Homeಮುಖಪುಟಈ ಜನಪ್ರಿಯ ಕೂಸುಮರಿಯ ಫೋಟೋ ಸೆರೆಯಾದದ್ದು ಹೇಗೆ!?| ಚಿ. ಉದಯಶಂಕರ್ ನೆನಪು

ಈ ಜನಪ್ರಿಯ ಕೂಸುಮರಿಯ ಫೋಟೋ ಸೆರೆಯಾದದ್ದು ಹೇಗೆ!?| ಚಿ. ಉದಯಶಂಕರ್ ನೆನಪು

ನಾನು ನೋಡಿದಂತೆ ರಾಜ್ ಮತ್ತು ಉದಯಶಂಕರ್ ಅಪರೂಪದ ಸ್ನೇಹಿತರು. ಇಬ್ಬರಿಗೂ ಪರಸ್ಪರರಲ್ಲಿ ಅಪಾರ ಪ್ರೀತಿ, ಗೌರವ. ಒಂದು ಹಂತದ ಸಲಿಗೆಯೂ ಇತ್ತು. ಉದಯಶಂಕರ್ ಚಿತ್ರಕಥೆ, ಸಂಭಾಷಣೆಯಲ್ಲಿಯೇ ಅಲ್ಲವೇ ರಾಜ್ ಜನರನ್ನು ಸೆಳೆದದ್ದು?

- Advertisement -
- Advertisement -

ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಚಿತ್ರಸಾಹಿತಿಗಳಲ್ಲೊಬ್ಬರಾದ ಚಿ. ಉದಯಶಂಕರ್ ಅಗಲಿದ ದಿನವಿದು. ವರನಟ ಡಾ. ರಾಜಕುಮಾರ್ ಮತ್ತು ಚಿ. ಉದಯಶಂಕರ್ ಅತ್ಯಂತ ಆಪ್ತರು. ಇಲ್ಲಿರುವ ಇವರಿಬ್ಬರ ‘ಕೂಸುಮರಿ’ ಫೋಟೋ ಬಹು ಜನಪ್ರಿಯ. ಈ ಫೋಟೋ ಸೆರೆಹಿಡಿದ ಸಂದರ್ಭವನ್ನು ಹಿರಿಯ ಛಾಯಾಗ್ರಾಹಕ ಭವಾನಿ ಲಕ್ಷ್ಮೀನಾರಾಯಣ ಸ್ಮರಿಸಿಕೊಂಡಿದ್ದಾರೆ.


ಬರಹ: ಭವಾನಿ ಲಕ್ಷ್ಮೀನಾರಾಯಣ
ನಿರೂಪಣೆ: ಶಶಿಧರ ಚಿತ್ರದುರ್ಗ

ಸಿನಿಮಾ ಛಾಯಾಗ್ರಾಹಕ ವೃತ್ತಿಯಿಂದಾಗಿ ಜೀವನದಲ್ಲಿ ಹತ್ತಾರು ಮೇರು ಪ್ರತಿಭೆಗಳನ್ನು ಮುಖಾಮುಖಿಯಾಗಲು ನನಗೆ ಸಾಧ್ಯವಾಯ್ತು. ಅಂಥವರಲ್ಲೊಬ್ಬರು ಚಿತ್ರಸಾಹಿತಿ ಚಿ. ಉದಯಶಂಕರ್. ನಾನು ಕಂಡ ಅಪ್ಪಟ ಪ್ರತಿಭೆಗಳಲ್ಲಿ ಅವರೂ ಒಬ್ಬರು. ಸಾಮಾನ್ಯವಾಗಿ ಡಾ. ರಾಜಕುಮಾರ್ ಸಿನಿಮಾಗಳ ಶೂಟಿಂಗ್ ಇದ್ದೆಡೆ ಚಿ. ಉದಯಶಂಕರ್ ಉಪಸ್ಥಿತಿ ಇರುತ್ತಿತ್ತು. ಹಾಗಾಗಿ ಶೂಟಿಂಗ್, ಸ್ಟುಡಿಯೋಗಳಿಗೆ ಭೇಟಿ ನೀಡುತ್ತಿದ್ದ ನನ್ನನ್ನು ಅವರು ವಿಶ್ವಾಸದಿಂದ ಮಾತನಾಡುತ್ತಿದ್ದರು. ಸದಾ ತಮಾಷೆ ಮಾಡುತ್ತಾ ಎಲ್ಲರೊಂದಿಗೆ ಬಹುಬೇಗ ಬೆರೆಯುವ ವ್ಯಕ್ತಿತ್ವ ಅವರದು.

