Homeಚಳವಳಿಪನ್ಸಾರೆ, ದಾಭೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

ಪನ್ಸಾರೆ, ದಾಭೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

ಸಾಮಾಜಿಕ ಹೋರಾಟಗಾರರಾದ ಗೋವಿಂದ್ ಪನ್ಸಾರೆ ಮತ್ತು ನರೇಂದ್ರ ದಾಭೋಲ್ಕರ್ ಅವರ ಹತ್ಯೆ ಪ್ರಕರಣದ ತನಿಖೆ ಇನ್ನು ಎಷ್ಟು ದಿನ ಮುಂದುವರಿಯುತ್ತದೆ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಮಹಾರಾಷ್ಟ್ರ ಸಿಐಡಿ ಮತ್ತು ಸಿಬಿಐಗೆ ಕೇಳಿದೆ.

ಕಮ್ಯುನಿಸ್ಟ್ ನಾಯಕ ಪನ್ಸಾರೆ ಹತ್ಯೆಯ ಬಗ್ಗೆ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆ ನಡೆಸುತ್ತಿದ್ದು, ಖ್ಯಾತ ಮೂಡನಂಬಿಕೆ ವಿರೋಧಿ ಹೋರಾಟಗಾರ ದಾಭೋಲ್ಕರ್ ಅವರ ಹತ್ಯೆಯನ್ನು ಸಿಬಿಐ ತನಿಖೆ ನಡೆಸುತ್ತಿದೆ.

ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಮನೀಶ್ ಪಿಟಾಲೆ ಅವರ ನ್ಯಾಯಪೀಠವು, “ಸೂಕ್ಷ್ಮ ಪ್ರಕರಣಗಳಲ್ಲಿ” ದೇಶದ ನಾಗರಿಕರು ತನಿಖಾ ಸಂಸ್ಥೆಗಳು ಯಾವಾಗ ತನಿಖೆಯನ್ನು ಪೂರ್ಣಗೊಳಿಸುತ್ತವೆ ಮತ್ತು ಯಾವಾಗ ವಿಚಾರಣೆ ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ತಿಳಿಯಲು ಬಯಸಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

“ಕರ್ನಾಟಕದಲ್ಲಿ ಇದೇ ರೀತಿಯ ಘಟನೆಯ ವಿಚಾರಣೆ (ಗೌರಿ ಲಂಕೇಶ್ ಹತ್ಯೆ) ಈಗಾಗಲೇ ಪ್ರಾರಂಭವಾಗಿದ್ದರೂ, ಮಹಾರಾಷ್ಟ್ರದಲ್ಲಿನ ಪ್ರಕರಣಗಳು ಒಂದೇ ರೀತಿಯ ಸ್ವರೂಪದ್ದಾಗಿದ್ದರೂ ತನಿಖೆ ಯಾವಾಗ ಪೂರ್ಣಗೊಳ್ಳುತ್ತದೆ ಎಂಬುದು ಸ್ಪಷ್ಟವಾಗಿಲ್ಲ” ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.

2013 ರ ಆಗಸ್ಟ್ 20 ರಂದು ಪುಣೆಯಲ್ಲಿ ದಾಭೋಲ್ಕರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಪನ್ಸಾರೆ ಅವರನ್ನು ಫೆಬ್ರವರಿ 16, 2015 ರಂದು ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಗುಂಡಿಕ್ಕಲಾಯಿತು, ಇದಾಗಿ ನಾಲ್ಕು ದಿನಗಳ ನಂತರ ಅವರು ನಿಧನರಾದರು. ಸಂಶೋಧಕ ಎಂ.ಎಂ. ಕಲ್ಬುರ್ಗಿ ಅವರನ್ನು ಆಗಸ್ಟ್ 30, 2015 ರಂದು ಗುಂಡಿಕ್ಕಿ ಕೊಲ್ಲಲಾಯಿತು.

ಈ ಮೂರು ಪ್ರಕರಣಗಳಿಗೂ, 2017 ರಲ್ಲಿ ಹತ್ಯೆಗೀಡಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ಸಂಬಂಧವಿದೆ. ಈ ಹತ್ಯೆಗಳ ಹಿಂದೆ ಬಲಪಂಥೀಯ ಉಗ್ರಗಾಮಿಗಳ ಕೈವಾಡ ಇದೆ ಎಂದು ತನಿಖಾ ಸಂಸ್ಥೆಗಳು ತಿಳಿಸಿವೆ.

