Homeಮುಖಪುಟಈ ಜನಪ್ರಿಯ ಕೂಸುಮರಿಯ ಫೋಟೋ ಸೆರೆಯಾದದ್ದು ಹೇಗೆ!?| ಚಿ. ಉದಯಶಂಕರ್ ನೆನಪು

ಈ ಜನಪ್ರಿಯ ಕೂಸುಮರಿಯ ಫೋಟೋ ಸೆರೆಯಾದದ್ದು ಹೇಗೆ!?| ಚಿ. ಉದಯಶಂಕರ್ ನೆನಪು

ನಾನು ನೋಡಿದಂತೆ ರಾಜ್ ಮತ್ತು ಉದಯಶಂಕರ್ ಅಪರೂಪದ ಸ್ನೇಹಿತರು. ಇಬ್ಬರಿಗೂ ಪರಸ್ಪರರಲ್ಲಿ ಅಪಾರ ಪ್ರೀತಿ, ಗೌರವ. ಒಂದು ಹಂತದ ಸಲಿಗೆಯೂ ಇತ್ತು. ಉದಯಶಂಕರ್ ಚಿತ್ರಕಥೆ, ಸಂಭಾಷಣೆಯಲ್ಲಿಯೇ ಅಲ್ಲವೇ ರಾಜ್ ಜನರನ್ನು ಸೆಳೆದದ್ದು?

- Advertisement -
- Advertisement -

ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಚಿತ್ರಸಾಹಿತಿಗಳಲ್ಲೊಬ್ಬರಾದ ಚಿ. ಉದಯಶಂಕರ್ ಅಗಲಿದ ದಿನವಿದು. ವರನಟ ಡಾ. ರಾಜಕುಮಾರ್ ಮತ್ತು ಚಿ. ಉದಯಶಂಕರ್ ಅತ್ಯಂತ ಆಪ್ತರು. ಇಲ್ಲಿರುವ ಇವರಿಬ್ಬರ ‘ಕೂಸುಮರಿ’ ಫೋಟೋ ಬಹು ಜನಪ್ರಿಯ. ಈ ಫೋಟೋ ಸೆರೆಹಿಡಿದ ಸಂದರ್ಭವನ್ನು ಹಿರಿಯ ಛಾಯಾಗ್ರಾಹಕ ಭವಾನಿ ಲಕ್ಷ್ಮೀನಾರಾಯಣ ಸ್ಮರಿಸಿಕೊಂಡಿದ್ದಾರೆ.


ಬರಹ: ಭವಾನಿ ಲಕ್ಷ್ಮೀನಾರಾಯಣ
ನಿರೂಪಣೆ: ಶಶಿಧರ ಚಿತ್ರದುರ್ಗ

ಸಿನಿಮಾ ಛಾಯಾಗ್ರಾಹಕ ವೃತ್ತಿಯಿಂದಾಗಿ ಜೀವನದಲ್ಲಿ ಹತ್ತಾರು ಮೇರು ಪ್ರತಿಭೆಗಳನ್ನು ಮುಖಾಮುಖಿಯಾಗಲು ನನಗೆ ಸಾಧ್ಯವಾಯ್ತು. ಅಂಥವರಲ್ಲೊಬ್ಬರು ಚಿತ್ರಸಾಹಿತಿ ಚಿ. ಉದಯಶಂಕರ್. ನಾನು ಕಂಡ ಅಪ್ಪಟ ಪ್ರತಿಭೆಗಳಲ್ಲಿ ಅವರೂ ಒಬ್ಬರು. ಸಾಮಾನ್ಯವಾಗಿ ಡಾ. ರಾಜಕುಮಾರ್ ಸಿನಿಮಾಗಳ ಶೂಟಿಂಗ್ ಇದ್ದೆಡೆ ಚಿ. ಉದಯಶಂಕರ್ ಉಪಸ್ಥಿತಿ ಇರುತ್ತಿತ್ತು. ಹಾಗಾಗಿ ಶೂಟಿಂಗ್, ಸ್ಟುಡಿಯೋಗಳಿಗೆ ಭೇಟಿ ನೀಡುತ್ತಿದ್ದ ನನ್ನನ್ನು ಅವರು ವಿಶ್ವಾಸದಿಂದ ಮಾತನಾಡುತ್ತಿದ್ದರು. ಸದಾ ತಮಾಷೆ ಮಾಡುತ್ತಾ ಎಲ್ಲರೊಂದಿಗೆ ಬಹುಬೇಗ ಬೆರೆಯುವ ವ್ಯಕ್ತಿತ್ವ ಅವರದು.

