Homeಮುಖಪುಟಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

- Advertisement -
- Advertisement -

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಉದಯ್ ಯು. ಲಲಿತ್ ಅವರು ಆಗಸ್ಟ್ 27ರಂದು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯವಾಗಿರುವ ಎನ್‌.ವಿ. ರಮಣ ಅವರು ಮುಂದಿನ ಸಿಜೆಐ ಸ್ಥಾನಕ್ಕೆ ಬುಧವಾರದಂದು ಒಕ್ಕೂಟ ಸರ್ಕಾರದ ಕಾನೂನು ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣೆಯಲ್ಲಿ ಸಿಜೆಐ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ನ್ಯಾಯಾಲಯದ ಆಡಳಿತವನ್ನು ಮೇಲ್ವಿಚಾರಣೆ ಮಾಡುತ್ತಾರೆ, ನ್ಯಾಯಾಧೀಶರಿಗೆ ಪ್ರಕರಣಗಳನ್ನು ಹಂಚುತ್ತಾರೆ ಮತ್ತು ಭಾರತದಾದ್ಯಂತ ನ್ಯಾಯಾಧೀಶರನ್ನು ನೇಮಿಸುವ ಕೊಲಿಜಿಯಂನ ಮುಖ್ಯಸ್ಥರಾಗಿರುತ್ತಾರೆ. ಬಹಳ ಮುಖ್ಯವಾಗಿ ಮುಖ್ಯ ನ್ಯಾಯಮೂರ್ತಿ ತಮ್ಮ ಅಧಿಕಾರಾವಧಿಯಲ್ಲಿ ಒಂದು ಸಂಸ್ಥೆಯಾಗಿ ಸುಪ್ರೀಂ ಕೋರ್ಟ್‌ನ ಭವಿಷ್ಯವನ್ನು ನಿರ್ಧರಿಸುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯ ನೇಮಕ ಪ್ರಕ್ರಿಯೆ ಹೇಗೆ?

ಭಾರತದ ಸಂವಿಧಾನದ 124 ನೇ ವಿಧಿಯ ಷರತ್ತು (2) ರ ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸಿ ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯನ್ನು ನೇಮಿಸಲಾಗುತ್ತದೆ.

ಸಂವಿಧಾನದ 124 ನೇ ವಿಧಿ

ಭಾರತ ಸಂವಿಧಾನವು ಸಿಜೆಐ ನೇಮಕದ ಯಾವುದೇ ಕಾರ್ಯವಿಧಾನವನ್ನು ಉಲ್ಲೇಖಿಸಿಲ್ಲ. ಸಂವಿಧಾನದ 124 (1) ನೇ ವಿಧಿಯು, “ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡಿರುವ ಭಾರತದ ಸುಪ್ರೀಂ ಕೋರ್ಟ್ ಇರುತ್ತದೆ” ಎಂದು ಹೇಳುತ್ತದೆ.

ಸಂವಿಧಾನದ 124 ನೇ ವಿಧಿಯ ಷರತ್ತು (2) ಸರ್ವೋಚ್ಚ ನ್ಯಾಯಾಲಯದ ಪ್ರತಿಯೊಬ್ಬ ನ್ಯಾಯಾಧೀಶರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ ಎಂದು ಹೇಳುತ್ತದೆ. ಹೀಗಾಗಿ, ಸಾಂವಿಧಾನಿಕ ನಿಬಂಧನೆಯ ಅನುಪಸ್ಥಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ನೇಮಿಸುವ ವಿಧಾನವು ‘ಸಂಪ್ರದಾಯ’ದ ಮೇಲೆ ಅವಲಂಬಿತವಾಗಿದೆ.

ಇದನ್ನೂ ಓದಿ: ಅಂಚಿಗೆ ತಳ್ಳಲ್ಪಟ್ಟವರಿಗೂ ಕಾನೂನಿನ ರಕ್ಷಣೆ ಖಾತ್ರಿಪಡಿಸುವ ಅಗತ್ಯವಿದೆ: ಯುಯು ಲಲಿತ್

ಹಿರಿತನದ ಆಧಾರದಲ್ಲಿ ಸಿಜೆಐಯಿಂದ ಶಿಫಾರಸ್ಸು

ನಿರ್ಗಮಿಸುತ್ತಿರುವ ಸಿಜೆಐ ಅವರು ತಮ್ಮ ಉತ್ತರಾಧಿಕಾರಿಯನ್ನು ಶಿಫಾರಸು ಮಾಡುತ್ತಾರೆ. ಇದು ಒಂದು ಸಂಪ್ರದಾಯವಾಗಿದ್ದು, ಕಟ್ಟುನಿಟ್ಟಾಗಿ ಹಿರಿತನವನ್ನು ಆಧರಿಸಿ ನೇಮಕ ಮಾಡಲಾಗುತ್ತದೆ. ಒಕ್ಕೂಟ ಸರ್ಕಾರದ ಕಾನೂನು ಸಚಿವರು ಈ ಶಿಫಾರಸನ್ನು ಪ್ರಧಾನಿಗೆ ರವಾನಿಸುತ್ತಾರೆ, ಅವರು ರಾಷ್ಟ್ರಪತಿಗಳಿಗೆ ಸಲಹೆ ನೀಡುತ್ತಾರೆ.

