Homeಚಳವಳಿಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ...

ಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ ಕೋಟಿ ಅನುದಾನ!

- Advertisement -
- Advertisement -

ಮುಂದಿನ 5 ವರ್ಷಗಳಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಕಾರ್ಯಕ್ರಮ; 2021-22ನೇ ಸಾಲಿನಲ್ಲಿ 10 ಕೋಟಿ ರೂ. ಅನುದಾನ (2021-22ರ ಬಜೆಟ್)

ಕರ್ನಾಟಕದ ಬಹುತೇಕ ಜಿಲ್ಲೆಗಳ ಸಾವಯವ ಇಂಗಾಲದ ಪ್ರಮಾಣ 0.5% ಗೆ ಇಳಿದಿದ್ದು ವೈಜ್ಞಾನಿಕ ನಿಷ್ಕರ್ಷೆಯೇ ಮಾನದಂಡವಾದಲ್ಲಿ ಇಲ್ಲಿ ಕೃಷಿ ಮಾಡಲು ಸಾಧ್ಯವೇ ಇಲ್ಲ! ತುರ್ತಾಗಿ ಈ ಸಾವಯವ ಇಂಗಾಲದ ಪ್ರಮಾಣವನ್ನು ಏರಿಸಬೇಕಾಗಿದೆ. ಸಾವಯವ ಇಂಗಾಲದ ಪ್ರಮಾಣ ಏರಿಸುವುದು ಅಂದರೆ ಕೃಷಿ ತ್ಯಾಜ್ಯ ಮತ್ತಿತರ ಜೈವಿಕ ಉಳಿಕೆಗಳನ್ನು ಮಣ್ಣಿಗೆ ಮರಳಿ ಸೇರಿಸುವುದು. ಇಂಥಾ ತುರ್ತು ಕಾರ‍್ಯಕ್ರಮಕ್ಕೆ ಸರಕಾರದ ಅನುದಾನ ಕೇವಲ 10 ಕೋಟಿ ರೂಪಾಯಿ!

ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು (PACS) ಹಾಗೂ ಟಿ.ಎ.ಪಿ.ಸಿ.ಎಂ.ಎಸ್.ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ. 11 ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದ ಶೇ. 4 ರ ಬಡ್ಡಿ ಸಹಾಯಧನ. ಐದು ಕೋಟಿ ರೂ. ಅನುದಾನ(2021-22ರ ಬಜೆಟ್)

ಕೃಷಿ ಉತ್ಪನ್ನವನ್ನು ಸಂಕಷ್ಟದ ಸಮಯದಲ್ಲಿ ಮಾರಾಟ ಮಾಡಬಾರದು, ಅದನ್ನು ಸಹಕಾರಿ ಸಂಘಗಳಲ್ಲಿ ಅಡಮಾಣ ಇಟ್ಟು ಸಾಲ ತೆಗೆದುಕೊಂಡು ಉತ್ತಮ ಬೆಲೆ ಬಂದಾಗ ಮಾರಲು ಅನುಕೂಲ ಕಲ್ಪಿಸಬೇಕು. ಅದಕ್ಕೆ ಶೇ. 11ರ ಬಡ್ಡಿ ಹಾಕಲಾಗುತ್ತದೆ. ಈ ಬಡ್ಡಿಗೆ ಸಹಾಯಧನ ಶೇ.4ರಷ್ಟು ಕೊಡುವ ಸರಕಾರ ಅದಕ್ಕೆ ಮೀಸಲಿಟ್ಟ ಹಣ ಕೇವಲ 5 ಕೋಟಿ. ಈ ಐದು ಕೋಟಿ ಅಂದರೆ ಎಷ್ಟು ಸಾಲಕ್ಕೆ ಸಹಾಯ ನೀಡಿದಂತಾಗುತ್ತದೆ ಗೊತ್ತೇ? ಕೇವಲ 250 ಕೋಟಿಯ ಗೋದಾಮು ಸಾಲಕ್ಕೆ. ನಿಜಕ್ಕೂ ಬಡ್ಡಿ ಮನ್ನಾಕ್ಕೆ ಕನಿಷ್ಠ 100 ಕೋಟಿ ರೂ ನೀಡಿದಲ್ಲಿ ಏನಿಲ್ಲವೆಂದರೂ 2000 ಕೋಟಿಯ ಕೃಷಿ ಉತ್ಪನ್ನಗಳನ್ನು ರೈತರು ಗೋದಾಮಿನಲ್ಲಿಟ್ಟು ಉತ್ತಮ ಬೆಲೆ ಬಂದಾಗ ಮಾರಬಹುದು. ಇದೂ ಕರ್ನಾಟಕದ ಕೃಷಿ ಉತ್ಪನ್ನದ ಮೌಲ್ಯಕ್ಕೆ ಹೋಲಿಸಿದರೆ ಯಃಕಶ್ಚಿತ್. ಸರಕಾರ ದೃಢವಾದ ಬೆಂಬಲ ನೀಡದಿದ್ದರೆ ರೈತರು ಸಂಕಷ್ಟದ ಮಾರಾಟ ಮಾಡುವುದು ಹೇಗೆ ತಾನೇ ನಿಲ್ಲುತ್ತದೆ?

