Homeಅಂಕಣಗಳುಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

ಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

- Advertisement -
- Advertisement -

ಇತ್ತೀಚಿಗೆ ನಡೆದ ಮೂರು ಘಟನೆಗಳಿಗೆ ಮುಖ್ಯವಾಹಿನಿ ಮಾಧ್ಯಮಗಳು ಸ್ಪಂದಿಸಿದ ರೀತಿ ಇಂದು ದೇಶ ಎದುರಿಸುತ್ತಿರುವ ಬಿಕ್ಕಟ್ಟಿಗೆ ಸ್ಪಷ್ಟ ಕಾರಣಗಳನ್ನು ತಿಳಿಸುವಂತಿದೆ.

ಮೊದಲನೆಯದು ಈಗ ನಡೆದದ್ದಲ್ಲದೇ ಇದ್ದರೂ, 2019ರ ಲೋಕಸಭಾ ಚುನಾವಣೆಗೂ ಮುನ್ನ ನಡೆದ ಪುಲ್ವಾಮಾ ಘಟನೆಯ ಬಗ್ಗೆ ಅಂದು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರು ’ದ ವೈರ್’ ಪತ್ರಿಕೆಗೆ ನೀಡಿದ ಸಂದರ್ಶನಕ್ಕೆ ಸಂಬಂಧಿಸಿದ್ದು. ಪತ್ರಕರ್ತ ಕರಣ್ ಥಾಪರ್ ಜೊತೆಗಿನ ಈ ಸಂದರ್ಶನವನ್ನು ಏಪ್ರಿಲ್ 14ರಂದು ಬಿತ್ತರಿಸಲಾಯಿತು. ಅಂದು ಪುಲಾಮಾ ಉಗ್ರರ ದಾಳಿಯಲ್ಲಿ 40 ಭಾರತೀಯ ಸಿಆರ್‌ಪಿಎಫ್ ಯೋಧರು ಮೃತರಾದದ್ದಕ್ಕೆ ಮೋದಿ ನೇತೃತ್ವದ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂಬುದರಿಂದ ಹಿಡಿದು, ಜಮ್ಮು ಕಾಶ್ಮೀರದಲ್ಲಿ ರಿಲಾಯನ್ಸ್ ವಿಮೆಯನ್ನು ಸರ್ಕಾರಿ ನೌಕರರಿಗೆ ಜಾರಿಮಾಡಲು ತಮ್ಮ ಮೇಲಿದ್ದ ಒತ್ತಡ, ತಾವು ಗೋವಾ ರಾಜ್ಯಪಾಲರಾಗಿದ್ದಾಗ ಭ್ರಷ್ಟಾಚಾರದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಲರ್ಟ್ ಮಾಡಿದಾಗ ಅವರು ತೋರಿದ ಉಪೇಕ್ಷೆ – ಹೀಗೆ ಹತ್ತು ಹಲವು ಸಂಗತಿಗಳನ್ನು ಬಹಿರಂಗಪಡಿಸಿದ್ದರು. ಮಲಿಕ್ ಅವರ ಹೇಳಿಕೆಗಳ ಹಿಂದೆ ಬಿದ್ದು ಅದರ ಸತ್ಯಾಸತ್ಯತೆಯನ್ನು ಕಂಡುಹಿಡಿಯುವ, ಆ ಆರೋಪಗಳಗೆ ಉತ್ತರಿಸಬೇಕಿದ್ದ ಸರ್ಕಾರದ ವಕ್ತಾರರು ಮತ್ತು ಸಚಿವರನ್ನು ಪ್ರಶ್ನಿಸುವ ಕೆಲಸಕ್ಕೆ ಮಾಧ್ಯಮಗಳು ಮುಂದಾಗಬೇಕಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಾದರೆ ಬಹುತೇಕ ಎಲ್ಲ ಸಚಿವರ ಮುಖಕ್ಕೆ ಮೈಕ್ ಹಿಡಿದು ಮಾಧ್ಯಮಗಳು ಮಲಿಕ್ ಆರೋಪಗಳಿಗೆ ಉತ್ತರಿಸಿ ಎಂದು ದುಂಬಾಲು ಬಿದ್ದಿರುತ್ತಿದ್ದವು. ಆದರೆ ಈ ಸಂದರ್ಭದಲ್ಲಿ, ಮುಖ್ಯವಾಹಿನಿಯ ಕೆಲವೇ ಕೆಲವು ದಿನಪತ್ರಿಕೆಗಳನ್ನು ಹೊರತುಪಡಿಸಿದರೆ ಬಹುತೇಕ ಮುದ್ರಣ ಮತ್ತು ಟಿವಿ ಮಾಧ್ಯಮಗಳು ಮೌನಕ್ಕೆ ಜಾರಿದ್ದವು. ದೇಶದ ರಕ್ಷಣೆಗೆ ಹಾಗೂ ಸೈನಿಕರ ಜೀವಕ್ಕೆ ಸಂಬಂಧಿಸಿದಂತೆ ಸರ್ಕಾರದ ಲೋಪದೋಷದ ಆರೋಪದ ಬಗ್ಗೆ ಮಾಧ್ಯಮಗಳು ಉಸಿರು ಬಿಚ್ಚದಿರುವುದಕ್ಕೆ ಯಾರು ಕಾರಣ ಎಂದು ಊಹಿಸುವುದು ಕಷ್ಟವೇನಲ್ಲ! ಪ್ರಭುತ್ವದಿಂದ ಮಾಧ್ಯಮಗಳಿಗೆ ಉಸಿರುಗಟ್ಟುವ ವಾತಾವರಣ ಸೃಷ್ಟಿಯಾಗಿರುವುದಕ್ಕೆ ಮಾಧ್ಯಮದವರು ಕೂಡ ಜವಾಬ್ದಾರರಲ್ಲವೇ!

