Homeಮುಖಪುಟಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

- Advertisement -
- Advertisement -

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಉದಯ್ ಯು. ಲಲಿತ್ ಅವರು ಆಗಸ್ಟ್ 27ರಂದು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯವಾಗಿರುವ ಎನ್‌.ವಿ. ರಮಣ ಅವರು ಮುಂದಿನ ಸಿಜೆಐ ಸ್ಥಾನಕ್ಕೆ ಬುಧವಾರದಂದು ಒಕ್ಕೂಟ ಸರ್ಕಾರದ ಕಾನೂನು ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣೆಯಲ್ಲಿ ಸಿಜೆಐ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ನ್ಯಾಯಾಲಯದ ಆಡಳಿತವನ್ನು ಮೇಲ್ವಿಚಾರಣೆ ಮಾಡುತ್ತಾರೆ, ನ್ಯಾಯಾಧೀಶರಿಗೆ ಪ್ರಕರಣಗಳನ್ನು ಹಂಚುತ್ತಾರೆ ಮತ್ತು ಭಾರತದಾದ್ಯಂತ ನ್ಯಾಯಾಧೀಶರನ್ನು ನೇಮಿಸುವ ಕೊಲಿಜಿಯಂನ ಮುಖ್ಯಸ್ಥರಾಗಿರುತ್ತಾರೆ. ಬಹಳ ಮುಖ್ಯವಾಗಿ ಮುಖ್ಯ ನ್ಯಾಯಮೂರ್ತಿ ತಮ್ಮ ಅಧಿಕಾರಾವಧಿಯಲ್ಲಿ ಒಂದು ಸಂಸ್ಥೆಯಾಗಿ ಸುಪ್ರೀಂ ಕೋರ್ಟ್‌ನ ಭವಿಷ್ಯವನ್ನು ನಿರ್ಧರಿಸುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯ ನೇಮಕ ಪ್ರಕ್ರಿಯೆ ಹೇಗೆ?

ಭಾರತದ ಸಂವಿಧಾನದ 124 ನೇ ವಿಧಿಯ ಷರತ್ತು (2) ರ ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸಿ ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯನ್ನು ನೇಮಿಸಲಾಗುತ್ತದೆ.

ಸಂವಿಧಾನದ 124 ನೇ ವಿಧಿ

ಭಾರತ ಸಂವಿಧಾನವು ಸಿಜೆಐ ನೇಮಕದ ಯಾವುದೇ ಕಾರ್ಯವಿಧಾನವನ್ನು ಉಲ್ಲೇಖಿಸಿಲ್ಲ. ಸಂವಿಧಾನದ 124 (1) ನೇ ವಿಧಿಯು, “ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡಿರುವ ಭಾರತದ ಸುಪ್ರೀಂ ಕೋರ್ಟ್ ಇರುತ್ತದೆ” ಎಂದು ಹೇಳುತ್ತದೆ.

ಸಂವಿಧಾನದ 124 ನೇ ವಿಧಿಯ ಷರತ್ತು (2) ಸರ್ವೋಚ್ಚ ನ್ಯಾಯಾಲಯದ ಪ್ರತಿಯೊಬ್ಬ ನ್ಯಾಯಾಧೀಶರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ ಎಂದು ಹೇಳುತ್ತದೆ. ಹೀಗಾಗಿ, ಸಾಂವಿಧಾನಿಕ ನಿಬಂಧನೆಯ ಅನುಪಸ್ಥಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ನೇಮಿಸುವ ವಿಧಾನವು ‘ಸಂಪ್ರದಾಯ’ದ ಮೇಲೆ ಅವಲಂಬಿತವಾಗಿದೆ.

ಇದನ್ನೂ ಓದಿ: ಅಂಚಿಗೆ ತಳ್ಳಲ್ಪಟ್ಟವರಿಗೂ ಕಾನೂನಿನ ರಕ್ಷಣೆ ಖಾತ್ರಿಪಡಿಸುವ ಅಗತ್ಯವಿದೆ: ಯುಯು ಲಲಿತ್

ಹಿರಿತನದ ಆಧಾರದಲ್ಲಿ ಸಿಜೆಐಯಿಂದ ಶಿಫಾರಸ್ಸು

ನಿರ್ಗಮಿಸುತ್ತಿರುವ ಸಿಜೆಐ ಅವರು ತಮ್ಮ ಉತ್ತರಾಧಿಕಾರಿಯನ್ನು ಶಿಫಾರಸು ಮಾಡುತ್ತಾರೆ. ಇದು ಒಂದು ಸಂಪ್ರದಾಯವಾಗಿದ್ದು, ಕಟ್ಟುನಿಟ್ಟಾಗಿ ಹಿರಿತನವನ್ನು ಆಧರಿಸಿ ನೇಮಕ ಮಾಡಲಾಗುತ್ತದೆ. ಒಕ್ಕೂಟ ಸರ್ಕಾರದ ಕಾನೂನು ಸಚಿವರು ಈ ಶಿಫಾರಸನ್ನು ಪ್ರಧಾನಿಗೆ ರವಾನಿಸುತ್ತಾರೆ, ಅವರು ರಾಷ್ಟ್ರಪತಿಗಳಿಗೆ ಸಲಹೆ ನೀಡುತ್ತಾರೆ.

