Homeಚಳವಳಿಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ...

ಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ ಕೋಟಿ ಅನುದಾನ!

- Advertisement -
- Advertisement -

ಮುಂದಿನ 5 ವರ್ಷಗಳಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಕಾರ್ಯಕ್ರಮ; 2021-22ನೇ ಸಾಲಿನಲ್ಲಿ 10 ಕೋಟಿ ರೂ. ಅನುದಾನ (2021-22ರ ಬಜೆಟ್)

ಕರ್ನಾಟಕದ ಬಹುತೇಕ ಜಿಲ್ಲೆಗಳ ಸಾವಯವ ಇಂಗಾಲದ ಪ್ರಮಾಣ 0.5% ಗೆ ಇಳಿದಿದ್ದು ವೈಜ್ಞಾನಿಕ ನಿಷ್ಕರ್ಷೆಯೇ ಮಾನದಂಡವಾದಲ್ಲಿ ಇಲ್ಲಿ ಕೃಷಿ ಮಾಡಲು ಸಾಧ್ಯವೇ ಇಲ್ಲ! ತುರ್ತಾಗಿ ಈ ಸಾವಯವ ಇಂಗಾಲದ ಪ್ರಮಾಣವನ್ನು ಏರಿಸಬೇಕಾಗಿದೆ. ಸಾವಯವ ಇಂಗಾಲದ ಪ್ರಮಾಣ ಏರಿಸುವುದು ಅಂದರೆ ಕೃಷಿ ತ್ಯಾಜ್ಯ ಮತ್ತಿತರ ಜೈವಿಕ ಉಳಿಕೆಗಳನ್ನು ಮಣ್ಣಿಗೆ ಮರಳಿ ಸೇರಿಸುವುದು. ಇಂಥಾ ತುರ್ತು ಕಾರ‍್ಯಕ್ರಮಕ್ಕೆ ಸರಕಾರದ ಅನುದಾನ ಕೇವಲ 10 ಕೋಟಿ ರೂಪಾಯಿ!

ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು (PACS) ಹಾಗೂ ಟಿ.ಎ.ಪಿ.ಸಿ.ಎಂ.ಎಸ್.ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ. 11 ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದ ಶೇ. 4 ರ ಬಡ್ಡಿ ಸಹಾಯಧನ. ಐದು ಕೋಟಿ ರೂ. ಅನುದಾನ(2021-22ರ ಬಜೆಟ್)

ಕೃಷಿ ಉತ್ಪನ್ನವನ್ನು ಸಂಕಷ್ಟದ ಸಮಯದಲ್ಲಿ ಮಾರಾಟ ಮಾಡಬಾರದು, ಅದನ್ನು ಸಹಕಾರಿ ಸಂಘಗಳಲ್ಲಿ ಅಡಮಾಣ ಇಟ್ಟು ಸಾಲ ತೆಗೆದುಕೊಂಡು ಉತ್ತಮ ಬೆಲೆ ಬಂದಾಗ ಮಾರಲು ಅನುಕೂಲ ಕಲ್ಪಿಸಬೇಕು. ಅದಕ್ಕೆ ಶೇ. 11ರ ಬಡ್ಡಿ ಹಾಕಲಾಗುತ್ತದೆ. ಈ ಬಡ್ಡಿಗೆ ಸಹಾಯಧನ ಶೇ.4ರಷ್ಟು ಕೊಡುವ ಸರಕಾರ ಅದಕ್ಕೆ ಮೀಸಲಿಟ್ಟ ಹಣ ಕೇವಲ 5 ಕೋಟಿ. ಈ ಐದು ಕೋಟಿ ಅಂದರೆ ಎಷ್ಟು ಸಾಲಕ್ಕೆ ಸಹಾಯ ನೀಡಿದಂತಾಗುತ್ತದೆ ಗೊತ್ತೇ? ಕೇವಲ 250 ಕೋಟಿಯ ಗೋದಾಮು ಸಾಲಕ್ಕೆ. ನಿಜಕ್ಕೂ ಬಡ್ಡಿ ಮನ್ನಾಕ್ಕೆ ಕನಿಷ್ಠ 100 ಕೋಟಿ ರೂ ನೀಡಿದಲ್ಲಿ ಏನಿಲ್ಲವೆಂದರೂ 2000 ಕೋಟಿಯ ಕೃಷಿ ಉತ್ಪನ್ನಗಳನ್ನು ರೈತರು ಗೋದಾಮಿನಲ್ಲಿಟ್ಟು ಉತ್ತಮ ಬೆಲೆ ಬಂದಾಗ ಮಾರಬಹುದು. ಇದೂ ಕರ್ನಾಟಕದ ಕೃಷಿ ಉತ್ಪನ್ನದ ಮೌಲ್ಯಕ್ಕೆ ಹೋಲಿಸಿದರೆ ಯಃಕಶ್ಚಿತ್. ಸರಕಾರ ದೃಢವಾದ ಬೆಂಬಲ ನೀಡದಿದ್ದರೆ ರೈತರು ಸಂಕಷ್ಟದ ಮಾರಾಟ ಮಾಡುವುದು ಹೇಗೆ ತಾನೇ ನಿಲ್ಲುತ್ತದೆ?