ಕಾರ್ಯನಿರ್ವಹಿಸುತ್ತಿರುವ ಸಿಜೆಐ ತನ್ನ 65 ನೇ ವಯಸ್ಸಿನಲ್ಲಿ ನಿವೃತ್ತರಾದ ನಂತರ, ಸುಪ್ರೀಂ ಕೋರ್ಟ್‌ನಲ್ಲಿ ಇರುವ ಅತ್ಯಂತ ಹಿರಿಯ ನ್ಯಾಯಾಧೀಶರು ದೇಶದ ಮುಂದಿನ ಮುಖ್ಯ ನ್ಯಾಯಮೂರ್ತಿ ಆಗುತ್ತಾರೆ. ಆದರೆ ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ನೇಮಕಕ್ಕೆ ಪರಿಗಣಿಸುವ ‘ಹಿರಿತನ’ವು ವಯಸ್ಸಿನ ಮೂಲಕ ವ್ಯಾಖ್ಯಾನಿಸಲಾಗುವುದಿಲ್ಲ. ಅದರ ಬದಲಾಗಿ ನೇಮಕಗೊಳ್ಳುತ್ತಿರುವ ನ್ಯಾಯಾಧೀಶರು ಸುಪ್ರೀಂಕೋರ್ಟ್‌ನಲ್ಲಿ ಎಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿದ್ದಾರೆ ಎಂಬುದನ್ನು ಪರಿಗಣಿಸಲಾಗುತ್ತದೆ.

ಒಂದು ವೇಳೆ ಇಬ್ಬರು ನ್ಯಾಯಾಧೀಶರು ಒಂದೇ ರೀತಿಯ ಹಿರಿತನವನ್ನು ಹೊಂದಿದ್ದರೆ, ಇಬ್ಬರಲ್ಲಿ ಯಾರಿಗೆ ಹೈಕೋರ್ಟ್‌ನಲ್ಲಿ ಹೆಚ್ಚಿನ ವರ್ಷಗಳ ಅನುಭವವಿದೆ ಅಥವಾ ಮೊದಲು ಪ್ರಮಾಣ ವಚನ ಸ್ವೀಕರಿಸಿದವರು ಯಾರು ಎಂಬ ಕೆಲವು ಅಂಶಗಳನ್ನು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: 11.68 ಲಕ್ಷ ಕೋಟಿ ರೈಟ್ ಆಫ್ – 20 ಲಕ್ಷ ಕೋಟಿ NPA: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ

ಕಾರ್ಯವಿಧಾನದ ಮೆಮೊರಾಂಡಮ್ (The Memorandum of Procedure – MoP)

ಸಿಜೆಐಯನ್ನು ಅನ್ನು ನೇಮಿಸುವ ನಿಜವಾದ ಕಾರ್ಯವಿಧಾನವನ್ನು ಸರ್ಕಾರ ಮತ್ತು ನ್ಯಾಯಾಂಗದ ನಡುವಿನ ಮೆಮೊರಾಂಡಮ್ ಆಫ್ ಪ್ರೊಸೀಜರ್ (MoP) ನಲ್ಲಿ ಹೇಳಲಾಗಿದೆ. ಸಿಜೆಐ ನೇಮಕಾತಿಯು ಅಧಿಕಾರವನ್ನು ಹೊಂದಲು ಯೋಗ್ಯವೆಂದು ಪರಿಗಣಿಸಲಾದ ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿರಬೇಕು ಎಂದು MoP ಹೇಳುತ್ತದೆ.

MoP ಪ್ರಕಾರ, ‘ಸೂಕ್ತ ಸಮಯದಲ್ಲಿ’ ನಿವೃತ್ತರಾಗುತ್ತಿರುವ ಸಿಜೆಐ ಶಿಫಾರಸನ್ನು ಪಡೆಯುವ ಮೂಲಕ ಒಕ್ಕೂಟ ಸರ್ಕಾರದ ಕಾನೂನು ಸಚಿವರು ಕಾರ್ಯವಿಧಾನವನ್ನು ಪ್ರಾರಂಭಿಸುತ್ತಾರೆ. ಸಿಜೆಐ ಹುದ್ದೆಯನ್ನು ಅಲಂಕರಿಸಲಿರುವ ಹಿರಿಯ ನ್ಯಾಯಾಧೀಶರ ಫಿಟ್‌ನೆಸ್ ಬಗ್ಗೆ ಹಾಲಿ ಮುಖ್ಯ ನ್ಯಾಯಮೂರ್ತಿಗೆ ಯಾವುದೇ ಅನುಮಾನಗಳಿದ್ದರೆ ಅವರು ಕೊಲಿಜಿಯಂ ಅನ್ನು ಸಂಪರ್ಕಿಸಬಹುದು.

