Homeಅಂಕಣಗಳುಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

ಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

- Advertisement -
- Advertisement -

ಇತ್ತೀಚಿಗೆ ನಡೆದ ಮೂರು ಘಟನೆಗಳಿಗೆ ಮುಖ್ಯವಾಹಿನಿ ಮಾಧ್ಯಮಗಳು ಸ್ಪಂದಿಸಿದ ರೀತಿ ಇಂದು ದೇಶ ಎದುರಿಸುತ್ತಿರುವ ಬಿಕ್ಕಟ್ಟಿಗೆ ಸ್ಪಷ್ಟ ಕಾರಣಗಳನ್ನು ತಿಳಿಸುವಂತಿದೆ.

ಮೊದಲನೆಯದು ಈಗ ನಡೆದದ್ದಲ್ಲದೇ ಇದ್ದರೂ, 2019ರ ಲೋಕಸಭಾ ಚುನಾವಣೆಗೂ ಮುನ್ನ ನಡೆದ ಪುಲ್ವಾಮಾ ಘಟನೆಯ ಬಗ್ಗೆ ಅಂದು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರು ’ದ ವೈರ್’ ಪತ್ರಿಕೆಗೆ ನೀಡಿದ ಸಂದರ್ಶನಕ್ಕೆ ಸಂಬಂಧಿಸಿದ್ದು. ಪತ್ರಕರ್ತ ಕರಣ್ ಥಾಪರ್ ಜೊತೆಗಿನ ಈ ಸಂದರ್ಶನವನ್ನು ಏಪ್ರಿಲ್ 14ರಂದು ಬಿತ್ತರಿಸಲಾಯಿತು. ಅಂದು ಪುಲಾಮಾ ಉಗ್ರರ ದಾಳಿಯಲ್ಲಿ 40 ಭಾರತೀಯ ಸಿಆರ್‌ಪಿಎಫ್ ಯೋಧರು ಮೃತರಾದದ್ದಕ್ಕೆ ಮೋದಿ ನೇತೃತ್ವದ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂಬುದರಿಂದ ಹಿಡಿದು, ಜಮ್ಮು ಕಾಶ್ಮೀರದಲ್ಲಿ ರಿಲಾಯನ್ಸ್ ವಿಮೆಯನ್ನು ಸರ್ಕಾರಿ ನೌಕರರಿಗೆ ಜಾರಿಮಾಡಲು ತಮ್ಮ ಮೇಲಿದ್ದ ಒತ್ತಡ, ತಾವು ಗೋವಾ ರಾಜ್ಯಪಾಲರಾಗಿದ್ದಾಗ ಭ್ರಷ್ಟಾಚಾರದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಲರ್ಟ್ ಮಾಡಿದಾಗ ಅವರು ತೋರಿದ ಉಪೇಕ್ಷೆ – ಹೀಗೆ ಹತ್ತು ಹಲವು ಸಂಗತಿಗಳನ್ನು ಬಹಿರಂಗಪಡಿಸಿದ್ದರು. ಮಲಿಕ್ ಅವರ ಹೇಳಿಕೆಗಳ ಹಿಂದೆ ಬಿದ್ದು ಅದರ ಸತ್ಯಾಸತ್ಯತೆಯನ್ನು ಕಂಡುಹಿಡಿಯುವ, ಆ ಆರೋಪಗಳಗೆ ಉತ್ತರಿಸಬೇಕಿದ್ದ ಸರ್ಕಾರದ ವಕ್ತಾರರು ಮತ್ತು ಸಚಿವರನ್ನು ಪ್ರಶ್ನಿಸುವ ಕೆಲಸಕ್ಕೆ ಮಾಧ್ಯಮಗಳು ಮುಂದಾಗಬೇಕಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಾದರೆ ಬಹುತೇಕ ಎಲ್ಲ ಸಚಿವರ ಮುಖಕ್ಕೆ ಮೈಕ್ ಹಿಡಿದು ಮಾಧ್ಯಮಗಳು ಮಲಿಕ್ ಆರೋಪಗಳಿಗೆ ಉತ್ತರಿಸಿ ಎಂದು ದುಂಬಾಲು ಬಿದ್ದಿರುತ್ತಿದ್ದವು. ಆದರೆ ಈ ಸಂದರ್ಭದಲ್ಲಿ, ಮುಖ್ಯವಾಹಿನಿಯ ಕೆಲವೇ ಕೆಲವು ದಿನಪತ್ರಿಕೆಗಳನ್ನು ಹೊರತುಪಡಿಸಿದರೆ ಬಹುತೇಕ ಮುದ್ರಣ ಮತ್ತು ಟಿವಿ ಮಾಧ್ಯಮಗಳು ಮೌನಕ್ಕೆ ಜಾರಿದ್ದವು. ದೇಶದ ರಕ್ಷಣೆಗೆ ಹಾಗೂ ಸೈನಿಕರ ಜೀವಕ್ಕೆ ಸಂಬಂಧಿಸಿದಂತೆ ಸರ್ಕಾರದ ಲೋಪದೋಷದ ಆರೋಪದ ಬಗ್ಗೆ ಮಾಧ್ಯಮಗಳು ಉಸಿರು ಬಿಚ್ಚದಿರುವುದಕ್ಕೆ ಯಾರು ಕಾರಣ ಎಂದು ಊಹಿಸುವುದು ಕಷ್ಟವೇನಲ್ಲ! ಪ್ರಭುತ್ವದಿಂದ ಮಾಧ್ಯಮಗಳಿಗೆ ಉಸಿರುಗಟ್ಟುವ ವಾತಾವರಣ ಸೃಷ್ಟಿಯಾಗಿರುವುದಕ್ಕೆ ಮಾಧ್ಯಮದವರು ಕೂಡ ಜವಾಬ್ದಾರರಲ್ಲವೇ!

