Homeಅಂಕಣಗಳುಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

ಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

- Advertisement -
- Advertisement -

ಇತ್ತೀಚಿಗೆ ನಡೆದ ಮೂರು ಘಟನೆಗಳಿಗೆ ಮುಖ್ಯವಾಹಿನಿ ಮಾಧ್ಯಮಗಳು ಸ್ಪಂದಿಸಿದ ರೀತಿ ಇಂದು ದೇಶ ಎದುರಿಸುತ್ತಿರುವ ಬಿಕ್ಕಟ್ಟಿಗೆ ಸ್ಪಷ್ಟ ಕಾರಣಗಳನ್ನು ತಿಳಿಸುವಂತಿದೆ.

ಮೊದಲನೆಯದು ಈಗ ನಡೆದದ್ದಲ್ಲದೇ ಇದ್ದರೂ, 2019ರ ಲೋಕಸಭಾ ಚುನಾವಣೆಗೂ ಮುನ್ನ ನಡೆದ ಪುಲ್ವಾಮಾ ಘಟನೆಯ ಬಗ್ಗೆ ಅಂದು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರು ’ದ ವೈರ್’ ಪತ್ರಿಕೆಗೆ ನೀಡಿದ ಸಂದರ್ಶನಕ್ಕೆ ಸಂಬಂಧಿಸಿದ್ದು. ಪತ್ರಕರ್ತ ಕರಣ್ ಥಾಪರ್ ಜೊತೆಗಿನ ಈ ಸಂದರ್ಶನವನ್ನು ಏಪ್ರಿಲ್ 14ರಂದು ಬಿತ್ತರಿಸಲಾಯಿತು. ಅಂದು ಪುಲಾಮಾ ಉಗ್ರರ ದಾಳಿಯಲ್ಲಿ 40 ಭಾರತೀಯ ಸಿಆರ್‌ಪಿಎಫ್ ಯೋಧರು ಮೃತರಾದದ್ದಕ್ಕೆ ಮೋದಿ ನೇತೃತ್ವದ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂಬುದರಿಂದ ಹಿಡಿದು, ಜಮ್ಮು ಕಾಶ್ಮೀರದಲ್ಲಿ ರಿಲಾಯನ್ಸ್ ವಿಮೆಯನ್ನು ಸರ್ಕಾರಿ ನೌಕರರಿಗೆ ಜಾರಿಮಾಡಲು ತಮ್ಮ ಮೇಲಿದ್ದ ಒತ್ತಡ, ತಾವು ಗೋವಾ ರಾಜ್ಯಪಾಲರಾಗಿದ್ದಾಗ ಭ್ರಷ್ಟಾಚಾರದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಲರ್ಟ್ ಮಾಡಿದಾಗ ಅವರು ತೋರಿದ ಉಪೇಕ್ಷೆ – ಹೀಗೆ ಹತ್ತು ಹಲವು ಸಂಗತಿಗಳನ್ನು ಬಹಿರಂಗಪಡಿಸಿದ್ದರು. ಮಲಿಕ್ ಅವರ ಹೇಳಿಕೆಗಳ ಹಿಂದೆ ಬಿದ್ದು ಅದರ ಸತ್ಯಾಸತ್ಯತೆಯನ್ನು ಕಂಡುಹಿಡಿಯುವ, ಆ ಆರೋಪಗಳಗೆ ಉತ್ತರಿಸಬೇಕಿದ್ದ ಸರ್ಕಾರದ ವಕ್ತಾರರು ಮತ್ತು ಸಚಿವರನ್ನು ಪ್ರಶ್ನಿಸುವ ಕೆಲಸಕ್ಕೆ ಮಾಧ್ಯಮಗಳು ಮುಂದಾಗಬೇಕಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಾದರೆ ಬಹುತೇಕ ಎಲ್ಲ ಸಚಿವರ ಮುಖಕ್ಕೆ ಮೈಕ್ ಹಿಡಿದು ಮಾಧ್ಯಮಗಳು ಮಲಿಕ್ ಆರೋಪಗಳಿಗೆ ಉತ್ತರಿಸಿ ಎಂದು ದುಂಬಾಲು ಬಿದ್ದಿರುತ್ತಿದ್ದವು. ಆದರೆ ಈ ಸಂದರ್ಭದಲ್ಲಿ, ಮುಖ್ಯವಾಹಿನಿಯ ಕೆಲವೇ ಕೆಲವು ದಿನಪತ್ರಿಕೆಗಳನ್ನು ಹೊರತುಪಡಿಸಿದರೆ ಬಹುತೇಕ ಮುದ್ರಣ ಮತ್ತು ಟಿವಿ ಮಾಧ್ಯಮಗಳು ಮೌನಕ್ಕೆ ಜಾರಿದ್ದವು. ದೇಶದ ರಕ್ಷಣೆಗೆ ಹಾಗೂ ಸೈನಿಕರ ಜೀವಕ್ಕೆ ಸಂಬಂಧಿಸಿದಂತೆ ಸರ್ಕಾರದ ಲೋಪದೋಷದ ಆರೋಪದ ಬಗ್ಗೆ ಮಾಧ್ಯಮಗಳು ಉಸಿರು ಬಿಚ್ಚದಿರುವುದಕ್ಕೆ ಯಾರು ಕಾರಣ ಎಂದು ಊಹಿಸುವುದು ಕಷ್ಟವೇನಲ್ಲ! ಪ್ರಭುತ್ವದಿಂದ ಮಾಧ್ಯಮಗಳಿಗೆ ಉಸಿರುಗಟ್ಟುವ ವಾತಾವರಣ ಸೃಷ್ಟಿಯಾಗಿರುವುದಕ್ಕೆ ಮಾಧ್ಯಮದವರು ಕೂಡ ಜವಾಬ್ದಾರರಲ್ಲವೇ!

