Homeಅಂಕಣಗಳುಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

ಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

- Advertisement -
- Advertisement -

ಇತ್ತೀಚಿಗೆ ನಡೆದ ಮೂರು ಘಟನೆಗಳಿಗೆ ಮುಖ್ಯವಾಹಿನಿ ಮಾಧ್ಯಮಗಳು ಸ್ಪಂದಿಸಿದ ರೀತಿ ಇಂದು ದೇಶ ಎದುರಿಸುತ್ತಿರುವ ಬಿಕ್ಕಟ್ಟಿಗೆ ಸ್ಪಷ್ಟ ಕಾರಣಗಳನ್ನು ತಿಳಿಸುವಂತಿದೆ.

ಮೊದಲನೆಯದು ಈಗ ನಡೆದದ್ದಲ್ಲದೇ ಇದ್ದರೂ, 2019ರ ಲೋಕಸಭಾ ಚುನಾವಣೆಗೂ ಮುನ್ನ ನಡೆದ ಪುಲ್ವಾಮಾ ಘಟನೆಯ ಬಗ್ಗೆ ಅಂದು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರು ’ದ ವೈರ್’ ಪತ್ರಿಕೆಗೆ ನೀಡಿದ ಸಂದರ್ಶನಕ್ಕೆ ಸಂಬಂಧಿಸಿದ್ದು. ಪತ್ರಕರ್ತ ಕರಣ್ ಥಾಪರ್ ಜೊತೆಗಿನ ಈ ಸಂದರ್ಶನವನ್ನು ಏಪ್ರಿಲ್ 14ರಂದು ಬಿತ್ತರಿಸಲಾಯಿತು. ಅಂದು ಪುಲಾಮಾ ಉಗ್ರರ ದಾಳಿಯಲ್ಲಿ 40 ಭಾರತೀಯ ಸಿಆರ್‌ಪಿಎಫ್ ಯೋಧರು ಮೃತರಾದದ್ದಕ್ಕೆ ಮೋದಿ ನೇತೃತ್ವದ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂಬುದರಿಂದ ಹಿಡಿದು, ಜಮ್ಮು ಕಾಶ್ಮೀರದಲ್ಲಿ ರಿಲಾಯನ್ಸ್ ವಿಮೆಯನ್ನು ಸರ್ಕಾರಿ ನೌಕರರಿಗೆ ಜಾರಿಮಾಡಲು ತಮ್ಮ ಮೇಲಿದ್ದ ಒತ್ತಡ, ತಾವು ಗೋವಾ ರಾಜ್ಯಪಾಲರಾಗಿದ್ದಾಗ ಭ್ರಷ್ಟಾಚಾರದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಲರ್ಟ್ ಮಾಡಿದಾಗ ಅವರು ತೋರಿದ ಉಪೇಕ್ಷೆ – ಹೀಗೆ ಹತ್ತು ಹಲವು ಸಂಗತಿಗಳನ್ನು ಬಹಿರಂಗಪಡಿಸಿದ್ದರು. ಮಲಿಕ್ ಅವರ ಹೇಳಿಕೆಗಳ ಹಿಂದೆ ಬಿದ್ದು ಅದರ ಸತ್ಯಾಸತ್ಯತೆಯನ್ನು ಕಂಡುಹಿಡಿಯುವ, ಆ ಆರೋಪಗಳಗೆ ಉತ್ತರಿಸಬೇಕಿದ್ದ ಸರ್ಕಾರದ ವಕ್ತಾರರು ಮತ್ತು ಸಚಿವರನ್ನು ಪ್ರಶ್ನಿಸುವ ಕೆಲಸಕ್ಕೆ ಮಾಧ್ಯಮಗಳು ಮುಂದಾಗಬೇಕಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಾದರೆ ಬಹುತೇಕ ಎಲ್ಲ ಸಚಿವರ ಮುಖಕ್ಕೆ ಮೈಕ್ ಹಿಡಿದು ಮಾಧ್ಯಮಗಳು ಮಲಿಕ್ ಆರೋಪಗಳಿಗೆ ಉತ್ತರಿಸಿ ಎಂದು ದುಂಬಾಲು ಬಿದ್ದಿರುತ್ತಿದ್ದವು. ಆದರೆ ಈ ಸಂದರ್ಭದಲ್ಲಿ, ಮುಖ್ಯವಾಹಿನಿಯ ಕೆಲವೇ ಕೆಲವು ದಿನಪತ್ರಿಕೆಗಳನ್ನು ಹೊರತುಪಡಿಸಿದರೆ ಬಹುತೇಕ ಮುದ್ರಣ ಮತ್ತು ಟಿವಿ ಮಾಧ್ಯಮಗಳು ಮೌನಕ್ಕೆ ಜಾರಿದ್ದವು. ದೇಶದ ರಕ್ಷಣೆಗೆ ಹಾಗೂ ಸೈನಿಕರ ಜೀವಕ್ಕೆ ಸಂಬಂಧಿಸಿದಂತೆ ಸರ್ಕಾರದ ಲೋಪದೋಷದ ಆರೋಪದ ಬಗ್ಗೆ ಮಾಧ್ಯಮಗಳು ಉಸಿರು ಬಿಚ್ಚದಿರುವುದಕ್ಕೆ ಯಾರು ಕಾರಣ ಎಂದು ಊಹಿಸುವುದು ಕಷ್ಟವೇನಲ್ಲ! ಪ್ರಭುತ್ವದಿಂದ ಮಾಧ್ಯಮಗಳಿಗೆ ಉಸಿರುಗಟ್ಟುವ ವಾತಾವರಣ ಸೃಷ್ಟಿಯಾಗಿರುವುದಕ್ಕೆ ಮಾಧ್ಯಮದವರು ಕೂಡ ಜವಾಬ್ದಾರರಲ್ಲವೇ!

