Homeಚಳವಳಿಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ...

ಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ ಕೋಟಿ ಅನುದಾನ!

- Advertisement -
- Advertisement -

ಮುಂದಿನ 5 ವರ್ಷಗಳಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಕಾರ್ಯಕ್ರಮ; 2021-22ನೇ ಸಾಲಿನಲ್ಲಿ 10 ಕೋಟಿ ರೂ. ಅನುದಾನ (2021-22ರ ಬಜೆಟ್)

ಕರ್ನಾಟಕದ ಬಹುತೇಕ ಜಿಲ್ಲೆಗಳ ಸಾವಯವ ಇಂಗಾಲದ ಪ್ರಮಾಣ 0.5% ಗೆ ಇಳಿದಿದ್ದು ವೈಜ್ಞಾನಿಕ ನಿಷ್ಕರ್ಷೆಯೇ ಮಾನದಂಡವಾದಲ್ಲಿ ಇಲ್ಲಿ ಕೃಷಿ ಮಾಡಲು ಸಾಧ್ಯವೇ ಇಲ್ಲ! ತುರ್ತಾಗಿ ಈ ಸಾವಯವ ಇಂಗಾಲದ ಪ್ರಮಾಣವನ್ನು ಏರಿಸಬೇಕಾಗಿದೆ. ಸಾವಯವ ಇಂಗಾಲದ ಪ್ರಮಾಣ ಏರಿಸುವುದು ಅಂದರೆ ಕೃಷಿ ತ್ಯಾಜ್ಯ ಮತ್ತಿತರ ಜೈವಿಕ ಉಳಿಕೆಗಳನ್ನು ಮಣ್ಣಿಗೆ ಮರಳಿ ಸೇರಿಸುವುದು. ಇಂಥಾ ತುರ್ತು ಕಾರ‍್ಯಕ್ರಮಕ್ಕೆ ಸರಕಾರದ ಅನುದಾನ ಕೇವಲ 10 ಕೋಟಿ ರೂಪಾಯಿ!

ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು (PACS) ಹಾಗೂ ಟಿ.ಎ.ಪಿ.ಸಿ.ಎಂ.ಎಸ್.ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ. 11 ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದ ಶೇ. 4 ರ ಬಡ್ಡಿ ಸಹಾಯಧನ. ಐದು ಕೋಟಿ ರೂ. ಅನುದಾನ(2021-22ರ ಬಜೆಟ್)

ಕೃಷಿ ಉತ್ಪನ್ನವನ್ನು ಸಂಕಷ್ಟದ ಸಮಯದಲ್ಲಿ ಮಾರಾಟ ಮಾಡಬಾರದು, ಅದನ್ನು ಸಹಕಾರಿ ಸಂಘಗಳಲ್ಲಿ ಅಡಮಾಣ ಇಟ್ಟು ಸಾಲ ತೆಗೆದುಕೊಂಡು ಉತ್ತಮ ಬೆಲೆ ಬಂದಾಗ ಮಾರಲು ಅನುಕೂಲ ಕಲ್ಪಿಸಬೇಕು. ಅದಕ್ಕೆ ಶೇ. 11ರ ಬಡ್ಡಿ ಹಾಕಲಾಗುತ್ತದೆ. ಈ ಬಡ್ಡಿಗೆ ಸಹಾಯಧನ ಶೇ.4ರಷ್ಟು ಕೊಡುವ ಸರಕಾರ ಅದಕ್ಕೆ ಮೀಸಲಿಟ್ಟ ಹಣ ಕೇವಲ 5 ಕೋಟಿ. ಈ ಐದು ಕೋಟಿ ಅಂದರೆ ಎಷ್ಟು ಸಾಲಕ್ಕೆ ಸಹಾಯ ನೀಡಿದಂತಾಗುತ್ತದೆ ಗೊತ್ತೇ? ಕೇವಲ 250 ಕೋಟಿಯ ಗೋದಾಮು ಸಾಲಕ್ಕೆ. ನಿಜಕ್ಕೂ ಬಡ್ಡಿ ಮನ್ನಾಕ್ಕೆ ಕನಿಷ್ಠ 100 ಕೋಟಿ ರೂ ನೀಡಿದಲ್ಲಿ ಏನಿಲ್ಲವೆಂದರೂ 2000 ಕೋಟಿಯ ಕೃಷಿ ಉತ್ಪನ್ನಗಳನ್ನು ರೈತರು ಗೋದಾಮಿನಲ್ಲಿಟ್ಟು ಉತ್ತಮ ಬೆಲೆ ಬಂದಾಗ ಮಾರಬಹುದು. ಇದೂ ಕರ್ನಾಟಕದ ಕೃಷಿ ಉತ್ಪನ್ನದ ಮೌಲ್ಯಕ್ಕೆ ಹೋಲಿಸಿದರೆ ಯಃಕಶ್ಚಿತ್. ಸರಕಾರ ದೃಢವಾದ ಬೆಂಬಲ ನೀಡದಿದ್ದರೆ ರೈತರು ಸಂಕಷ್ಟದ ಮಾರಾಟ ಮಾಡುವುದು ಹೇಗೆ ತಾನೇ ನಿಲ್ಲುತ್ತದೆ?

