Homeಅಂತರಾಷ್ಟ್ರೀಯಕ್ಯೂಬಾದ ವೈದ್ಯರು ಜಗತ್ತಿನ ಅತ್ಯುತ್ತಮ ವೈದ್ಯರಾಗಿದ್ದು ಹೇಗೆ?

ಕ್ಯೂಬಾದ ವೈದ್ಯರು ಜಗತ್ತಿನ ಅತ್ಯುತ್ತಮ ವೈದ್ಯರಾಗಿದ್ದು ಹೇಗೆ?

ಕ್ಯೂಬಾದ ಪ್ರಕಾರ ವೈದ್ಯ ವೃತ್ತಿಯೆಂದರೆ ವ್ಯಾಪಾರವಲ್ಲ, ಮನುಕುಲದ ರಕ್ಷಣೆಗಾಗಿ ಇರುವ ಒಂದು ಮಾನವೀಯ ಸೇವೆ...

- Advertisement -
- Advertisement -

ಕ್ಯೂಬಾದ ಮಾಜಿ ಅಧ್ಯಕ್ಷ ಕಾಮ್ರೇಡ್ ಫಿಡೆಲ್ ಕ್ಯಾಸ್ಟ್ರೋ ಅವರ ಒಂದು ಭಾಷಣದ ಕೆಲ ತುಣುಕುಗಳು ನನ್ನ‌ ಮನಸಲ್ಲಿ ಅಚ್ಚಳಿಯದೇ ಉಳಿದಿದೆ.

“ಅವರು ನ್ಯೂಕ್ಲಿಯರ್ ಬಾಂಬ್‌ಗಳನ್ನು ತಯಾರಿಸಿಯೂ ಮನುಕುಲದ ರಕ್ಷಣೆಯ ಹೊಣೆ ಹೊತ್ತವರು ಎಂದು ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಾರೆ. ನಮಗೆ ಯಾರ ಪ್ರಶಂಸೆಯೂ ಬೇಕಾಗಿಲ್ಲ. ನಾವು ಅವರ ಬಾಂಬಿಗೆ ಎದುರಾಗಿ ಮನುಕುಲದ ಉಳಿವಿಗಾಗಿ ಮನುಕುಲವನ್ನು ಕಾಡುವ ಭಯಾನಕ ಖಾಯಿಲೆಗಳಿಗೆ ಕಡಿಮೆ ಖರ್ಚಿನ ಔಷಧಿಗಳ ಸಂಶೋಧನೆಯಲ್ಲಿ ತೊಡಗಿದ್ದೇವೆ. ನಾವು ಮನುಕುಲದ ಸೇವೆಗಾಗಿ‌ ಶ್ರೇಷ್ಠ ಗುಣಮಟ್ಟದ ವೈದ್ಯರನ್ನು ಸೃಷ್ಟಿ ಮಾಡುತ್ತಿದ್ದೇವೆ.. ನಮ್ಮ ಈ ಕೆಲಸಗಳನ್ನು ಇನ್ನಷ್ಟು ಹೆಚ್ಚಾಗಿ ಮಾಡಬೇಕಿದೆ…”

ಎಂತಹಾ ಅದ್ಭುತ ಮಾತುಗಳು ಅಲ್ವಾ…?

ಇಂದು ಜಗತ್ತಿನಲ್ಲಿ ಹೆಲ್ತ್‌ಕೇರ್ ಸೂಚ್ಯಂಕದಲ್ಲಿ ಎರಡನೇ ಸ್ಥಾನದಲ್ಲಿರುವ ಇಟಲಿ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಸೋತಾಗ ಅವರ ರಕ್ಷಣೆಗೆ ಸ್ವಯಂ ಪ್ರೇರಿತವಾಗಿ ಬಂದಿದ್ದು ಇದೇ ಕ್ಯೂಬಾ..

