Homeಮುಖಪುಟ'ಇನ್ನೆಷ್ಟು ದಿನ ಮುಸಲ್ಮಾನರ ಬಗ್ಗೆ ಭಯ ಹುಟ್ಟಿಸುತ್ತೀರಿ..'; ಪ್ರಧಾನಿ ಮೋದಿ ವಿರುದ್ಧ ಒವೈಸಿ ವಾಗ್ದಾಳಿ

‘ಇನ್ನೆಷ್ಟು ದಿನ ಮುಸಲ್ಮಾನರ ಬಗ್ಗೆ ಭಯ ಹುಟ್ಟಿಸುತ್ತೀರಿ..’; ಪ್ರಧಾನಿ ಮೋದಿ ವಿರುದ್ಧ ಒವೈಸಿ ವಾಗ್ದಾಳಿ

ಸರ್ಕಾರದ ಅಂಕಿಅಂಶಗಳ ಪ್ರಕಾರ ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ಕುಸಿದಿದೆ; ನೀವೇಕೆ ದ್ವೇಷದ ಗೋಡೆ ಕಟ್ಟುತ್ತಿದ್ದೀರಿ?

- Advertisement -
- Advertisement -

“ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮುಸ್ಲಿಮರು ಬಹುಸಂಖ್ಯಾತ ಸಮುದಾಯವಾಗುತ್ತಾರೆ ಎಂಬ ಭಯವನ್ನು ಹಿಂದೂಗಳಲ್ಲಿ ಮೂಡಿಸುತ್ತಿದ್ದಾರೆ. ಎಷ್ಟು ದಿನ ಮುಸಲ್ಮಾನರ ಬಗ್ಗೆ ಭಯ ಹುಟ್ಟಿಸುತ್ತೀರಿ..? ನಮ್ಮ ಧರ್ಮ ಬೇರೆ ಇರಬಹುದು; ಆದರೆ, ನಾವು ಈ ದೇಶಕ್ಕೆ ಸೇರಿದವರು” ಎಂದು ಹೈದರಾಬಾದ್ ಸಂಸದ, ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಸ್ಲಿಂಮರಿಗೆ ಹೆಚ್ಚು ಮಕ್ಕಳು ಎಂಬರ್ಥದಲ್ಲಿ ಟೀಕೆ ಮಾಡಿದ್ದ ಪ್ರಧಾನಿ ಮೋದಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಅವರು, “ನೀವು ದ್ವೇಷದ ಗೋಡೆಯನ್ನು ಏಕೆ ಕಟ್ಟುತ್ತಿದ್ದೀರಿ? ಮುಸ್ಲಿಮರು ಹೆಚ್ಚು ಮಕ್ಕಳನ್ನು ಉತ್ಪಾದಿಸುತ್ತಾರೆ ಎಂಬ ಭಯವನ್ನು ಏಕೆ ಸೃಷ್ಟಿಸುತ್ತಿದ್ದೀರಿ? ಮೋದಿ ಸರಕಾರದ ಅಂಕಿಅಂಶಗಳ ಪ್ರಕಾರ ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ಕುಸಿದಿದೆ. ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ ಮತ್ತು ಇದನ್ನು ಹೇಳಲು ನನಗೆ ನಾಚಿಕೆ ಇಲ್ಲ” ಎಂದು ಓವೈಸಿ ಹೇಳಿದರು.

‘ಈ ಮಾಹಿತಿಯ ಮೂಲ ಮೋದಿ ಸರ್ಕಾರದ ಡೇಟಾವೇ ಹೊರತು ನಾವಲ್ಲ’ ಎಂದು ಓವೈಸಿ ಹೇಳಿದ್ದಾರೆ. “ನರೇಂದ್ರ ಮೋದಿ ದ್ವೇಷವನ್ನು ಸೃಷ್ಟಿಸುತ್ತಿದ್ದಾರೆ; ಮುಸ್ಲಿಮರು ಗರಿಷ್ಠ ಸಂತಾನೋತ್ಪತ್ತಿ ದರವನ್ನು ಹೊಂದಿದ್ದಾರೆ ಎಂದು ಹೇಳುವ ಮೂಲಕ ಅವರು ಬಹುಸಂಖ್ಯಾತ ಸಮುದಾಯವನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಎಐಎಂಐಎಂ ನಾಯಕ ಹೇಳಿದರು.

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರ ಕುರಿತಾದ ಹೇಳಿಕೆಗೆ ರಾಜಕೀಯ ಬಿರುಗಾಳಿ ಎಬ್ಬಿಸಿದ್ದರು. ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಾಯಿ, ಸಹೋದರಿಯರ ಬಳಿ ಚಿನ್ನ ಲೆಕ್ಕ ಹಾಕಿ, ಅದರ ಬಗ್ಗೆ ಮಾಹಿತಿ ಪಡೆದು ಆ ಆಸ್ತಿಯನ್ನು ಹಂಚುತ್ತೇವೆ ಎಂದು ಹೇಳುತ್ತದೆ. ಯಾರಿಗೆ ಹಂಚುತ್ತೇವೆ ಎಂದು ಮನಮೋಹನ್ ಸಿಂಗ್ ಸರ್ಕಾರ ಹೇಳಿತ್ತು; ದೇಶದ ಆಸ್ತಿಗಳ ಮೇಲಿನ ಮೊದಲ ಹಕ್ಕು ಮುಸ್ಲಿಮರಿಗೆ” ಎಂದು ಹೇಳಿದ್ದರು.

“ಈ ಹಿಂದೆ ಅವರ (ಕಾಂಗ್ರೆಸ್) ಸರ್ಕಾರ ಅಧಿಕಾರದಲ್ಲಿದ್ದಾಗ, ಅವರು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿದ್ದರು. ಇದರರ್ಥ ಈ ಆಸ್ತಿಯನ್ನು ಯಾರಿಗೆ ಹಂಚಲಾಗುತ್ತದೆ? ಇದನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹಂಚಲಾಗುತ್ತದೆ. ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ” ಎಂದು ಪ್ರಧಾನಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿವೆ. ಚುನಾವಣಾ ಸಮಿತಿಯು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ತಮ್ಮ ಪಕ್ಷದ ಎಲ್ಲಾ ಸ್ಟಾರ್ ಪ್ರಚಾರಕರಿಂದ ನಿರೀಕ್ಷಿತ ರಾಜಕೀಯ ಭಾಷನಗಳ ಉನ್ನತ ಗುಣಮಟ್ಟದ ಬಗ್ಗೆ ತಿಳಿಸುವಂತೆ ಸೂಚಿಸಿದೆ.

ಇದನ್ನೂ ಓದಿ; ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...