Homeಚಳವಳಿಪನ್ಸಾರೆ, ದಾಭೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

ಪನ್ಸಾರೆ, ದಾಭೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

ಸಾಮಾಜಿಕ ಹೋರಾಟಗಾರರಾದ ಗೋವಿಂದ್ ಪನ್ಸಾರೆ ಮತ್ತು ನರೇಂದ್ರ ದಾಭೋಲ್ಕರ್ ಅವರ ಹತ್ಯೆ ಪ್ರಕರಣದ ತನಿಖೆ ಇನ್ನು ಎಷ್ಟು ದಿನ ಮುಂದುವರಿಯುತ್ತದೆ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಮಹಾರಾಷ್ಟ್ರ ಸಿಐಡಿ ಮತ್ತು ಸಿಬಿಐಗೆ ಕೇಳಿದೆ.

ಕಮ್ಯುನಿಸ್ಟ್ ನಾಯಕ ಪನ್ಸಾರೆ ಹತ್ಯೆಯ ಬಗ್ಗೆ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆ ನಡೆಸುತ್ತಿದ್ದು, ಖ್ಯಾತ ಮೂಡನಂಬಿಕೆ ವಿರೋಧಿ ಹೋರಾಟಗಾರ ದಾಭೋಲ್ಕರ್ ಅವರ ಹತ್ಯೆಯನ್ನು ಸಿಬಿಐ ತನಿಖೆ ನಡೆಸುತ್ತಿದೆ.

ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಮನೀಶ್ ಪಿಟಾಲೆ ಅವರ ನ್ಯಾಯಪೀಠವು, “ಸೂಕ್ಷ್ಮ ಪ್ರಕರಣಗಳಲ್ಲಿ” ದೇಶದ ನಾಗರಿಕರು ತನಿಖಾ ಸಂಸ್ಥೆಗಳು ಯಾವಾಗ ತನಿಖೆಯನ್ನು ಪೂರ್ಣಗೊಳಿಸುತ್ತವೆ ಮತ್ತು ಯಾವಾಗ ವಿಚಾರಣೆ ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ತಿಳಿಯಲು ಬಯಸಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

“ಕರ್ನಾಟಕದಲ್ಲಿ ಇದೇ ರೀತಿಯ ಘಟನೆಯ ವಿಚಾರಣೆ (ಗೌರಿ ಲಂಕೇಶ್ ಹತ್ಯೆ) ಈಗಾಗಲೇ ಪ್ರಾರಂಭವಾಗಿದ್ದರೂ, ಮಹಾರಾಷ್ಟ್ರದಲ್ಲಿನ ಪ್ರಕರಣಗಳು ಒಂದೇ ರೀತಿಯ ಸ್ವರೂಪದ್ದಾಗಿದ್ದರೂ ತನಿಖೆ ಯಾವಾಗ ಪೂರ್ಣಗೊಳ್ಳುತ್ತದೆ ಎಂಬುದು ಸ್ಪಷ್ಟವಾಗಿಲ್ಲ” ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.

2013 ರ ಆಗಸ್ಟ್ 20 ರಂದು ಪುಣೆಯಲ್ಲಿ ದಾಭೋಲ್ಕರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಪನ್ಸಾರೆ ಅವರನ್ನು ಫೆಬ್ರವರಿ 16, 2015 ರಂದು ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಗುಂಡಿಕ್ಕಲಾಯಿತು, ಇದಾಗಿ ನಾಲ್ಕು ದಿನಗಳ ನಂತರ ಅವರು ನಿಧನರಾದರು. ಸಂಶೋಧಕ ಎಂ.ಎಂ. ಕಲ್ಬುರ್ಗಿ ಅವರನ್ನು ಆಗಸ್ಟ್ 30, 2015 ರಂದು ಗುಂಡಿಕ್ಕಿ ಕೊಲ್ಲಲಾಯಿತು.

ಈ ಮೂರು ಪ್ರಕರಣಗಳಿಗೂ, 2017 ರಲ್ಲಿ ಹತ್ಯೆಗೀಡಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ಸಂಬಂಧವಿದೆ. ಈ ಹತ್ಯೆಗಳ ಹಿಂದೆ ಬಲಪಂಥೀಯ ಉಗ್ರಗಾಮಿಗಳ ಕೈವಾಡ ಇದೆ ಎಂದು ತನಿಖಾ ಸಂಸ್ಥೆಗಳು ತಿಳಿಸಿವೆ.

