Homeಮುಖಪುಟಈ ಜನಪ್ರಿಯ ಕೂಸುಮರಿಯ ಫೋಟೋ ಸೆರೆಯಾದದ್ದು ಹೇಗೆ!?| ಚಿ. ಉದಯಶಂಕರ್ ನೆನಪು

ಈ ಜನಪ್ರಿಯ ಕೂಸುಮರಿಯ ಫೋಟೋ ಸೆರೆಯಾದದ್ದು ಹೇಗೆ!?| ಚಿ. ಉದಯಶಂಕರ್ ನೆನಪು

ನಾನು ನೋಡಿದಂತೆ ರಾಜ್ ಮತ್ತು ಉದಯಶಂಕರ್ ಅಪರೂಪದ ಸ್ನೇಹಿತರು. ಇಬ್ಬರಿಗೂ ಪರಸ್ಪರರಲ್ಲಿ ಅಪಾರ ಪ್ರೀತಿ, ಗೌರವ. ಒಂದು ಹಂತದ ಸಲಿಗೆಯೂ ಇತ್ತು. ಉದಯಶಂಕರ್ ಚಿತ್ರಕಥೆ, ಸಂಭಾಷಣೆಯಲ್ಲಿಯೇ ಅಲ್ಲವೇ ರಾಜ್ ಜನರನ್ನು ಸೆಳೆದದ್ದು?

- Advertisement -
- Advertisement -

ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಚಿತ್ರಸಾಹಿತಿಗಳಲ್ಲೊಬ್ಬರಾದ ಚಿ. ಉದಯಶಂಕರ್ ಅಗಲಿದ ದಿನವಿದು. ವರನಟ ಡಾ. ರಾಜಕುಮಾರ್ ಮತ್ತು ಚಿ. ಉದಯಶಂಕರ್ ಅತ್ಯಂತ ಆಪ್ತರು. ಇಲ್ಲಿರುವ ಇವರಿಬ್ಬರ ‘ಕೂಸುಮರಿ’ ಫೋಟೋ ಬಹು ಜನಪ್ರಿಯ. ಈ ಫೋಟೋ ಸೆರೆಹಿಡಿದ ಸಂದರ್ಭವನ್ನು ಹಿರಿಯ ಛಾಯಾಗ್ರಾಹಕ ಭವಾನಿ ಲಕ್ಷ್ಮೀನಾರಾಯಣ ಸ್ಮರಿಸಿಕೊಂಡಿದ್ದಾರೆ.


ಬರಹ: ಭವಾನಿ ಲಕ್ಷ್ಮೀನಾರಾಯಣ
ನಿರೂಪಣೆ: ಶಶಿಧರ ಚಿತ್ರದುರ್ಗ

ಸಿನಿಮಾ ಛಾಯಾಗ್ರಾಹಕ ವೃತ್ತಿಯಿಂದಾಗಿ ಜೀವನದಲ್ಲಿ ಹತ್ತಾರು ಮೇರು ಪ್ರತಿಭೆಗಳನ್ನು ಮುಖಾಮುಖಿಯಾಗಲು ನನಗೆ ಸಾಧ್ಯವಾಯ್ತು. ಅಂಥವರಲ್ಲೊಬ್ಬರು ಚಿತ್ರಸಾಹಿತಿ ಚಿ. ಉದಯಶಂಕರ್. ನಾನು ಕಂಡ ಅಪ್ಪಟ ಪ್ರತಿಭೆಗಳಲ್ಲಿ ಅವರೂ ಒಬ್ಬರು. ಸಾಮಾನ್ಯವಾಗಿ ಡಾ. ರಾಜಕುಮಾರ್ ಸಿನಿಮಾಗಳ ಶೂಟಿಂಗ್ ಇದ್ದೆಡೆ ಚಿ. ಉದಯಶಂಕರ್ ಉಪಸ್ಥಿತಿ ಇರುತ್ತಿತ್ತು. ಹಾಗಾಗಿ ಶೂಟಿಂಗ್, ಸ್ಟುಡಿಯೋಗಳಿಗೆ ಭೇಟಿ ನೀಡುತ್ತಿದ್ದ ನನ್ನನ್ನು ಅವರು ವಿಶ್ವಾಸದಿಂದ ಮಾತನಾಡುತ್ತಿದ್ದರು. ಸದಾ ತಮಾಷೆ ಮಾಡುತ್ತಾ ಎಲ್ಲರೊಂದಿಗೆ ಬಹುಬೇಗ ಬೆರೆಯುವ ವ್ಯಕ್ತಿತ್ವ ಅವರದು.

