾಜ ಪ್ರೀತಿ ಪಡೆದಿರುವ ದರ್ಶನ್ ಗೆ ಗೊತ್ತಿರಬಹುದಷ್ಟೇ.
ಹೀಗಿರುವಾಗ ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ಈ ಇಬ್ಬರು ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ.

ಈ ಇಬ್ಬರೂ ನೆನಪಿಡಬೇಕಾದ ಇನ್ನೊಂದು ಸತ್ಯವಿದೆ. ಜನಾಗ್ರಹಕ್ಕೆ ತುತ್ತಾಗಿರುವ ಪಕ್ಷಕ್ಕೆ ಈಗ ಸೇರಿದರೆ, ಆ ಪಕ್ಷದೊಂದಿಗೆ ನೀವೂ ಜನರ ತಿರಸ್ಕಾರಕ್ಕೊಳಗಾಗುವುದು ಖಂಡಿತ” ಎಂದು ಕೆ.ಪಿ.ಸುರೇಶ್‌ರವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳು ಕರ್ನಾಟಕಕ್ಕೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...