ಕ್ಯೂಬಾದ ವೈದ್ಯಕೀಯ ನೆರವಿನ ಅಗತ್ಯವಿಲ್ಲವೆಂದು‌‌ ದಾರ್ಷ್ಟ್ಯ ಮೆರೆದಿದ್ದ ಬ್ರೆಝಿಲ್ ಇಂದು ಮತ್ತೆ ನಾಚಿಕೆಗೆಟ್ಟು ಇದೇ ಕ್ಯೂಬಾದ ನೆರವು ಯಾಚಿಸಬೇಕಾಗಿ ಬಂತು.‌ ತನ್ನನ್ನು ಅವಮಾನಿಸಿದ್ದರೂ‌ ಕ್ಯೂಬಾ ಬ್ರೆಝಿಲ್‌ಗೆ ವೈದ್ಯಕೀಯ ನೆರವು ನಿರಾಕರಿಸಲಿಲ್ಲ. ಯಾಕೆಂದರೆ ಕ್ಯೂಬಾದ ಪ್ರಕಾರ ವೈದ್ಯ ವೃತ್ತಿಯೆಂದರೆ ವ್ಯಾಪಾರವಲ್ಲ, ಮನುಕುಲದ ರಕ್ಷಣೆಗಾಗಿ ಇರುವ ಒಂದು ಮಾನವೀಯ ಸೇವೆ.

ಫಿಡೆಲ್‌ ಕ್ಯಾಸ್ಟ್ರೊ

ಗುಣಮಟ್ಟದ ವೈದ್ಯಕೀಯ ಸೇವೆಯ ಮೂಲಕ ತನ್ನ ರಾಷ್ಟ್ರದ ಆರ್ಥಿಕತೆಯನ್ನು ಅಭಿವೃದ್ಧಿಪಡಿಸುತ್ತಿರುವ ಕ್ಯೂಬಾದ ಸಾಧನೆ ಮನುಕುಲವನ್ನು ವಿನಾಶದಂಚಿಗೆ ತಳ್ಳುವ ಶಸ್ತ್ರಾಸ್ತ್ರಗಳ ಮಾರಾಟದ ಮೂಲಕ ತನ್ನ ಆರ್ಥಿಕತೆಯನ್ನು ಬೆಳೆಸುತ್ತಿರುವ ಅಮೆರಿಕಾದ ಕಣ್ಣು ಕೆಂಪಾಗಿಸಿದೆ. ಅದಕ್ಕಾಗಿ ಅಮೆರಿಕಾ ಅಲ್ಲೂ ತನ್ನ ಕುತಂತ್ರ ಬಿಡದೇ ಜಗತ್ತಿನ ದೇಶಗಳು ಕ್ಯೂಬಾದ ವೈದ್ಯಕೀಯ ನೆರವನ್ನು ತಿರಸ್ಕರಿಸಬೇಕೆಂದು ಹೇಳಿ ಜಗತ್ತಿನ ಮುಂದೆ ಕುಬ್ಜವಾಗಿದೆ.


