Homeಅಂಕಣಗಳುಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

ಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

- Advertisement -
- Advertisement -

ಇತ್ತೀಚಿಗೆ ನಡೆದ ಮೂರು ಘಟನೆಗಳಿಗೆ ಮುಖ್ಯವಾಹಿನಿ ಮಾಧ್ಯಮಗಳು ಸ್ಪಂದಿಸಿದ ರೀತಿ ಇಂದು ದೇಶ ಎದುರಿಸುತ್ತಿರುವ ಬಿಕ್ಕಟ್ಟಿಗೆ ಸ್ಪಷ್ಟ ಕಾರಣಗಳನ್ನು ತಿಳಿಸುವಂತಿದೆ.

ಮೊದಲನೆಯದು ಈಗ ನಡೆದದ್ದಲ್ಲದೇ ಇದ್ದರೂ, 2019ರ ಲೋಕಸಭಾ ಚುನಾವಣೆಗೂ ಮುನ್ನ ನಡೆದ ಪುಲ್ವಾಮಾ ಘಟನೆಯ ಬಗ್ಗೆ ಅಂದು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರು ’ದ ವೈರ್’ ಪತ್ರಿಕೆಗೆ ನೀಡಿದ ಸಂದರ್ಶನಕ್ಕೆ ಸಂಬಂಧಿಸಿದ್ದು. ಪತ್ರಕರ್ತ ಕರಣ್ ಥಾಪರ್ ಜೊತೆಗಿನ ಈ ಸಂದರ್ಶನವನ್ನು ಏಪ್ರಿಲ್ 14ರಂದು ಬಿತ್ತರಿಸಲಾಯಿತು. ಅಂದು ಪುಲಾಮಾ ಉಗ್ರರ ದಾಳಿಯಲ್ಲಿ 40 ಭಾರತೀಯ ಸಿಆರ್‌ಪಿಎಫ್ ಯೋಧರು ಮೃತರಾದದ್ದಕ್ಕೆ ಮೋದಿ ನೇತೃತ್ವದ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂಬುದರಿಂದ ಹಿಡಿದು, ಜಮ್ಮು ಕಾಶ್ಮೀರದಲ್ಲಿ ರಿಲಾಯನ್ಸ್ ವಿಮೆಯನ್ನು ಸರ್ಕಾರಿ ನೌಕರರಿಗೆ ಜಾರಿಮಾಡಲು ತಮ್ಮ ಮೇಲಿದ್ದ ಒತ್ತಡ, ತಾವು ಗೋವಾ ರಾಜ್ಯಪಾಲರಾಗಿದ್ದಾಗ ಭ್ರಷ್ಟಾಚಾರದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಲರ್ಟ್ ಮಾಡಿದಾಗ ಅವರು ತೋರಿದ ಉಪೇಕ್ಷೆ – ಹೀಗೆ ಹತ್ತು ಹಲವು ಸಂಗತಿಗಳನ್ನು ಬಹಿರಂಗಪಡಿಸಿದ್ದರು. ಮಲಿಕ್ ಅವರ ಹೇಳಿಕೆಗಳ ಹಿಂದೆ ಬಿದ್ದು ಅದರ ಸತ್ಯಾಸತ್ಯತೆಯನ್ನು ಕಂಡುಹಿಡಿಯುವ, ಆ ಆರೋಪಗಳಗೆ ಉತ್ತರಿಸಬೇಕಿದ್ದ ಸರ್ಕಾರದ ವಕ್ತಾರರು ಮತ್ತು ಸಚಿವರನ್ನು ಪ್ರಶ್ನಿಸುವ ಕೆಲಸಕ್ಕೆ ಮಾಧ್ಯಮಗಳು ಮುಂದಾಗಬೇಕಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಾದರೆ ಬಹುತೇಕ ಎಲ್ಲ ಸಚಿವರ ಮುಖಕ್ಕೆ ಮೈಕ್ ಹಿಡಿದು ಮಾಧ್ಯಮಗಳು ಮಲಿಕ್ ಆರೋಪಗಳಿಗೆ ಉತ್ತರಿಸಿ ಎಂದು ದುಂಬಾಲು ಬಿದ್ದಿರುತ್ತಿದ್ದವು. ಆದರೆ ಈ ಸಂದರ್ಭದಲ್ಲಿ, ಮುಖ್ಯವಾಹಿನಿಯ ಕೆಲವೇ ಕೆಲವು ದಿನಪತ್ರಿಕೆಗಳನ್ನು ಹೊರತುಪಡಿಸಿದರೆ ಬಹುತೇಕ ಮುದ್ರಣ ಮತ್ತು ಟಿವಿ ಮಾಧ್ಯಮಗಳು ಮೌನಕ್ಕೆ ಜಾರಿದ್ದವು. ದೇಶದ ರಕ್ಷಣೆಗೆ ಹಾಗೂ ಸೈನಿಕರ ಜೀವಕ್ಕೆ ಸಂಬಂಧಿಸಿದಂತೆ ಸರ್ಕಾರದ ಲೋಪದೋಷದ ಆರೋಪದ ಬಗ್ಗೆ ಮಾಧ್ಯಮಗಳು ಉಸಿರು ಬಿಚ್ಚದಿರುವುದಕ್ಕೆ ಯಾರು ಕಾರಣ ಎಂದು ಊಹಿಸುವುದು ಕಷ್ಟವೇನಲ್ಲ! ಪ್ರಭುತ್ವದಿಂದ ಮಾಧ್ಯಮಗಳಿಗೆ ಉಸಿರುಗಟ್ಟುವ ವಾತಾವರಣ ಸೃಷ್ಟಿಯಾಗಿರುವುದಕ್ಕೆ ಮಾಧ್ಯಮದವರು ಕೂಡ ಜವಾಬ್ದಾರರಲ್ಲವೇ!

