Homeಅಂಕಣಗಳುಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

ಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

- Advertisement -
- Advertisement -

ಇತ್ತೀಚಿಗೆ ನಡೆದ ಮೂರು ಘಟನೆಗಳಿಗೆ ಮುಖ್ಯವಾಹಿನಿ ಮಾಧ್ಯಮಗಳು ಸ್ಪಂದಿಸಿದ ರೀತಿ ಇಂದು ದೇಶ ಎದುರಿಸುತ್ತಿರುವ ಬಿಕ್ಕಟ್ಟಿಗೆ ಸ್ಪಷ್ಟ ಕಾರಣಗಳನ್ನು ತಿಳಿಸುವಂತಿದೆ.

ಮೊದಲನೆಯದು ಈಗ ನಡೆದದ್ದಲ್ಲದೇ ಇದ್ದರೂ, 2019ರ ಲೋಕಸಭಾ ಚುನಾವಣೆಗೂ ಮುನ್ನ ನಡೆದ ಪುಲ್ವಾಮಾ ಘಟನೆಯ ಬಗ್ಗೆ ಅಂದು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರು ’ದ ವೈರ್’ ಪತ್ರಿಕೆಗೆ ನೀಡಿದ ಸಂದರ್ಶನಕ್ಕೆ ಸಂಬಂಧಿಸಿದ್ದು. ಪತ್ರಕರ್ತ ಕರಣ್ ಥಾಪರ್ ಜೊತೆಗಿನ ಈ ಸಂದರ್ಶನವನ್ನು ಏಪ್ರಿಲ್ 14ರಂದು ಬಿತ್ತರಿಸಲಾಯಿತು. ಅಂದು ಪುಲಾಮಾ ಉಗ್ರರ ದಾಳಿಯಲ್ಲಿ 40 ಭಾರತೀಯ ಸಿಆರ್‌ಪಿಎಫ್ ಯೋಧರು ಮೃತರಾದದ್ದಕ್ಕೆ ಮೋದಿ ನೇತೃತ್ವದ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂಬುದರಿಂದ ಹಿಡಿದು, ಜಮ್ಮು ಕಾಶ್ಮೀರದಲ್ಲಿ ರಿಲಾಯನ್ಸ್ ವಿಮೆಯನ್ನು ಸರ್ಕಾರಿ ನೌಕರರಿಗೆ ಜಾರಿಮಾಡಲು ತಮ್ಮ ಮೇಲಿದ್ದ ಒತ್ತಡ, ತಾವು ಗೋವಾ ರಾಜ್ಯಪಾಲರಾಗಿದ್ದಾಗ ಭ್ರಷ್ಟಾಚಾರದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಲರ್ಟ್ ಮಾಡಿದಾಗ ಅವರು ತೋರಿದ ಉಪೇಕ್ಷೆ – ಹೀಗೆ ಹತ್ತು ಹಲವು ಸಂಗತಿಗಳನ್ನು ಬಹಿರಂಗಪಡಿಸಿದ್ದರು. ಮಲಿಕ್ ಅವರ ಹೇಳಿಕೆಗಳ ಹಿಂದೆ ಬಿದ್ದು ಅದರ ಸತ್ಯಾಸತ್ಯತೆಯನ್ನು ಕಂಡುಹಿಡಿಯುವ, ಆ ಆರೋಪಗಳಗೆ ಉತ್ತರಿಸಬೇಕಿದ್ದ ಸರ್ಕಾರದ ವಕ್ತಾರರು ಮತ್ತು ಸಚಿವರನ್ನು ಪ್ರಶ್ನಿಸುವ ಕೆಲಸಕ್ಕೆ ಮಾಧ್ಯಮಗಳು ಮುಂದಾಗಬೇಕಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಾದರೆ ಬಹುತೇಕ ಎಲ್ಲ ಸಚಿವರ ಮುಖಕ್ಕೆ ಮೈಕ್ ಹಿಡಿದು ಮಾಧ್ಯಮಗಳು ಮಲಿಕ್ ಆರೋಪಗಳಿಗೆ ಉತ್ತರಿಸಿ ಎಂದು ದುಂಬಾಲು ಬಿದ್ದಿರುತ್ತಿದ್ದವು. ಆದರೆ ಈ ಸಂದರ್ಭದಲ್ಲಿ, ಮುಖ್ಯವಾಹಿನಿಯ ಕೆಲವೇ ಕೆಲವು ದಿನಪತ್ರಿಕೆಗಳನ್ನು ಹೊರತುಪಡಿಸಿದರೆ ಬಹುತೇಕ ಮುದ್ರಣ ಮತ್ತು ಟಿವಿ ಮಾಧ್ಯಮಗಳು ಮೌನಕ್ಕೆ ಜಾರಿದ್ದವು. ದೇಶದ ರಕ್ಷಣೆಗೆ ಹಾಗೂ ಸೈನಿಕರ ಜೀವಕ್ಕೆ ಸಂಬಂಧಿಸಿದಂತೆ ಸರ್ಕಾರದ ಲೋಪದೋಷದ ಆರೋಪದ ಬಗ್ಗೆ ಮಾಧ್ಯಮಗಳು ಉಸಿರು ಬಿಚ್ಚದಿರುವುದಕ್ಕೆ ಯಾರು ಕಾರಣ ಎಂದು ಊಹಿಸುವುದು ಕಷ್ಟವೇನಲ್ಲ! ಪ್ರಭುತ್ವದಿಂದ ಮಾಧ್ಯಮಗಳಿಗೆ ಉಸಿರುಗಟ್ಟುವ ವಾತಾವರಣ ಸೃಷ್ಟಿಯಾಗಿರುವುದಕ್ಕೆ ಮಾಧ್ಯಮದವರು ಕೂಡ ಜವಾಬ್ದಾರರಲ್ಲವೇ!

