Homeಮುಖಪುಟಈ ಜನಪ್ರಿಯ ಕೂಸುಮರಿಯ ಫೋಟೋ ಸೆರೆಯಾದದ್ದು ಹೇಗೆ!?| ಚಿ. ಉದಯಶಂಕರ್ ನೆನಪು

ಈ ಜನಪ್ರಿಯ ಕೂಸುಮರಿಯ ಫೋಟೋ ಸೆರೆಯಾದದ್ದು ಹೇಗೆ!?| ಚಿ. ಉದಯಶಂಕರ್ ನೆನಪು

ನಾನು ನೋಡಿದಂತೆ ರಾಜ್ ಮತ್ತು ಉದಯಶಂಕರ್ ಅಪರೂಪದ ಸ್ನೇಹಿತರು. ಇಬ್ಬರಿಗೂ ಪರಸ್ಪರರಲ್ಲಿ ಅಪಾರ ಪ್ರೀತಿ, ಗೌರವ. ಒಂದು ಹಂತದ ಸಲಿಗೆಯೂ ಇತ್ತು. ಉದಯಶಂಕರ್ ಚಿತ್ರಕಥೆ, ಸಂಭಾಷಣೆಯಲ್ಲಿಯೇ ಅಲ್ಲವೇ ರಾಜ್ ಜನರನ್ನು ಸೆಳೆದದ್ದು?

- Advertisement -
- Advertisement -

ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಚಿತ್ರಸಾಹಿತಿಗಳಲ್ಲೊಬ್ಬರಾದ ಚಿ. ಉದಯಶಂಕರ್ ಅಗಲಿದ ದಿನವಿದು. ವರನಟ ಡಾ. ರಾಜಕುಮಾರ್ ಮತ್ತು ಚಿ. ಉದಯಶಂಕರ್ ಅತ್ಯಂತ ಆಪ್ತರು. ಇಲ್ಲಿರುವ ಇವರಿಬ್ಬರ ‘ಕೂಸುಮರಿ’ ಫೋಟೋ ಬಹು ಜನಪ್ರಿಯ. ಈ ಫೋಟೋ ಸೆರೆಹಿಡಿದ ಸಂದರ್ಭವನ್ನು ಹಿರಿಯ ಛಾಯಾಗ್ರಾಹಕ ಭವಾನಿ ಲಕ್ಷ್ಮೀನಾರಾಯಣ ಸ್ಮರಿಸಿಕೊಂಡಿದ್ದಾರೆ.


ಬರಹ: ಭವಾನಿ ಲಕ್ಷ್ಮೀನಾರಾಯಣ
ನಿರೂಪಣೆ: ಶಶಿಧರ ಚಿತ್ರದುರ್ಗ

ಸಿನಿಮಾ ಛಾಯಾಗ್ರಾಹಕ ವೃತ್ತಿಯಿಂದಾಗಿ ಜೀವನದಲ್ಲಿ ಹತ್ತಾರು ಮೇರು ಪ್ರತಿಭೆಗಳನ್ನು ಮುಖಾಮುಖಿಯಾಗಲು ನನಗೆ ಸಾಧ್ಯವಾಯ್ತು. ಅಂಥವರಲ್ಲೊಬ್ಬರು ಚಿತ್ರಸಾಹಿತಿ ಚಿ. ಉದಯಶಂಕರ್. ನಾನು ಕಂಡ ಅಪ್ಪಟ ಪ್ರತಿಭೆಗಳಲ್ಲಿ ಅವರೂ ಒಬ್ಬರು. ಸಾಮಾನ್ಯವಾಗಿ ಡಾ. ರಾಜಕುಮಾರ್ ಸಿನಿಮಾಗಳ ಶೂಟಿಂಗ್ ಇದ್ದೆಡೆ ಚಿ. ಉದಯಶಂಕರ್ ಉಪಸ್ಥಿತಿ ಇರುತ್ತಿತ್ತು. ಹಾಗಾಗಿ ಶೂಟಿಂಗ್, ಸ್ಟುಡಿಯೋಗಳಿಗೆ ಭೇಟಿ ನೀಡುತ್ತಿದ್ದ ನನ್ನನ್ನು ಅವರು ವಿಶ್ವಾಸದಿಂದ ಮಾತನಾಡುತ್ತಿದ್ದರು. ಸದಾ ತಮಾಷೆ ಮಾಡುತ್ತಾ ಎಲ್ಲರೊಂದಿಗೆ ಬಹುಬೇಗ ಬೆರೆಯುವ ವ್ಯಕ್ತಿತ್ವ ಅವರದು.

