Homeಮುಖಪುಟಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ದರ್ಶನ್-ಸುದೀಪ್ ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ ಎಂದು ಕೆ.ಪಿ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಕರ್ನಾಟಕದ ವಿಧಾನಸಭಾ ಚುನಾವಣೆ ಕೇವಲ ಒಂದು ತಿಂಗಳು ಇರುವಾಗ ಕನ್ನಡದ ಖ್ಯಾತ ನಟರಾದ ದರ್ಶನ್ ತೂಗುದೀಪ ಮತ್ತು ಸುದೀಪ್ ಬಿಜೆಪಿ ಪಕ್ಷ ಸೇರುತ್ತಾರೆ ಎಂಬ ವರದಿಗಳು ಪ್ರಕಟವಾಗುತ್ತಿವೆ. ಹಾಗಾಗಿ ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ ಎಂಬ ಚರ್ಚೆಗಳು ಸಹ ಆರಂಭವಾಗಿವೆ.

ಕೆಲ ತಿಂಗಳ ಹಿಂದೆ ಸುದೀಪ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆಗ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗಳು ಆರಂಭವಾಗಿದ್ದವು. ಆದರೆ ತನಿಖಾ ಸಂಸ್ಥೆಗಳ ಬೆದರಿಕೆಯಿಂದ ಅವರು ಬಿಜೆಪಿ ಸೇರುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಖ್ಯಾತ ಬಹುಭಾಷ ನಟ ಪ್ರಕಾಶ್ ರಾಜ್ ಇದು ಸುಳ್ಳು ಸುದ್ದಿ ಇರಬೇಕು ಎಂದಿದ್ದಾರೆ. “ಸುದೀಪ್ ಬಿಜೆಪಿ ಸೇರ್ಪಡೆ ಎಂಬುದು ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ BJP ಪಕ್ಷ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಸಂವೇದನಶೀಲ ನಾಗರೀಕರಾಗಿದ್ದು, ಈ ಸಂಚಿಗೆ ಬಲಿಯಾಗುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಚಿಂತಕ ಕೆ.ಪಿ ಸುರೇಶ್‌ರವರು ದರ್ಶನ್ ಮತ್ತು ಸುದೀಪ್‌ರವರಿಗೆ ಬಹಿರಂಗ ಪತ್ರ ಬರೆದಿದ್ದು ಡಾ.ರಾಜ್‌ಕುಮಾರ್ ಪರಂಪರೆಗೆ ಅವಮಾನ ಮಾಡಬೇಡಿ ಎಂದಿದ್ದಾರೆ. ಅದರ ಪೂರ್ಣ ಪಾಠ ಈ ಕೆಳಗಿನಂತಿದೆ.

“ಸುದೀಪ್- ದರ್ಶನ್ ಅವರೇ, ಅಣ್ಣಾವ್ರು ತೋರಿದ ನೈತಿಕ ಹಾದಿಗೆ ಅಪಚಾರವೆಸಗಬೇಡಿ

ಕನ್ನಡದ ಹೆಮ್ಮೆಯ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಭಾಜಪ ಸೇರುತ್ತಿರುವ ಸುದ್ದಿ ಬಂದಿದೆ.
ಇದರ ಹಿಂದೆ, ED ಬೆದರಿಕೆ ಇದೆಯೋ ಗೊತ್ತಿಲ್ಲ. ತೆರೆಯ ಮೇಲೆ ಸುಪರ್ ಮ್ಯಾನ್ ಆಗುವ ನಟರು ನಿಜ ಜೀವನದಲ್ಲಿ ಪ್ರಭುತ್ವದ ನೆರಳಿಗೇ ಬೆದರುವುದಿದೆ.

ಆದರೆ ಕನ್ನಡದ ಕಲಾವಿದರಿಗೊಂದು ಧೀಮಂತ ಹಾದಿಯನ್ನು ಡಾ. ರಾಜಕುಮಾರ್, ಮತ್ರು ಅವರ ಮಗ ಅಪ್ಪು ಹಾಕಿಕೊಟ್ಟಿದ್ದಾರೆ. ಕನ್ನಡದ ನಾಡು ನುಡಿಯ ಪರವಾಗಿ ಬೀದಿಗಳಿದು ಜನ ಜಾಗೃತಿ ಮಾಡಿದ ಅಣ್ಣಾವ್ರು , ಯಾವ ರಾಜಕೀಯ ಪಕ್ಷಕ್ಕೂ ಸೇರಲಿಲ್ಲ. ಬೆಂಬಲಿಸಲೂ ಇಲ್ಲ.

“ಅಭಿಮಾನಿ ದೇವರುಗಳು ಎಲ್ಲಾ ಪಕ್ಷಗಳಲ್ಲೂ ಇದ್ದಾರೆ. ಅವರಿಗೆ ಅಪಚಾರ ಮಾಡಲಾರೆ” ಎಂಬ ಖಚಿತ ನಿಲುವು ಅಣ್ಣಾವರಿಗಿತ್ತು.

