Homeಚಳವಳಿಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ...

ಈ ವರ್ಷದ ಬಜೆಟ್ಟಿನ ಒಂದು ಝಲಕ್: ರೈತರ ಸಂಕಷ್ಟಕ್ಕೆ ಕಾಸಿಲ್ಲ, ದಾಢಸಿ ಜಾತಿ ನಿಗಮಗಳಿಗೆ ಸಾವಿರ ಕೋಟಿ ಅನುದಾನ!

- Advertisement -
- Advertisement -

ಮುಂದಿನ 5 ವರ್ಷಗಳಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಕಾರ್ಯಕ್ರಮ; 2021-22ನೇ ಸಾಲಿನಲ್ಲಿ 10 ಕೋಟಿ ರೂ. ಅನುದಾನ (2021-22ರ ಬಜೆಟ್)

ಕರ್ನಾಟಕದ ಬಹುತೇಕ ಜಿಲ್ಲೆಗಳ ಸಾವಯವ ಇಂಗಾಲದ ಪ್ರಮಾಣ 0.5% ಗೆ ಇಳಿದಿದ್ದು ವೈಜ್ಞಾನಿಕ ನಿಷ್ಕರ್ಷೆಯೇ ಮಾನದಂಡವಾದಲ್ಲಿ ಇಲ್ಲಿ ಕೃಷಿ ಮಾಡಲು ಸಾಧ್ಯವೇ ಇಲ್ಲ! ತುರ್ತಾಗಿ ಈ ಸಾವಯವ ಇಂಗಾಲದ ಪ್ರಮಾಣವನ್ನು ಏರಿಸಬೇಕಾಗಿದೆ. ಸಾವಯವ ಇಂಗಾಲದ ಪ್ರಮಾಣ ಏರಿಸುವುದು ಅಂದರೆ ಕೃಷಿ ತ್ಯಾಜ್ಯ ಮತ್ತಿತರ ಜೈವಿಕ ಉಳಿಕೆಗಳನ್ನು ಮಣ್ಣಿಗೆ ಮರಳಿ ಸೇರಿಸುವುದು. ಇಂಥಾ ತುರ್ತು ಕಾರ‍್ಯಕ್ರಮಕ್ಕೆ ಸರಕಾರದ ಅನುದಾನ ಕೇವಲ 10 ಕೋಟಿ ರೂಪಾಯಿ!

ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು (PACS) ಹಾಗೂ ಟಿ.ಎ.ಪಿ.ಸಿ.ಎಂ.ಎಸ್.ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ. 11 ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದ ಶೇ. 4 ರ ಬಡ್ಡಿ ಸಹಾಯಧನ. ಐದು ಕೋಟಿ ರೂ. ಅನುದಾನ(2021-22ರ ಬಜೆಟ್)

ಕೃಷಿ ಉತ್ಪನ್ನವನ್ನು ಸಂಕಷ್ಟದ ಸಮಯದಲ್ಲಿ ಮಾರಾಟ ಮಾಡಬಾರದು, ಅದನ್ನು ಸಹಕಾರಿ ಸಂಘಗಳಲ್ಲಿ ಅಡಮಾಣ ಇಟ್ಟು ಸಾಲ ತೆಗೆದುಕೊಂಡು ಉತ್ತಮ ಬೆಲೆ ಬಂದಾಗ ಮಾರಲು ಅನುಕೂಲ ಕಲ್ಪಿಸಬೇಕು. ಅದಕ್ಕೆ ಶೇ. 11ರ ಬಡ್ಡಿ ಹಾಕಲಾಗುತ್ತದೆ. ಈ ಬಡ್ಡಿಗೆ ಸಹಾಯಧನ ಶೇ.4ರಷ್ಟು ಕೊಡುವ ಸರಕಾರ ಅದಕ್ಕೆ ಮೀಸಲಿಟ್ಟ ಹಣ ಕೇವಲ 5 ಕೋಟಿ. ಈ ಐದು ಕೋಟಿ ಅಂದರೆ ಎಷ್ಟು ಸಾಲಕ್ಕೆ ಸಹಾಯ ನೀಡಿದಂತಾಗುತ್ತದೆ ಗೊತ್ತೇ? ಕೇವಲ 250 ಕೋಟಿಯ ಗೋದಾಮು ಸಾಲಕ್ಕೆ. ನಿಜಕ್ಕೂ ಬಡ್ಡಿ ಮನ್ನಾಕ್ಕೆ ಕನಿಷ್ಠ 100 ಕೋಟಿ ರೂ ನೀಡಿದಲ್ಲಿ ಏನಿಲ್ಲವೆಂದರೂ 2000 ಕೋಟಿಯ ಕೃಷಿ ಉತ್ಪನ್ನಗಳನ್ನು ರೈತರು ಗೋದಾಮಿನಲ್ಲಿಟ್ಟು ಉತ್ತಮ ಬೆಲೆ ಬಂದಾಗ ಮಾರಬಹುದು. ಇದೂ ಕರ್ನಾಟಕದ ಕೃಷಿ ಉತ್ಪನ್ನದ ಮೌಲ್ಯಕ್ಕೆ ಹೋಲಿಸಿದರೆ ಯಃಕಶ್ಚಿತ್. ಸರಕಾರ ದೃಢವಾದ ಬೆಂಬಲ ನೀಡದಿದ್ದರೆ ರೈತರು ಸಂಕಷ್ಟದ ಮಾರಾಟ ಮಾಡುವುದು ಹೇಗೆ ತಾನೇ ನಿಲ್ಲುತ್ತದೆ?