ನಾನು ನೋಡಿದಂತೆ ರಾಜ್ ಮತ್ತು ಉದಯಶಂಕರ್ ಅಪರೂಪದ ಸ್ನೇಹಿತರು. ಇಬ್ಬರಿಗೂ ಪರಸ್ಪರರಲ್ಲಿ ಅಪಾರ ಪ್ರೀತಿ, ಗೌರವ. ಒಂದು ಹಂತದ ಸಲಿಗೆಯೂ ಇತ್ತು. ಉದಯಶಂಕರ್ ಚಿತ್ರಕಥೆ, ಸಂಭಾಷಣೆಯಲ್ಲಿಯೇ ಅಲ್ಲವೇ ರಾಜ್ ಜನರನ್ನು ಸೆಳೆದದ್ದು? ರಾಜ್‍ರನ್ನು ಹತ್ತಿರದಿಂದ ಒಡನಾಡಿದ್ದರಿಂದ ಅವರ ಇಮೇಜ್‍ಗೆ ಸರಿಹೊಂದುವಂತೆ ಬರೆಯಲು ಉದಯಶಂಕರ್ ಅವರಿಗೆ ಸಾಧ್ಯವಾಗಿರಬಹುದು. ರಾಜ್ ಸಿನಿಮಾಗಳ ಚಿತ್ರೀಕರಣಗಳಿಗೆ ಹೋದ ಬಹಳಷ್ಟು ಸಂದರ್ಭಗಳಲ್ಲಿ ಚಿ. ಉದಯಶಂಕರ್ ಅವರನ್ನು ಭೇಟಿಯಾಗಿದ್ದೇನೆ. ಸಾಕಷ್ಟು ಬಾರಿ ಅವರು ನನ್ನ ಕ್ಯಾಮರಾಗೆ ರೂಪದರ್ಶಿಯಾಗಿದ್ದಾರೆ.ನಂದಿಬೆಟ್ಟದಲ್ಲೊಮ್ಮೆ ರಾಜ್ ಮತ್ತು ಉದಯಶಂಕರ್ ಜೋಡಿಯ ಚಿತ್ರ ತೆಗೆದದ್ದು ನನಗೆ ಬಹುವಾಗಿ ಕಾಡುತ್ತದೆ. ರಾಜ್‍ರ ಚಿತ್ರವೊಂದಕ್ಕೆ ನಂದಿಬೆಟ್ಟದ ಟಿಪ್ಪು ಡ್ರಾಪ್‍ನಲ್ಲಿ ಶೂಟಿಂಗ್ ನಡೆಯುತ್ತಿತ್ತು. ಉದಯಶಂಕರ್ ಕೂಡ ಸೆಟ್‍ನಲ್ಲಿದ್ದರು. ನಾನಲ್ಲಿಗೆ ಹೋದಾಗ ಇಬ್ಬರೂ ಸನ್ನಿವೇಶವೊಂದರ ಬಗ್ಗೆ ಚರ್ಚಿಸುತ್ತಿದ್ದರೆಂದು ಕಾಣುತ್ತದೆ. ಅವರ ಗಂಭೀರ ಮಾತುಕತೆ ಮುಗಿಯುತ್ತಿದ್ದಂತೆ ನಾನಲ್ಲಿಗೆ ಹೋದೆ. ಅಪರೂಪದ ಪೋಸ್ ಬೇಕೆಂದಾಗ, ಉತ್ಸಾಹಿ ರಾಜ್ ಕ್ಷಣಕಾಲ ಯೋಚಿಸಿದರು.

‘ಉದಯಶಂಕರ್‍ರನ್ನು ಕೂಸು ಮರಿ ಮಾಡಿದರೆ ಹೇಗೆ?’ ಎಂದು ಕೇಳಿದ ರಾಜ್, ಅದಕ್ಕೆ ಸಜ್ಜಾದರು. ಉದಯಶಂಕರ್ ನಗುತ್ತಲೇ ರಾಜ್ ಬೆನ್ನೇರಿದರು. ಸ್ಥೂಲಕಾಯದ ಅವರನ್ನು ಹೊರುತ್ತಲೇ ರಾಜ್ ಒಂದೆಡೆ ಕೊಂಚ ವಾಲಿದರು. ಆಕಸ್ಮಾತ್ ಇಬ್ಬರೂ ಬಿದ್ದರೇನು ಗತಿ ಎಂದು ನನಗೆ ಗಾಬರಿಯಾಯ್ತು. ಯಾಕಾದರೂ ಭಿನ್ನ ಪೋಸ್ ಕೊಡಿ ಎಂದು ಕೇಳಿದೆನೋ ಎಂದು ಪರಿತಪಿಸಿದೆ. ಹಾಗೇನೂ ಆಗಲಿಲ್ಲ. ರಾಜ್ ತಮ್ಮ ಸ್ನೇಹಿತನನ್ನು ಕೂಸು ಮರಿ ಮಾಡುವ ಅಪರೂಪದ ಪೋಸ್ ನನ್ನ ಕ್ಯಾಮರಾಗೆ ದಕ್ಕಿತು. ಮುಂದೆ ಈ ಫೋಟೋ ನೋಡಿ ಅವರಿಬ್ಬರೂ ತುಂಬಾ ಖುಷಿಪಟ್ಟಿದ್ದರು.


ಓದಿ: ನಿರಾಶ್ರಿತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಈ ಐದು ಚಲನಚಿತ್ರಗಳು


ನಮ್ಮ ಯೂಟ್ಯೂನ್ ಚಾನೆಲ್ ನ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...