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50 ಕೋಟಿ ರೂ. ವೆಚ್ಚದಲ್ಲಿ 50 ಹೊಸ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರಾರಂಭ. 5 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ. (2021-22ರ ಬಜೆಟ್)

ಬಡ ವಿದ್ಯಾರ್ಥಿಗಳಿಗೆ 50 ಹೊಸ ಹಾಸ್ಟೆಲ್ ಆರಂಭ! ಅನುದಾಣ ತಲಾ ಒಂದು ಕೋಟಿ ರೂಪಾಯಿ! ಈ ಒಂದು ಕೋಟಿ ರೂಪಾಯಿ ಈಗ ಮೇಲ್ಮಧ್ಯಮ ವರ್ಗದ ಮನೆಗೇ ಸಾಕಾಗುವುದಿಲ್ಲ! ಒಂದೊಂದು ಹಾಸ್ಟೆಲ್ಲಿನಲ್ಲಿ ಹೆಚ್ಚುವರಿ 50 ಮಕ್ಕಳಿಗೆ ಅವಕಾಶ ಎಂದು ಹೇಳಿದಂತಾಯಿತು. ಬೇಡಿಕೆ ಎಷ್ಟಿದೆ? ಈ ಬಾರಿ 10ನೇ ತರಗತಿಯಲ್ಲಿ ಎಲ್ಲರೂ ಪಾಸಾಗಿರುವಾಗ, ವಿದ್ಯಾಕಾಂಕ್ಷಿ ಹುಡುಗರ ಕತೆ ಏನು? ಕೋವಿಡ್ ಕಾಲದಲ್ಲಿ ಸರಕಾರಕ್ಕೆ ಇದು ಗೊತ್ತಿಲ್ಲದೇ ಏನೂ ಅಲ್ಲ!

ಈ ಸರಕಾರ ಉದಾರವಾಗುವುದು ಯಾವುದಕ್ಕೆ ನೋಡಿ:

ಸಾವಯವ ಇಂಗಾಲ ಹೆಚ್ಚಿಸಲು, ರೈತರ ಗೋದಾಮು ಸಾಲದ ಬಡ್ಡಿ ಸಹಾಯಕ್ಕೆ ಕಾಸಿಲ್ಲ. ಆದರೆ ರಾಜ್ಯದ ಮೂರು ಬಲಾಢ್ಯ ಜಾತಿಗಳ ಅಭಿವೃದ್ಧಿಗೆ 1050 ಕೋಟಿ ಅನುದಾನ!! ಜಾತಿ ನಿಗಮಗಳಿಗೆ ಕಾಸು ಧಾರಾಳ, ರೈತರ ಕಷ್ಟಕ್ಕೆ ಕಾಸಿಲ್ಲ!

  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ನಿಗದಿ; 100 ಕೋಟಿ ರೂ. ಈಗಾಗಲೇ ಬಿಡುಗಡೆ. (2021-22ರ ಬಜೆಟ್)
  • ಒಕ್ಕಲಿಗ ಸಮುದಾಯದ ಹೊಸ ನಿಗಮ ಸ್ಥಾಪನೆ; 500 ಕೋಟಿ ರೂ. ವೆಚ್ಚದಲ್ಲಿ ಕಾರ್ಯಕ್ರಮಗಳ ಅನುಷ್ಠಾನ. (2021-22ರ ಬಜೆಟ್)
  • ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಚಟುವಟಿಕೆಗಳಿಗೆ 50 ಕೋಟಿ ರೂ. (2021-22ರ ಬಜೆಟ್)!

– ಕೆ.ಪಿ.ಸುರೇಶ

ಇಂಗ್ಲಿಷ್ ಅಧ್ಯಾಪಕರಾಗಲು ಎಂ.ಎ ಓದಿದ್ದ ಕೆ.ಪಿ.ಸುರೇಶ ಅವರು ಕೃಷಿಯಲ್ಲಿ ತೊಡಗಲು ಸುಳ್ಯ ತಾಲೂಕಿನ ತಮ್ಮ ಊರಿಗೆ ಮರಳಿದ್ದರು. ತಮ್ಮ ಸ್ವಂತ ಅನುಭವ, ಅಧ್ಯಯನ ಹಾಗೂ ಒಳನೋಟಗಳ ಕಾರಣಕ್ಕೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯ ವಿಚಾರದಲ್ಲಿ ತಜ್ಞರಿಗೂ, ರೈತರಿಗೂ ಪಾಠ ಮಾಡಬಲ್ಲರು. ಅಪಾರ ಕೀಟಲೆಯ ಸ್ವಭಾವದ ಅವರು ಹಲವು ವಿಚಾರಗಳ ಕುರಿತು ಬರೆಯುತ್ತಿರುವ ಆಲ್‌ರೌಂಡರ್ ಕೂಡ.


ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...