ಎರಡನೆಯದ್ದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರದ ಪೊಲೀಸ್ ವ್ಯವಸ್ಥೆಯ ಅಡಿಯಲ್ಲಿ ಏಪ್ರಿಲ್ 15ರಂದು ನಡೆದ ಘಟನೆ. ರೌಡಿಸಂನಿಂದ ರಾಜಕಾರಣಿಯಾಗಿದ್ದ ಆತಿಕ್ ಅಹಮದ್ ಮತ್ತು ಅವರ ಸಹೋದರ ಆಶ್ರಫ್‌ರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ಯುವಾಗ ಮೂರು ಜನ ಬಂದೂಕುಧಾರಿಗಳು ಕ್ಯಾಮರಾ ಮುಂದೆಯೇ ಗುಂಡಿನ ಸುರಿಮಳೆಗೈದು ಕೊಂದರು. ಮೃತರಾದ ಆರೋಪಿಗಳನ್ನು ವಿಚಾರಣೆ ನಡೆಸಿ, ತಪ್ಪಿತಸ್ಥರೆಂದು ಸಾಬೀತಾದರೆ ಶಿಕ್ಷೆ ನೀಡಲು ನ್ಯಾಯಾಲಯ ಇದೆ, ಕಾನೂನಿದೆ. ಆದರೆ, ಪೊಲೀಸರ ಸಮಕ್ಷಮದಲ್ಲಿ ನಡೆದ ಈ ಬೆಚ್ಚಿಬೀಳಿಸುವ ಶೂಟೌಟ್ ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಣೆಯಾಗಿರುವ ಕಥೆಯನ್ನು ಹೇಳುತ್ತಿತ್ತು. ಇದನ್ನು ಪ್ರಶ್ನಿಸಿ ಸರ್ಕಾರವನ್ನು ಕಟಕಟೆಗೆ ನಿಲ್ಲಿಸಬೇಕಿದ್ದ ಮಾಧ್ಯಮಗಳು ಎಂದಿನಂತೆ ಒಂದೋ ಮೌನವಾಗಿದ್ದವು, ಮತ್ತು ಕೆಲವು ಒಂದು ಹಂತ ಮುಂದಕ್ಕೆ ಹೋಗಿ ಈ ಕಾನೂನಿಬಾಹಿರ ಕೊಲೆಗಳನ್ನು ಸಂಭ್ರಮಿಸುತ್ತಿದ್ದವು. ಇದನ್ನು ಸಂಭ್ರಮಿಸಿದ ಮಾಧ್ಯಮಗಳು ಆ ಕೊಲೆಗಾರ ಶೂಟರ್‌ಗಳಿಗಿಂತಲೂ ಹೀನಾಯ ಮನಸ್ಥಿತಿಯವರು ಅನ್ನುವುದರಲ್ಲಿ ಎರಡು ಮಾತಿಲ್ಲ.

ಇದನ್ನೂ ಓದಿ: ಪುಲ್ವಾಮ ದಾಳಿ ಕುರಿತು ಸತ್ಯಪಾಲ್ ಮಲಿಕ್‌ರವರ 5 ಗಂಭೀರ ಆರೋಪಗಳು: ಪ್ರಧಾನಿಯನ್ನು ಪ್ರಶ್ನಿಸದವರು ಪಾಕಿಸ್ತಾನಕ್ಕೆ ಹೋಗಿ