ಇದನ್ನೂ ಓದಿ: ಕೊರೊನಾ : ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ


ಕ್ಯೂಬಾದ ಎಂಬ ಪುಟ್ಟ ರಾಷ್ಟ್ರದ ಮಾನವೀಯ ಮುಖಕ್ಕೆ ಒಂದು ಚಿಕ್ಕ ಉದಾಹರಣೆ ಕೊಡುತ್ತೇನೆ.
ಕ್ಯೂಬಾ ವಿಮೋಚನೆಯ ಮಹಾ ಕ್ರಾಂತಿಕಾರಿ ಅರ್ಜೆಂಟೀನಾ ಸಂಜಾತ ಕಾಮ್ರೇಡ್ ಅರ್ನೆಸ್ಟೋ ಚೆಗುವಾರ. ಕ್ಯೂಬಾಕ್ಕೆ ಕ್ಯೂಬಾವೇ ಸಂಗಾತಿ ಚೆ ಗುವಾರನನ್ನು ಹೃದಯದಲ್ಲಿಟ್ಟು ಆರಾಧಿಸುತ್ತದೆ. ಅಂತಹ ಚೆ ಗುವಾರನನ್ನು 1967 ರ ಅಕ್ಟೋಬರ್ ಒಂಬತ್ತರಂದು ಗುಂಡಿಕ್ಕಿ ಕೊಂದ ಬೊಲಿವಿಯನ್ ಆರ್ಮಿಯ ಸೈನಿಕ ಮಾರಿಯೋ ಟೆರಾನ್‌ಗೆ ಆತನ ವೃದ್ದಾಪ್ಯದಲ್ಲಿ ಕಣ್ಣಿನ ಶಸ್ತ್ರಕ್ರಿಯೆಯ ಅಗತ್ಯ ಬೀಳುತ್ತದೆ. ಮಾರಿಯೋ ‌ಟೆರಾನ್ ‌ತನ್ನ ದೇಶದ ಜನರ ಹೃದಯದಲ್ಲಿ ಸದಾ ಅಮರನಾಗಿರುವ ಕ್ರಾಂತಿಕಾರಿ, ತನ್ನ ಜೀವದ ಗೆಳೆಯ ಚೆಗುವಾರನನ್ನು ಕೊಂದ ಸೈನಿಕನೆಂದು ಗೊತ್ತಿದ್ದರೂ ಕಾಮ್ರೇಡ್ ಫಿಡೆಲ್ ಆತನಿಗೆ ತನ್ನ ನೆಲದಲ್ಲಿ ಚಿಕಿತ್ಸೆ ನಿರಾಕರಿಸುವುದಿಲ್ಲ. ಇನ್ನೂ‌ ಆಸಕ್ತಿದಾಯಕ ವಿಚಾರವೇನೆಂದರೆ ಮಾರಿಯೋ ಟೆರಾನ್‌‌ನ ಕಣ್ಣಿನ ಶಸ್ತ್ರಕ್ರಿಯೆ ನಡೆದದ್ದು ಕಾಮ್ರೇಡ್ ಚೆ ಗುವಾರನ ಹೆಸರಿನಲ್ಲಿರುವ ಆಸ್ಪತ್ರೆಯಲ್ಲಾಗಿತ್ತು.

ಚೆಗುವಾರ

ಈ ಬಗ್ಗೆ ಫಿಡೆಲ್ ಹೀಗೆನ್ನುತ್ತಾರೆ “ಆತ ಅಂದು ನಮ್ಮ ಶತ್ರು ಸೈನ್ಯದ ಸೈನಿಕನಾಗಿ ತನ್ನ ಕರ್ತವ್ಯ ನಿರ್ವಹಿಸಿದ್ದಾನಷ್ಟೆ. ಇಂದು ಆತ ಚಿಕಿತ್ಸೆ ಬಯಸಿ ನಮ್ಮ ದೇಶಕ್ಕೆ ಬಂದಿದ್ದಾನೆ. ನಾವು ನಮ್ಮ ಹುತಾತ್ಮ ಸಂಗಾತಿಯನ್ನು ಕೊಂದ ಸೈನಿಕನಿಗೆ ಅದೇ ಸಂಗಾತಿಯ ಹೆಸರಲ್ಲಿ ಸ್ಥಾಪಿಸಲಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದೇವೆ. ನಮ್ಮ ಪ್ರಕಾರ ಯುದ್ಧಗಳು ಯುದ್ಧಭೂಮಿಗಷ್ಟೇ ಸೀಮಿತ. ಆಸ್ಪತ್ರೆಗಳು ಯುದ್ಧಭೂಮಿಯಲ್ಲ, ಚಿಕಿತ್ಸಾ ಕೇಂದ್ರಗಳು.. ಇಲ್ಲಿ ಏನು ಮಾಡಬೇಕೋ ಅದನ್ನೇ ನಾವು ಮಾಡಿದ್ದೇವೆ…”

