Homeಮುಖಪುಟಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

- Advertisement -
- Advertisement -

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಉದಯ್ ಯು. ಲಲಿತ್ ಅವರು ಆಗಸ್ಟ್ 27ರಂದು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯವಾಗಿರುವ ಎನ್‌.ವಿ. ರಮಣ ಅವರು ಮುಂದಿನ ಸಿಜೆಐ ಸ್ಥಾನಕ್ಕೆ ಬುಧವಾರದಂದು ಒಕ್ಕೂಟ ಸರ್ಕಾರದ ಕಾನೂನು ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣೆಯಲ್ಲಿ ಸಿಜೆಐ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ನ್ಯಾಯಾಲಯದ ಆಡಳಿತವನ್ನು ಮೇಲ್ವಿಚಾರಣೆ ಮಾಡುತ್ತಾರೆ, ನ್ಯಾಯಾಧೀಶರಿಗೆ ಪ್ರಕರಣಗಳನ್ನು ಹಂಚುತ್ತಾರೆ ಮತ್ತು ಭಾರತದಾದ್ಯಂತ ನ್ಯಾಯಾಧೀಶರನ್ನು ನೇಮಿಸುವ ಕೊಲಿಜಿಯಂನ ಮುಖ್ಯಸ್ಥರಾಗಿರುತ್ತಾರೆ. ಬಹಳ ಮುಖ್ಯವಾಗಿ ಮುಖ್ಯ ನ್ಯಾಯಮೂರ್ತಿ ತಮ್ಮ ಅಧಿಕಾರಾವಧಿಯಲ್ಲಿ ಒಂದು ಸಂಸ್ಥೆಯಾಗಿ ಸುಪ್ರೀಂ ಕೋರ್ಟ್‌ನ ಭವಿಷ್ಯವನ್ನು ನಿರ್ಧರಿಸುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯ ನೇಮಕ ಪ್ರಕ್ರಿಯೆ ಹೇಗೆ?

ಭಾರತದ ಸಂವಿಧಾನದ 124 ನೇ ವಿಧಿಯ ಷರತ್ತು (2) ರ ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸಿ ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯನ್ನು ನೇಮಿಸಲಾಗುತ್ತದೆ.

ಸಂವಿಧಾನದ 124 ನೇ ವಿಧಿ

ಭಾರತ ಸಂವಿಧಾನವು ಸಿಜೆಐ ನೇಮಕದ ಯಾವುದೇ ಕಾರ್ಯವಿಧಾನವನ್ನು ಉಲ್ಲೇಖಿಸಿಲ್ಲ. ಸಂವಿಧಾನದ 124 (1) ನೇ ವಿಧಿಯು, “ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡಿರುವ ಭಾರತದ ಸುಪ್ರೀಂ ಕೋರ್ಟ್ ಇರುತ್ತದೆ” ಎಂದು ಹೇಳುತ್ತದೆ.

ಸಂವಿಧಾನದ 124 ನೇ ವಿಧಿಯ ಷರತ್ತು (2) ಸರ್ವೋಚ್ಚ ನ್ಯಾಯಾಲಯದ ಪ್ರತಿಯೊಬ್ಬ ನ್ಯಾಯಾಧೀಶರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ ಎಂದು ಹೇಳುತ್ತದೆ. ಹೀಗಾಗಿ, ಸಾಂವಿಧಾನಿಕ ನಿಬಂಧನೆಯ ಅನುಪಸ್ಥಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ನೇಮಿಸುವ ವಿಧಾನವು ‘ಸಂಪ್ರದಾಯ’ದ ಮೇಲೆ ಅವಲಂಬಿತವಾಗಿದೆ.

ಇದನ್ನೂ ಓದಿ: ಅಂಚಿಗೆ ತಳ್ಳಲ್ಪಟ್ಟವರಿಗೂ ಕಾನೂನಿನ ರಕ್ಷಣೆ ಖಾತ್ರಿಪಡಿಸುವ ಅಗತ್ಯವಿದೆ: ಯುಯು ಲಲಿತ್

ಹಿರಿತನದ ಆಧಾರದಲ್ಲಿ ಸಿಜೆಐಯಿಂದ ಶಿಫಾರಸ್ಸು

ನಿರ್ಗಮಿಸುತ್ತಿರುವ ಸಿಜೆಐ ಅವರು ತಮ್ಮ ಉತ್ತರಾಧಿಕಾರಿಯನ್ನು ಶಿಫಾರಸು ಮಾಡುತ್ತಾರೆ. ಇದು ಒಂದು ಸಂಪ್ರದಾಯವಾಗಿದ್ದು, ಕಟ್ಟುನಿಟ್ಟಾಗಿ ಹಿರಿತನವನ್ನು ಆಧರಿಸಿ ನೇಮಕ ಮಾಡಲಾಗುತ್ತದೆ. ಒಕ್ಕೂಟ ಸರ್ಕಾರದ ಕಾನೂನು ಸಚಿವರು ಈ ಶಿಫಾರಸನ್ನು ಪ್ರಧಾನಿಗೆ ರವಾನಿಸುತ್ತಾರೆ, ಅವರು ರಾಷ್ಟ್ರಪತಿಗಳಿಗೆ ಸಲಹೆ ನೀಡುತ್ತಾರೆ.

