Homeಮುಖಪುಟಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

- Advertisement -
- Advertisement -

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಉದಯ್ ಯು. ಲಲಿತ್ ಅವರು ಆಗಸ್ಟ್ 27ರಂದು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯವಾಗಿರುವ ಎನ್‌.ವಿ. ರಮಣ ಅವರು ಮುಂದಿನ ಸಿಜೆಐ ಸ್ಥಾನಕ್ಕೆ ಬುಧವಾರದಂದು ಒಕ್ಕೂಟ ಸರ್ಕಾರದ ಕಾನೂನು ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣೆಯಲ್ಲಿ ಸಿಜೆಐ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ನ್ಯಾಯಾಲಯದ ಆಡಳಿತವನ್ನು ಮೇಲ್ವಿಚಾರಣೆ ಮಾಡುತ್ತಾರೆ, ನ್ಯಾಯಾಧೀಶರಿಗೆ ಪ್ರಕರಣಗಳನ್ನು ಹಂಚುತ್ತಾರೆ ಮತ್ತು ಭಾರತದಾದ್ಯಂತ ನ್ಯಾಯಾಧೀಶರನ್ನು ನೇಮಿಸುವ ಕೊಲಿಜಿಯಂನ ಮುಖ್ಯಸ್ಥರಾಗಿರುತ್ತಾರೆ. ಬಹಳ ಮುಖ್ಯವಾಗಿ ಮುಖ್ಯ ನ್ಯಾಯಮೂರ್ತಿ ತಮ್ಮ ಅಧಿಕಾರಾವಧಿಯಲ್ಲಿ ಒಂದು ಸಂಸ್ಥೆಯಾಗಿ ಸುಪ್ರೀಂ ಕೋರ್ಟ್‌ನ ಭವಿಷ್ಯವನ್ನು ನಿರ್ಧರಿಸುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯ ನೇಮಕ ಪ್ರಕ್ರಿಯೆ ಹೇಗೆ?

ಭಾರತದ ಸಂವಿಧಾನದ 124 ನೇ ವಿಧಿಯ ಷರತ್ತು (2) ರ ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸಿ ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯನ್ನು ನೇಮಿಸಲಾಗುತ್ತದೆ.

ಸಂವಿಧಾನದ 124 ನೇ ವಿಧಿ

ಭಾರತ ಸಂವಿಧಾನವು ಸಿಜೆಐ ನೇಮಕದ ಯಾವುದೇ ಕಾರ್ಯವಿಧಾನವನ್ನು ಉಲ್ಲೇಖಿಸಿಲ್ಲ. ಸಂವಿಧಾನದ 124 (1) ನೇ ವಿಧಿಯು, “ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡಿರುವ ಭಾರತದ ಸುಪ್ರೀಂ ಕೋರ್ಟ್ ಇರುತ್ತದೆ” ಎಂದು ಹೇಳುತ್ತದೆ.

ಸಂವಿಧಾನದ 124 ನೇ ವಿಧಿಯ ಷರತ್ತು (2) ಸರ್ವೋಚ್ಚ ನ್ಯಾಯಾಲಯದ ಪ್ರತಿಯೊಬ್ಬ ನ್ಯಾಯಾಧೀಶರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ ಎಂದು ಹೇಳುತ್ತದೆ. ಹೀಗಾಗಿ, ಸಾಂವಿಧಾನಿಕ ನಿಬಂಧನೆಯ ಅನುಪಸ್ಥಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ನೇಮಿಸುವ ವಿಧಾನವು ‘ಸಂಪ್ರದಾಯ’ದ ಮೇಲೆ ಅವಲಂಬಿತವಾಗಿದೆ.

ಇದನ್ನೂ ಓದಿ: ಅಂಚಿಗೆ ತಳ್ಳಲ್ಪಟ್ಟವರಿಗೂ ಕಾನೂನಿನ ರಕ್ಷಣೆ ಖಾತ್ರಿಪಡಿಸುವ ಅಗತ್ಯವಿದೆ: ಯುಯು ಲಲಿತ್

ಹಿರಿತನದ ಆಧಾರದಲ್ಲಿ ಸಿಜೆಐಯಿಂದ ಶಿಫಾರಸ್ಸು

ನಿರ್ಗಮಿಸುತ್ತಿರುವ ಸಿಜೆಐ ಅವರು ತಮ್ಮ ಉತ್ತರಾಧಿಕಾರಿಯನ್ನು ಶಿಫಾರಸು ಮಾಡುತ್ತಾರೆ. ಇದು ಒಂದು ಸಂಪ್ರದಾಯವಾಗಿದ್ದು, ಕಟ್ಟುನಿಟ್ಟಾಗಿ ಹಿರಿತನವನ್ನು ಆಧರಿಸಿ ನೇಮಕ ಮಾಡಲಾಗುತ್ತದೆ. ಒಕ್ಕೂಟ ಸರ್ಕಾರದ ಕಾನೂನು ಸಚಿವರು ಈ ಶಿಫಾರಸನ್ನು ಪ್ರಧಾನಿಗೆ ರವಾನಿಸುತ್ತಾರೆ, ಅವರು ರಾಷ್ಟ್ರಪತಿಗಳಿಗೆ ಸಲಹೆ ನೀಡುತ್ತಾರೆ.