ಇಂತಹ ಕ್ಯೂಬಾ ಇಂದು ತನ್ನ ನುರಿತ ವೈದ್ಯರ ಪಡೆಯನ್ನು‌ ಆರೋಗ್ಯ ಸೂಚ್ಯಂಕದಲ್ಲಿ ಎರಡನೇ ಸ್ಥಾನದಲ್ಲಿರುವ ದೇಶಕ್ಕೆ ಕಳುಹಿಸಿಕೊಡಲು ಸಾಧ್ಯವಾಗಿದ್ದು ಯಾಕೆಂದರೆ ‌ಅವರು ಕ್ಯೂಬಾದ ವೈದ್ಯರು. ಕ್ಯೂಬಾದ ವೈದ್ಯರೆಂದರೆ ಜಗತ್ತಿನ ಅತ್ಯಂತ ಸಮರ್ಥ ವೈದ್ಯರು ಮತ್ತು ಅತ್ಯಂತ ಸಮರ್ಪಣಾ ಮನೋಭಾವದ ವೈದ್ಯರು.

ಕ್ಯೂಬಾದ ವೈದ್ಯರು ಅಂತಹ ಹೆಗ್ಗಳಿಕೆಗೆ ಪಾತ್ರವಾಗಲು ಯಾಕೆ ಸಾಧ್ಯವಾಗುತ್ತದೆಂದು ಹುಡುಕುತ್ತಾ ಹೋದರೆ‌ ಅದಕ್ಕೆ ಅಲ್ಲಿನ ಶಿಕ್ಷಣ ವ್ಯವಸ್ಥೆಯೇ ಉತ್ತರ ಕೊಡುತ್ತದೆ.

ಕ್ಯೂಬಾದಲ್ಲಿ ವೈದ್ಯಕೀಯ ಪದವಿ ಪಡೆಯಲು ನಮ್ಮ ದೇಶದಲ್ಲೋ, ಇತರ ದೇಶಗಳಲ್ಲೋ ಇರುವಂತೆ ನೋಟುಗಳ ಮೂಟೆಗಳು ಬೇಕಾಗಿಲ್ಲ. ಅಲ್ಲಿ ವೈದ್ಯಕೀಯ ಶಿಕ್ಷಣದ ಸೀಟು ಸಿಗಲು ವೈದ್ಯಕೀಯ ಶಿಕ್ಷಣ ಇಲಾಖೆಯ ಸೂಚಿತ ಅರ್ಹತೆಯೊಂದಿದ್ದರೆ ಸಾಕು. ನಮ್ಮಲ್ಲಿ ಜನರಲ್ ಡಿಗ್ರಿಗಳಾದ ಬಿ.ಎ, ಬಿ.ಕಾಂ, ಬಿ.ಎಸ್ಸಿ ಪಡೆದಷ್ಟೇ ಸುಲಭವಾಗಿ ಸೂಚಿತ ಅರ್ಹತೆ ಇದ್ದ ಯಾರು ಬೇಕಾದರೂ ವೈದ್ಯಕೀಯ ಶಿಕ್ಷಣ ಪಡೆಯಬಹುದು. ಕ್ಯಾಪಿಟೇಶನ್ ಎಂಬ ಪದವೇ ಕ್ಯೂಬಾದಲ್ಲಿ ಅಪರಿಚಿತ. ಅಲ್ಲಿ ಸರಕಾರವೇ ವಿದ್ಯಾರ್ಥಿಯ ಕಲಿಕೆಯ ಸಂಪೂರ್ಣ‌ ಖರ್ಚು ವೆಚ್ಚಗಳನ್ನು ಭರಿಸುತ್ತದೆ. ಆದುದರಿಂದ ಸರಕಾರದ ಆದೇಶವನ್ನು ಅಲ್ಲಿನ ಯಾವ ವೈದ್ಯನೂ ಮೀರಲು ಸಾಧ್ಯವಾಗುವುದಿಲ್ಲ.