ಕಾರ್ಯನಿರ್ವಹಿಸುತ್ತಿರುವ ಸಿಜೆಐ ತನ್ನ 65 ನೇ ವಯಸ್ಸಿನಲ್ಲಿ ನಿವೃತ್ತರಾದ ನಂತರ, ಸುಪ್ರೀಂ ಕೋರ್ಟ್‌ನಲ್ಲಿ ಇರುವ ಅತ್ಯಂತ ಹಿರಿಯ ನ್ಯಾಯಾಧೀಶರು ದೇಶದ ಮುಂದಿನ ಮುಖ್ಯ ನ್ಯಾಯಮೂರ್ತಿ ಆಗುತ್ತಾರೆ. ಆದರೆ ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ನೇಮಕಕ್ಕೆ ಪರಿಗಣಿಸುವ ‘ಹಿರಿತನ’ವು ವಯಸ್ಸಿನ ಮೂಲಕ ವ್ಯಾಖ್ಯಾನಿಸಲಾಗುವುದಿಲ್ಲ. ಅದರ ಬದಲಾಗಿ ನೇಮಕಗೊಳ್ಳುತ್ತಿರುವ ನ್ಯಾಯಾಧೀಶರು ಸುಪ್ರೀಂಕೋರ್ಟ್‌ನಲ್ಲಿ ಎಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿದ್ದಾರೆ ಎಂಬುದನ್ನು ಪರಿಗಣಿಸಲಾಗುತ್ತದೆ.

ಒಂದು ವೇಳೆ ಇಬ್ಬರು ನ್ಯಾಯಾಧೀಶರು ಒಂದೇ ರೀತಿಯ ಹಿರಿತನವನ್ನು ಹೊಂದಿದ್ದರೆ, ಇಬ್ಬರಲ್ಲಿ ಯಾರಿಗೆ ಹೈಕೋರ್ಟ್‌ನಲ್ಲಿ ಹೆಚ್ಚಿನ ವರ್ಷಗಳ ಅನುಭವವಿದೆ ಅಥವಾ ಮೊದಲು ಪ್ರಮಾಣ ವಚನ ಸ್ವೀಕರಿಸಿದವರು ಯಾರು ಎಂಬ ಕೆಲವು ಅಂಶಗಳನ್ನು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: 11.68 ಲಕ್ಷ ಕೋಟಿ ರೈಟ್ ಆಫ್ – 20 ಲಕ್ಷ ಕೋಟಿ NPA: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ

ಕಾರ್ಯವಿಧಾನದ ಮೆಮೊರಾಂಡಮ್ (The Memorandum of Procedure – MoP)

ಸಿಜೆಐಯನ್ನು ಅನ್ನು ನೇಮಿಸುವ ನಿಜವಾದ ಕಾರ್ಯವಿಧಾನವನ್ನು ಸರ್ಕಾರ ಮತ್ತು ನ್ಯಾಯಾಂಗದ ನಡುವಿನ ಮೆಮೊರಾಂಡಮ್ ಆಫ್ ಪ್ರೊಸೀಜರ್ (MoP) ನಲ್ಲಿ ಹೇಳಲಾಗಿದೆ. ಸಿಜೆಐ ನೇಮಕಾತಿಯು ಅಧಿಕಾರವನ್ನು ಹೊಂದಲು ಯೋಗ್ಯವೆಂದು ಪರಿಗಣಿಸಲಾದ ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿರಬೇಕು ಎಂದು MoP ಹೇಳುತ್ತದೆ.

MoP ಪ್ರಕಾರ, ‘ಸೂಕ್ತ ಸಮಯದಲ್ಲಿ’ ನಿವೃತ್ತರಾಗುತ್ತಿರುವ ಸಿಜೆಐ ಶಿಫಾರಸನ್ನು ಪಡೆಯುವ ಮೂಲಕ ಒಕ್ಕೂಟ ಸರ್ಕಾರದ ಕಾನೂನು ಸಚಿವರು ಕಾರ್ಯವಿಧಾನವನ್ನು ಪ್ರಾರಂಭಿಸುತ್ತಾರೆ. ಸಿಜೆಐ ಹುದ್ದೆಯನ್ನು ಅಲಂಕರಿಸಲಿರುವ ಹಿರಿಯ ನ್ಯಾಯಾಧೀಶರ ಫಿಟ್‌ನೆಸ್ ಬಗ್ಗೆ ಹಾಲಿ ಮುಖ್ಯ ನ್ಯಾಯಮೂರ್ತಿಗೆ ಯಾವುದೇ ಅನುಮಾನಗಳಿದ್ದರೆ ಅವರು ಕೊಲಿಜಿಯಂ ಅನ್ನು ಸಂಪರ್ಕಿಸಬಹುದು.