ನಾನು ನೋಡಿದಂತೆ ರಾಜ್ ಮತ್ತು ಉದಯಶಂಕರ್ ಅಪರೂಪದ ಸ್ನೇಹಿತರು. ಇಬ್ಬರಿಗೂ ಪರಸ್ಪರರಲ್ಲಿ ಅಪಾರ ಪ್ರೀತಿ, ಗೌರವ. ಒಂದು ಹಂತದ ಸಲಿಗೆಯೂ ಇತ್ತು. ಉದಯಶಂಕರ್ ಚಿತ್ರಕಥೆ, ಸಂಭಾಷಣೆಯಲ್ಲಿಯೇ ಅಲ್ಲವೇ ರಾಜ್ ಜನರನ್ನು ಸೆಳೆದದ್ದು? ರಾಜ್‍ರನ್ನು ಹತ್ತಿರದಿಂದ ಒಡನಾಡಿದ್ದರಿಂದ ಅವರ ಇಮೇಜ್‍ಗೆ ಸರಿಹೊಂದುವಂತೆ ಬರೆಯಲು ಉದಯಶಂಕರ್ ಅವರಿಗೆ ಸಾಧ್ಯವಾಗಿರಬಹುದು. ರಾಜ್ ಸಿನಿಮಾಗಳ ಚಿತ್ರೀಕರಣಗಳಿಗೆ ಹೋದ ಬಹಳಷ್ಟು ಸಂದರ್ಭಗಳಲ್ಲಿ ಚಿ. ಉದಯಶಂಕರ್ ಅವರನ್ನು ಭೇಟಿಯಾಗಿದ್ದೇನೆ. ಸಾಕಷ್ಟು ಬಾರಿ ಅವರು ನನ್ನ ಕ್ಯಾಮರಾಗೆ ರೂಪದರ್ಶಿಯಾಗಿದ್ದಾರೆ.ನಂದಿಬೆಟ್ಟದಲ್ಲೊಮ್ಮೆ ರಾಜ್ ಮತ್ತು ಉದಯಶಂಕರ್ ಜೋಡಿಯ ಚಿತ್ರ ತೆಗೆದದ್ದು ನನಗೆ ಬಹುವಾಗಿ ಕಾಡುತ್ತದೆ. ರಾಜ್‍ರ ಚಿತ್ರವೊಂದಕ್ಕೆ ನಂದಿಬೆಟ್ಟದ ಟಿಪ್ಪು ಡ್ರಾಪ್‍ನಲ್ಲಿ ಶೂಟಿಂಗ್ ನಡೆಯುತ್ತಿತ್ತು. ಉದಯಶಂಕರ್ ಕೂಡ ಸೆಟ್‍ನಲ್ಲಿದ್ದರು. ನಾನಲ್ಲಿಗೆ ಹೋದಾಗ ಇಬ್ಬರೂ ಸನ್ನಿವೇಶವೊಂದರ ಬಗ್ಗೆ ಚರ್ಚಿಸುತ್ತಿದ್ದರೆಂದು ಕಾಣುತ್ತದೆ. ಅವರ ಗಂಭೀರ ಮಾತುಕತೆ ಮುಗಿಯುತ್ತಿದ್ದಂತೆ ನಾನಲ್ಲಿಗೆ ಹೋದೆ. ಅಪರೂಪದ ಪೋಸ್ ಬೇಕೆಂದಾಗ, ಉತ್ಸಾಹಿ ರಾಜ್ ಕ್ಷಣಕಾಲ ಯೋಚಿಸಿದರು.

‘ಉದಯಶಂಕರ್‍ರನ್ನು ಕೂಸು ಮರಿ ಮಾಡಿದರೆ ಹೇಗೆ?’ ಎಂದು ಕೇಳಿದ ರಾಜ್, ಅದಕ್ಕೆ ಸಜ್ಜಾದರು. ಉದಯಶಂಕರ್ ನಗುತ್ತಲೇ ರಾಜ್ ಬೆನ್ನೇರಿದರು. ಸ್ಥೂಲಕಾಯದ ಅವರನ್ನು ಹೊರುತ್ತಲೇ ರಾಜ್ ಒಂದೆಡೆ ಕೊಂಚ ವಾಲಿದರು. ಆಕಸ್ಮಾತ್ ಇಬ್ಬರೂ ಬಿದ್ದರೇನು ಗತಿ ಎಂದು ನನಗೆ ಗಾಬರಿಯಾಯ್ತು. ಯಾಕಾದರೂ ಭಿನ್ನ ಪೋಸ್ ಕೊಡಿ ಎಂದು ಕೇಳಿದೆನೋ ಎಂದು ಪರಿತಪಿಸಿದೆ. ಹಾಗೇನೂ ಆಗಲಿಲ್ಲ. ರಾಜ್ ತಮ್ಮ ಸ್ನೇಹಿತನನ್ನು ಕೂಸು ಮರಿ ಮಾಡುವ ಅಪರೂಪದ ಪೋಸ್ ನನ್ನ ಕ್ಯಾಮರಾಗೆ ದಕ್ಕಿತು. ಮುಂದೆ ಈ ಫೋಟೋ ನೋಡಿ ಅವರಿಬ್ಬರೂ ತುಂಬಾ ಖುಷಿಪಟ್ಟಿದ್ದರು.


ಓದಿ: ನಿರಾಶ್ರಿತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಈ ಐದು ಚಲನಚಿತ್ರಗಳು


ನಮ್ಮ ಯೂಟ್ಯೂನ್ ಚಾನೆಲ್ ನ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...