ನಮ್ಮ ದೇಶದಲ್ಲಿ ಇಂದು ಹದಿನೇಳು ಸಾವಿರ ಜನಸಂಖ್ಯೆಗೆ ಒಬ್ಬ ವೈದ್ಯನಿದ್ದಾನೆ. (ಅವರಲ್ಲಿ ಎಷ್ಟು ಮಂದಿ ಅರ್ಹತೆಯುಳ್ಳವರು ಎಂಬುವುದು ಎರಡನೇ ವಿಚಾರ) ಅವರಲ್ಲಿ ಬಹುತೇಕರು ಊಟಕ್ಕಿಲ್ಲದ ಉಪ್ಪಿನಕಾಯಿ.
ಇಂತಹ ವೈದ್ಯರುಗಳಲ್ಲಿ ಹೆಚ್ಚಿನ ಯಾರ ಮೇಲೂ ಸರಕಾರ ತನ್ನ ನಿಯಮಾವಳಿಗಳನ್ನು ಹೇರಲು ಸಾಧ್ಯವಾಗುವುದಿಲ್ಲ. ಯಾಕೆಂದರೆ ಅವರೆಲ್ಲಾ ಕೋಟಿ ಕೋಟಿ ಸುರಿದೇ ವೈದ್ಯಕೀಯ ಪದವಿ ಪಡೆದಿರುತ್ತಾರೆ. ಅವರು ಅದಕ್ಕಾಗಿ ಕೋಟಿಗಳ ಲೆಕ್ಕದಲ್ಲಿ ಸಾಲ ಮಾಡಿರುತ್ತಾರೆ. ಅವರೆಲ್ಲಾ ನಗರದ ಐಷಾರಾಮಿ ಬದುಕನ್ನೇ ಬಯಸುತ್ತಾರೆ. ಅವರು ದೊಡ್ಡ ದೊಡ್ಡ ನಗರಗಳಲ್ಲಿ ನೋಟಿನ ಕಂತೆಗಳ ಹೊರತಾಗಿ ವೃತ್ತಿ ನಿರ್ವಹಿಸುವುದು‌ ಸಾಧ್ಯವಿಲ್ಲ. ಅವರು ಶಿಕ್ಷಣಕ್ಕಾಗಿ ಹಾಕಿದ ಬಂಡವಾಳ ವಾಪಾಸು ಪಡೆಯಬೇಕೆಂದರೆ ಗ್ರಾಮೀಣ ಪ್ರದೇಶಗಳಲ್ಲಿ, ತೀರಾ ಮೂಲಭೂತ ಸೌಕರ್ಯಗಳಿಲ್ಲದ ಆದಿವಾಸಿ ಬೆಲ್ಟ್‌ಗಳಲ್ಲಿ ಸೇವೆ ಮಾಡಲು ಸಾಧ್ಯವಾಗದು. ಸರಕಾರ ಅವರ ಮೇಲೆ ಅಂಕುಶ ಹೇರುವ ಯಾವ ಹಕ್ಕನ್ನೂ ಉಳಿಸಿಕೊಂಡಿರುವುದಿಲ್ಲ. ಇಂತಹ ವೈದ್ಯರು ದುಡ್ಡಿನ ಮುಖವನ್ನು ನೋಡಲೇಬೇಕಾಗುತ್ತದೆ.‌ಅದು ಅವರ ತಪ್ಪಲ್ಲ. ಅದು ಪ್ರಭುತ್ವದ ತಪ್ಪು. ಇಂತಹವರಿಂದ ನಾವು ಸಮರ್ಪಣಾ ಮನೋಭಾವದ ಸೇವೆ ಹೇಗೆ ನಿರೀಕ್ಷಿಸಲು ಸಾಧ್ಯ..?

ಸರಕಾರ ಒಬ್ಬ ಎಂ.ಬಿ.ಬಿ.ಎಸ್ ಪದವೀಧರನಿಗೆ ಒಂದು ಲಕ್ಷ ರೂಪಾಯಿ ಸಂಬಳ ಕೊಟ್ಟರೂ ಆತ ತನ್ನೆಲ್ಲಾ ಖರ್ಚು ವೆಚ್ಚಗಳನ್ನು ಕಳೆದು ತನ್ನ ಶಿಕ್ಷಣಕ್ಕಾಗಿ ಪಡೆದ ಸಾಲ ತೀರಿಸಬೇಕಾದರೆ ಇಪ್ಪತ್ತೈದು ವರ್ಷಗಳ ಕಾಲ ದುಡಿಯಬೇಕು. ಅಲ್ಲಿಗೆ ಅವನ ವೃತ್ತಿಯ ಮುಕ್ಕಾಲು ಭಾಗ ಮುಗಿದು ಬಿಡುತ್ತದೆ. ಹೀಗಿರುವುದರಿಂದ ಇಂತಹ ವೈದ್ಯರಿಂದ ಗುಣಮಟ್ಟದ ಚಿಕಿತ್ಸೆ ನಿರೀಕ್ಷಿಸಬೇಕಾದರೆ ರೋಗಿ ಅದೇ ಗುಣಮಟ್ಟದ ದುಡ್ಡಿನ ಕಂತೆ ಬಿಚ್ಚಬೇಕಾಗುತ್ತದೆ.