“ನೇಮಕಾತಿ ವಿಷಯದಲ್ಲಿ ರಾಷ್ಟ್ರಪತಿಗಳಿಗೆ ಸಲಹೆ ನೀಡುವ ಶಿಫಾರಸನ್ನು ಕಾನೂನು ಸಚಿವರು ಪ್ರಧಾನಿಗೆ ಸಲ್ಲಿಸುತ್ತಾರೆ” ಎಂದು MoP ಹೇಳುತ್ತದೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯ ಶಿಫಾರಸನ್ನು ಸರ್ಕಾರ ಒಪ್ಪದಿರುವ ಪರಿಸ್ಥಿತಿಯ ಬಗ್ಗೆ MoP ಏನನ್ನೂ ಹೇಳಿಲ್ಲ!.

ಇದನ್ನೂ ಓದಿ: ದೆಹಲಿ: ಲೈಂಗಿಕ ದೌರ್ಜನ್ಯದ ಕುರಿತು ದೂರು ಹೇಳಿದ ವಿದ್ಯಾರ್ಥಿನಿಯರಿಗೆ ‘ಮರೆತುಬಿಡಿ’ ಎಂದ ಪ್ರಾಂಶುಪಾಲರು

ಕೊಲಿಜಿಯಂ ಎಂದರೇನು?

ಇದು ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಾಗಿ ಮಾಡಲಾಗಿರುವ ಒಂದು ವ್ಯವಸ್ಥೆಯಾಗಿದೆ. ಅದು ಸುಪ್ರೀಂ ಕೋರ್ಟ್‌ನ ತೀರ್ಪುಗಳ ಮೂಲಕ ರೂಪುಗೊಂಡಿದ್ದು, ಸಂಸತ್ತಿನ ಕಾಯಿದೆಯಿಂದ ಅಥವಾ ಸಂವಿಧಾನದ ವಿಧಿಗಳ ಮೂಲಕ ಅಲ್ಲ.

ಸು‌ಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ಬೇರೆ ಬೇರೆ ಕೊಲಿಜಿಯಂ ಇರುತ್ತದೆ. ಸುಪ್ರೀಂಕೋರ್ಟ್‌ ಕೊಲಿಜಿಯಂ ಸಿಜೆಐ ನೇತೃತ್ವದಲ್ಲಿ ಇರುತ್ತದೆ. ಇದು ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರನ್ನು ಒಳಗೊಂಡಿದೆ. ಹೈಕೋರ್ಟ್‌ ಕೊಲಿಜಿಯಂ ಅನ್ನು ಅಲ್ಲಿನ ಮುಖ್ಯ ನ್ಯಾಯಾಧೀಶರು ಮತ್ತು ಆ ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರು ಮುನ್ನಡೆಸುತ್ತಾರೆ.

ಸಿಜೆಐ ಮತ್ತು ಸುಪ್ರೀಂಕೋರ್ಟ್‌ ಕೊಲಿಜಿಯಂನ ಅನುಮೋದನೆಯ ನಂತರವೇ ಹೈಕೋರ್ಟ್‌ ಕೊಲಿಜಿಯಂನಿಂದ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳು ಸರ್ಕಾರವನ್ನು ತಲುಪುತ್ತವೆ. ಆದರೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರನ್ನು ಕೊಲಿಜಿಯಂ ವ್ಯವಸ್ಥೆಯ ಮೂಲಕ ಮಾತ್ರ ನೇಮಕ ಮಾಡಲಾಗುತ್ತದೆ. ಕೊಲಿಜಿಯಂ ಹೆಸರುಗಳನ್ನು ನಿರ್ಧರಿಸಿದ ನಂತರವೇ ಸರ್ಕಾರ ಅದರಲ್ಲಿ ಪಾತ್ರವಹಿಸಬಹುದಾಗಿದೆ.

ಇದನ್ನೂ ಓದಿ: ಉದಯ್‌ ಲಲಿತ್‌ ಮುಂದಿನ ಸಿಜೆಐ; ಜಸ್ಟೀಸ್‌ ಎನ್‌.ವಿ.ರಮಣ ಶಿಫಾರಸು

ಸಿಜೆಐ ನೇಮಕದಲ್ಲಿ ಸರ್ಕಾರದ ಪಾತ್ರವೇನು?

ಒಕ್ಕೂಟ ಸರ್ಕಾರದ ಕಾನೂನು ಸಚಿವರು ಪ್ರಧಾನಿಗೆ ಕಳುಹಿಸುವ ಮೊದಲು ಹಾಲಿ ಸಿಜೆಐ ಅವರಿಂದ ಶಿಫಾರಸು ಪಡೆಯುವುದನ್ನು ಹೊರತುಪಡಿಸಿ ಸಿಜೆಐ ನೇಮಕದಲ್ಲಿ ಸರ್ಕಾರದ ಯಾವುದೆ ಪಾತ್ರವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...