Homeಚಳವಳಿಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ...

ಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ ಕೋಟಿ ಅನುದಾನ!

- Advertisement -
- Advertisement -

ಮುಂದಿನ 5 ವರ್ಷಗಳಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಕಾರ್ಯಕ್ರಮ; 2021-22ನೇ ಸಾಲಿನಲ್ಲಿ 10 ಕೋಟಿ ರೂ. ಅನುದಾನ (2021-22ರ ಬಜೆಟ್)

ಕರ್ನಾಟಕದ ಬಹುತೇಕ ಜಿಲ್ಲೆಗಳ ಸಾವಯವ ಇಂಗಾಲದ ಪ್ರಮಾಣ 0.5% ಗೆ ಇಳಿದಿದ್ದು ವೈಜ್ಞಾನಿಕ ನಿಷ್ಕರ್ಷೆಯೇ ಮಾನದಂಡವಾದಲ್ಲಿ ಇಲ್ಲಿ ಕೃಷಿ ಮಾಡಲು ಸಾಧ್ಯವೇ ಇಲ್ಲ! ತುರ್ತಾಗಿ ಈ ಸಾವಯವ ಇಂಗಾಲದ ಪ್ರಮಾಣವನ್ನು ಏರಿಸಬೇಕಾಗಿದೆ. ಸಾವಯವ ಇಂಗಾಲದ ಪ್ರಮಾಣ ಏರಿಸುವುದು ಅಂದರೆ ಕೃಷಿ ತ್ಯಾಜ್ಯ ಮತ್ತಿತರ ಜೈವಿಕ ಉಳಿಕೆಗಳನ್ನು ಮಣ್ಣಿಗೆ ಮರಳಿ ಸೇರಿಸುವುದು. ಇಂಥಾ ತುರ್ತು ಕಾರ‍್ಯಕ್ರಮಕ್ಕೆ ಸರಕಾರದ ಅನುದಾನ ಕೇವಲ 10 ಕೋಟಿ ರೂಪಾಯಿ!

ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು (PACS) ಹಾಗೂ ಟಿ.ಎ.ಪಿ.ಸಿ.ಎಂ.ಎಸ್.ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ. 11 ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದ ಶೇ. 4 ರ ಬಡ್ಡಿ ಸಹಾಯಧನ. ಐದು ಕೋಟಿ ರೂ. ಅನುದಾನ(2021-22ರ ಬಜೆಟ್)

ಕೃಷಿ ಉತ್ಪನ್ನವನ್ನು ಸಂಕಷ್ಟದ ಸಮಯದಲ್ಲಿ ಮಾರಾಟ ಮಾಡಬಾರದು, ಅದನ್ನು ಸಹಕಾರಿ ಸಂಘಗಳಲ್ಲಿ ಅಡಮಾಣ ಇಟ್ಟು ಸಾಲ ತೆಗೆದುಕೊಂಡು ಉತ್ತಮ ಬೆಲೆ ಬಂದಾಗ ಮಾರಲು ಅನುಕೂಲ ಕಲ್ಪಿಸಬೇಕು. ಅದಕ್ಕೆ ಶೇ. 11ರ ಬಡ್ಡಿ ಹಾಕಲಾಗುತ್ತದೆ. ಈ ಬಡ್ಡಿಗೆ ಸಹಾಯಧನ ಶೇ.4ರಷ್ಟು ಕೊಡುವ ಸರಕಾರ ಅದಕ್ಕೆ ಮೀಸಲಿಟ್ಟ ಹಣ ಕೇವಲ 5 ಕೋಟಿ. ಈ ಐದು ಕೋಟಿ ಅಂದರೆ ಎಷ್ಟು ಸಾಲಕ್ಕೆ ಸಹಾಯ ನೀಡಿದಂತಾಗುತ್ತದೆ ಗೊತ್ತೇ? ಕೇವಲ 250 ಕೋಟಿಯ ಗೋದಾಮು ಸಾಲಕ್ಕೆ. ನಿಜಕ್ಕೂ ಬಡ್ಡಿ ಮನ್ನಾಕ್ಕೆ ಕನಿಷ್ಠ 100 ಕೋಟಿ ರೂ ನೀಡಿದಲ್ಲಿ ಏನಿಲ್ಲವೆಂದರೂ 2000 ಕೋಟಿಯ ಕೃಷಿ ಉತ್ಪನ್ನಗಳನ್ನು ರೈತರು ಗೋದಾಮಿನಲ್ಲಿಟ್ಟು ಉತ್ತಮ ಬೆಲೆ ಬಂದಾಗ ಮಾರಬಹುದು. ಇದೂ ಕರ್ನಾಟಕದ ಕೃಷಿ ಉತ್ಪನ್ನದ ಮೌಲ್ಯಕ್ಕೆ ಹೋಲಿಸಿದರೆ ಯಃಕಶ್ಚಿತ್. ಸರಕಾರ ದೃಢವಾದ ಬೆಂಬಲ ನೀಡದಿದ್ದರೆ ರೈತರು ಸಂಕಷ್ಟದ ಮಾರಾಟ ಮಾಡುವುದು ಹೇಗೆ ತಾನೇ ನಿಲ್ಲುತ್ತದೆ?