ಎರಡನೆಯದ್ದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರದ ಪೊಲೀಸ್ ವ್ಯವಸ್ಥೆಯ ಅಡಿಯಲ್ಲಿ ಏಪ್ರಿಲ್ 15ರಂದು ನಡೆದ ಘಟನೆ. ರೌಡಿಸಂನಿಂದ ರಾಜಕಾರಣಿಯಾಗಿದ್ದ ಆತಿಕ್ ಅಹಮದ್ ಮತ್ತು ಅವರ ಸಹೋದರ ಆಶ್ರಫ್‌ರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ಯುವಾಗ ಮೂರು ಜನ ಬಂದೂಕುಧಾರಿಗಳು ಕ್ಯಾಮರಾ ಮುಂದೆಯೇ ಗುಂಡಿನ ಸುರಿಮಳೆಗೈದು ಕೊಂದರು. ಮೃತರಾದ ಆರೋಪಿಗಳನ್ನು ವಿಚಾರಣೆ ನಡೆಸಿ, ತಪ್ಪಿತಸ್ಥರೆಂದು ಸಾಬೀತಾದರೆ ಶಿಕ್ಷೆ ನೀಡಲು ನ್ಯಾಯಾಲಯ ಇದೆ, ಕಾನೂನಿದೆ. ಆದರೆ, ಪೊಲೀಸರ ಸಮಕ್ಷಮದಲ್ಲಿ ನಡೆದ ಈ ಬೆಚ್ಚಿಬೀಳಿಸುವ ಶೂಟೌಟ್ ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಣೆಯಾಗಿರುವ ಕಥೆಯನ್ನು ಹೇಳುತ್ತಿತ್ತು. ಇದನ್ನು ಪ್ರಶ್ನಿಸಿ ಸರ್ಕಾರವನ್ನು ಕಟಕಟೆಗೆ ನಿಲ್ಲಿಸಬೇಕಿದ್ದ ಮಾಧ್ಯಮಗಳು ಎಂದಿನಂತೆ ಒಂದೋ ಮೌನವಾಗಿದ್ದವು, ಮತ್ತು ಕೆಲವು ಒಂದು ಹಂತ ಮುಂದಕ್ಕೆ ಹೋಗಿ ಈ ಕಾನೂನಿಬಾಹಿರ ಕೊಲೆಗಳನ್ನು ಸಂಭ್ರಮಿಸುತ್ತಿದ್ದವು. ಇದನ್ನು ಸಂಭ್ರಮಿಸಿದ ಮಾಧ್ಯಮಗಳು ಆ ಕೊಲೆಗಾರ ಶೂಟರ್‌ಗಳಿಗಿಂತಲೂ ಹೀನಾಯ ಮನಸ್ಥಿತಿಯವರು ಅನ್ನುವುದರಲ್ಲಿ ಎರಡು ಮಾತಿಲ್ಲ.

ಇದನ್ನೂ ಓದಿ: ಪುಲ್ವಾಮ ದಾಳಿ ಕುರಿತು ಸತ್ಯಪಾಲ್ ಮಲಿಕ್‌ರವರ 5 ಗಂಭೀರ ಆರೋಪಗಳು: ಪ್ರಧಾನಿಯನ್ನು ಪ್ರಶ್ನಿಸದವರು ಪಾಕಿಸ್ತಾನಕ್ಕೆ ಹೋಗಿ

ಮೂರನೆಯದ್ದು ಏಪ್ರಿಲ್, 15 ಭಾನುವಾರದಂದು ನಡೆದ ಘಟನೆ. ಮಹಾರಾಷ್ಟ್ರದ ನವಿ ಮುಂಬೈನ ತೆರೆದ ಮೈದಾನವೊಂದರಲ್ಲಿ ’ಮಹಾರಾಷ್ಟ್ರ ಭೂಷಣ’ ಪ್ರಶಸ್ತಿ ಪ್ರದಾನ ಮಾಡಲು ಆಯೋಜಿಸಿದ್ದ ಬೃಹತ್ ವೇದಿಕೆಯ ಮೇಲೆ ನೆರಳಿನಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಸೇರಿದಂತೆ ಮತ್ತಿತರ ’ವಿಐಪಿ’ಗಳು ಸುಖವಾಗಿ ಆಸೀನರಾಗಿದ್ದರು. ಸುಡು ಬಿಸಿಲಿನಲ್ಲಿ ಯಾವುದೇ ಛಾವಣಿಯಿಲ್ಲದೆ, ನೆರಳಿಲ್ಲದೆ ಲಕ್ಷಾಂತರ ಜನ (ಆಯೋಜಕರು ಹೇಳಿಕೊಳ್ಳುವಂತೆ 20 ಲಕ್ಷ!) ಗಂಟೆಗಟ್ಟಲೆ ಈ ’ವಿಐಪಿ’ಗಳ ಭಾಷಣಗಳನ್ನು ಕೇಳುತ್ತಾ ಕೂತಿದ್ದರು. ನೆರೆದ ಜನರು ಬಿಸಿಲಿನಲ್ಲಿ ಕೂತು ಕೇಳಿಸಿಕೊಳ್ಳುತ್ತಿರುವ ಬಗ್ಗೆ ಅಮಿತ್ ಶಾ ಭಾಷಣ ಹೊಡೆಯುತ್ತಿದ್ದರೆ, ಅಲ್ಲಿ ನೆರೆದಿದ್ದ ನೂರಾರು ಜನರಿಗೆ ’ಹೀಟ್‌ಸ್ಟ್ರೋಕ್’ ಸಮಸ್ಯೆಯುಂಟಾಗಿ ಆಸ್ಪತ್ರೆಗೆ ದಾಖಲಾಗುವಂತಹ ಪರಿಸ್ಥಿತಿ ಉಂಟಾಯಿತು. ಈಗ ಕನಿಷ್ಟ 13 ಜನ ಮೃತಪಟ್ಟ ವರದಿಯಾಗಿದೆ. ಒಂದು ವಾರದ ಹಿಂದೆಯೇ ಸುಡುಬಿಸಿಲು ಮತ್ತು ಉಷ್ಣ ವಾಯುವಿನ ಸಲುವಾಗಿ ಮಹಾರಾಷ್ಟ್ರದ ಜನ ಹೀಟ್‌ಸ್ಟ್ರೋಕ್ ಸಮಸ್ಯೆಗೆ ಗುರಿಯಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಹಲವು ವರದಿಗಳು ಪತ್ರಿಕೆಗಳಲ್ಲಿ ಬಂದಿದ್ದವು. ಹೀಗಿದ್ದೂ, ಅಂದು ನೆರೆದ ಜನರಿಗೆ ಸಮರ್ಪಕವಾದ ಛಾವಣಿ ಮತ್ತು ನೆರಳು, ಅಗತ್ಯವಿದ್ದಷ್ಟು ಕುಡಿಯುವ ನೀರಿನ ವ್ಯವಸ್ಥೆ ಒದಗಿಸದೆ ಹತ್ತಾರು ಜನರ ಸಾವಿಗೆ ಕಾರಣವಾದ ಸರ್ಕಾರದ್ದು ’ಕ್ರಿಮಿನಲ್ ನೆಗ್ಲಿಜೆನ್ಸ್’ ಅಲ್ಲದೇ ಮತ್ತೇನು? ಹೀಗಿದ್ದೂ ಕೂಡ ಮುಖ್ಯವಾಹಿನಿ ಮಾಧ್ಯಮಗಳು ಈ ಸಾವುಗಳಿಗೆ ಯಾರು ಹೊಣೆ ಎಂದು ಮುಖ್ಯಮಂತ್ರಿಯವರನ್ನು ದಬಾಯಿಸಲಿಲ್ಲ! ಮುಖಕ್ಕೆ ಮೈಕ್ ಹಿಡಿದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಎಂದು ಆಗ್ರಹಿಸಲಿಲ್ಲ. ಮಾತು ಸೋತ ಮಾಧ್ಯಮಗಳು ತಣ್ಣಗಾಗಿ ಹೋಗಿದ್ದವು!

ದೇಶಕ್ಕೆ ಕರಾಳ ದಿನಗಳು ಬಂದೆರಗುವುದಕ್ಕೆ ಸರ್ವಾಧಿಕಾರಿ ಧೋರಣೆಯ ಪ್ರಭುತ್ವದಷ್ಟೇ ಇಂತಹ ಮಾರಿಕೊಂಡ ಮಾಧ್ಯಮಗಳದ್ದೂ ಪಾತ್ರವಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...