Homeಮುಖಪುಟಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ದರ್ಶನ್-ಸುದೀಪ್ ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ ಎಂದು ಕೆ.ಪಿ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಕರ್ನಾಟಕದ ವಿಧಾನಸಭಾ ಚುನಾವಣೆ ಕೇವಲ ಒಂದು ತಿಂಗಳು ಇರುವಾಗ ಕನ್ನಡದ ಖ್ಯಾತ ನಟರಾದ ದರ್ಶನ್ ತೂಗುದೀಪ ಮತ್ತು ಸುದೀಪ್ ಬಿಜೆಪಿ ಪಕ್ಷ ಸೇರುತ್ತಾರೆ ಎಂಬ ವರದಿಗಳು ಪ್ರಕಟವಾಗುತ್ತಿವೆ. ಹಾಗಾಗಿ ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ ಎಂಬ ಚರ್ಚೆಗಳು ಸಹ ಆರಂಭವಾಗಿವೆ.

ಕೆಲ ತಿಂಗಳ ಹಿಂದೆ ಸುದೀಪ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆಗ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗಳು ಆರಂಭವಾಗಿದ್ದವು. ಆದರೆ ತನಿಖಾ ಸಂಸ್ಥೆಗಳ ಬೆದರಿಕೆಯಿಂದ ಅವರು ಬಿಜೆಪಿ ಸೇರುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಖ್ಯಾತ ಬಹುಭಾಷ ನಟ ಪ್ರಕಾಶ್ ರಾಜ್ ಇದು ಸುಳ್ಳು ಸುದ್ದಿ ಇರಬೇಕು ಎಂದಿದ್ದಾರೆ. “ಸುದೀಪ್ ಬಿಜೆಪಿ ಸೇರ್ಪಡೆ ಎಂಬುದು ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ BJP ಪಕ್ಷ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಸಂವೇದನಶೀಲ ನಾಗರೀಕರಾಗಿದ್ದು, ಈ ಸಂಚಿಗೆ ಬಲಿಯಾಗುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಚಿಂತಕ ಕೆ.ಪಿ ಸುರೇಶ್‌ರವರು ದರ್ಶನ್ ಮತ್ತು ಸುದೀಪ್‌ರವರಿಗೆ ಬಹಿರಂಗ ಪತ್ರ ಬರೆದಿದ್ದು ಡಾ.ರಾಜ್‌ಕುಮಾರ್ ಪರಂಪರೆಗೆ ಅವಮಾನ ಮಾಡಬೇಡಿ ಎಂದಿದ್ದಾರೆ. ಅದರ ಪೂರ್ಣ ಪಾಠ ಈ ಕೆಳಗಿನಂತಿದೆ.

“ಸುದೀಪ್- ದರ್ಶನ್ ಅವರೇ, ಅಣ್ಣಾವ್ರು ತೋರಿದ ನೈತಿಕ ಹಾದಿಗೆ ಅಪಚಾರವೆಸಗಬೇಡಿ

ಕನ್ನಡದ ಹೆಮ್ಮೆಯ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಭಾಜಪ ಸೇರುತ್ತಿರುವ ಸುದ್ದಿ ಬಂದಿದೆ.
ಇದರ ಹಿಂದೆ, ED ಬೆದರಿಕೆ ಇದೆಯೋ ಗೊತ್ತಿಲ್ಲ. ತೆರೆಯ ಮೇಲೆ ಸುಪರ್ ಮ್ಯಾನ್ ಆಗುವ ನಟರು ನಿಜ ಜೀವನದಲ್ಲಿ ಪ್ರಭುತ್ವದ ನೆರಳಿಗೇ ಬೆದರುವುದಿದೆ.

ಆದರೆ ಕನ್ನಡದ ಕಲಾವಿದರಿಗೊಂದು ಧೀಮಂತ ಹಾದಿಯನ್ನು ಡಾ. ರಾಜಕುಮಾರ್, ಮತ್ರು ಅವರ ಮಗ ಅಪ್ಪು ಹಾಕಿಕೊಟ್ಟಿದ್ದಾರೆ. ಕನ್ನಡದ ನಾಡು ನುಡಿಯ ಪರವಾಗಿ ಬೀದಿಗಳಿದು ಜನ ಜಾಗೃತಿ ಮಾಡಿದ ಅಣ್ಣಾವ್ರು , ಯಾವ ರಾಜಕೀಯ ಪಕ್ಷಕ್ಕೂ ಸೇರಲಿಲ್ಲ. ಬೆಂಬಲಿಸಲೂ ಇಲ್ಲ.

“ಅಭಿಮಾನಿ ದೇವರುಗಳು ಎಲ್ಲಾ ಪಕ್ಷಗಳಲ್ಲೂ ಇದ್ದಾರೆ. ಅವರಿಗೆ ಅಪಚಾರ ಮಾಡಲಾರೆ” ಎಂಬ ಖಚಿತ ನಿಲುವು ಅಣ್ಣಾವರಿಗಿತ್ತು.

