Homeಚಳವಳಿಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ...

ಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ ಕೋಟಿ ಅನುದಾನ!

- Advertisement -
- Advertisement -

ಮುಂದಿನ 5 ವರ್ಷಗಳಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಕಾರ್ಯಕ್ರಮ; 2021-22ನೇ ಸಾಲಿನಲ್ಲಿ 10 ಕೋಟಿ ರೂ. ಅನುದಾನ (2021-22ರ ಬಜೆಟ್)

ಕರ್ನಾಟಕದ ಬಹುತೇಕ ಜಿಲ್ಲೆಗಳ ಸಾವಯವ ಇಂಗಾಲದ ಪ್ರಮಾಣ 0.5% ಗೆ ಇಳಿದಿದ್ದು ವೈಜ್ಞಾನಿಕ ನಿಷ್ಕರ್ಷೆಯೇ ಮಾನದಂಡವಾದಲ್ಲಿ ಇಲ್ಲಿ ಕೃಷಿ ಮಾಡಲು ಸಾಧ್ಯವೇ ಇಲ್ಲ! ತುರ್ತಾಗಿ ಈ ಸಾವಯವ ಇಂಗಾಲದ ಪ್ರಮಾಣವನ್ನು ಏರಿಸಬೇಕಾಗಿದೆ. ಸಾವಯವ ಇಂಗಾಲದ ಪ್ರಮಾಣ ಏರಿಸುವುದು ಅಂದರೆ ಕೃಷಿ ತ್ಯಾಜ್ಯ ಮತ್ತಿತರ ಜೈವಿಕ ಉಳಿಕೆಗಳನ್ನು ಮಣ್ಣಿಗೆ ಮರಳಿ ಸೇರಿಸುವುದು. ಇಂಥಾ ತುರ್ತು ಕಾರ‍್ಯಕ್ರಮಕ್ಕೆ ಸರಕಾರದ ಅನುದಾನ ಕೇವಲ 10 ಕೋಟಿ ರೂಪಾಯಿ!

ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು (PACS) ಹಾಗೂ ಟಿ.ಎ.ಪಿ.ಸಿ.ಎಂ.ಎಸ್.ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ. 11 ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದ ಶೇ. 4 ರ ಬಡ್ಡಿ ಸಹಾಯಧನ. ಐದು ಕೋಟಿ ರೂ. ಅನುದಾನ(2021-22ರ ಬಜೆಟ್)

ಕೃಷಿ ಉತ್ಪನ್ನವನ್ನು ಸಂಕಷ್ಟದ ಸಮಯದಲ್ಲಿ ಮಾರಾಟ ಮಾಡಬಾರದು, ಅದನ್ನು ಸಹಕಾರಿ ಸಂಘಗಳಲ್ಲಿ ಅಡಮಾಣ ಇಟ್ಟು ಸಾಲ ತೆಗೆದುಕೊಂಡು ಉತ್ತಮ ಬೆಲೆ ಬಂದಾಗ ಮಾರಲು ಅನುಕೂಲ ಕಲ್ಪಿಸಬೇಕು. ಅದಕ್ಕೆ ಶೇ. 11ರ ಬಡ್ಡಿ ಹಾಕಲಾಗುತ್ತದೆ. ಈ ಬಡ್ಡಿಗೆ ಸಹಾಯಧನ ಶೇ.4ರಷ್ಟು ಕೊಡುವ ಸರಕಾರ ಅದಕ್ಕೆ ಮೀಸಲಿಟ್ಟ ಹಣ ಕೇವಲ 5 ಕೋಟಿ. ಈ ಐದು ಕೋಟಿ ಅಂದರೆ ಎಷ್ಟು ಸಾಲಕ್ಕೆ ಸಹಾಯ ನೀಡಿದಂತಾಗುತ್ತದೆ ಗೊತ್ತೇ? ಕೇವಲ 250 ಕೋಟಿಯ ಗೋದಾಮು ಸಾಲಕ್ಕೆ. ನಿಜಕ್ಕೂ ಬಡ್ಡಿ ಮನ್ನಾಕ್ಕೆ ಕನಿಷ್ಠ 100 ಕೋಟಿ ರೂ ನೀಡಿದಲ್ಲಿ ಏನಿಲ್ಲವೆಂದರೂ 2000 ಕೋಟಿಯ ಕೃಷಿ ಉತ್ಪನ್ನಗಳನ್ನು ರೈತರು ಗೋದಾಮಿನಲ್ಲಿಟ್ಟು ಉತ್ತಮ ಬೆಲೆ ಬಂದಾಗ ಮಾರಬಹುದು. ಇದೂ ಕರ್ನಾಟಕದ ಕೃಷಿ ಉತ್ಪನ್ನದ ಮೌಲ್ಯಕ್ಕೆ ಹೋಲಿಸಿದರೆ ಯಃಕಶ್ಚಿತ್. ಸರಕಾರ ದೃಢವಾದ ಬೆಂಬಲ ನೀಡದಿದ್ದರೆ ರೈತರು ಸಂಕಷ್ಟದ ಮಾರಾಟ ಮಾಡುವುದು ಹೇಗೆ ತಾನೇ ನಿಲ್ಲುತ್ತದೆ?