ಕಾರ್ಯನಿರ್ವಹಿಸುತ್ತಿರುವ ಸಿಜೆಐ ತನ್ನ 65 ನೇ ವಯಸ್ಸಿನಲ್ಲಿ ನಿವೃತ್ತರಾದ ನಂತರ, ಸುಪ್ರೀಂ ಕೋರ್ಟ್‌ನಲ್ಲಿ ಇರುವ ಅತ್ಯಂತ ಹಿರಿಯ ನ್ಯಾಯಾಧೀಶರು ದೇಶದ ಮುಂದಿನ ಮುಖ್ಯ ನ್ಯಾಯಮೂರ್ತಿ ಆಗುತ್ತಾರೆ. ಆದರೆ ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ನೇಮಕಕ್ಕೆ ಪರಿಗಣಿಸುವ ‘ಹಿರಿತನ’ವು ವಯಸ್ಸಿನ ಮೂಲಕ ವ್ಯಾಖ್ಯಾನಿಸಲಾಗುವುದಿಲ್ಲ. ಅದರ ಬದಲಾಗಿ ನೇಮಕಗೊಳ್ಳುತ್ತಿರುವ ನ್ಯಾಯಾಧೀಶರು ಸುಪ್ರೀಂಕೋರ್ಟ್‌ನಲ್ಲಿ ಎಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿದ್ದಾರೆ ಎಂಬುದನ್ನು ಪರಿಗಣಿಸಲಾಗುತ್ತದೆ.

ಒಂದು ವೇಳೆ ಇಬ್ಬರು ನ್ಯಾಯಾಧೀಶರು ಒಂದೇ ರೀತಿಯ ಹಿರಿತನವನ್ನು ಹೊಂದಿದ್ದರೆ, ಇಬ್ಬರಲ್ಲಿ ಯಾರಿಗೆ ಹೈಕೋರ್ಟ್‌ನಲ್ಲಿ ಹೆಚ್ಚಿನ ವರ್ಷಗಳ ಅನುಭವವಿದೆ ಅಥವಾ ಮೊದಲು ಪ್ರಮಾಣ ವಚನ ಸ್ವೀಕರಿಸಿದವರು ಯಾರು ಎಂಬ ಕೆಲವು ಅಂಶಗಳನ್ನು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: 11.68 ಲಕ್ಷ ಕೋಟಿ ರೈಟ್ ಆಫ್ – 20 ಲಕ್ಷ ಕೋಟಿ NPA: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ

ಕಾರ್ಯವಿಧಾನದ ಮೆಮೊರಾಂಡಮ್ (The Memorandum of Procedure – MoP)

ಸಿಜೆಐಯನ್ನು ಅನ್ನು ನೇಮಿಸುವ ನಿಜವಾದ ಕಾರ್ಯವಿಧಾನವನ್ನು ಸರ್ಕಾರ ಮತ್ತು ನ್ಯಾಯಾಂಗದ ನಡುವಿನ ಮೆಮೊರಾಂಡಮ್ ಆಫ್ ಪ್ರೊಸೀಜರ್ (MoP) ನಲ್ಲಿ ಹೇಳಲಾಗಿದೆ. ಸಿಜೆಐ ನೇಮಕಾತಿಯು ಅಧಿಕಾರವನ್ನು ಹೊಂದಲು ಯೋಗ್ಯವೆಂದು ಪರಿಗಣಿಸಲಾದ ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿರಬೇಕು ಎಂದು MoP ಹೇಳುತ್ತದೆ.

MoP ಪ್ರಕಾರ, ‘ಸೂಕ್ತ ಸಮಯದಲ್ಲಿ’ ನಿವೃತ್ತರಾಗುತ್ತಿರುವ ಸಿಜೆಐ ಶಿಫಾರಸನ್ನು ಪಡೆಯುವ ಮೂಲಕ ಒಕ್ಕೂಟ ಸರ್ಕಾರದ ಕಾನೂನು ಸಚಿವರು ಕಾರ್ಯವಿಧಾನವನ್ನು ಪ್ರಾರಂಭಿಸುತ್ತಾರೆ. ಸಿಜೆಐ ಹುದ್ದೆಯನ್ನು ಅಲಂಕರಿಸಲಿರುವ ಹಿರಿಯ ನ್ಯಾಯಾಧೀಶರ ಫಿಟ್‌ನೆಸ್ ಬಗ್ಗೆ ಹಾಲಿ ಮುಖ್ಯ ನ್ಯಾಯಮೂರ್ತಿಗೆ ಯಾವುದೇ ಅನುಮಾನಗಳಿದ್ದರೆ ಅವರು ಕೊಲಿಜಿಯಂ ಅನ್ನು ಸಂಪರ್ಕಿಸಬಹುದು.