ಎರಡನೆಯದ್ದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರದ ಪೊಲೀಸ್ ವ್ಯವಸ್ಥೆಯ ಅಡಿಯಲ್ಲಿ ಏಪ್ರಿಲ್ 15ರಂದು ನಡೆದ ಘಟನೆ. ರೌಡಿಸಂನಿಂದ ರಾಜಕಾರಣಿಯಾಗಿದ್ದ ಆತಿಕ್ ಅಹಮದ್ ಮತ್ತು ಅವರ ಸಹೋದರ ಆಶ್ರಫ್‌ರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ಯುವಾಗ ಮೂರು ಜನ ಬಂದೂಕುಧಾರಿಗಳು ಕ್ಯಾಮರಾ ಮುಂದೆಯೇ ಗುಂಡಿನ ಸುರಿಮಳೆಗೈದು ಕೊಂದರು. ಮೃತರಾದ ಆರೋಪಿಗಳನ್ನು ವಿಚಾರಣೆ ನಡೆಸಿ, ತಪ್ಪಿತಸ್ಥರೆಂದು ಸಾಬೀತಾದರೆ ಶಿಕ್ಷೆ ನೀಡಲು ನ್ಯಾಯಾಲಯ ಇದೆ, ಕಾನೂನಿದೆ. ಆದರೆ, ಪೊಲೀಸರ ಸಮಕ್ಷಮದಲ್ಲಿ ನಡೆದ ಈ ಬೆಚ್ಚಿಬೀಳಿಸುವ ಶೂಟೌಟ್ ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಣೆಯಾಗಿರುವ ಕಥೆಯನ್ನು ಹೇಳುತ್ತಿತ್ತು. ಇದನ್ನು ಪ್ರಶ್ನಿಸಿ ಸರ್ಕಾರವನ್ನು ಕಟಕಟೆಗೆ ನಿಲ್ಲಿಸಬೇಕಿದ್ದ ಮಾಧ್ಯಮಗಳು ಎಂದಿನಂತೆ ಒಂದೋ ಮೌನವಾಗಿದ್ದವು, ಮತ್ತು ಕೆಲವು ಒಂದು ಹಂತ ಮುಂದಕ್ಕೆ ಹೋಗಿ ಈ ಕಾನೂನಿಬಾಹಿರ ಕೊಲೆಗಳನ್ನು ಸಂಭ್ರಮಿಸುತ್ತಿದ್ದವು. ಇದನ್ನು ಸಂಭ್ರಮಿಸಿದ ಮಾಧ್ಯಮಗಳು ಆ ಕೊಲೆಗಾರ ಶೂಟರ್‌ಗಳಿಗಿಂತಲೂ ಹೀನಾಯ ಮನಸ್ಥಿತಿಯವರು ಅನ್ನುವುದರಲ್ಲಿ ಎರಡು ಮಾತಿಲ್ಲ.

ಇದನ್ನೂ ಓದಿ: ಪುಲ್ವಾಮ ದಾಳಿ ಕುರಿತು ಸತ್ಯಪಾಲ್ ಮಲಿಕ್‌ರವರ 5 ಗಂಭೀರ ಆರೋಪಗಳು: ಪ್ರಧಾನಿಯನ್ನು ಪ್ರಶ್ನಿಸದವರು ಪಾಕಿಸ್ತಾನಕ್ಕೆ ಹೋಗಿ