60ರ ದಶಕದಲ್ಲಿ ಅನಕೃ, ರಾಮಮೂರ್ತಿ ಮುಂತಾದ ಕನ್ನಡದ ಲೇಖಕರ ಆಶಯಕ್ಕೆ ಮನ್ನಣೆ ಕೊಟ್ಟು ಡಾ. ರಾಜಕುಮಾರ್ ಕನ್ನಡದ ಹಿತಾಸಕ್ತಿಗೆ ಕಂಕಣಬದ್ಧರಾಗಿದ್ದರು. ಕೊನೆ ಉಸಿರಿನ ವರೆಗೂ ಹಾಗೆಯೇ ಇದ್ದರು.
ಈ ಆದರ್ಶ- ಸುದೀಪ್, ದರ್ಶನ್ ಅವರೊಳಗೆ ಇಳಿದಿದ್ದರೆ ಅವರು ಈ ನಿರ್ಧಾರದಿಂದ ಹಿಂದೆ ಸರಿಯಬೇಕು.

ಇದಕ್ಕೆ ಇನ್ನೊಂದು ಆಯಾಮವಿದೆ. ಸ್ವತಃ ತಮ್ಮ ಬೀಗರಾದ ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ರಾಜ್ ಕುಮಾರ್ ಅವರು ಜೀವನ ಚೈತ್ರ ಸಿನೆಮಾದಲ್ಲಿ ಹೆಂಡದ ವಿರುದ್ಧ ಸೆಟೆದು ಹೋರಾಡುವ ಪಾತ್ರ ನಿರ್ವಹಿಸಿದ್ದರು.
ಇದು ನೈತಿಕ ನಿಲುವು.

ಕರ್ನಾಟಕದ ಇತಿಹಾಸದಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಕೋಮು ವಿಷ ಹರಡುವ ಕೆಲಸವನ್ನು ಲಜ್ಜೆಗೆಟ್ಟು ಮಾಡಿದ ಪಕ್ಷ ಭಾಜಪ.

ಸ್ವತಃ ದರ್ಶನ್ ಸರಕಾರಿ ಶಾಲೆಗಳ ಇಶ್ಯೂ ಇದ್ದ ಕ್ರಾಂತಿ ಎಂಬ ಸಿನೆಮಾದಲ್ಲಿ ಸೂಪರ್ ಹೀರೋ ಆಗಿ ನಟಿಸಿದ್ದರು. ಆದರೆ ಕನ್ನಡ / ಸರಕಾರಿ ಶಾಲೆಗಳಿಗೆ ಆತ್ಯಂತಿಕ ಕೊಡಲಿಯೇಟು ಕೊಟ್ಟ ಪಕ್ಷ ಭಾಜಪ. ಕನ್ನಡ ಶಿಕ್ಷಣ ಮಾಧ್ಯಮವಾಗದಂತೆ ಸಂಘ ಪರಿವಾರದ ಸಂಸ್ಥೆ ಮೂಲಕ ತಡೆಯೊಡ್ಡಿದ್ದು ಹೌದಷ್ಟೇ.

ಇನ್ನು ಈ ಇಬ್ಬರ ಸಿನೆಮಾಗಳಲ್ಲೂ ಹಿಂದೂ- ಮುಸ್ಲಿಮ್ ಬಾಂಧವ್ಯ ಗಾಢವಾಗಿ ಪ್ರಸ್ತುತಪಡಿಸಿದ ಉದಾಹರಣೆಗಳಿವೆ. ಆದರೆ ಈ ಸರಕಾರ ಹೆಜ್ಜೆ ಹೆಜ್ಜೆಗೆ‌ ಮುಸ್ಲಿಮರನ್ನು ದುಷ್ಟೀಕರಿಸುತ್ತಾ ಮೀಸಲಾತಿಯನ್ನೂ ಕಿತ್ತುಕೊಂಡು ಅವರನ್ನು ಅಂಚಿಗೆ ಸರಿಸುವ ಕೆಲಸ ಮಾಡಿದೆ.

ಉರಿ- ನಂಜು ಸೃಷ್ಟಿ ಸ್ವತಃ ಮಂಡ್ಯದ ನಿರ್ವ್ಯಾಜ ಪ್ರೀತಿ ಪಡೆದಿರುವ ದರ್ಶನ್ ಗೆ ಗೊತ್ತಿರಬಹುದಷ್ಟೇ.
ಹೀಗಿರುವಾಗ ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ಈ ಇಬ್ಬರು ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ.

ಈ ಇಬ್ಬರೂ ನೆನಪಿಡಬೇಕಾದ ಇನ್ನೊಂದು ಸತ್ಯವಿದೆ. ಜನಾಗ್ರಹಕ್ಕೆ ತುತ್ತಾಗಿರುವ ಪಕ್ಷಕ್ಕೆ ಈಗ ಸೇರಿದರೆ, ಆ ಪಕ್ಷದೊಂದಿಗೆ ನೀವೂ ಜನರ ತಿರಸ್ಕಾರಕ್ಕೊಳಗಾಗುವುದು ಖಂಡಿತ” ಎಂದು ಕೆ.ಪಿ.ಸುರೇಶ್‌ರವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳು ಕರ್ನಾಟಕಕ್ಕೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...