Homeಮುಖಪುಟಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

- Advertisement -
- Advertisement -

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಉದಯ್ ಯು. ಲಲಿತ್ ಅವರು ಆಗಸ್ಟ್ 27ರಂದು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯವಾಗಿರುವ ಎನ್‌.ವಿ. ರಮಣ ಅವರು ಮುಂದಿನ ಸಿಜೆಐ ಸ್ಥಾನಕ್ಕೆ ಬುಧವಾರದಂದು ಒಕ್ಕೂಟ ಸರ್ಕಾರದ ಕಾನೂನು ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣೆಯಲ್ಲಿ ಸಿಜೆಐ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ನ್ಯಾಯಾಲಯದ ಆಡಳಿತವನ್ನು ಮೇಲ್ವಿಚಾರಣೆ ಮಾಡುತ್ತಾರೆ, ನ್ಯಾಯಾಧೀಶರಿಗೆ ಪ್ರಕರಣಗಳನ್ನು ಹಂಚುತ್ತಾರೆ ಮತ್ತು ಭಾರತದಾದ್ಯಂತ ನ್ಯಾಯಾಧೀಶರನ್ನು ನೇಮಿಸುವ ಕೊಲಿಜಿಯಂನ ಮುಖ್ಯಸ್ಥರಾಗಿರುತ್ತಾರೆ. ಬಹಳ ಮುಖ್ಯವಾಗಿ ಮುಖ್ಯ ನ್ಯಾಯಮೂರ್ತಿ ತಮ್ಮ ಅಧಿಕಾರಾವಧಿಯಲ್ಲಿ ಒಂದು ಸಂಸ್ಥೆಯಾಗಿ ಸುಪ್ರೀಂ ಕೋರ್ಟ್‌ನ ಭವಿಷ್ಯವನ್ನು ನಿರ್ಧರಿಸುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯ ನೇಮಕ ಪ್ರಕ್ರಿಯೆ ಹೇಗೆ?

ಭಾರತದ ಸಂವಿಧಾನದ 124 ನೇ ವಿಧಿಯ ಷರತ್ತು (2) ರ ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸಿ ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯನ್ನು ನೇಮಿಸಲಾಗುತ್ತದೆ.

ಸಂವಿಧಾನದ 124 ನೇ ವಿಧಿ

ಭಾರತ ಸಂವಿಧಾನವು ಸಿಜೆಐ ನೇಮಕದ ಯಾವುದೇ ಕಾರ್ಯವಿಧಾನವನ್ನು ಉಲ್ಲೇಖಿಸಿಲ್ಲ. ಸಂವಿಧಾನದ 124 (1) ನೇ ವಿಧಿಯು, “ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡಿರುವ ಭಾರತದ ಸುಪ್ರೀಂ ಕೋರ್ಟ್ ಇರುತ್ತದೆ” ಎಂದು ಹೇಳುತ್ತದೆ.

ಸಂವಿಧಾನದ 124 ನೇ ವಿಧಿಯ ಷರತ್ತು (2) ಸರ್ವೋಚ್ಚ ನ್ಯಾಯಾಲಯದ ಪ್ರತಿಯೊಬ್ಬ ನ್ಯಾಯಾಧೀಶರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ ಎಂದು ಹೇಳುತ್ತದೆ. ಹೀಗಾಗಿ, ಸಾಂವಿಧಾನಿಕ ನಿಬಂಧನೆಯ ಅನುಪಸ್ಥಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ನೇಮಿಸುವ ವಿಧಾನವು ‘ಸಂಪ್ರದಾಯ’ದ ಮೇಲೆ ಅವಲಂಬಿತವಾಗಿದೆ.

ಇದನ್ನೂ ಓದಿ: ಅಂಚಿಗೆ ತಳ್ಳಲ್ಪಟ್ಟವರಿಗೂ ಕಾನೂನಿನ ರಕ್ಷಣೆ ಖಾತ್ರಿಪಡಿಸುವ ಅಗತ್ಯವಿದೆ: ಯುಯು ಲಲಿತ್

ಹಿರಿತನದ ಆಧಾರದಲ್ಲಿ ಸಿಜೆಐಯಿಂದ ಶಿಫಾರಸ್ಸು

ನಿರ್ಗಮಿಸುತ್ತಿರುವ ಸಿಜೆಐ ಅವರು ತಮ್ಮ ಉತ್ತರಾಧಿಕಾರಿಯನ್ನು ಶಿಫಾರಸು ಮಾಡುತ್ತಾರೆ. ಇದು ಒಂದು ಸಂಪ್ರದಾಯವಾಗಿದ್ದು, ಕಟ್ಟುನಿಟ್ಟಾಗಿ ಹಿರಿತನವನ್ನು ಆಧರಿಸಿ ನೇಮಕ ಮಾಡಲಾಗುತ್ತದೆ. ಒಕ್ಕೂಟ ಸರ್ಕಾರದ ಕಾನೂನು ಸಚಿವರು ಈ ಶಿಫಾರಸನ್ನು ಪ್ರಧಾನಿಗೆ ರವಾನಿಸುತ್ತಾರೆ, ಅವರು ರಾಷ್ಟ್ರಪತಿಗಳಿಗೆ ಸಲಹೆ ನೀಡುತ್ತಾರೆ.