ಎರಡನೆಯದ್ದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರದ ಪೊಲೀಸ್ ವ್ಯವಸ್ಥೆಯ ಅಡಿಯಲ್ಲಿ ಏಪ್ರಿಲ್ 15ರಂದು ನಡೆದ ಘಟನೆ. ರೌಡಿಸಂನಿಂದ ರಾಜಕಾರಣಿಯಾಗಿದ್ದ ಆತಿಕ್ ಅಹಮದ್ ಮತ್ತು ಅವರ ಸಹೋದರ ಆಶ್ರಫ್‌ರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ಯುವಾಗ ಮೂರು ಜನ ಬಂದೂಕುಧಾರಿಗಳು ಕ್ಯಾಮರಾ ಮುಂದೆಯೇ ಗುಂಡಿನ ಸುರಿಮಳೆಗೈದು ಕೊಂದರು. ಮೃತರಾದ ಆರೋಪಿಗಳನ್ನು ವಿಚಾರಣೆ ನಡೆಸಿ, ತಪ್ಪಿತಸ್ಥರೆಂದು ಸಾಬೀತಾದರೆ ಶಿಕ್ಷೆ ನೀಡಲು ನ್ಯಾಯಾಲಯ ಇದೆ, ಕಾನೂನಿದೆ. ಆದರೆ, ಪೊಲೀಸರ ಸಮಕ್ಷಮದಲ್ಲಿ ನಡೆದ ಈ ಬೆಚ್ಚಿಬೀಳಿಸುವ ಶೂಟೌಟ್ ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಣೆಯಾಗಿರುವ ಕಥೆಯನ್ನು ಹೇಳುತ್ತಿತ್ತು. ಇದನ್ನು ಪ್ರಶ್ನಿಸಿ ಸರ್ಕಾರವನ್ನು ಕಟಕಟೆಗೆ ನಿಲ್ಲಿಸಬೇಕಿದ್ದ ಮಾಧ್ಯಮಗಳು ಎಂದಿನಂತೆ ಒಂದೋ ಮೌನವಾಗಿದ್ದವು, ಮತ್ತು ಕೆಲವು ಒಂದು ಹಂತ ಮುಂದಕ್ಕೆ ಹೋಗಿ ಈ ಕಾನೂನಿಬಾಹಿರ ಕೊಲೆಗಳನ್ನು ಸಂಭ್ರಮಿಸುತ್ತಿದ್ದವು. ಇದನ್ನು ಸಂಭ್ರಮಿಸಿದ ಮಾಧ್ಯಮಗಳು ಆ ಕೊಲೆಗಾರ ಶೂಟರ್‌ಗಳಿಗಿಂತಲೂ ಹೀನಾಯ ಮನಸ್ಥಿತಿಯವರು ಅನ್ನುವುದರಲ್ಲಿ ಎರಡು ಮಾತಿಲ್ಲ.

ಇದನ್ನೂ ಓದಿ: ಪುಲ್ವಾಮ ದಾಳಿ ಕುರಿತು ಸತ್ಯಪಾಲ್ ಮಲಿಕ್‌ರವರ 5 ಗಂಭೀರ ಆರೋಪಗಳು: ಪ್ರಧಾನಿಯನ್ನು ಪ್ರಶ್ನಿಸದವರು ಪಾಕಿಸ್ತಾನಕ್ಕೆ ಹೋಗಿ