ಮೂರನೆಯದ್ದು ಏಪ್ರಿಲ್, 15 ಭಾನುವಾರದಂದು ನಡೆದ ಘಟನೆ. ಮಹಾರಾಷ್ಟ್ರದ ನವಿ ಮುಂಬೈನ ತೆರೆದ ಮೈದಾನವೊಂದರಲ್ಲಿ ’ಮಹಾರಾಷ್ಟ್ರ ಭೂಷಣ’ ಪ್ರಶಸ್ತಿ ಪ್ರದಾನ ಮಾಡಲು ಆಯೋಜಿಸಿದ್ದ ಬೃಹತ್ ವೇದಿಕೆಯ ಮೇಲೆ ನೆರಳಿನಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಸೇರಿದಂತೆ ಮತ್ತಿತರ ’ವಿಐಪಿ’ಗಳು ಸುಖವಾಗಿ ಆಸೀನರಾಗಿದ್ದರು. ಸುಡು ಬಿಸಿಲಿನಲ್ಲಿ ಯಾವುದೇ ಛಾವಣಿಯಿಲ್ಲದೆ, ನೆರಳಿಲ್ಲದೆ ಲಕ್ಷಾಂತರ ಜನ (ಆಯೋಜಕರು ಹೇಳಿಕೊಳ್ಳುವಂತೆ 20 ಲಕ್ಷ!) ಗಂಟೆಗಟ್ಟಲೆ ಈ ’ವಿಐಪಿ’ಗಳ ಭಾಷಣಗಳನ್ನು ಕೇಳುತ್ತಾ ಕೂತಿದ್ದರು. ನೆರೆದ ಜನರು ಬಿಸಿಲಿನಲ್ಲಿ ಕೂತು ಕೇಳಿಸಿಕೊಳ್ಳುತ್ತಿರುವ ಬಗ್ಗೆ ಅಮಿತ್ ಶಾ ಭಾಷಣ ಹೊಡೆಯುತ್ತಿದ್ದರೆ, ಅಲ್ಲಿ ನೆರೆದಿದ್ದ ನೂರಾರು ಜನರಿಗೆ ’ಹೀಟ್‌ಸ್ಟ್ರೋಕ್’ ಸಮಸ್ಯೆಯುಂಟಾಗಿ ಆಸ್ಪತ್ರೆಗೆ ದಾಖಲಾಗುವಂತಹ ಪರಿಸ್ಥಿತಿ ಉಂಟಾಯಿತು. ಈಗ ಕನಿಷ್ಟ 13 ಜನ ಮೃತಪಟ್ಟ ವರದಿಯಾಗಿದೆ. ಒಂದು ವಾರದ ಹಿಂದೆಯೇ ಸುಡುಬಿಸಿಲು ಮತ್ತು ಉಷ್ಣ ವಾಯುವಿನ ಸಲುವಾಗಿ ಮಹಾರಾಷ್ಟ್ರದ ಜನ ಹೀಟ್‌ಸ್ಟ್ರೋಕ್ ಸಮಸ್ಯೆಗೆ ಗುರಿಯಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಹಲವು ವರದಿಗಳು ಪತ್ರಿಕೆಗಳಲ್ಲಿ ಬಂದಿದ್ದವು. ಹೀಗಿದ್ದೂ, ಅಂದು ನೆರೆದ ಜನರಿಗೆ ಸಮರ್ಪಕವಾದ ಛಾವಣಿ ಮತ್ತು ನೆರಳು, ಅಗತ್ಯವಿದ್ದಷ್ಟು ಕುಡಿಯುವ ನೀರಿನ ವ್ಯವಸ್ಥೆ ಒದಗಿಸದೆ ಹತ್ತಾರು ಜನರ ಸಾವಿಗೆ ಕಾರಣವಾದ ಸರ್ಕಾರದ್ದು ’ಕ್ರಿಮಿನಲ್ ನೆಗ್ಲಿಜೆನ್ಸ್’ ಅಲ್ಲದೇ ಮತ್ತೇನು? ಹೀಗಿದ್ದೂ ಕೂಡ ಮುಖ್ಯವಾಹಿನಿ ಮಾಧ್ಯಮಗಳು ಈ ಸಾವುಗಳಿಗೆ ಯಾರು ಹೊಣೆ ಎಂದು ಮುಖ್ಯಮಂತ್ರಿಯವರನ್ನು ದಬಾಯಿಸಲಿಲ್ಲ! ಮುಖಕ್ಕೆ ಮೈಕ್ ಹಿಡಿದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಎಂದು ಆಗ್ರಹಿಸಲಿಲ್ಲ. ಮಾತು ಸೋತ ಮಾಧ್ಯಮಗಳು ತಣ್ಣಗಾಗಿ ಹೋಗಿದ್ದವು!

ದೇಶಕ್ಕೆ ಕರಾಳ ದಿನಗಳು ಬಂದೆರಗುವುದಕ್ಕೆ ಸರ್ವಾಧಿಕಾರಿ ಧೋರಣೆಯ ಪ್ರಭುತ್ವದಷ್ಟೇ ಇಂತಹ ಮಾರಿಕೊಂಡ ಮಾಧ್ಯಮಗಳದ್ದೂ ಪಾತ್ರವಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...