ಕಾರ್ಯನಿರ್ವಹಿಸುತ್ತಿರುವ ಸಿಜೆಐ ತನ್ನ 65 ನೇ ವಯಸ್ಸಿನಲ್ಲಿ ನಿವೃತ್ತರಾದ ನಂತರ, ಸುಪ್ರೀಂ ಕೋರ್ಟ್‌ನಲ್ಲಿ ಇರುವ ಅತ್ಯಂತ ಹಿರಿಯ ನ್ಯಾಯಾಧೀಶರು ದೇಶದ ಮುಂದಿನ ಮುಖ್ಯ ನ್ಯಾಯಮೂರ್ತಿ ಆಗುತ್ತಾರೆ. ಆದರೆ ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ನೇಮಕಕ್ಕೆ ಪರಿಗಣಿಸುವ ‘ಹಿರಿತನ’ವು ವಯಸ್ಸಿನ ಮೂಲಕ ವ್ಯಾಖ್ಯಾನಿಸಲಾಗುವುದಿಲ್ಲ. ಅದರ ಬದಲಾಗಿ ನೇಮಕಗೊಳ್ಳುತ್ತಿರುವ ನ್ಯಾಯಾಧೀಶರು ಸುಪ್ರೀಂಕೋರ್ಟ್‌ನಲ್ಲಿ ಎಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿದ್ದಾರೆ ಎಂಬುದನ್ನು ಪರಿಗಣಿಸಲಾಗುತ್ತದೆ.

ಒಂದು ವೇಳೆ ಇಬ್ಬರು ನ್ಯಾಯಾಧೀಶರು ಒಂದೇ ರೀತಿಯ ಹಿರಿತನವನ್ನು ಹೊಂದಿದ್ದರೆ, ಇಬ್ಬರಲ್ಲಿ ಯಾರಿಗೆ ಹೈಕೋರ್ಟ್‌ನಲ್ಲಿ ಹೆಚ್ಚಿನ ವರ್ಷಗಳ ಅನುಭವವಿದೆ ಅಥವಾ ಮೊದಲು ಪ್ರಮಾಣ ವಚನ ಸ್ವೀಕರಿಸಿದವರು ಯಾರು ಎಂಬ ಕೆಲವು ಅಂಶಗಳನ್ನು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: 11.68 ಲಕ್ಷ ಕೋಟಿ ರೈಟ್ ಆಫ್ – 20 ಲಕ್ಷ ಕೋಟಿ NPA: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ

ಕಾರ್ಯವಿಧಾನದ ಮೆಮೊರಾಂಡಮ್ (The Memorandum of Procedure – MoP)

ಸಿಜೆಐಯನ್ನು ಅನ್ನು ನೇಮಿಸುವ ನಿಜವಾದ ಕಾರ್ಯವಿಧಾನವನ್ನು ಸರ್ಕಾರ ಮತ್ತು ನ್ಯಾಯಾಂಗದ ನಡುವಿನ ಮೆಮೊರಾಂಡಮ್ ಆಫ್ ಪ್ರೊಸೀಜರ್ (MoP) ನಲ್ಲಿ ಹೇಳಲಾಗಿದೆ. ಸಿಜೆಐ ನೇಮಕಾತಿಯು ಅಧಿಕಾರವನ್ನು ಹೊಂದಲು ಯೋಗ್ಯವೆಂದು ಪರಿಗಣಿಸಲಾದ ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿರಬೇಕು ಎಂದು MoP ಹೇಳುತ್ತದೆ.

MoP ಪ್ರಕಾರ, ‘ಸೂಕ್ತ ಸಮಯದಲ್ಲಿ’ ನಿವೃತ್ತರಾಗುತ್ತಿರುವ ಸಿಜೆಐ ಶಿಫಾರಸನ್ನು ಪಡೆಯುವ ಮೂಲಕ ಒಕ್ಕೂಟ ಸರ್ಕಾರದ ಕಾನೂನು ಸಚಿವರು ಕಾರ್ಯವಿಧಾನವನ್ನು ಪ್ರಾರಂಭಿಸುತ್ತಾರೆ. ಸಿಜೆಐ ಹುದ್ದೆಯನ್ನು ಅಲಂಕರಿಸಲಿರುವ ಹಿರಿಯ ನ್ಯಾಯಾಧೀಶರ ಫಿಟ್‌ನೆಸ್ ಬಗ್ಗೆ ಹಾಲಿ ಮುಖ್ಯ ನ್ಯಾಯಮೂರ್ತಿಗೆ ಯಾವುದೇ ಅನುಮಾನಗಳಿದ್ದರೆ ಅವರು ಕೊಲಿಜಿಯಂ ಅನ್ನು ಸಂಪರ್ಕಿಸಬಹುದು.