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50 ಕೋಟಿ ರೂ. ವೆಚ್ಚದಲ್ಲಿ 50 ಹೊಸ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರಾರಂಭ. 5 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ. (2021-22ರ ಬಜೆಟ್)

ಬಡ ವಿದ್ಯಾರ್ಥಿಗಳಿಗೆ 50 ಹೊಸ ಹಾಸ್ಟೆಲ್ ಆರಂಭ! ಅನುದಾಣ ತಲಾ ಒಂದು ಕೋಟಿ ರೂಪಾಯಿ! ಈ ಒಂದು ಕೋಟಿ ರೂಪಾಯಿ ಈಗ ಮೇಲ್ಮಧ್ಯಮ ವರ್ಗದ ಮನೆಗೇ ಸಾಕಾಗುವುದಿಲ್ಲ! ಒಂದೊಂದು ಹಾಸ್ಟೆಲ್ಲಿನಲ್ಲಿ ಹೆಚ್ಚುವರಿ 50 ಮಕ್ಕಳಿಗೆ ಅವಕಾಶ ಎಂದು ಹೇಳಿದಂತಾಯಿತು. ಬೇಡಿಕೆ ಎಷ್ಟಿದೆ? ಈ ಬಾರಿ 10ನೇ ತರಗತಿಯಲ್ಲಿ ಎಲ್ಲರೂ ಪಾಸಾಗಿರುವಾಗ, ವಿದ್ಯಾಕಾಂಕ್ಷಿ ಹುಡುಗರ ಕತೆ ಏನು? ಕೋವಿಡ್ ಕಾಲದಲ್ಲಿ ಸರಕಾರಕ್ಕೆ ಇದು ಗೊತ್ತಿಲ್ಲದೇ ಏನೂ ಅಲ್ಲ!

ಈ ಸರಕಾರ ಉದಾರವಾಗುವುದು ಯಾವುದಕ್ಕೆ ನೋಡಿ:

ಸಾವಯವ ಇಂಗಾಲ ಹೆಚ್ಚಿಸಲು, ರೈತರ ಗೋದಾಮು ಸಾಲದ ಬಡ್ಡಿ ಸಹಾಯಕ್ಕೆ ಕಾಸಿಲ್ಲ. ಆದರೆ ರಾಜ್ಯದ ಮೂರು ಬಲಾಢ್ಯ ಜಾತಿಗಳ ಅಭಿವೃದ್ಧಿಗೆ 1050 ಕೋಟಿ ಅನುದಾನ!! ಜಾತಿ ನಿಗಮಗಳಿಗೆ ಕಾಸು ಧಾರಾಳ, ರೈತರ ಕಷ್ಟಕ್ಕೆ ಕಾಸಿಲ್ಲ!

  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ನಿಗದಿ; 100 ಕೋಟಿ ರೂ. ಈಗಾಗಲೇ ಬಿಡುಗಡೆ. (2021-22ರ ಬಜೆಟ್)
  • ಒಕ್ಕಲಿಗ ಸಮುದಾಯದ ಹೊಸ ನಿಗಮ ಸ್ಥಾಪನೆ; 500 ಕೋಟಿ ರೂ. ವೆಚ್ಚದಲ್ಲಿ ಕಾರ್ಯಕ್ರಮಗಳ ಅನುಷ್ಠಾನ. (2021-22ರ ಬಜೆಟ್)
  • ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಚಟುವಟಿಕೆಗಳಿಗೆ 50 ಕೋಟಿ ರೂ. (2021-22ರ ಬಜೆಟ್)!

– ಕೆ.ಪಿ.ಸುರೇಶ

ಇಂಗ್ಲಿಷ್ ಅಧ್ಯಾಪಕರಾಗಲು ಎಂ.ಎ ಓದಿದ್ದ ಕೆ.ಪಿ.ಸುರೇಶ ಅವರು ಕೃಷಿಯಲ್ಲಿ ತೊಡಗಲು ಸುಳ್ಯ ತಾಲೂಕಿನ ತಮ್ಮ ಊರಿಗೆ ಮರಳಿದ್ದರು. ತಮ್ಮ ಸ್ವಂತ ಅನುಭವ, ಅಧ್ಯಯನ ಹಾಗೂ ಒಳನೋಟಗಳ ಕಾರಣಕ್ಕೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯ ವಿಚಾರದಲ್ಲಿ ತಜ್ಞರಿಗೂ, ರೈತರಿಗೂ ಪಾಠ ಮಾಡಬಲ್ಲರು. ಅಪಾರ ಕೀಟಲೆಯ ಸ್ವಭಾವದ ಅವರು ಹಲವು ವಿಚಾರಗಳ ಕುರಿತು ಬರೆಯುತ್ತಿರುವ ಆಲ್‌ರೌಂಡರ್ ಕೂಡ.


ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...