ನಮ್ಮ ಸರಕಾರಕ್ಕೆ ವೈದ್ಯರ‌ ಅಗತ್ಯ ಈ ಕೇಡುಗಾಲದಲ್ಲಿ ಅರ್ಥವಾಗುತ್ತದಷ್ಟೆ. ಕೋಟಿ ಸುರಿದು ವಿದ್ಯೆ ಪಡೆದವ ಯಾವ ಕಾರಣಕ್ಕೂ ತನ್ನ ಜೀವ ಪಣಕ್ಕಿಟ್ಟು ಕೆಲಸ ಮಾಡಲು ಬಿಲ್‌ಕುಲ್ ಬರಲಾರ.

ಕ್ಯೂಬಾ ಗುಣಮಟ್ಟದ ವೈದ್ಯರನ್ನು ಸೃಷ್ಟಿಸುವ ಮೂಲಕ ಕ್ಯೂಬನ್ ಕ್ರಾಂತಿಯ ಮಹಾನಾಯಕನೂ, ಸ್ವತಃ ಚರ್ಮರೋಗ ಶಾಸ್ತ್ರ ಪರಿಣತಿ ಪಡೆದಿದ್ದ ಸಂಗಾತಿ ಚೆ ಗುವಾರನ ಹೆಸರನ್ನು ನಿಜಾರ್ಥದಲ್ಲಿ‌ ಅಚ್ಚಳಿಯದಂತೆ ಉಳಿಸುತ್ತಿದೆ. ಆತ ಅಂದು ಯಾವ ಮನುಕುಲದ ನೋವಿಗೆ ಮಿಡಿದು ವೈದ್ಯ ವೃತ್ತಿ ತೊರೆದು ಕ್ರಾಂತಿಯ ಹಾದಿ ಹಿಡಿದನೋ, ಆತನ ಮೂಲ ವೃತ್ತಿಯ ಮೂಲಕ ಕ್ಯೂಬಾ ಇಂದು ಮನುಕುಲದ ಸೇವೆಯನ್ನು ಜಗತ್ತಿನ ಅನೇಕ ರಾಷ್ಟ್ರಗಳಲ್ಲಿ ಮಾಡುತ್ತಿದೆ.

ಆದರೆ ವೈದ್ಯಕೀಯ ಶಿಕ್ಷಣವನ್ನು ಬೃಹತ್ ಉದ್ಯಮವಾಗಿ ಪರಿವರ್ತಿಸಿದ ಭಾರತೀಯರಾದ ನಮಗೆ ಕ್ಯೂಬಾದಿಂದ ಇಟಲಿಗೆ ಕೊರೋನಾ ವಿರುದ್ಧ ಹೋರಾಡಲು ಹೊರಟ ವೈದ್ಯಕೀಯ ಸೈನಿಕರ ಫೋಟೋಗಳನ್ನು ಫ್ಯಾಬ್ರಿಕೇಟ್ ಮಾಡಿ ಭಾರತದ… ಅದೂ ಆರೆಸ್ಸೆಸ್ಸಿನ ವೈದ್ಯರೆಂದು ಸುಳ್ಳು ಹೇಳಿ ನಮ್ಮ ಬೆನ್ನು ನಾವೇ ತಟ್ಟಲು ಮಾತ್ರ ಸಾಧ್ಯವಾಗುತ್ತಿದೆ.

*******

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...