ನಾನು ನೋಡಿದಂತೆ ರಾಜ್ ಮತ್ತು ಉದಯಶಂಕರ್ ಅಪರೂಪದ ಸ್ನೇಹಿತರು. ಇಬ್ಬರಿಗೂ ಪರಸ್ಪರರಲ್ಲಿ ಅಪಾರ ಪ್ರೀತಿ, ಗೌರವ. ಒಂದು ಹಂತದ ಸಲಿಗೆಯೂ ಇತ್ತು. ಉದಯಶಂಕರ್ ಚಿತ್ರಕಥೆ, ಸಂಭಾಷಣೆಯಲ್ಲಿಯೇ ಅಲ್ಲವೇ ರಾಜ್ ಜನರನ್ನು ಸೆಳೆದದ್ದು? ರಾಜ್‍ರನ್ನು ಹತ್ತಿರದಿಂದ ಒಡನಾಡಿದ್ದರಿಂದ ಅವರ ಇಮೇಜ್‍ಗೆ ಸರಿಹೊಂದುವಂತೆ ಬರೆಯಲು ಉದಯಶಂಕರ್ ಅವರಿಗೆ ಸಾಧ್ಯವಾಗಿರಬಹುದು. ರಾಜ್ ಸಿನಿಮಾಗಳ ಚಿತ್ರೀಕರಣಗಳಿಗೆ ಹೋದ ಬಹಳಷ್ಟು ಸಂದರ್ಭಗಳಲ್ಲಿ ಚಿ. ಉದಯಶಂಕರ್ ಅವರನ್ನು ಭೇಟಿಯಾಗಿದ್ದೇನೆ. ಸಾಕಷ್ಟು ಬಾರಿ ಅವರು ನನ್ನ ಕ್ಯಾಮರಾಗೆ ರೂಪದರ್ಶಿಯಾಗಿದ್ದಾರೆ.ನಂದಿಬೆಟ್ಟದಲ್ಲೊಮ್ಮೆ ರಾಜ್ ಮತ್ತು ಉದಯಶಂಕರ್ ಜೋಡಿಯ ಚಿತ್ರ ತೆಗೆದದ್ದು ನನಗೆ ಬಹುವಾಗಿ ಕಾಡುತ್ತದೆ. ರಾಜ್‍ರ ಚಿತ್ರವೊಂದಕ್ಕೆ ನಂದಿಬೆಟ್ಟದ ಟಿಪ್ಪು ಡ್ರಾಪ್‍ನಲ್ಲಿ ಶೂಟಿಂಗ್ ನಡೆಯುತ್ತಿತ್ತು. ಉದಯಶಂಕರ್ ಕೂಡ ಸೆಟ್‍ನಲ್ಲಿದ್ದರು. ನಾನಲ್ಲಿಗೆ ಹೋದಾಗ ಇಬ್ಬರೂ ಸನ್ನಿವೇಶವೊಂದರ ಬಗ್ಗೆ ಚರ್ಚಿಸುತ್ತಿದ್ದರೆಂದು ಕಾಣುತ್ತದೆ. ಅವರ ಗಂಭೀರ ಮಾತುಕತೆ ಮುಗಿಯುತ್ತಿದ್ದಂತೆ ನಾನಲ್ಲಿಗೆ ಹೋದೆ. ಅಪರೂಪದ ಪೋಸ್ ಬೇಕೆಂದಾಗ, ಉತ್ಸಾಹಿ ರಾಜ್ ಕ್ಷಣಕಾಲ ಯೋಚಿಸಿದರು.

‘ಉದಯಶಂಕರ್‍ರನ್ನು ಕೂಸು ಮರಿ ಮಾಡಿದರೆ ಹೇಗೆ?’ ಎಂದು ಕೇಳಿದ ರಾಜ್, ಅದಕ್ಕೆ ಸಜ್ಜಾದರು. ಉದಯಶಂಕರ್ ನಗುತ್ತಲೇ ರಾಜ್ ಬೆನ್ನೇರಿದರು. ಸ್ಥೂಲಕಾಯದ ಅವರನ್ನು ಹೊರುತ್ತಲೇ ರಾಜ್ ಒಂದೆಡೆ ಕೊಂಚ ವಾಲಿದರು. ಆಕಸ್ಮಾತ್ ಇಬ್ಬರೂ ಬಿದ್ದರೇನು ಗತಿ ಎಂದು ನನಗೆ ಗಾಬರಿಯಾಯ್ತು. ಯಾಕಾದರೂ ಭಿನ್ನ ಪೋಸ್ ಕೊಡಿ ಎಂದು ಕೇಳಿದೆನೋ ಎಂದು ಪರಿತಪಿಸಿದೆ. ಹಾಗೇನೂ ಆಗಲಿಲ್ಲ. ರಾಜ್ ತಮ್ಮ ಸ್ನೇಹಿತನನ್ನು ಕೂಸು ಮರಿ ಮಾಡುವ ಅಪರೂಪದ ಪೋಸ್ ನನ್ನ ಕ್ಯಾಮರಾಗೆ ದಕ್ಕಿತು. ಮುಂದೆ ಈ ಫೋಟೋ ನೋಡಿ ಅವರಿಬ್ಬರೂ ತುಂಬಾ ಖುಷಿಪಟ್ಟಿದ್ದರು.


ಓದಿ: ನಿರಾಶ್ರಿತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಈ ಐದು ಚಲನಚಿತ್ರಗಳು


ನಮ್ಮ ಯೂಟ್ಯೂನ್ ಚಾನೆಲ್ ನ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...