ನಾನು ನೋಡಿದಂತೆ ರಾಜ್ ಮತ್ತು ಉದಯಶಂಕರ್ ಅಪರೂಪದ ಸ್ನೇಹಿತರು. ಇಬ್ಬರಿಗೂ ಪರಸ್ಪರರಲ್ಲಿ ಅಪಾರ ಪ್ರೀತಿ, ಗೌರವ. ಒಂದು ಹಂತದ ಸಲಿಗೆಯೂ ಇತ್ತು. ಉದಯಶಂಕರ್ ಚಿತ್ರಕಥೆ, ಸಂಭಾಷಣೆಯಲ್ಲಿಯೇ ಅಲ್ಲವೇ ರಾಜ್ ಜನರನ್ನು ಸೆಳೆದದ್ದು? ರಾಜ್‍ರನ್ನು ಹತ್ತಿರದಿಂದ ಒಡನಾಡಿದ್ದರಿಂದ ಅವರ ಇಮೇಜ್‍ಗೆ ಸರಿಹೊಂದುವಂತೆ ಬರೆಯಲು ಉದಯಶಂಕರ್ ಅವರಿಗೆ ಸಾಧ್ಯವಾಗಿರಬಹುದು. ರಾಜ್ ಸಿನಿಮಾಗಳ ಚಿತ್ರೀಕರಣಗಳಿಗೆ ಹೋದ ಬಹಳಷ್ಟು ಸಂದರ್ಭಗಳಲ್ಲಿ ಚಿ. ಉದಯಶಂಕರ್ ಅವರನ್ನು ಭೇಟಿಯಾಗಿದ್ದೇನೆ. ಸಾಕಷ್ಟು ಬಾರಿ ಅವರು ನನ್ನ ಕ್ಯಾಮರಾಗೆ ರೂಪದರ್ಶಿಯಾಗಿದ್ದಾರೆ.ನಂದಿಬೆಟ್ಟದಲ್ಲೊಮ್ಮೆ ರಾಜ್ ಮತ್ತು ಉದಯಶಂಕರ್ ಜೋಡಿಯ ಚಿತ್ರ ತೆಗೆದದ್ದು ನನಗೆ ಬಹುವಾಗಿ ಕಾಡುತ್ತದೆ. ರಾಜ್‍ರ ಚಿತ್ರವೊಂದಕ್ಕೆ ನಂದಿಬೆಟ್ಟದ ಟಿಪ್ಪು ಡ್ರಾಪ್‍ನಲ್ಲಿ ಶೂಟಿಂಗ್ ನಡೆಯುತ್ತಿತ್ತು. ಉದಯಶಂಕರ್ ಕೂಡ ಸೆಟ್‍ನಲ್ಲಿದ್ದರು. ನಾನಲ್ಲಿಗೆ ಹೋದಾಗ ಇಬ್ಬರೂ ಸನ್ನಿವೇಶವೊಂದರ ಬಗ್ಗೆ ಚರ್ಚಿಸುತ್ತಿದ್ದರೆಂದು ಕಾಣುತ್ತದೆ. ಅವರ ಗಂಭೀರ ಮಾತುಕತೆ ಮುಗಿಯುತ್ತಿದ್ದಂತೆ ನಾನಲ್ಲಿಗೆ ಹೋದೆ. ಅಪರೂಪದ ಪೋಸ್ ಬೇಕೆಂದಾಗ, ಉತ್ಸಾಹಿ ರಾಜ್ ಕ್ಷಣಕಾಲ ಯೋಚಿಸಿದರು.

‘ಉದಯಶಂಕರ್‍ರನ್ನು ಕೂಸು ಮರಿ ಮಾಡಿದರೆ ಹೇಗೆ?’ ಎಂದು ಕೇಳಿದ ರಾಜ್, ಅದಕ್ಕೆ ಸಜ್ಜಾದರು. ಉದಯಶಂಕರ್ ನಗುತ್ತಲೇ ರಾಜ್ ಬೆನ್ನೇರಿದರು. ಸ್ಥೂಲಕಾಯದ ಅವರನ್ನು ಹೊರುತ್ತಲೇ ರಾಜ್ ಒಂದೆಡೆ ಕೊಂಚ ವಾಲಿದರು. ಆಕಸ್ಮಾತ್ ಇಬ್ಬರೂ ಬಿದ್ದರೇನು ಗತಿ ಎಂದು ನನಗೆ ಗಾಬರಿಯಾಯ್ತು. ಯಾಕಾದರೂ ಭಿನ್ನ ಪೋಸ್ ಕೊಡಿ ಎಂದು ಕೇಳಿದೆನೋ ಎಂದು ಪರಿತಪಿಸಿದೆ. ಹಾಗೇನೂ ಆಗಲಿಲ್ಲ. ರಾಜ್ ತಮ್ಮ ಸ್ನೇಹಿತನನ್ನು ಕೂಸು ಮರಿ ಮಾಡುವ ಅಪರೂಪದ ಪೋಸ್ ನನ್ನ ಕ್ಯಾಮರಾಗೆ ದಕ್ಕಿತು. ಮುಂದೆ ಈ ಫೋಟೋ ನೋಡಿ ಅವರಿಬ್ಬರೂ ತುಂಬಾ ಖುಷಿಪಟ್ಟಿದ್ದರು.


ಓದಿ: ನಿರಾಶ್ರಿತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಈ ಐದು ಚಲನಚಿತ್ರಗಳು


ನಮ್ಮ ಯೂಟ್ಯೂನ್ ಚಾನೆಲ್ ನ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...