ಎರಡನೆಯದ್ದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರದ ಪೊಲೀಸ್ ವ್ಯವಸ್ಥೆಯ ಅಡಿಯಲ್ಲಿ ಏಪ್ರಿಲ್ 15ರಂದು ನಡೆದ ಘಟನೆ. ರೌಡಿಸಂನಿಂದ ರಾಜಕಾರಣಿಯಾಗಿದ್ದ ಆತಿಕ್ ಅಹಮದ್ ಮತ್ತು ಅವರ ಸಹೋದರ ಆಶ್ರಫ್‌ರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ಯುವಾಗ ಮೂರು ಜನ ಬಂದೂಕುಧಾರಿಗಳು ಕ್ಯಾಮರಾ ಮುಂದೆಯೇ ಗುಂಡಿನ ಸುರಿಮಳೆಗೈದು ಕೊಂದರು. ಮೃತರಾದ ಆರೋಪಿಗಳನ್ನು ವಿಚಾರಣೆ ನಡೆಸಿ, ತಪ್ಪಿತಸ್ಥರೆಂದು ಸಾಬೀತಾದರೆ ಶಿಕ್ಷೆ ನೀಡಲು ನ್ಯಾಯಾಲಯ ಇದೆ, ಕಾನೂನಿದೆ. ಆದರೆ, ಪೊಲೀಸರ ಸಮಕ್ಷಮದಲ್ಲಿ ನಡೆದ ಈ ಬೆಚ್ಚಿಬೀಳಿಸುವ ಶೂಟೌಟ್ ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಣೆಯಾಗಿರುವ ಕಥೆಯನ್ನು ಹೇಳುತ್ತಿತ್ತು. ಇದನ್ನು ಪ್ರಶ್ನಿಸಿ ಸರ್ಕಾರವನ್ನು ಕಟಕಟೆಗೆ ನಿಲ್ಲಿಸಬೇಕಿದ್ದ ಮಾಧ್ಯಮಗಳು ಎಂದಿನಂತೆ ಒಂದೋ ಮೌನವಾಗಿದ್ದವು, ಮತ್ತು ಕೆಲವು ಒಂದು ಹಂತ ಮುಂದಕ್ಕೆ ಹೋಗಿ ಈ ಕಾನೂನಿಬಾಹಿರ ಕೊಲೆಗಳನ್ನು ಸಂಭ್ರಮಿಸುತ್ತಿದ್ದವು. ಇದನ್ನು ಸಂಭ್ರಮಿಸಿದ ಮಾಧ್ಯಮಗಳು ಆ ಕೊಲೆಗಾರ ಶೂಟರ್‌ಗಳಿಗಿಂತಲೂ ಹೀನಾಯ ಮನಸ್ಥಿತಿಯವರು ಅನ್ನುವುದರಲ್ಲಿ ಎರಡು ಮಾತಿಲ್ಲ.

ಇದನ್ನೂ ಓದಿ: ಪುಲ್ವಾಮ ದಾಳಿ ಕುರಿತು ಸತ್ಯಪಾಲ್ ಮಲಿಕ್‌ರವರ 5 ಗಂಭೀರ ಆರೋಪಗಳು: ಪ್ರಧಾನಿಯನ್ನು ಪ್ರಶ್ನಿಸದವರು ಪಾಕಿಸ್ತಾನಕ್ಕೆ ಹೋಗಿ