ಕಾರ್ಯನಿರ್ವಹಿಸುತ್ತಿರುವ ಸಿಜೆಐ ತನ್ನ 65 ನೇ ವಯಸ್ಸಿನಲ್ಲಿ ನಿವೃತ್ತರಾದ ನಂತರ, ಸುಪ್ರೀಂ ಕೋರ್ಟ್‌ನಲ್ಲಿ ಇರುವ ಅತ್ಯಂತ ಹಿರಿಯ ನ್ಯಾಯಾಧೀಶರು ದೇಶದ ಮುಂದಿನ ಮುಖ್ಯ ನ್ಯಾಯಮೂರ್ತಿ ಆಗುತ್ತಾರೆ. ಆದರೆ ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ನೇಮಕಕ್ಕೆ ಪರಿಗಣಿಸುವ ‘ಹಿರಿತನ’ವು ವಯಸ್ಸಿನ ಮೂಲಕ ವ್ಯಾಖ್ಯಾನಿಸಲಾಗುವುದಿಲ್ಲ. ಅದರ ಬದಲಾಗಿ ನೇಮಕಗೊಳ್ಳುತ್ತಿರುವ ನ್ಯಾಯಾಧೀಶರು ಸುಪ್ರೀಂಕೋರ್ಟ್‌ನಲ್ಲಿ ಎಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿದ್ದಾರೆ ಎಂಬುದನ್ನು ಪರಿಗಣಿಸಲಾಗುತ್ತದೆ.

ಒಂದು ವೇಳೆ ಇಬ್ಬರು ನ್ಯಾಯಾಧೀಶರು ಒಂದೇ ರೀತಿಯ ಹಿರಿತನವನ್ನು ಹೊಂದಿದ್ದರೆ, ಇಬ್ಬರಲ್ಲಿ ಯಾರಿಗೆ ಹೈಕೋರ್ಟ್‌ನಲ್ಲಿ ಹೆಚ್ಚಿನ ವರ್ಷಗಳ ಅನುಭವವಿದೆ ಅಥವಾ ಮೊದಲು ಪ್ರಮಾಣ ವಚನ ಸ್ವೀಕರಿಸಿದವರು ಯಾರು ಎಂಬ ಕೆಲವು ಅಂಶಗಳನ್ನು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: 11.68 ಲಕ್ಷ ಕೋಟಿ ರೈಟ್ ಆಫ್ – 20 ಲಕ್ಷ ಕೋಟಿ NPA: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ

ಕಾರ್ಯವಿಧಾನದ ಮೆಮೊರಾಂಡಮ್ (The Memorandum of Procedure – MoP)

ಸಿಜೆಐಯನ್ನು ಅನ್ನು ನೇಮಿಸುವ ನಿಜವಾದ ಕಾರ್ಯವಿಧಾನವನ್ನು ಸರ್ಕಾರ ಮತ್ತು ನ್ಯಾಯಾಂಗದ ನಡುವಿನ ಮೆಮೊರಾಂಡಮ್ ಆಫ್ ಪ್ರೊಸೀಜರ್ (MoP) ನಲ್ಲಿ ಹೇಳಲಾಗಿದೆ. ಸಿಜೆಐ ನೇಮಕಾತಿಯು ಅಧಿಕಾರವನ್ನು ಹೊಂದಲು ಯೋಗ್ಯವೆಂದು ಪರಿಗಣಿಸಲಾದ ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿರಬೇಕು ಎಂದು MoP ಹೇಳುತ್ತದೆ.

MoP ಪ್ರಕಾರ, ‘ಸೂಕ್ತ ಸಮಯದಲ್ಲಿ’ ನಿವೃತ್ತರಾಗುತ್ತಿರುವ ಸಿಜೆಐ ಶಿಫಾರಸನ್ನು ಪಡೆಯುವ ಮೂಲಕ ಒಕ್ಕೂಟ ಸರ್ಕಾರದ ಕಾನೂನು ಸಚಿವರು ಕಾರ್ಯವಿಧಾನವನ್ನು ಪ್ರಾರಂಭಿಸುತ್ತಾರೆ. ಸಿಜೆಐ ಹುದ್ದೆಯನ್ನು ಅಲಂಕರಿಸಲಿರುವ ಹಿರಿಯ ನ್ಯಾಯಾಧೀಶರ ಫಿಟ್‌ನೆಸ್ ಬಗ್ಗೆ ಹಾಲಿ ಮುಖ್ಯ ನ್ಯಾಯಮೂರ್ತಿಗೆ ಯಾವುದೇ ಅನುಮಾನಗಳಿದ್ದರೆ ಅವರು ಕೊಲಿಜಿಯಂ ಅನ್ನು ಸಂಪರ್ಕಿಸಬಹುದು.