“ನೇಮಕಾತಿ ವಿಷಯದಲ್ಲಿ ರಾಷ್ಟ್ರಪತಿಗಳಿಗೆ ಸಲಹೆ ನೀಡುವ ಶಿಫಾರಸನ್ನು ಕಾನೂನು ಸಚಿವರು ಪ್ರಧಾನಿಗೆ ಸಲ್ಲಿಸುತ್ತಾರೆ” ಎಂದು MoP ಹೇಳುತ್ತದೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯ ಶಿಫಾರಸನ್ನು ಸರ್ಕಾರ ಒಪ್ಪದಿರುವ ಪರಿಸ್ಥಿತಿಯ ಬಗ್ಗೆ MoP ಏನನ್ನೂ ಹೇಳಿಲ್ಲ!.

ಇದನ್ನೂ ಓದಿ: ದೆಹಲಿ: ಲೈಂಗಿಕ ದೌರ್ಜನ್ಯದ ಕುರಿತು ದೂರು ಹೇಳಿದ ವಿದ್ಯಾರ್ಥಿನಿಯರಿಗೆ ‘ಮರೆತುಬಿಡಿ’ ಎಂದ ಪ್ರಾಂಶುಪಾಲರು

ಕೊಲಿಜಿಯಂ ಎಂದರೇನು?

ಇದು ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಾಗಿ ಮಾಡಲಾಗಿರುವ ಒಂದು ವ್ಯವಸ್ಥೆಯಾಗಿದೆ. ಅದು ಸುಪ್ರೀಂ ಕೋರ್ಟ್‌ನ ತೀರ್ಪುಗಳ ಮೂಲಕ ರೂಪುಗೊಂಡಿದ್ದು, ಸಂಸತ್ತಿನ ಕಾಯಿದೆಯಿಂದ ಅಥವಾ ಸಂವಿಧಾನದ ವಿಧಿಗಳ ಮೂಲಕ ಅಲ್ಲ.

ಸು‌ಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ಬೇರೆ ಬೇರೆ ಕೊಲಿಜಿಯಂ ಇರುತ್ತದೆ. ಸುಪ್ರೀಂಕೋರ್ಟ್‌ ಕೊಲಿಜಿಯಂ ಸಿಜೆಐ ನೇತೃತ್ವದಲ್ಲಿ ಇರುತ್ತದೆ. ಇದು ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರನ್ನು ಒಳಗೊಂಡಿದೆ. ಹೈಕೋರ್ಟ್‌ ಕೊಲಿಜಿಯಂ ಅನ್ನು ಅಲ್ಲಿನ ಮುಖ್ಯ ನ್ಯಾಯಾಧೀಶರು ಮತ್ತು ಆ ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರು ಮುನ್ನಡೆಸುತ್ತಾರೆ.

ಸಿಜೆಐ ಮತ್ತು ಸುಪ್ರೀಂಕೋರ್ಟ್‌ ಕೊಲಿಜಿಯಂನ ಅನುಮೋದನೆಯ ನಂತರವೇ ಹೈಕೋರ್ಟ್‌ ಕೊಲಿಜಿಯಂನಿಂದ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳು ಸರ್ಕಾರವನ್ನು ತಲುಪುತ್ತವೆ. ಆದರೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರನ್ನು ಕೊಲಿಜಿಯಂ ವ್ಯವಸ್ಥೆಯ ಮೂಲಕ ಮಾತ್ರ ನೇಮಕ ಮಾಡಲಾಗುತ್ತದೆ. ಕೊಲಿಜಿಯಂ ಹೆಸರುಗಳನ್ನು ನಿರ್ಧರಿಸಿದ ನಂತರವೇ ಸರ್ಕಾರ ಅದರಲ್ಲಿ ಪಾತ್ರವಹಿಸಬಹುದಾಗಿದೆ.

ಇದನ್ನೂ ಓದಿ: ಉದಯ್‌ ಲಲಿತ್‌ ಮುಂದಿನ ಸಿಜೆಐ; ಜಸ್ಟೀಸ್‌ ಎನ್‌.ವಿ.ರಮಣ ಶಿಫಾರಸು

ಸಿಜೆಐ ನೇಮಕದಲ್ಲಿ ಸರ್ಕಾರದ ಪಾತ್ರವೇನು?

ಒಕ್ಕೂಟ ಸರ್ಕಾರದ ಕಾನೂನು ಸಚಿವರು ಪ್ರಧಾನಿಗೆ ಕಳುಹಿಸುವ ಮೊದಲು ಹಾಲಿ ಸಿಜೆಐ ಅವರಿಂದ ಶಿಫಾರಸು ಪಡೆಯುವುದನ್ನು ಹೊರತುಪಡಿಸಿ ಸಿಜೆಐ ನೇಮಕದಲ್ಲಿ ಸರ್ಕಾರದ ಯಾವುದೆ ಪಾತ್ರವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...