“ನೇಮಕಾತಿ ವಿಷಯದಲ್ಲಿ ರಾಷ್ಟ್ರಪತಿಗಳಿಗೆ ಸಲಹೆ ನೀಡುವ ಶಿಫಾರಸನ್ನು ಕಾನೂನು ಸಚಿವರು ಪ್ರಧಾನಿಗೆ ಸಲ್ಲಿಸುತ್ತಾರೆ” ಎಂದು MoP ಹೇಳುತ್ತದೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯ ಶಿಫಾರಸನ್ನು ಸರ್ಕಾರ ಒಪ್ಪದಿರುವ ಪರಿಸ್ಥಿತಿಯ ಬಗ್ಗೆ MoP ಏನನ್ನೂ ಹೇಳಿಲ್ಲ!.

ಇದನ್ನೂ ಓದಿ: ದೆಹಲಿ: ಲೈಂಗಿಕ ದೌರ್ಜನ್ಯದ ಕುರಿತು ದೂರು ಹೇಳಿದ ವಿದ್ಯಾರ್ಥಿನಿಯರಿಗೆ ‘ಮರೆತುಬಿಡಿ’ ಎಂದ ಪ್ರಾಂಶುಪಾಲರು

ಕೊಲಿಜಿಯಂ ಎಂದರೇನು?

ಇದು ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಾಗಿ ಮಾಡಲಾಗಿರುವ ಒಂದು ವ್ಯವಸ್ಥೆಯಾಗಿದೆ. ಅದು ಸುಪ್ರೀಂ ಕೋರ್ಟ್‌ನ ತೀರ್ಪುಗಳ ಮೂಲಕ ರೂಪುಗೊಂಡಿದ್ದು, ಸಂಸತ್ತಿನ ಕಾಯಿದೆಯಿಂದ ಅಥವಾ ಸಂವಿಧಾನದ ವಿಧಿಗಳ ಮೂಲಕ ಅಲ್ಲ.

ಸು‌ಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ಬೇರೆ ಬೇರೆ ಕೊಲಿಜಿಯಂ ಇರುತ್ತದೆ. ಸುಪ್ರೀಂಕೋರ್ಟ್‌ ಕೊಲಿಜಿಯಂ ಸಿಜೆಐ ನೇತೃತ್ವದಲ್ಲಿ ಇರುತ್ತದೆ. ಇದು ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರನ್ನು ಒಳಗೊಂಡಿದೆ. ಹೈಕೋರ್ಟ್‌ ಕೊಲಿಜಿಯಂ ಅನ್ನು ಅಲ್ಲಿನ ಮುಖ್ಯ ನ್ಯಾಯಾಧೀಶರು ಮತ್ತು ಆ ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರು ಮುನ್ನಡೆಸುತ್ತಾರೆ.

ಸಿಜೆಐ ಮತ್ತು ಸುಪ್ರೀಂಕೋರ್ಟ್‌ ಕೊಲಿಜಿಯಂನ ಅನುಮೋದನೆಯ ನಂತರವೇ ಹೈಕೋರ್ಟ್‌ ಕೊಲಿಜಿಯಂನಿಂದ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳು ಸರ್ಕಾರವನ್ನು ತಲುಪುತ್ತವೆ. ಆದರೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರನ್ನು ಕೊಲಿಜಿಯಂ ವ್ಯವಸ್ಥೆಯ ಮೂಲಕ ಮಾತ್ರ ನೇಮಕ ಮಾಡಲಾಗುತ್ತದೆ. ಕೊಲಿಜಿಯಂ ಹೆಸರುಗಳನ್ನು ನಿರ್ಧರಿಸಿದ ನಂತರವೇ ಸರ್ಕಾರ ಅದರಲ್ಲಿ ಪಾತ್ರವಹಿಸಬಹುದಾಗಿದೆ.

ಇದನ್ನೂ ಓದಿ: ಉದಯ್‌ ಲಲಿತ್‌ ಮುಂದಿನ ಸಿಜೆಐ; ಜಸ್ಟೀಸ್‌ ಎನ್‌.ವಿ.ರಮಣ ಶಿಫಾರಸು

ಸಿಜೆಐ ನೇಮಕದಲ್ಲಿ ಸರ್ಕಾರದ ಪಾತ್ರವೇನು?

ಒಕ್ಕೂಟ ಸರ್ಕಾರದ ಕಾನೂನು ಸಚಿವರು ಪ್ರಧಾನಿಗೆ ಕಳುಹಿಸುವ ಮೊದಲು ಹಾಲಿ ಸಿಜೆಐ ಅವರಿಂದ ಶಿಫಾರಸು ಪಡೆಯುವುದನ್ನು ಹೊರತುಪಡಿಸಿ ಸಿಜೆಐ ನೇಮಕದಲ್ಲಿ ಸರ್ಕಾರದ ಯಾವುದೆ ಪಾತ್ರವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...