ಎರಡನೆಯದ್ದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರದ ಪೊಲೀಸ್ ವ್ಯವಸ್ಥೆಯ ಅಡಿಯಲ್ಲಿ ಏಪ್ರಿಲ್ 15ರಂದು ನಡೆದ ಘಟನೆ. ರೌಡಿಸಂನಿಂದ ರಾಜಕಾರಣಿಯಾಗಿದ್ದ ಆತಿಕ್ ಅಹಮದ್ ಮತ್ತು ಅವರ ಸಹೋದರ ಆಶ್ರಫ್‌ರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ಯುವಾಗ ಮೂರು ಜನ ಬಂದೂಕುಧಾರಿಗಳು ಕ್ಯಾಮರಾ ಮುಂದೆಯೇ ಗುಂಡಿನ ಸುರಿಮಳೆಗೈದು ಕೊಂದರು. ಮೃತರಾದ ಆರೋಪಿಗಳನ್ನು ವಿಚಾರಣೆ ನಡೆಸಿ, ತಪ್ಪಿತಸ್ಥರೆಂದು ಸಾಬೀತಾದರೆ ಶಿಕ್ಷೆ ನೀಡಲು ನ್ಯಾಯಾಲಯ ಇದೆ, ಕಾನೂನಿದೆ. ಆದರೆ, ಪೊಲೀಸರ ಸಮಕ್ಷಮದಲ್ಲಿ ನಡೆದ ಈ ಬೆಚ್ಚಿಬೀಳಿಸುವ ಶೂಟೌಟ್ ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಣೆಯಾಗಿರುವ ಕಥೆಯನ್ನು ಹೇಳುತ್ತಿತ್ತು. ಇದನ್ನು ಪ್ರಶ್ನಿಸಿ ಸರ್ಕಾರವನ್ನು ಕಟಕಟೆಗೆ ನಿಲ್ಲಿಸಬೇಕಿದ್ದ ಮಾಧ್ಯಮಗಳು ಎಂದಿನಂತೆ ಒಂದೋ ಮೌನವಾಗಿದ್ದವು, ಮತ್ತು ಕೆಲವು ಒಂದು ಹಂತ ಮುಂದಕ್ಕೆ ಹೋಗಿ ಈ ಕಾನೂನಿಬಾಹಿರ ಕೊಲೆಗಳನ್ನು ಸಂಭ್ರಮಿಸುತ್ತಿದ್ದವು. ಇದನ್ನು ಸಂಭ್ರಮಿಸಿದ ಮಾಧ್ಯಮಗಳು ಆ ಕೊಲೆಗಾರ ಶೂಟರ್‌ಗಳಿಗಿಂತಲೂ ಹೀನಾಯ ಮನಸ್ಥಿತಿಯವರು ಅನ್ನುವುದರಲ್ಲಿ ಎರಡು ಮಾತಿಲ್ಲ.

ಇದನ್ನೂ ಓದಿ: ಪುಲ್ವಾಮ ದಾಳಿ ಕುರಿತು ಸತ್ಯಪಾಲ್ ಮಲಿಕ್‌ರವರ 5 ಗಂಭೀರ ಆರೋಪಗಳು: ಪ್ರಧಾನಿಯನ್ನು ಪ್ರಶ್ನಿಸದವರು ಪಾಕಿಸ್ತಾನಕ್ಕೆ ಹೋಗಿ

