Homeಮುಖಪುಟ'ಇನ್ನೆಷ್ಟು ದಿನ ಮುಸಲ್ಮಾನರ ಬಗ್ಗೆ ಭಯ ಹುಟ್ಟಿಸುತ್ತೀರಿ..'; ಪ್ರಧಾನಿ ಮೋದಿ ವಿರುದ್ಧ ಒವೈಸಿ ವಾಗ್ದಾಳಿ

‘ಇನ್ನೆಷ್ಟು ದಿನ ಮುಸಲ್ಮಾನರ ಬಗ್ಗೆ ಭಯ ಹುಟ್ಟಿಸುತ್ತೀರಿ..’; ಪ್ರಧಾನಿ ಮೋದಿ ವಿರುದ್ಧ ಒವೈಸಿ ವಾಗ್ದಾಳಿ

ಸರ್ಕಾರದ ಅಂಕಿಅಂಶಗಳ ಪ್ರಕಾರ ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ಕುಸಿದಿದೆ; ನೀವೇಕೆ ದ್ವೇಷದ ಗೋಡೆ ಕಟ್ಟುತ್ತಿದ್ದೀರಿ?

- Advertisement -
- Advertisement -

“ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮುಸ್ಲಿಮರು ಬಹುಸಂಖ್ಯಾತ ಸಮುದಾಯವಾಗುತ್ತಾರೆ ಎಂಬ ಭಯವನ್ನು ಹಿಂದೂಗಳಲ್ಲಿ ಮೂಡಿಸುತ್ತಿದ್ದಾರೆ. ಎಷ್ಟು ದಿನ ಮುಸಲ್ಮಾನರ ಬಗ್ಗೆ ಭಯ ಹುಟ್ಟಿಸುತ್ತೀರಿ..? ನಮ್ಮ ಧರ್ಮ ಬೇರೆ ಇರಬಹುದು; ಆದರೆ, ನಾವು ಈ ದೇಶಕ್ಕೆ ಸೇರಿದವರು” ಎಂದು ಹೈದರಾಬಾದ್ ಸಂಸದ, ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಸ್ಲಿಂಮರಿಗೆ ಹೆಚ್ಚು ಮಕ್ಕಳು ಎಂಬರ್ಥದಲ್ಲಿ ಟೀಕೆ ಮಾಡಿದ್ದ ಪ್ರಧಾನಿ ಮೋದಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಅವರು, “ನೀವು ದ್ವೇಷದ ಗೋಡೆಯನ್ನು ಏಕೆ ಕಟ್ಟುತ್ತಿದ್ದೀರಿ? ಮುಸ್ಲಿಮರು ಹೆಚ್ಚು ಮಕ್ಕಳನ್ನು ಉತ್ಪಾದಿಸುತ್ತಾರೆ ಎಂಬ ಭಯವನ್ನು ಏಕೆ ಸೃಷ್ಟಿಸುತ್ತಿದ್ದೀರಿ? ಮೋದಿ ಸರಕಾರದ ಅಂಕಿಅಂಶಗಳ ಪ್ರಕಾರ ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ಕುಸಿದಿದೆ. ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ ಮತ್ತು ಇದನ್ನು ಹೇಳಲು ನನಗೆ ನಾಚಿಕೆ ಇಲ್ಲ” ಎಂದು ಓವೈಸಿ ಹೇಳಿದರು.

‘ಈ ಮಾಹಿತಿಯ ಮೂಲ ಮೋದಿ ಸರ್ಕಾರದ ಡೇಟಾವೇ ಹೊರತು ನಾವಲ್ಲ’ ಎಂದು ಓವೈಸಿ ಹೇಳಿದ್ದಾರೆ. “ನರೇಂದ್ರ ಮೋದಿ ದ್ವೇಷವನ್ನು ಸೃಷ್ಟಿಸುತ್ತಿದ್ದಾರೆ; ಮುಸ್ಲಿಮರು ಗರಿಷ್ಠ ಸಂತಾನೋತ್ಪತ್ತಿ ದರವನ್ನು ಹೊಂದಿದ್ದಾರೆ ಎಂದು ಹೇಳುವ ಮೂಲಕ ಅವರು ಬಹುಸಂಖ್ಯಾತ ಸಮುದಾಯವನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಎಐಎಂಐಎಂ ನಾಯಕ ಹೇಳಿದರು.

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರ ಕುರಿತಾದ ಹೇಳಿಕೆಗೆ ರಾಜಕೀಯ ಬಿರುಗಾಳಿ ಎಬ್ಬಿಸಿದ್ದರು. ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಾಯಿ, ಸಹೋದರಿಯರ ಬಳಿ ಚಿನ್ನ ಲೆಕ್ಕ ಹಾಕಿ, ಅದರ ಬಗ್ಗೆ ಮಾಹಿತಿ ಪಡೆದು ಆ ಆಸ್ತಿಯನ್ನು ಹಂಚುತ್ತೇವೆ ಎಂದು ಹೇಳುತ್ತದೆ. ಯಾರಿಗೆ ಹಂಚುತ್ತೇವೆ ಎಂದು ಮನಮೋಹನ್ ಸಿಂಗ್ ಸರ್ಕಾರ ಹೇಳಿತ್ತು; ದೇಶದ ಆಸ್ತಿಗಳ ಮೇಲಿನ ಮೊದಲ ಹಕ್ಕು ಮುಸ್ಲಿಮರಿಗೆ” ಎಂದು ಹೇಳಿದ್ದರು.

“ಈ ಹಿಂದೆ ಅವರ (ಕಾಂಗ್ರೆಸ್) ಸರ್ಕಾರ ಅಧಿಕಾರದಲ್ಲಿದ್ದಾಗ, ಅವರು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿದ್ದರು. ಇದರರ್ಥ ಈ ಆಸ್ತಿಯನ್ನು ಯಾರಿಗೆ ಹಂಚಲಾಗುತ್ತದೆ? ಇದನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹಂಚಲಾಗುತ್ತದೆ. ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ” ಎಂದು ಪ್ರಧಾನಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿವೆ. ಚುನಾವಣಾ ಸಮಿತಿಯು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ತಮ್ಮ ಪಕ್ಷದ ಎಲ್ಲಾ ಸ್ಟಾರ್ ಪ್ರಚಾರಕರಿಂದ ನಿರೀಕ್ಷಿತ ರಾಜಕೀಯ ಭಾಷನಗಳ ಉನ್ನತ ಗುಣಮಟ್ಟದ ಬಗ್ಗೆ ತಿಳಿಸುವಂತೆ ಸೂಚಿಸಿದೆ.

ಇದನ್ನೂ ಓದಿ; ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...