“ನೇಮಕಾತಿ ವಿಷಯದಲ್ಲಿ ರಾಷ್ಟ್ರಪತಿಗಳಿಗೆ ಸಲಹೆ ನೀಡುವ ಶಿಫಾರಸನ್ನು ಕಾನೂನು ಸಚಿವರು ಪ್ರಧಾನಿಗೆ ಸಲ್ಲಿಸುತ್ತಾರೆ” ಎಂದು MoP ಹೇಳುತ್ತದೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯ ಶಿಫಾರಸನ್ನು ಸರ್ಕಾರ ಒಪ್ಪದಿರುವ ಪರಿಸ್ಥಿತಿಯ ಬಗ್ಗೆ MoP ಏನನ್ನೂ ಹೇಳಿಲ್ಲ!.

ಇದನ್ನೂ ಓದಿ: ದೆಹಲಿ: ಲೈಂಗಿಕ ದೌರ್ಜನ್ಯದ ಕುರಿತು ದೂರು ಹೇಳಿದ ವಿದ್ಯಾರ್ಥಿನಿಯರಿಗೆ ‘ಮರೆತುಬಿಡಿ’ ಎಂದ ಪ್ರಾಂಶುಪಾಲರು

ಕೊಲಿಜಿಯಂ ಎಂದರೇನು?

ಇದು ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಾಗಿ ಮಾಡಲಾಗಿರುವ ಒಂದು ವ್ಯವಸ್ಥೆಯಾಗಿದೆ. ಅದು ಸುಪ್ರೀಂ ಕೋರ್ಟ್‌ನ ತೀರ್ಪುಗಳ ಮೂಲಕ ರೂಪುಗೊಂಡಿದ್ದು, ಸಂಸತ್ತಿನ ಕಾಯಿದೆಯಿಂದ ಅಥವಾ ಸಂವಿಧಾನದ ವಿಧಿಗಳ ಮೂಲಕ ಅಲ್ಲ.

ಸು‌ಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ಬೇರೆ ಬೇರೆ ಕೊಲಿಜಿಯಂ ಇರುತ್ತದೆ. ಸುಪ್ರೀಂಕೋರ್ಟ್‌ ಕೊಲಿಜಿಯಂ ಸಿಜೆಐ ನೇತೃತ್ವದಲ್ಲಿ ಇರುತ್ತದೆ. ಇದು ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರನ್ನು ಒಳಗೊಂಡಿದೆ. ಹೈಕೋರ್ಟ್‌ ಕೊಲಿಜಿಯಂ ಅನ್ನು ಅಲ್ಲಿನ ಮುಖ್ಯ ನ್ಯಾಯಾಧೀಶರು ಮತ್ತು ಆ ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರು ಮುನ್ನಡೆಸುತ್ತಾರೆ.

ಸಿಜೆಐ ಮತ್ತು ಸುಪ್ರೀಂಕೋರ್ಟ್‌ ಕೊಲಿಜಿಯಂನ ಅನುಮೋದನೆಯ ನಂತರವೇ ಹೈಕೋರ್ಟ್‌ ಕೊಲಿಜಿಯಂನಿಂದ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳು ಸರ್ಕಾರವನ್ನು ತಲುಪುತ್ತವೆ. ಆದರೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರನ್ನು ಕೊಲಿಜಿಯಂ ವ್ಯವಸ್ಥೆಯ ಮೂಲಕ ಮಾತ್ರ ನೇಮಕ ಮಾಡಲಾಗುತ್ತದೆ. ಕೊಲಿಜಿಯಂ ಹೆಸರುಗಳನ್ನು ನಿರ್ಧರಿಸಿದ ನಂತರವೇ ಸರ್ಕಾರ ಅದರಲ್ಲಿ ಪಾತ್ರವಹಿಸಬಹುದಾಗಿದೆ.

ಇದನ್ನೂ ಓದಿ: ಉದಯ್‌ ಲಲಿತ್‌ ಮುಂದಿನ ಸಿಜೆಐ; ಜಸ್ಟೀಸ್‌ ಎನ್‌.ವಿ.ರಮಣ ಶಿಫಾರಸು

ಸಿಜೆಐ ನೇಮಕದಲ್ಲಿ ಸರ್ಕಾರದ ಪಾತ್ರವೇನು?

ಒಕ್ಕೂಟ ಸರ್ಕಾರದ ಕಾನೂನು ಸಚಿವರು ಪ್ರಧಾನಿಗೆ ಕಳುಹಿಸುವ ಮೊದಲು ಹಾಲಿ ಸಿಜೆಐ ಅವರಿಂದ ಶಿಫಾರಸು ಪಡೆಯುವುದನ್ನು ಹೊರತುಪಡಿಸಿ ಸಿಜೆಐ ನೇಮಕದಲ್ಲಿ ಸರ್ಕಾರದ ಯಾವುದೆ ಪಾತ್ರವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...