ಮೂರನೆಯದ್ದು ಏಪ್ರಿಲ್, 15 ಭಾನುವಾರದಂದು ನಡೆದ ಘಟನೆ. ಮಹಾರಾಷ್ಟ್ರದ ನವಿ ಮುಂಬೈನ ತೆರೆದ ಮೈದಾನವೊಂದರಲ್ಲಿ ’ಮಹಾರಾಷ್ಟ್ರ ಭೂಷಣ’ ಪ್ರಶಸ್ತಿ ಪ್ರದಾನ ಮಾಡಲು ಆಯೋಜಿಸಿದ್ದ ಬೃಹತ್ ವೇದಿಕೆಯ ಮೇಲೆ ನೆರಳಿನಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಸೇರಿದಂತೆ ಮತ್ತಿತರ ’ವಿಐಪಿ’ಗಳು ಸುಖವಾಗಿ ಆಸೀನರಾಗಿದ್ದರು. ಸುಡು ಬಿಸಿಲಿನಲ್ಲಿ ಯಾವುದೇ ಛಾವಣಿಯಿಲ್ಲದೆ, ನೆರಳಿಲ್ಲದೆ ಲಕ್ಷಾಂತರ ಜನ (ಆಯೋಜಕರು ಹೇಳಿಕೊಳ್ಳುವಂತೆ 20 ಲಕ್ಷ!) ಗಂಟೆಗಟ್ಟಲೆ ಈ ’ವಿಐಪಿ’ಗಳ ಭಾಷಣಗಳನ್ನು ಕೇಳುತ್ತಾ ಕೂತಿದ್ದರು. ನೆರೆದ ಜನರು ಬಿಸಿಲಿನಲ್ಲಿ ಕೂತು ಕೇಳಿಸಿಕೊಳ್ಳುತ್ತಿರುವ ಬಗ್ಗೆ ಅಮಿತ್ ಶಾ ಭಾಷಣ ಹೊಡೆಯುತ್ತಿದ್ದರೆ, ಅಲ್ಲಿ ನೆರೆದಿದ್ದ ನೂರಾರು ಜನರಿಗೆ ’ಹೀಟ್‌ಸ್ಟ್ರೋಕ್’ ಸಮಸ್ಯೆಯುಂಟಾಗಿ ಆಸ್ಪತ್ರೆಗೆ ದಾಖಲಾಗುವಂತಹ ಪರಿಸ್ಥಿತಿ ಉಂಟಾಯಿತು. ಈಗ ಕನಿಷ್ಟ 13 ಜನ ಮೃತಪಟ್ಟ ವರದಿಯಾಗಿದೆ. ಒಂದು ವಾರದ ಹಿಂದೆಯೇ ಸುಡುಬಿಸಿಲು ಮತ್ತು ಉಷ್ಣ ವಾಯುವಿನ ಸಲುವಾಗಿ ಮಹಾರಾಷ್ಟ್ರದ ಜನ ಹೀಟ್‌ಸ್ಟ್ರೋಕ್ ಸಮಸ್ಯೆಗೆ ಗುರಿಯಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಹಲವು ವರದಿಗಳು ಪತ್ರಿಕೆಗಳಲ್ಲಿ ಬಂದಿದ್ದವು. ಹೀಗಿದ್ದೂ, ಅಂದು ನೆರೆದ ಜನರಿಗೆ ಸಮರ್ಪಕವಾದ ಛಾವಣಿ ಮತ್ತು ನೆರಳು, ಅಗತ್ಯವಿದ್ದಷ್ಟು ಕುಡಿಯುವ ನೀರಿನ ವ್ಯವಸ್ಥೆ ಒದಗಿಸದೆ ಹತ್ತಾರು ಜನರ ಸಾವಿಗೆ ಕಾರಣವಾದ ಸರ್ಕಾರದ್ದು ’ಕ್ರಿಮಿನಲ್ ನೆಗ್ಲಿಜೆನ್ಸ್’ ಅಲ್ಲದೇ ಮತ್ತೇನು? ಹೀಗಿದ್ದೂ ಕೂಡ ಮುಖ್ಯವಾಹಿನಿ ಮಾಧ್ಯಮಗಳು ಈ ಸಾವುಗಳಿಗೆ ಯಾರು ಹೊಣೆ ಎಂದು ಮುಖ್ಯಮಂತ್ರಿಯವರನ್ನು ದಬಾಯಿಸಲಿಲ್ಲ! ಮುಖಕ್ಕೆ ಮೈಕ್ ಹಿಡಿದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಎಂದು ಆಗ್ರಹಿಸಲಿಲ್ಲ. ಮಾತು ಸೋತ ಮಾಧ್ಯಮಗಳು ತಣ್ಣಗಾಗಿ ಹೋಗಿದ್ದವು!

ದೇಶಕ್ಕೆ ಕರಾಳ ದಿನಗಳು ಬಂದೆರಗುವುದಕ್ಕೆ ಸರ್ವಾಧಿಕಾರಿ ಧೋರಣೆಯ ಪ್ರಭುತ್ವದಷ್ಟೇ ಇಂತಹ ಮಾರಿಕೊಂಡ ಮಾಧ್ಯಮಗಳದ್ದೂ ಪಾತ್ರವಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...