“ನೇಮಕಾತಿ ವಿಷಯದಲ್ಲಿ ರಾಷ್ಟ್ರಪತಿಗಳಿಗೆ ಸಲಹೆ ನೀಡುವ ಶಿಫಾರಸನ್ನು ಕಾನೂನು ಸಚಿವರು ಪ್ರಧಾನಿಗೆ ಸಲ್ಲಿಸುತ್ತಾರೆ” ಎಂದು MoP ಹೇಳುತ್ತದೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯ ಶಿಫಾರಸನ್ನು ಸರ್ಕಾರ ಒಪ್ಪದಿರುವ ಪರಿಸ್ಥಿತಿಯ ಬಗ್ಗೆ MoP ಏನನ್ನೂ ಹೇಳಿಲ್ಲ!.

ಇದನ್ನೂ ಓದಿ: ದೆಹಲಿ: ಲೈಂಗಿಕ ದೌರ್ಜನ್ಯದ ಕುರಿತು ದೂರು ಹೇಳಿದ ವಿದ್ಯಾರ್ಥಿನಿಯರಿಗೆ ‘ಮರೆತುಬಿಡಿ’ ಎಂದ ಪ್ರಾಂಶುಪಾಲರು

ಕೊಲಿಜಿಯಂ ಎಂದರೇನು?

ಇದು ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಾಗಿ ಮಾಡಲಾಗಿರುವ ಒಂದು ವ್ಯವಸ್ಥೆಯಾಗಿದೆ. ಅದು ಸುಪ್ರೀಂ ಕೋರ್ಟ್‌ನ ತೀರ್ಪುಗಳ ಮೂಲಕ ರೂಪುಗೊಂಡಿದ್ದು, ಸಂಸತ್ತಿನ ಕಾಯಿದೆಯಿಂದ ಅಥವಾ ಸಂವಿಧಾನದ ವಿಧಿಗಳ ಮೂಲಕ ಅಲ್ಲ.

ಸು‌ಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ಬೇರೆ ಬೇರೆ ಕೊಲಿಜಿಯಂ ಇರುತ್ತದೆ. ಸುಪ್ರೀಂಕೋರ್ಟ್‌ ಕೊಲಿಜಿಯಂ ಸಿಜೆಐ ನೇತೃತ್ವದಲ್ಲಿ ಇರುತ್ತದೆ. ಇದು ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರನ್ನು ಒಳಗೊಂಡಿದೆ. ಹೈಕೋರ್ಟ್‌ ಕೊಲಿಜಿಯಂ ಅನ್ನು ಅಲ್ಲಿನ ಮುಖ್ಯ ನ್ಯಾಯಾಧೀಶರು ಮತ್ತು ಆ ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರು ಮುನ್ನಡೆಸುತ್ತಾರೆ.

ಸಿಜೆಐ ಮತ್ತು ಸುಪ್ರೀಂಕೋರ್ಟ್‌ ಕೊಲಿಜಿಯಂನ ಅನುಮೋದನೆಯ ನಂತರವೇ ಹೈಕೋರ್ಟ್‌ ಕೊಲಿಜಿಯಂನಿಂದ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳು ಸರ್ಕಾರವನ್ನು ತಲುಪುತ್ತವೆ. ಆದರೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರನ್ನು ಕೊಲಿಜಿಯಂ ವ್ಯವಸ್ಥೆಯ ಮೂಲಕ ಮಾತ್ರ ನೇಮಕ ಮಾಡಲಾಗುತ್ತದೆ. ಕೊಲಿಜಿಯಂ ಹೆಸರುಗಳನ್ನು ನಿರ್ಧರಿಸಿದ ನಂತರವೇ ಸರ್ಕಾರ ಅದರಲ್ಲಿ ಪಾತ್ರವಹಿಸಬಹುದಾಗಿದೆ.

ಇದನ್ನೂ ಓದಿ: ಉದಯ್‌ ಲಲಿತ್‌ ಮುಂದಿನ ಸಿಜೆಐ; ಜಸ್ಟೀಸ್‌ ಎನ್‌.ವಿ.ರಮಣ ಶಿಫಾರಸು

ಸಿಜೆಐ ನೇಮಕದಲ್ಲಿ ಸರ್ಕಾರದ ಪಾತ್ರವೇನು?

ಒಕ್ಕೂಟ ಸರ್ಕಾರದ ಕಾನೂನು ಸಚಿವರು ಪ್ರಧಾನಿಗೆ ಕಳುಹಿಸುವ ಮೊದಲು ಹಾಲಿ ಸಿಜೆಐ ಅವರಿಂದ ಶಿಫಾರಸು ಪಡೆಯುವುದನ್ನು ಹೊರತುಪಡಿಸಿ ಸಿಜೆಐ ನೇಮಕದಲ್ಲಿ ಸರ್ಕಾರದ ಯಾವುದೆ ಪಾತ್ರವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...