Homeಚಳವಳಿಪನ್ಸಾರೆ, ದಾಭೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

ಪನ್ಸಾರೆ, ದಾಭೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

ಸಾಮಾಜಿಕ ಹೋರಾಟಗಾರರಾದ ಗೋವಿಂದ್ ಪನ್ಸಾರೆ ಮತ್ತು ನರೇಂದ್ರ ದಾಭೋಲ್ಕರ್ ಅವರ ಹತ್ಯೆ ಪ್ರಕರಣದ ತನಿಖೆ ಇನ್ನು ಎಷ್ಟು ದಿನ ಮುಂದುವರಿಯುತ್ತದೆ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಮಹಾರಾಷ್ಟ್ರ ಸಿಐಡಿ ಮತ್ತು ಸಿಬಿಐಗೆ ಕೇಳಿದೆ.

ಕಮ್ಯುನಿಸ್ಟ್ ನಾಯಕ ಪನ್ಸಾರೆ ಹತ್ಯೆಯ ಬಗ್ಗೆ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆ ನಡೆಸುತ್ತಿದ್ದು, ಖ್ಯಾತ ಮೂಡನಂಬಿಕೆ ವಿರೋಧಿ ಹೋರಾಟಗಾರ ದಾಭೋಲ್ಕರ್ ಅವರ ಹತ್ಯೆಯನ್ನು ಸಿಬಿಐ ತನಿಖೆ ನಡೆಸುತ್ತಿದೆ.

ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಮನೀಶ್ ಪಿಟಾಲೆ ಅವರ ನ್ಯಾಯಪೀಠವು, “ಸೂಕ್ಷ್ಮ ಪ್ರಕರಣಗಳಲ್ಲಿ” ದೇಶದ ನಾಗರಿಕರು ತನಿಖಾ ಸಂಸ್ಥೆಗಳು ಯಾವಾಗ ತನಿಖೆಯನ್ನು ಪೂರ್ಣಗೊಳಿಸುತ್ತವೆ ಮತ್ತು ಯಾವಾಗ ವಿಚಾರಣೆ ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ತಿಳಿಯಲು ಬಯಸಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

“ಕರ್ನಾಟಕದಲ್ಲಿ ಇದೇ ರೀತಿಯ ಘಟನೆಯ ವಿಚಾರಣೆ (ಗೌರಿ ಲಂಕೇಶ್ ಹತ್ಯೆ) ಈಗಾಗಲೇ ಪ್ರಾರಂಭವಾಗಿದ್ದರೂ, ಮಹಾರಾಷ್ಟ್ರದಲ್ಲಿನ ಪ್ರಕರಣಗಳು ಒಂದೇ ರೀತಿಯ ಸ್ವರೂಪದ್ದಾಗಿದ್ದರೂ ತನಿಖೆ ಯಾವಾಗ ಪೂರ್ಣಗೊಳ್ಳುತ್ತದೆ ಎಂಬುದು ಸ್ಪಷ್ಟವಾಗಿಲ್ಲ” ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.

2013 ರ ಆಗಸ್ಟ್ 20 ರಂದು ಪುಣೆಯಲ್ಲಿ ದಾಭೋಲ್ಕರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಪನ್ಸಾರೆ ಅವರನ್ನು ಫೆಬ್ರವರಿ 16, 2015 ರಂದು ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಗುಂಡಿಕ್ಕಲಾಯಿತು, ಇದಾಗಿ ನಾಲ್ಕು ದಿನಗಳ ನಂತರ ಅವರು ನಿಧನರಾದರು. ಸಂಶೋಧಕ ಎಂ.ಎಂ. ಕಲ್ಬುರ್ಗಿ ಅವರನ್ನು ಆಗಸ್ಟ್ 30, 2015 ರಂದು ಗುಂಡಿಕ್ಕಿ ಕೊಲ್ಲಲಾಯಿತು.

ಈ ಮೂರು ಪ್ರಕರಣಗಳಿಗೂ, 2017 ರಲ್ಲಿ ಹತ್ಯೆಗೀಡಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ಸಂಬಂಧವಿದೆ. ಈ ಹತ್ಯೆಗಳ ಹಿಂದೆ ಬಲಪಂಥೀಯ ಉಗ್ರಗಾಮಿಗಳ ಕೈವಾಡ ಇದೆ ಎಂದು ತನಿಖಾ ಸಂಸ್ಥೆಗಳು ತಿಳಿಸಿವೆ.