ಮೂರನೆಯದ್ದು ಏಪ್ರಿಲ್, 15 ಭಾನುವಾರದಂದು ನಡೆದ ಘಟನೆ. ಮಹಾರಾಷ್ಟ್ರದ ನವಿ ಮುಂಬೈನ ತೆರೆದ ಮೈದಾನವೊಂದರಲ್ಲಿ ’ಮಹಾರಾಷ್ಟ್ರ ಭೂಷಣ’ ಪ್ರಶಸ್ತಿ ಪ್ರದಾನ ಮಾಡಲು ಆಯೋಜಿಸಿದ್ದ ಬೃಹತ್ ವೇದಿಕೆಯ ಮೇಲೆ ನೆರಳಿನಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಸೇರಿದಂತೆ ಮತ್ತಿತರ ’ವಿಐಪಿ’ಗಳು ಸುಖವಾಗಿ ಆಸೀನರಾಗಿದ್ದರು. ಸುಡು ಬಿಸಿಲಿನಲ್ಲಿ ಯಾವುದೇ ಛಾವಣಿಯಿಲ್ಲದೆ, ನೆರಳಿಲ್ಲದೆ ಲಕ್ಷಾಂತರ ಜನ (ಆಯೋಜಕರು ಹೇಳಿಕೊಳ್ಳುವಂತೆ 20 ಲಕ್ಷ!) ಗಂಟೆಗಟ್ಟಲೆ ಈ ’ವಿಐಪಿ’ಗಳ ಭಾಷಣಗಳನ್ನು ಕೇಳುತ್ತಾ ಕೂತಿದ್ದರು. ನೆರೆದ ಜನರು ಬಿಸಿಲಿನಲ್ಲಿ ಕೂತು ಕೇಳಿಸಿಕೊಳ್ಳುತ್ತಿರುವ ಬಗ್ಗೆ ಅಮಿತ್ ಶಾ ಭಾಷಣ ಹೊಡೆಯುತ್ತಿದ್ದರೆ, ಅಲ್ಲಿ ನೆರೆದಿದ್ದ ನೂರಾರು ಜನರಿಗೆ ’ಹೀಟ್‌ಸ್ಟ್ರೋಕ್’ ಸಮಸ್ಯೆಯುಂಟಾಗಿ ಆಸ್ಪತ್ರೆಗೆ ದಾಖಲಾಗುವಂತಹ ಪರಿಸ್ಥಿತಿ ಉಂಟಾಯಿತು. ಈಗ ಕನಿಷ್ಟ 13 ಜನ ಮೃತಪಟ್ಟ ವರದಿಯಾಗಿದೆ. ಒಂದು ವಾರದ ಹಿಂದೆಯೇ ಸುಡುಬಿಸಿಲು ಮತ್ತು ಉಷ್ಣ ವಾಯುವಿನ ಸಲುವಾಗಿ ಮಹಾರಾಷ್ಟ್ರದ ಜನ ಹೀಟ್‌ಸ್ಟ್ರೋಕ್ ಸಮಸ್ಯೆಗೆ ಗುರಿಯಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಹಲವು ವರದಿಗಳು ಪತ್ರಿಕೆಗಳಲ್ಲಿ ಬಂದಿದ್ದವು. ಹೀಗಿದ್ದೂ, ಅಂದು ನೆರೆದ ಜನರಿಗೆ ಸಮರ್ಪಕವಾದ ಛಾವಣಿ ಮತ್ತು ನೆರಳು, ಅಗತ್ಯವಿದ್ದಷ್ಟು ಕುಡಿಯುವ ನೀರಿನ ವ್ಯವಸ್ಥೆ ಒದಗಿಸದೆ ಹತ್ತಾರು ಜನರ ಸಾವಿಗೆ ಕಾರಣವಾದ ಸರ್ಕಾರದ್ದು ’ಕ್ರಿಮಿನಲ್ ನೆಗ್ಲಿಜೆನ್ಸ್’ ಅಲ್ಲದೇ ಮತ್ತೇನು? ಹೀಗಿದ್ದೂ ಕೂಡ ಮುಖ್ಯವಾಹಿನಿ ಮಾಧ್ಯಮಗಳು ಈ ಸಾವುಗಳಿಗೆ ಯಾರು ಹೊಣೆ ಎಂದು ಮುಖ್ಯಮಂತ್ರಿಯವರನ್ನು ದಬಾಯಿಸಲಿಲ್ಲ! ಮುಖಕ್ಕೆ ಮೈಕ್ ಹಿಡಿದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಎಂದು ಆಗ್ರಹಿಸಲಿಲ್ಲ. ಮಾತು ಸೋತ ಮಾಧ್ಯಮಗಳು ತಣ್ಣಗಾಗಿ ಹೋಗಿದ್ದವು!

ದೇಶಕ್ಕೆ ಕರಾಳ ದಿನಗಳು ಬಂದೆರಗುವುದಕ್ಕೆ ಸರ್ವಾಧಿಕಾರಿ ಧೋರಣೆಯ ಪ್ರಭುತ್ವದಷ್ಟೇ ಇಂತಹ ಮಾರಿಕೊಂಡ ಮಾಧ್ಯಮಗಳದ್ದೂ ಪಾತ್ರವಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

NICE ನಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...