60ರ ದಶಕದಲ್ಲಿ ಅನಕೃ, ರಾಮಮೂರ್ತಿ ಮುಂತಾದ ಕನ್ನಡದ ಲೇಖಕರ ಆಶಯಕ್ಕೆ ಮನ್ನಣೆ ಕೊಟ್ಟು ಡಾ. ರಾಜಕುಮಾರ್ ಕನ್ನಡದ ಹಿತಾಸಕ್ತಿಗೆ ಕಂಕಣಬದ್ಧರಾಗಿದ್ದರು. ಕೊನೆ ಉಸಿರಿನ ವರೆಗೂ ಹಾಗೆಯೇ ಇದ್ದರು.
ಈ ಆದರ್ಶ- ಸುದೀಪ್, ದರ್ಶನ್ ಅವರೊಳಗೆ ಇಳಿದಿದ್ದರೆ ಅವರು ಈ ನಿರ್ಧಾರದಿಂದ ಹಿಂದೆ ಸರಿಯಬೇಕು.

ಇದಕ್ಕೆ ಇನ್ನೊಂದು ಆಯಾಮವಿದೆ. ಸ್ವತಃ ತಮ್ಮ ಬೀಗರಾದ ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ರಾಜ್ ಕುಮಾರ್ ಅವರು ಜೀವನ ಚೈತ್ರ ಸಿನೆಮಾದಲ್ಲಿ ಹೆಂಡದ ವಿರುದ್ಧ ಸೆಟೆದು ಹೋರಾಡುವ ಪಾತ್ರ ನಿರ್ವಹಿಸಿದ್ದರು.
ಇದು ನೈತಿಕ ನಿಲುವು.

ಕರ್ನಾಟಕದ ಇತಿಹಾಸದಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಕೋಮು ವಿಷ ಹರಡುವ ಕೆಲಸವನ್ನು ಲಜ್ಜೆಗೆಟ್ಟು ಮಾಡಿದ ಪಕ್ಷ ಭಾಜಪ.

ಸ್ವತಃ ದರ್ಶನ್ ಸರಕಾರಿ ಶಾಲೆಗಳ ಇಶ್ಯೂ ಇದ್ದ ಕ್ರಾಂತಿ ಎಂಬ ಸಿನೆಮಾದಲ್ಲಿ ಸೂಪರ್ ಹೀರೋ ಆಗಿ ನಟಿಸಿದ್ದರು. ಆದರೆ ಕನ್ನಡ / ಸರಕಾರಿ ಶಾಲೆಗಳಿಗೆ ಆತ್ಯಂತಿಕ ಕೊಡಲಿಯೇಟು ಕೊಟ್ಟ ಪಕ್ಷ ಭಾಜಪ. ಕನ್ನಡ ಶಿಕ್ಷಣ ಮಾಧ್ಯಮವಾಗದಂತೆ ಸಂಘ ಪರಿವಾರದ ಸಂಸ್ಥೆ ಮೂಲಕ ತಡೆಯೊಡ್ಡಿದ್ದು ಹೌದಷ್ಟೇ.

ಇನ್ನು ಈ ಇಬ್ಬರ ಸಿನೆಮಾಗಳಲ್ಲೂ ಹಿಂದೂ- ಮುಸ್ಲಿಮ್ ಬಾಂಧವ್ಯ ಗಾಢವಾಗಿ ಪ್ರಸ್ತುತಪಡಿಸಿದ ಉದಾಹರಣೆಗಳಿವೆ. ಆದರೆ ಈ ಸರಕಾರ ಹೆಜ್ಜೆ ಹೆಜ್ಜೆಗೆ‌ ಮುಸ್ಲಿಮರನ್ನು ದುಷ್ಟೀಕರಿಸುತ್ತಾ ಮೀಸಲಾತಿಯನ್ನೂ ಕಿತ್ತುಕೊಂಡು ಅವರನ್ನು ಅಂಚಿಗೆ ಸರಿಸುವ ಕೆಲಸ ಮಾಡಿದೆ.

ಉರಿ- ನಂಜು ಸೃಷ್ಟಿ ಸ್ವತಃ ಮಂಡ್ಯದ ನಿರ್ವ್ಯಾಜ ಪ್ರೀತಿ ಪಡೆದಿರುವ ದರ್ಶನ್ ಗೆ ಗೊತ್ತಿರಬಹುದಷ್ಟೇ.
ಹೀಗಿರುವಾಗ ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ಈ ಇಬ್ಬರು ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ.

ಈ ಇಬ್ಬರೂ ನೆನಪಿಡಬೇಕಾದ ಇನ್ನೊಂದು ಸತ್ಯವಿದೆ. ಜನಾಗ್ರಹಕ್ಕೆ ತುತ್ತಾಗಿರುವ ಪಕ್ಷಕ್ಕೆ ಈಗ ಸೇರಿದರೆ, ಆ ಪಕ್ಷದೊಂದಿಗೆ ನೀವೂ ಜನರ ತಿರಸ್ಕಾರಕ್ಕೊಳಗಾಗುವುದು ಖಂಡಿತ” ಎಂದು ಕೆ.ಪಿ.ಸುರೇಶ್‌ರವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳು ಕರ್ನಾಟಕಕ್ಕೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...