ಇದನ್ನೂ ಓದಿ: ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ: ಜಗನ್ ಪಕ್ಷಕ್ಕೆ ಭಾರೀ ಮುನ್ನಡೆ

ಎರಡು ತನಿಖೆಗಳ ನ್ಯಾಯಾಲಯದ ಮೇಲ್ವಿಚಾರಣೆ ಕೋರಿ ದಾಭೋಲ್ಕರ್ ಮತ್ತು ಪನ್ಸಾರೆ ಅವರ ಸಂಬಂಧಿಕರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ.

ಸಿಬಿಐ ವಕೀಲ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರು “ಸಾಧ್ಯವಾದಷ್ಟು ಪ್ರಯತ್ನವನ್ನು ತನಿಖಾ ಸಂಸ್ಥೆಗಳು ಮಾಡುತ್ತಿದೆ” ಎಂದು ಹೇಳಿದ್ದಾರೆ. ಆದರೆ ದಾಬೋಲ್ಕರ್ ಪ್ರಕರಣದಲ್ಲಿ ದುಷ್ಕರ್ಮಿಗಳು ಬಳಸಿದ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ, ಅದನ್ನು ಆರೋಪಿಗಳು ಥಾಣೆ ಸಮೀಪದ ಕೊಲ್ಲಿಯಲ್ಲಿ ಎಸೆದಿದ್ದಾರೆಂದು ಹೇಳಲಾಗಿದೆ.

ಮುಂದಿನ ವಿಚಾರಣೆಯ ಮೊದಲು ಸಿಬಿಐ ತನಿಖೆಯ ಹೊಸ ವರದಿಯನ್ನು ಸಲ್ಲಿಸುತ್ತದೆ ಎಂದು ಅವರು ನ್ಯಾಯಾಲಯಕ್ಕೆ ಹೇಳಿದ್ದಾರೆ.

ದಾಭೋಲ್ಕರ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಐವರು ಆರೋಪಿಗಳಲ್ಲಿ ಒಬ್ಬರು ಜಾಮೀನಿನ ಮೇಲೆ ಹೊರಗಿದ್ದಾರೆ ಮತ್ತು ಇಬ್ಬರು ಆಪಾದಿತ ಶೂಟರ್‌ಗಳು ಸೇರಿದಂತೆ ಇತರರು ಬಂಧನದಲ್ಲಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನನ್ನ ಜನರ ನೋವಿಗಿಂತ ನನ್ನದು ದೊಡ್ಡದಲ್ಲ, ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ

ದಾಭೋಲ್ಕರ್‌ ಪ್ರಕರಣದಲ್ಲಿ ಸಿಬಿಐ ಮೂರು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದೆ, ಆದರೆ ಪನ್ಸಾರೆ ಪ್ರಕರಣದ ಸಿಐಡಿ ತನಿಖೆಯಲ್ಲಿ ಯಾವುದೇ ಪ್ರಗತಿಯಿಲ್ಲ ಎಂದು ಅರ್ಜಿದಾರರ ಪರವಾಗಿ ವಕೀಲ ಅಭಯ್‌‌ ನ್ಯಾಯಾಲಯದಲ್ಲಿ ಹೇಳಿದ್ದಾರೆ.

“ಘಟನೆಗಳು 2013 ಮತ್ತು 2015 ರಲ್ಲಿ ನಡೆದವು. ನಾವು ಈಗ 2021 ರಲ್ಲಿದ್ದೇವೆ. ಇದು ಎಷ್ಟು ದಿನ ಮುಂದುವರಿಯುತ್ತದೆ?” ಎಂದು ಹೈಕೋರ್ಟ್ ಕೇಳಿದೆ.

“ನೀವು ಸ್ಪಷ್ಟವಾದ, ದೃಢವಾದ ಸೂಚನೆಗಳನ್ನು ತೆಗೆದುಕೊಂಡು, ಮುಂದಿನ ವಿಚಾರಣೆಯಂದು ತನಿಖೆಗಾಗಿ ನೀವು ಎಷ್ಟು ಸಮಯ ತೆಗೆದುಕೊಳ್ಳುತ್ತೀರಿ ಎಂಬುದರ ಕುರಿತು ಸಕಾರಾತ್ಮಕ ಹೇಳಿಕೆ ನೀಡಿ” ಎಂದು ಹೈಕೋರ್ಟ್ ಹೇಳಿದ್ದು, ವಿಚಾರಣೆಯನ್ನು ಮಾರ್ಚ್ 30 ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...