ಮೂರನೆಯದ್ದು ಏಪ್ರಿಲ್, 15 ಭಾನುವಾರದಂದು ನಡೆದ ಘಟನೆ. ಮಹಾರಾಷ್ಟ್ರದ ನವಿ ಮುಂಬೈನ ತೆರೆದ ಮೈದಾನವೊಂದರಲ್ಲಿ ’ಮಹಾರಾಷ್ಟ್ರ ಭೂಷಣ’ ಪ್ರಶಸ್ತಿ ಪ್ರದಾನ ಮಾಡಲು ಆಯೋಜಿಸಿದ್ದ ಬೃಹತ್ ವೇದಿಕೆಯ ಮೇಲೆ ನೆರಳಿನಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಸೇರಿದಂತೆ ಮತ್ತಿತರ ’ವಿಐಪಿ’ಗಳು ಸುಖವಾಗಿ ಆಸೀನರಾಗಿದ್ದರು. ಸುಡು ಬಿಸಿಲಿನಲ್ಲಿ ಯಾವುದೇ ಛಾವಣಿಯಿಲ್ಲದೆ, ನೆರಳಿಲ್ಲದೆ ಲಕ್ಷಾಂತರ ಜನ (ಆಯೋಜಕರು ಹೇಳಿಕೊಳ್ಳುವಂತೆ 20 ಲಕ್ಷ!) ಗಂಟೆಗಟ್ಟಲೆ ಈ ’ವಿಐಪಿ’ಗಳ ಭಾಷಣಗಳನ್ನು ಕೇಳುತ್ತಾ ಕೂತಿದ್ದರು. ನೆರೆದ ಜನರು ಬಿಸಿಲಿನಲ್ಲಿ ಕೂತು ಕೇಳಿಸಿಕೊಳ್ಳುತ್ತಿರುವ ಬಗ್ಗೆ ಅಮಿತ್ ಶಾ ಭಾಷಣ ಹೊಡೆಯುತ್ತಿದ್ದರೆ, ಅಲ್ಲಿ ನೆರೆದಿದ್ದ ನೂರಾರು ಜನರಿಗೆ ’ಹೀಟ್‌ಸ್ಟ್ರೋಕ್’ ಸಮಸ್ಯೆಯುಂಟಾಗಿ ಆಸ್ಪತ್ರೆಗೆ ದಾಖಲಾಗುವಂತಹ ಪರಿಸ್ಥಿತಿ ಉಂಟಾಯಿತು. ಈಗ ಕನಿಷ್ಟ 13 ಜನ ಮೃತಪಟ್ಟ ವರದಿಯಾಗಿದೆ. ಒಂದು ವಾರದ ಹಿಂದೆಯೇ ಸುಡುಬಿಸಿಲು ಮತ್ತು ಉಷ್ಣ ವಾಯುವಿನ ಸಲುವಾಗಿ ಮಹಾರಾಷ್ಟ್ರದ ಜನ ಹೀಟ್‌ಸ್ಟ್ರೋಕ್ ಸಮಸ್ಯೆಗೆ ಗುರಿಯಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಹಲವು ವರದಿಗಳು ಪತ್ರಿಕೆಗಳಲ್ಲಿ ಬಂದಿದ್ದವು. ಹೀಗಿದ್ದೂ, ಅಂದು ನೆರೆದ ಜನರಿಗೆ ಸಮರ್ಪಕವಾದ ಛಾವಣಿ ಮತ್ತು ನೆರಳು, ಅಗತ್ಯವಿದ್ದಷ್ಟು ಕುಡಿಯುವ ನೀರಿನ ವ್ಯವಸ್ಥೆ ಒದಗಿಸದೆ ಹತ್ತಾರು ಜನರ ಸಾವಿಗೆ ಕಾರಣವಾದ ಸರ್ಕಾರದ್ದು ’ಕ್ರಿಮಿನಲ್ ನೆಗ್ಲಿಜೆನ್ಸ್’ ಅಲ್ಲದೇ ಮತ್ತೇನು? ಹೀಗಿದ್ದೂ ಕೂಡ ಮುಖ್ಯವಾಹಿನಿ ಮಾಧ್ಯಮಗಳು ಈ ಸಾವುಗಳಿಗೆ ಯಾರು ಹೊಣೆ ಎಂದು ಮುಖ್ಯಮಂತ್ರಿಯವರನ್ನು ದಬಾಯಿಸಲಿಲ್ಲ! ಮುಖಕ್ಕೆ ಮೈಕ್ ಹಿಡಿದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಎಂದು ಆಗ್ರಹಿಸಲಿಲ್ಲ. ಮಾತು ಸೋತ ಮಾಧ್ಯಮಗಳು ತಣ್ಣಗಾಗಿ ಹೋಗಿದ್ದವು!

ದೇಶಕ್ಕೆ ಕರಾಳ ದಿನಗಳು ಬಂದೆರಗುವುದಕ್ಕೆ ಸರ್ವಾಧಿಕಾರಿ ಧೋರಣೆಯ ಪ್ರಭುತ್ವದಷ್ಟೇ ