Homeಅಂಕಣಗಳುಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

ಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

- Advertisement -
- Advertisement -

ಇತ್ತೀಚಿಗೆ ನಡೆದ ಮೂರು ಘಟನೆಗಳಿಗೆ ಮುಖ್ಯವಾಹಿನಿ ಮಾಧ್ಯಮಗಳು ಸ್ಪಂದಿಸಿದ ರೀತಿ ಇಂದು ದೇಶ ಎದುರಿಸುತ್ತಿರುವ ಬಿಕ್ಕಟ್ಟಿಗೆ ಸ್ಪಷ್ಟ ಕಾರಣಗಳನ್ನು ತಿಳಿಸುವಂತಿದೆ.

ಮೊದಲನೆಯದು ಈಗ ನಡೆದದ್ದಲ್ಲದೇ ಇದ್ದರೂ, 2019ರ ಲೋಕಸಭಾ ಚುನಾವಣೆಗೂ ಮುನ್ನ ನಡೆದ ಪುಲ್ವಾಮಾ ಘಟನೆಯ ಬಗ್ಗೆ ಅಂದು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರು ’ದ ವೈರ್’ ಪತ್ರಿಕೆಗೆ ನೀಡಿದ ಸಂದರ್ಶನಕ್ಕೆ ಸಂಬಂಧಿಸಿದ್ದು. ಪತ್ರಕರ್ತ ಕರಣ್ ಥಾಪರ್ ಜೊತೆಗಿನ ಈ ಸಂದರ್ಶನವನ್ನು ಏಪ್ರಿಲ್ 14ರಂದು ಬಿತ್ತರಿಸಲಾಯಿತು. ಅಂದು ಪುಲಾಮಾ ಉಗ್ರರ ದಾಳಿಯಲ್ಲಿ 40 ಭಾರತೀಯ ಸಿಆರ್‌ಪಿಎಫ್ ಯೋಧರು ಮೃತರಾದದ್ದಕ್ಕೆ ಮೋದಿ ನೇತೃತ್ವದ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂಬುದರಿಂದ ಹಿಡಿದು, ಜಮ್ಮು ಕಾಶ್ಮೀರದಲ್ಲಿ ರಿಲಾಯನ್ಸ್ ವಿಮೆಯನ್ನು ಸರ್ಕಾರಿ ನೌಕರರಿಗೆ ಜಾರಿಮಾಡಲು ತಮ್ಮ ಮೇಲಿದ್ದ ಒತ್ತಡ, ತಾವು ಗೋವಾ ರಾಜ್ಯಪಾಲರಾಗಿದ್ದಾಗ ಭ್ರಷ್ಟಾಚಾರದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಲರ್ಟ್ ಮಾಡಿದಾಗ ಅವರು ತೋರಿದ ಉಪೇಕ್ಷೆ – ಹೀಗೆ ಹತ್ತು ಹಲವು ಸಂಗತಿಗಳನ್ನು ಬಹಿರಂಗಪಡಿಸಿದ್ದರು. ಮಲಿಕ್ ಅವರ ಹೇಳಿಕೆಗಳ ಹಿಂದೆ ಬಿದ್ದು ಅದರ ಸತ್ಯಾಸತ್ಯತೆಯನ್ನು ಕಂಡುಹಿಡಿಯುವ, ಆ ಆರೋಪಗಳಗೆ ಉತ್ತರಿಸಬೇಕಿದ್ದ ಸರ್ಕಾರದ ವಕ್ತಾರರು ಮತ್ತು ಸಚಿವರನ್ನು ಪ್ರಶ್ನಿಸುವ ಕೆಲಸಕ್ಕೆ ಮಾಧ್ಯಮಗಳು ಮುಂದಾಗಬೇಕಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಾದರೆ ಬಹುತೇಕ ಎಲ್ಲ ಸಚಿವರ ಮುಖಕ್ಕೆ ಮೈಕ್ ಹಿಡಿದು ಮಾಧ್ಯಮಗಳು ಮಲಿಕ್ ಆರೋಪಗಳಿಗೆ ಉತ್ತರಿಸಿ ಎಂದು ದುಂಬಾಲು ಬಿದ್ದಿರುತ್ತಿದ್ದವು. ಆದರೆ ಈ ಸಂದರ್ಭದಲ್ಲಿ, ಮುಖ್ಯವಾಹಿನಿಯ ಕೆಲವೇ ಕೆಲವು ದಿನಪತ್ರಿಕೆಗಳನ್ನು ಹೊರತುಪಡಿಸಿದರೆ ಬಹುತೇಕ ಮುದ್ರಣ ಮತ್ತು ಟಿವಿ ಮಾಧ್ಯಮಗಳು ಮೌನಕ್ಕೆ ಜಾರಿದ್ದವು. ದೇಶದ ರಕ್ಷಣೆಗೆ ಹಾಗೂ ಸೈನಿಕರ ಜೀವಕ್ಕೆ ಸಂಬಂಧಿಸಿದಂತೆ ಸರ್ಕಾರದ ಲೋಪದೋಷದ ಆರೋಪದ ಬಗ್ಗೆ ಮಾಧ್ಯಮಗಳು ಉಸಿರು ಬಿಚ್ಚದಿರುವುದಕ್ಕೆ ಯಾರು ಕಾರಣ ಎಂದು ಊಹಿಸುವುದು ಕಷ್ಟವೇನಲ್ಲ! ಪ್ರಭುತ್ವದಿಂದ ಮಾಧ್ಯಮಗಳಿಗೆ ಉಸಿರುಗಟ್ಟುವ ವಾತಾವರಣ ಸೃಷ್ಟಿಯಾಗಿರುವುದಕ್ಕೆ ಮಾಧ್ಯಮದವರು ಕೂಡ ಜವಾಬ್ದಾರರಲ್ಲವೇ!

ಎರಡನೆಯದ್ದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರದ ಪೊಲೀಸ್ ವ್ಯವಸ್ಥೆಯ ಅಡಿಯಲ್ಲಿ ಏಪ್ರಿಲ್ 15ರಂದು ನಡೆದ ಘಟನೆ. ರೌಡಿಸಂನಿಂದ ರಾಜಕಾರಣಿಯಾಗಿದ್ದ ಆತಿಕ್ ಅಹಮದ್ ಮತ್ತು ಅವರ ಸಹೋದರ ಆಶ್ರಫ್‌ರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ಯುವಾಗ ಮೂರು ಜನ ಬಂದೂಕುಧಾರಿಗಳು ಕ್ಯಾಮರಾ ಮುಂದೆಯೇ ಗುಂಡಿನ ಸುರಿಮಳೆಗೈದು ಕೊಂದರು. ಮೃತರಾದ ಆರೋಪಿಗಳನ್ನು ವಿಚಾರಣೆ ನಡೆಸಿ, ತಪ್ಪಿತಸ್ಥರೆಂದು ಸಾಬೀತಾದರೆ ಶಿಕ್ಷೆ ನೀಡಲು ನ್ಯಾಯಾಲಯ ಇದೆ, ಕಾನೂನಿದೆ. ಆದರೆ, ಪೊಲೀಸರ ಸಮಕ್ಷಮದಲ್ಲಿ ನಡೆದ ಈ ಬೆಚ್ಚಿಬೀಳಿಸುವ ಶೂಟೌಟ್ ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಣೆಯಾಗಿರುವ ಕಥೆಯನ್ನು ಹೇಳುತ್ತಿತ್ತು. ಇದನ್ನು ಪ್ರಶ್ನಿಸಿ ಸರ್ಕಾರವನ್ನು ಕಟಕಟೆಗೆ ನಿಲ್ಲಿಸಬೇಕಿದ್ದ ಮಾಧ್ಯಮಗಳು ಎಂದಿನಂತೆ ಒಂದೋ ಮೌನವಾಗಿದ್ದವು, ಮತ್ತು ಕೆಲವು ಒಂದು ಹಂತ ಮುಂದಕ್ಕೆ ಹೋಗಿ ಈ ಕಾನೂನಿಬಾಹಿರ ಕೊಲೆಗಳನ್ನು ಸಂಭ್ರಮಿಸುತ್ತಿದ್ದವು. ಇದನ್ನು ಸಂಭ್ರಮಿಸಿದ ಮಾಧ್ಯಮಗಳು ಆ ಕೊಲೆಗಾರ ಶೂಟರ್‌ಗಳಿಗಿಂತಲೂ ಹೀನಾಯ ಮನಸ್ಥಿತಿಯವರು ಅನ್ನುವುದರಲ್ಲಿ ಎರಡು ಮಾತಿಲ್ಲ.

ಇದನ್ನೂ ಓದಿ: ಪುಲ್ವಾಮ ದಾಳಿ ಕುರಿತು ಸತ್ಯಪಾಲ್ ಮಲಿಕ್‌ರವರ 5 ಗಂಭೀರ ಆರೋಪಗಳು: ಪ್ರಧಾನಿಯನ್ನು ಪ್ರಶ್ನಿಸದವರು ಪಾಕಿಸ್ತಾನಕ್ಕೆ ಹೋಗಿ

ಮೂರನೆಯದ್ದು ಏಪ್ರಿಲ್, 15 ಭಾನುವಾರದಂದು ನಡೆದ ಘಟನೆ. ಮಹಾರಾಷ್ಟ್ರದ ನವಿ ಮುಂಬೈನ ತೆರೆದ ಮೈದಾನವೊಂದರಲ್ಲಿ ’ಮಹಾರಾಷ್ಟ್ರ ಭೂಷಣ’ ಪ್ರಶಸ್ತಿ ಪ್ರದಾನ ಮಾಡಲು ಆಯೋಜಿಸಿದ್ದ ಬೃಹತ್ ವೇದಿಕೆಯ ಮೇಲೆ ನೆರಳಿನಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಸೇರಿದಂತೆ ಮತ್ತಿತರ ’ವಿಐಪಿ’ಗಳು ಸುಖವಾಗಿ ಆಸೀನರಾಗಿದ್ದರು. ಸುಡು ಬಿಸಿಲಿನಲ್ಲಿ ಯಾವುದೇ ಛಾವಣಿಯಿಲ್ಲದೆ, ನೆರಳಿಲ್ಲದೆ ಲಕ್ಷಾಂತರ ಜನ (ಆಯೋಜಕರು ಹೇಳಿಕೊಳ್ಳುವಂತೆ 20 ಲಕ್ಷ!) ಗಂಟೆಗಟ್ಟಲೆ ಈ ’ವಿಐಪಿ’ಗಳ ಭಾಷಣಗಳನ್ನು ಕೇಳುತ್ತಾ ಕೂತಿದ್ದರು. ನೆರೆದ ಜನರು ಬಿಸಿಲಿನಲ್ಲಿ ಕೂತು ಕೇಳಿಸಿಕೊಳ್ಳುತ್ತಿರುವ ಬಗ್ಗೆ ಅಮಿತ್ ಶಾ ಭಾಷಣ ಹೊಡೆಯುತ್ತಿದ್ದರೆ, ಅಲ್ಲಿ ನೆರೆದಿದ್ದ ನೂರಾರು ಜನರಿಗೆ ’ಹೀಟ್‌ಸ್ಟ್ರೋಕ್’ ಸಮಸ್ಯೆಯುಂಟಾಗಿ ಆಸ್ಪತ್ರೆಗೆ ದಾಖಲಾಗುವಂತಹ ಪರಿಸ್ಥಿತಿ ಉಂಟಾಯಿತು. ಈಗ ಕನಿಷ್ಟ 13 ಜನ ಮೃತಪಟ್ಟ ವರದಿಯಾಗಿದೆ. ಒಂದು ವಾರದ ಹಿಂದೆಯೇ ಸುಡುಬಿಸಿಲು ಮತ್ತು ಉಷ್ಣ ವಾಯುವಿನ ಸಲುವಾಗಿ ಮಹಾರಾಷ್ಟ್ರದ ಜನ ಹೀಟ್‌ಸ್ಟ್ರೋಕ್ ಸಮಸ್ಯೆಗೆ ಗುರಿಯಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಹಲವು ವರದಿಗಳು ಪತ್ರಿಕೆಗಳಲ್ಲಿ ಬಂದಿದ್ದವು. ಹೀಗಿದ್ದೂ, ಅಂದು ನೆರೆದ ಜನರಿಗೆ ಸಮರ್ಪಕವಾದ ಛಾವಣಿ ಮತ್ತು ನೆರಳು, ಅಗತ್ಯವಿದ್ದಷ್ಟು ಕುಡಿಯುವ ನೀರಿನ ವ್ಯವಸ್ಥೆ ಒದಗಿಸದೆ ಹತ್ತಾರು ಜನರ ಸಾವಿಗೆ ಕಾರಣವಾದ ಸರ್ಕಾರದ್ದು ’ಕ್ರಿಮಿನಲ್ ನೆಗ್ಲಿಜೆನ್ಸ್’ ಅಲ್ಲದೇ ಮತ್ತೇನು? ಹೀಗಿದ್ದೂ ಕೂಡ ಮುಖ್ಯವಾಹಿನಿ ಮಾಧ್ಯಮಗಳು ಈ ಸಾವುಗಳಿಗೆ ಯಾರು ಹೊಣೆ ಎಂದು ಮುಖ್ಯಮಂತ್ರಿಯವರನ್ನು ದಬಾಯಿಸಲಿಲ್ಲ! ಮುಖಕ್ಕೆ ಮೈಕ್ ಹಿಡಿದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಎಂದು ಆಗ್ರಹಿಸಲಿಲ್ಲ. ಮಾತು ಸೋತ ಮಾಧ್ಯಮಗಳು ತಣ್ಣಗಾಗಿ ಹೋಗಿದ್ದವು!

ದೇಶಕ್ಕೆ ಕರಾಳ ದಿನಗಳು ಬಂದೆರಗುವುದಕ್ಕೆ ಸರ್ವಾಧಿಕಾರಿ ಧೋರಣೆಯ ಪ್ರಭುತ್ವದಷ್ಟೇ ಇಂತಹ ಮಾರಿಕೊಂಡ ಮಾಧ್ಯಮಗಳದ್ದೂ ಪಾತ್ರವಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...