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50 ಕೋಟಿ ರೂ. ವೆಚ್ಚದಲ್ಲಿ 50 ಹೊಸ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರಾರಂಭ. 5 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ. (2021-22ರ ಬಜೆಟ್)

ಬಡ ವಿದ್ಯಾರ್ಥಿಗಳಿಗೆ 50 ಹೊಸ ಹಾಸ್ಟೆಲ್ ಆರಂಭ! ಅನುದಾಣ ತಲಾ ಒಂದು ಕೋಟಿ ರೂಪಾಯಿ! ಈ ಒಂದು ಕೋಟಿ ರೂಪಾಯಿ ಈಗ ಮೇಲ್ಮಧ್ಯಮ ವರ್ಗದ ಮನೆಗೇ ಸಾಕಾಗುವುದಿಲ್ಲ! ಒಂದೊಂದು ಹಾಸ್ಟೆಲ್ಲಿನಲ್ಲಿ ಹೆಚ್ಚುವರಿ 50 ಮಕ್ಕಳಿಗೆ ಅವಕಾಶ ಎಂದು ಹೇಳಿದಂತಾಯಿತು. ಬೇಡಿಕೆ ಎಷ್ಟಿದೆ? ಈ ಬಾರಿ 10ನೇ ತರಗತಿಯಲ್ಲಿ ಎಲ್ಲರೂ ಪಾಸಾಗಿರುವಾಗ, ವಿದ್ಯಾಕಾಂಕ್ಷಿ ಹುಡುಗರ ಕತೆ ಏನು? ಕೋವಿಡ್ ಕಾಲದಲ್ಲಿ ಸರಕಾರಕ್ಕೆ ಇದು ಗೊತ್ತಿಲ್ಲದೇ ಏನೂ ಅಲ್ಲ!

ಈ ಸರಕಾರ ಉದಾರವಾಗುವುದು ಯಾವುದಕ್ಕೆ ನೋಡಿ:

ಸಾವಯವ ಇಂಗಾಲ ಹೆಚ್ಚಿಸಲು, ರೈತರ ಗೋದಾಮು ಸಾಲದ ಬಡ್ಡಿ ಸಹಾಯಕ್ಕೆ ಕಾಸಿಲ್ಲ. ಆದರೆ ರಾಜ್ಯದ ಮೂರು ಬಲಾಢ್ಯ ಜಾತಿಗಳ ಅಭಿವೃದ್ಧಿಗೆ 1050 ಕೋಟಿ ಅನುದಾನ!! ಜಾತಿ ನಿಗಮಗಳಿಗೆ ಕಾಸು ಧಾರಾಳ, ರೈತರ ಕಷ್ಟಕ್ಕೆ ಕಾಸಿಲ್ಲ!

  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ನಿಗದಿ; 100 ಕೋಟಿ ರೂ. ಈಗಾಗಲೇ ಬಿಡುಗಡೆ. (2021-22ರ ಬಜೆಟ್)
  • ಒಕ್ಕಲಿಗ ಸಮುದಾಯದ ಹೊಸ ನಿಗಮ ಸ್ಥಾಪನೆ; 500 ಕೋಟಿ ರೂ. ವೆಚ್ಚದಲ್ಲಿ ಕಾರ್ಯಕ್ರಮಗಳ ಅನುಷ್ಠಾನ. (2021-22ರ ಬಜೆಟ್)
  • ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಚಟುವಟಿಕೆಗಳಿಗೆ 50 ಕೋಟಿ ರೂ. (2021-22ರ ಬಜೆಟ್)!

– ಕೆ.ಪಿ.ಸುರೇಶ

ಇಂಗ್ಲಿಷ್ ಅಧ್ಯಾಪಕರಾಗಲು ಎಂ.ಎ ಓದಿದ್ದ ಕೆ.ಪಿ.ಸುರೇಶ ಅವರು ಕೃಷಿಯಲ್ಲಿ ತೊಡಗಲು ಸುಳ್ಯ ತಾಲೂಕಿನ ತಮ್ಮ ಊರಿಗೆ ಮರಳಿದ್ದರು. ತಮ್ಮ ಸ್ವಂತ ಅನುಭವ, ಅಧ್ಯಯನ ಹಾಗೂ ಒಳನೋಟಗಳ ಕಾರಣಕ್ಕೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯ ವಿಚಾರದಲ್ಲಿ ತಜ್ಞರಿಗೂ, ರೈತರಿಗೂ ಪಾಠ ಮಾಡಬಲ್ಲರು. ಅಪಾರ ಕೀಟಲೆಯ ಸ್ವಭಾವದ ಅವರು ಹಲವು ವಿಚಾರಗಳ ಕುರಿತು ಬರೆಯುತ್ತಿರುವ ಆಲ್‌ರೌಂಡರ್ ಕೂಡ.


ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...