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50 ಕೋಟಿ ರೂ. ವೆಚ್ಚದಲ್ಲಿ 50 ಹೊಸ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರಾರಂಭ. 5 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ. (2021-22ರ ಬಜೆಟ್)

ಬಡ ವಿದ್ಯಾರ್ಥಿಗಳಿಗೆ 50 ಹೊಸ ಹಾಸ್ಟೆಲ್ ಆರಂಭ! ಅನುದಾಣ ತಲಾ ಒಂದು ಕೋಟಿ ರೂಪಾಯಿ! ಈ ಒಂದು ಕೋಟಿ ರೂಪಾಯಿ ಈಗ ಮೇಲ್ಮಧ್ಯಮ ವರ್ಗದ ಮನೆಗೇ ಸಾಕಾಗುವುದಿಲ್ಲ! ಒಂದೊಂದು ಹಾಸ್ಟೆಲ್ಲಿನಲ್ಲಿ ಹೆಚ್ಚುವರಿ 50 ಮಕ್ಕಳಿಗೆ ಅವಕಾಶ ಎಂದು ಹೇಳಿದಂತಾಯಿತು. ಬೇಡಿಕೆ ಎಷ್ಟಿದೆ? ಈ ಬಾರಿ 10ನೇ ತರಗತಿಯಲ್ಲಿ ಎಲ್ಲರೂ ಪಾಸಾಗಿರುವಾಗ, ವಿದ್ಯಾಕಾಂಕ್ಷಿ ಹುಡುಗರ ಕತೆ ಏನು? ಕೋವಿಡ್ ಕಾಲದಲ್ಲಿ ಸರಕಾರಕ್ಕೆ ಇದು ಗೊತ್ತಿಲ್ಲದೇ ಏನೂ ಅಲ್ಲ!

ಈ ಸರಕಾರ ಉದಾರವಾಗುವುದು ಯಾವುದಕ್ಕೆ ನೋಡಿ:

ಸಾವಯವ ಇಂಗಾಲ ಹೆಚ್ಚಿಸಲು, ರೈತರ ಗೋದಾಮು ಸಾಲದ ಬಡ್ಡಿ ಸಹಾಯಕ್ಕೆ ಕಾಸಿಲ್ಲ. ಆದರೆ ರಾಜ್ಯದ ಮೂರು ಬಲಾಢ್ಯ ಜಾತಿಗಳ ಅಭಿವೃದ್ಧಿಗೆ 1050 ಕೋಟಿ ಅನುದಾನ!! ಜಾತಿ ನಿಗಮಗಳಿಗೆ ಕಾಸು ಧಾರಾಳ, ರೈತರ ಕಷ್ಟಕ್ಕೆ ಕಾಸಿಲ್ಲ!

  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ನಿಗದಿ; 100 ಕೋಟಿ ರೂ. ಈಗಾಗಲೇ ಬಿಡುಗಡೆ. (2021-22ರ ಬಜೆಟ್)
  • ಒಕ್ಕಲಿಗ ಸಮುದಾಯದ ಹೊಸ ನಿಗಮ ಸ್ಥಾಪನೆ; 500 ಕೋಟಿ ರೂ. ವೆಚ್ಚದಲ್ಲಿ ಕಾರ್ಯಕ್ರಮಗಳ ಅನುಷ್ಠಾನ. (2021-22ರ ಬಜೆಟ್)
  • ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಚಟುವಟಿಕೆಗಳಿಗೆ 50 ಕೋಟಿ ರೂ. (2021-22ರ ಬಜೆಟ್)!

– ಕೆ.ಪಿ.ಸುರೇಶ

ಇಂಗ್ಲಿಷ್ ಅಧ್ಯಾಪಕರಾಗಲು ಎಂ.ಎ ಓದಿದ್ದ ಕೆ.ಪಿ.ಸುರೇಶ ಅವರು ಕೃಷಿಯಲ್ಲಿ ತೊಡಗಲು ಸುಳ್ಯ ತಾಲೂಕಿನ ತಮ್ಮ ಊರಿಗೆ ಮರಳಿದ್ದರು. ತಮ್ಮ ಸ್ವಂತ ಅನುಭವ, ಅಧ್ಯಯನ ಹಾಗೂ ಒಳನೋಟಗಳ ಕಾರಣಕ್ಕೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯ ವಿಚಾರದಲ್ಲಿ ತಜ್ಞರಿಗೂ, ರೈತರಿಗೂ ಪಾಠ ಮಾಡಬಲ್ಲರು. ಅಪಾರ ಕೀಟಲೆಯ ಸ್ವಭಾವದ ಅವರು ಹಲವು ವಿಚಾರಗಳ ಕುರಿತು ಬರೆಯುತ್ತಿರುವ ಆಲ್‌ರೌಂಡರ್ ಕೂಡ.


ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...