ಇದನ್ನೂ ಓದಿ: ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ: ಜಗನ್ ಪಕ್ಷಕ್ಕೆ ಭಾರೀ ಮುನ್ನಡೆ

ಎರಡು ತನಿಖೆಗಳ ನ್ಯಾಯಾಲಯದ ಮೇಲ್ವಿಚಾರಣೆ ಕೋರಿ ದಾಭೋಲ್ಕರ್ ಮತ್ತು ಪನ್ಸಾರೆ ಅವರ ಸಂಬಂಧಿಕರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ.

ಸಿಬಿಐ ವಕೀಲ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರು “ಸಾಧ್ಯವಾದಷ್ಟು ಪ್ರಯತ್ನವನ್ನು ತನಿಖಾ ಸಂಸ್ಥೆಗಳು ಮಾಡುತ್ತಿದೆ” ಎಂದು ಹೇಳಿದ್ದಾರೆ. ಆದರೆ ದಾಬೋಲ್ಕರ್ ಪ್ರಕರಣದಲ್ಲಿ ದುಷ್ಕರ್ಮಿಗಳು ಬಳಸಿದ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ, ಅದನ್ನು ಆರೋಪಿಗಳು ಥಾಣೆ ಸಮೀಪದ ಕೊಲ್ಲಿಯಲ್ಲಿ ಎಸೆದಿದ್ದಾರೆಂದು ಹೇಳಲಾಗಿದೆ.

ಮುಂದಿನ ವಿಚಾರಣೆಯ ಮೊದಲು ಸಿಬಿಐ ತನಿಖೆಯ ಹೊಸ ವರದಿಯನ್ನು ಸಲ್ಲಿಸುತ್ತದೆ ಎಂದು ಅವರು ನ್ಯಾಯಾಲಯಕ್ಕೆ ಹೇಳಿದ್ದಾರೆ.

ದಾಭೋಲ್ಕರ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಐವರು ಆರೋಪಿಗಳಲ್ಲಿ ಒಬ್ಬರು ಜಾಮೀನಿನ ಮೇಲೆ ಹೊರಗಿದ್ದಾರೆ ಮತ್ತು ಇಬ್ಬರು ಆಪಾದಿತ ಶೂಟರ್‌ಗಳು ಸೇರಿದಂತೆ ಇತರರು ಬಂಧನದಲ್ಲಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನನ್ನ ಜನರ ನೋವಿಗಿಂತ ನನ್ನದು ದೊಡ್ಡದಲ್ಲ, ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ

ದಾಭೋಲ್ಕರ್‌ ಪ್ರಕರಣದಲ್ಲಿ ಸಿಬಿಐ ಮೂರು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದೆ, ಆದರೆ ಪನ್ಸಾರೆ ಪ್ರಕರಣದ ಸಿಐಡಿ ತನಿಖೆಯಲ್ಲಿ ಯಾವುದೇ ಪ್ರಗತಿಯಿಲ್ಲ ಎಂದು ಅರ್ಜಿದಾರರ ಪರವಾಗಿ ವಕೀಲ ಅಭಯ್‌‌ ನ್ಯಾಯಾಲಯದಲ್ಲಿ ಹೇಳಿದ್ದಾರೆ.

“ಘಟನೆಗಳು 2013 ಮತ್ತು 2015 ರಲ್ಲಿ ನಡೆದವು. ನಾವು ಈಗ 2021 ರಲ್ಲಿದ್ದೇವೆ. ಇದು ಎಷ್ಟು ದಿನ ಮುಂದುವರಿಯುತ್ತದೆ?” ಎಂದು ಹೈಕೋರ್ಟ್ ಕೇಳಿದೆ.

“ನೀವು ಸ್ಪಷ್ಟವಾದ, ದೃಢವಾದ ಸೂಚನೆಗಳನ್ನು ತೆಗೆದುಕೊಂಡು, ಮುಂದಿನ ವಿಚಾರಣೆಯಂದು ತನಿಖೆಗಾಗಿ ನೀವು ಎಷ್ಟು ಸಮಯ ತೆಗೆದುಕೊಳ್ಳುತ್ತೀರಿ ಎಂಬುದರ ಕುರಿತು ಸಕಾರಾತ್ಮಕ ಹೇಳಿಕೆ ನೀಡಿ” ಎಂದು ಹೈಕೋರ್ಟ್ ಹೇಳಿದ್ದು, ವಿಚಾರಣೆಯನ್ನು ಮಾರ್ಚ್ 30 ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....