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50 ಕೋಟಿ ರೂ. ವೆಚ್ಚದಲ್ಲಿ 50 ಹೊಸ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರಾರಂಭ. 5 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ. (2021-22ರ ಬಜೆಟ್)

ಬಡ ವಿದ್ಯಾರ್ಥಿಗಳಿಗೆ 50 ಹೊಸ ಹಾಸ್ಟೆಲ್ ಆರಂಭ! ಅನುದಾಣ ತಲಾ ಒಂದು ಕೋಟಿ ರೂಪಾಯಿ! ಈ ಒಂದು ಕೋಟಿ ರೂಪಾಯಿ ಈಗ ಮೇಲ್ಮಧ್ಯಮ ವರ್ಗದ ಮನೆಗೇ ಸಾಕಾಗುವುದಿಲ್ಲ! ಒಂದೊಂದು ಹಾಸ್ಟೆಲ್ಲಿನಲ್ಲಿ ಹೆಚ್ಚುವರಿ 50 ಮಕ್ಕಳಿಗೆ ಅವಕಾಶ ಎಂದು ಹೇಳಿದಂತಾಯಿತು. ಬೇಡಿಕೆ ಎಷ್ಟಿದೆ? ಈ ಬಾರಿ 10ನೇ ತರಗತಿಯಲ್ಲಿ ಎಲ್ಲರೂ ಪಾಸಾಗಿರುವಾಗ, ವಿದ್ಯಾಕಾಂಕ್ಷಿ ಹುಡುಗರ ಕತೆ ಏನು? ಕೋವಿಡ್ ಕಾಲದಲ್ಲಿ ಸರಕಾರಕ್ಕೆ ಇದು ಗೊತ್ತಿಲ್ಲದೇ ಏನೂ ಅಲ್ಲ!

ಈ ಸರಕಾರ ಉದಾರವಾಗುವುದು ಯಾವುದಕ್ಕೆ ನೋಡಿ:

ಸಾವಯವ ಇಂಗಾಲ ಹೆಚ್ಚಿಸಲು, ರೈತರ ಗೋದಾಮು ಸಾಲದ ಬಡ್ಡಿ ಸಹಾಯಕ್ಕೆ ಕಾಸಿಲ್ಲ. ಆದರೆ ರಾಜ್ಯದ ಮೂರು ಬಲಾಢ್ಯ ಜಾತಿಗಳ ಅಭಿವೃದ್ಧಿಗೆ 1050 ಕೋಟಿ ಅನುದಾನ!! ಜಾತಿ ನಿಗಮಗಳಿಗೆ ಕಾಸು ಧಾರಾಳ, ರೈತರ ಕಷ್ಟಕ್ಕೆ ಕಾಸಿಲ್ಲ!

  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ನಿಗದಿ; 100 ಕೋಟಿ ರೂ. ಈಗಾಗಲೇ ಬಿಡುಗಡೆ. (2021-22ರ ಬಜೆಟ್)
  • ಒಕ್ಕಲಿಗ ಸಮುದಾಯದ ಹೊಸ ನಿಗಮ ಸ್ಥಾಪನೆ; 500 ಕೋಟಿ ರೂ. ವೆಚ್ಚದಲ್ಲಿ ಕಾರ್ಯಕ್ರಮಗಳ ಅನುಷ್ಠಾನ. (2021-22ರ ಬಜೆಟ್)
  • ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಚಟುವಟಿಕೆಗಳಿಗೆ 50 ಕೋಟಿ ರೂ. (2021-22ರ ಬಜೆಟ್)!

– ಕೆ.ಪಿ.ಸುರೇಶ

ಇಂಗ್ಲಿಷ್ ಅಧ್ಯಾಪಕರಾಗಲು ಎಂ.ಎ ಓದಿದ್ದ ಕೆ.ಪಿ.ಸುರೇಶ ಅವರು ಕೃಷಿಯಲ್ಲಿ ತೊಡಗಲು ಸುಳ್ಯ ತಾಲೂಕಿನ ತಮ್ಮ ಊರಿಗೆ ಮರಳಿದ್ದರು. ತಮ್ಮ ಸ್ವಂತ ಅನುಭವ, ಅಧ್ಯಯನ ಹಾಗೂ ಒಳನೋಟಗಳ ಕಾರಣಕ್ಕೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯ ವಿಚಾರದಲ್ಲಿ ತಜ್ಞರಿಗೂ, ರೈತರಿಗೂ ಪಾಠ ಮಾಡಬಲ್ಲರು. ಅಪಾರ ಕೀಟಲೆಯ ಸ್ವಭಾವದ ಅವರು ಹಲವು ವಿಚಾರಗಳ ಕುರಿತು ಬರೆಯುತ್ತಿರುವ ಆಲ್‌ರೌಂಡರ್ ಕೂಡ.


ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...