ಇದನ್ನೂ ಓದಿ: ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ: ಜಗನ್ ಪಕ್ಷಕ್ಕೆ ಭಾರೀ ಮುನ್ನಡೆ

ಎರಡು ತನಿಖೆಗಳ ನ್ಯಾಯಾಲಯದ ಮೇಲ್ವಿಚಾರಣೆ ಕೋರಿ ದಾಭೋಲ್ಕರ್ ಮತ್ತು ಪನ್ಸಾರೆ ಅವರ ಸಂಬಂಧಿಕರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ.

ಸಿಬಿಐ ವಕೀಲ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರು “ಸಾಧ್ಯವಾದಷ್ಟು ಪ್ರಯತ್ನವನ್ನು ತನಿಖಾ ಸಂಸ್ಥೆಗಳು ಮಾಡುತ್ತಿದೆ” ಎಂದು ಹೇಳಿದ್ದಾರೆ. ಆದರೆ ದಾಬೋಲ್ಕರ್ ಪ್ರಕರಣದಲ್ಲಿ ದುಷ್ಕರ್ಮಿಗಳು ಬಳಸಿದ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ, ಅದನ್ನು ಆರೋಪಿಗಳು ಥಾಣೆ ಸಮೀಪದ ಕೊಲ್ಲಿಯಲ್ಲಿ ಎಸೆದಿದ್ದಾರೆಂದು ಹೇಳಲಾಗಿದೆ.

ಮುಂದಿನ ವಿಚಾರಣೆಯ ಮೊದಲು ಸಿಬಿಐ ತನಿಖೆಯ ಹೊಸ ವರದಿಯನ್ನು ಸಲ್ಲಿಸುತ್ತದೆ ಎಂದು ಅವರು ನ್ಯಾಯಾಲಯಕ್ಕೆ ಹೇಳಿದ್ದಾರೆ.

ದಾಭೋಲ್ಕರ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಐವರು ಆರೋಪಿಗಳಲ್ಲಿ ಒಬ್ಬರು ಜಾಮೀನಿನ ಮೇಲೆ ಹೊರಗಿದ್ದಾರೆ ಮತ್ತು ಇಬ್ಬರು ಆಪಾದಿತ ಶೂಟರ್‌ಗಳು ಸೇರಿದಂತೆ ಇತರರು ಬಂಧನದಲ್ಲಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನನ್ನ ಜನರ ನೋವಿಗಿಂತ ನನ್ನದು ದೊಡ್ಡದಲ್ಲ, ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ

ದಾಭೋಲ್ಕರ್‌ ಪ್ರಕರಣದಲ್ಲಿ ಸಿಬಿಐ ಮೂರು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದೆ, ಆದರೆ ಪನ್ಸಾರೆ ಪ್ರಕರಣದ ಸಿಐಡಿ ತನಿಖೆಯಲ್ಲಿ ಯಾವುದೇ ಪ್ರಗತಿಯಿಲ್ಲ ಎಂದು ಅರ್ಜಿದಾರರ ಪರವಾಗಿ ವಕೀಲ ಅಭಯ್‌‌ ನ್ಯಾಯಾಲಯದಲ್ಲಿ ಹೇಳಿದ್ದಾರೆ.

“ಘಟನೆಗಳು 2013 ಮತ್ತು 2015 ರಲ್ಲಿ ನಡೆದವು. ನಾವು ಈಗ 2021 ರಲ್ಲಿದ್ದೇವೆ. ಇದು ಎಷ್ಟು ದಿನ ಮುಂದುವರಿಯುತ್ತದೆ?” ಎಂದು ಹೈಕೋರ್ಟ್ ಕೇಳಿದೆ.

“ನೀವು ಸ್ಪಷ್ಟವಾದ, ದೃಢವಾದ ಸೂಚನೆಗಳನ್ನು ತೆಗೆದುಕೊಂಡು, ಮುಂದಿನ ವಿಚಾರಣೆಯಂದು ತನಿಖೆಗಾಗಿ ನೀವು ಎಷ್ಟು ಸಮಯ ತೆಗೆದುಕೊಳ್ಳುತ್ತೀರಿ ಎಂಬುದರ ಕುರಿತು ಸಕಾರಾತ್ಮಕ ಹೇಳಿಕೆ ನೀಡಿ” ಎಂದು ಹೈಕೋರ್ಟ್ ಹೇಳಿದ್ದು, ವಿಚಾರಣೆಯನ್ನು ಮಾರ್ಚ್ 30 ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...