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50 ಕೋಟಿ ರೂ. ವೆಚ್ಚದಲ್ಲಿ 50 ಹೊಸ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರಾರಂಭ. 5 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ. (2021-22ರ ಬಜೆಟ್)

ಬಡ ವಿದ್ಯಾರ್ಥಿಗಳಿಗೆ 50 ಹೊಸ ಹಾಸ್ಟೆಲ್ ಆರಂಭ! ಅನುದಾಣ ತಲಾ ಒಂದು ಕೋಟಿ ರೂಪಾಯಿ! ಈ ಒಂದು ಕೋಟಿ ರೂಪಾಯಿ ಈಗ ಮೇಲ್ಮಧ್ಯಮ ವರ್ಗದ ಮನೆಗೇ ಸಾಕಾಗುವುದಿಲ್ಲ! ಒಂದೊಂದು ಹಾಸ್ಟೆಲ್ಲಿನಲ್ಲಿ ಹೆಚ್ಚುವರಿ 50 ಮಕ್ಕಳಿಗೆ ಅವಕಾಶ ಎಂದು ಹೇಳಿದಂತಾಯಿತು. ಬೇಡಿಕೆ ಎಷ್ಟಿದೆ? ಈ ಬಾರಿ 10ನೇ ತರಗತಿಯಲ್ಲಿ ಎಲ್ಲರೂ ಪಾಸಾಗಿರುವಾಗ, ವಿದ್ಯಾಕಾಂಕ್ಷಿ ಹುಡುಗರ ಕತೆ ಏನು? ಕೋವಿಡ್ ಕಾಲದಲ್ಲಿ ಸರಕಾರಕ್ಕೆ ಇದು ಗೊತ್ತಿಲ್ಲದೇ ಏನೂ ಅಲ್ಲ!

ಈ ಸರಕಾರ ಉದಾರವಾಗುವುದು ಯಾವುದಕ್ಕೆ ನೋಡಿ:

ಸಾವಯವ ಇಂಗಾಲ ಹೆಚ್ಚಿಸಲು, ರೈತರ ಗೋದಾಮು ಸಾಲದ ಬಡ್ಡಿ ಸಹಾಯಕ್ಕೆ ಕಾಸಿಲ್ಲ. ಆದರೆ ರಾಜ್ಯದ ಮೂರು ಬಲಾಢ್ಯ ಜಾತಿಗಳ ಅಭಿವೃದ್ಧಿಗೆ 1050 ಕೋಟಿ ಅನುದಾನ!! ಜಾತಿ ನಿಗಮಗಳಿಗೆ ಕಾಸು ಧಾರಾಳ, ರೈತರ ಕಷ್ಟಕ್ಕೆ ಕಾಸಿಲ್ಲ!

  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ನಿಗದಿ; 100 ಕೋಟಿ ರೂ. ಈಗಾಗಲೇ ಬಿಡುಗಡೆ. (2021-22ರ ಬಜೆಟ್)
  • ಒಕ್ಕಲಿಗ ಸಮುದಾಯದ ಹೊಸ ನಿಗಮ ಸ್ಥಾಪನೆ; 500 ಕೋಟಿ ರೂ. ವೆಚ್ಚದಲ್ಲಿ ಕಾರ್ಯಕ್ರಮಗಳ ಅನುಷ್ಠಾನ. (2021-22ರ ಬಜೆಟ್)
  • ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಚಟುವಟಿಕೆಗಳಿಗೆ 50 ಕೋಟಿ ರೂ. (2021-22ರ ಬಜೆಟ್)!

– ಕೆ.ಪಿ.ಸುರೇಶ

ಇಂಗ್ಲಿಷ್ ಅಧ್ಯಾಪಕರಾಗಲು ಎಂ.ಎ ಓದಿದ್ದ ಕೆ.ಪಿ.ಸುರೇಶ ಅವರು ಕೃಷಿಯಲ್ಲಿ ತೊಡಗಲು ಸುಳ್ಯ ತಾಲೂಕಿನ ತಮ್ಮ ಊರಿಗೆ ಮರಳಿದ್ದರು. ತಮ್ಮ ಸ್ವಂತ ಅನುಭವ, ಅಧ್ಯಯನ ಹಾಗೂ ಒಳನೋಟಗಳ ಕಾರಣಕ್ಕೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯ ವಿಚಾರದಲ್ಲಿ ತಜ್ಞರಿಗೂ, ರೈತರಿಗೂ ಪಾಠ ಮಾಡಬಲ್ಲರು. ಅಪಾರ ಕೀಟಲೆಯ ಸ್ವಭಾವದ ಅವರು ಹಲವು ವಿಚಾರಗಳ ಕುರಿತು ಬರೆಯುತ್ತಿರುವ ಆಲ್‌ರೌಂಡರ್ ಕೂಡ.


ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...