ಮೂರನೆಯದ್ದು ಏಪ್ರಿಲ್, 15 ಭಾನುವಾರದಂದು ನಡೆದ ಘಟನೆ. ಮಹಾರಾಷ್ಟ್ರದ ನವಿ ಮುಂಬೈನ ತೆರೆದ ಮೈದಾನವೊಂದರಲ್ಲಿ ’ಮಹಾರಾಷ್ಟ್ರ ಭೂಷಣ’ ಪ್ರಶಸ್ತಿ ಪ್ರದಾನ ಮಾಡಲು ಆಯೋಜಿಸಿದ್ದ ಬೃಹತ್ ವೇದಿಕೆಯ ಮೇಲೆ ನೆರಳಿನಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಸೇರಿದಂತೆ ಮತ್ತಿತರ ’ವಿಐಪಿ’ಗಳು ಸುಖವಾಗಿ ಆಸೀನರಾಗಿದ್ದರು. ಸುಡು ಬಿಸಿಲಿನಲ್ಲಿ ಯಾವುದೇ ಛಾವಣಿಯಿಲ್ಲದೆ, ನೆರಳಿಲ್ಲದೆ ಲಕ್ಷಾಂತರ ಜನ (ಆಯೋಜಕರು ಹೇಳಿಕೊಳ್ಳುವಂತೆ 20 ಲಕ್ಷ!) ಗಂಟೆಗಟ್ಟಲೆ ಈ ’ವಿಐಪಿ’ಗಳ ಭಾಷಣಗಳನ್ನು ಕೇಳುತ್ತಾ ಕೂತಿದ್ದರು. ನೆರೆದ ಜನರು ಬಿಸಿಲಿನಲ್ಲಿ ಕೂತು ಕೇಳಿಸಿಕೊಳ್ಳುತ್ತಿರುವ ಬಗ್ಗೆ ಅಮಿತ್ ಶಾ ಭಾಷಣ ಹೊಡೆಯುತ್ತಿದ್ದರೆ, ಅಲ್ಲಿ ನೆರೆದಿದ್ದ ನೂರಾರು ಜನರಿಗೆ ’ಹೀಟ್‌ಸ್ಟ್ರೋಕ್’ ಸಮಸ್ಯೆಯುಂಟಾಗಿ ಆಸ್ಪತ್ರೆಗೆ ದಾಖಲಾಗುವಂತಹ ಪರಿಸ್ಥಿತಿ ಉಂಟಾಯಿತು. ಈಗ ಕನಿಷ್ಟ 13 ಜನ ಮೃತಪಟ್ಟ ವರದಿಯಾಗಿದೆ. ಒಂದು ವಾರದ ಹಿಂದೆಯೇ ಸುಡುಬಿಸಿಲು ಮತ್ತು ಉಷ್ಣ ವಾಯುವಿನ ಸಲುವಾಗಿ ಮಹಾರಾಷ್ಟ್ರದ ಜನ ಹೀಟ್‌ಸ್ಟ್ರೋಕ್ ಸಮಸ್ಯೆಗೆ ಗುರಿಯಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಹಲವು ವರದಿಗಳು ಪತ್ರಿಕೆಗಳಲ್ಲಿ ಬಂದಿದ್ದವು. ಹೀಗಿದ್ದೂ, ಅಂದು ನೆರೆದ ಜನರಿಗೆ ಸಮರ್ಪಕವಾದ ಛಾವಣಿ ಮತ್ತು ನೆರಳು, ಅಗತ್ಯವಿದ್ದಷ್ಟು ಕುಡಿಯುವ ನೀರಿನ ವ್ಯವಸ್ಥೆ ಒದಗಿಸದೆ ಹತ್ತಾರು ಜನರ ಸಾವಿಗೆ ಕಾರಣವಾದ ಸರ್ಕಾರದ್ದು ’ಕ್ರಿಮಿನಲ್ ನೆಗ್ಲಿಜೆನ್ಸ್’ ಅಲ್ಲದೇ ಮತ್ತೇನು? ಹೀಗಿದ್ದೂ ಕೂಡ ಮುಖ್ಯವಾಹಿನಿ ಮಾಧ್ಯಮಗಳು ಈ ಸಾವುಗಳಿಗೆ ಯಾರು ಹೊಣೆ ಎಂದು ಮುಖ್ಯಮಂತ್ರಿಯವರನ್ನು ದಬಾಯಿಸಲಿಲ್ಲ! ಮುಖಕ್ಕೆ ಮೈಕ್ ಹಿಡಿದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಎಂದು ಆಗ್ರಹಿಸಲಿಲ್ಲ. ಮಾತು ಸೋತ ಮಾಧ್ಯಮಗಳು ತಣ್ಣಗಾಗಿ ಹೋಗಿದ್ದವು!

ದೇಶಕ್ಕೆ ಕರಾಳ ದಿನಗಳು ಬಂದೆರಗುವುದಕ್ಕೆ ಸರ್ವಾಧಿಕಾರಿ ಧೋರಣೆಯ ಪ್ರಭುತ್ವದಷ್ಟೇ ಇಂತಹ ಮಾರಿಕೊಂಡ ಮಾಧ್ಯಮಗಳದ್ದೂ ಪಾತ್ರವಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...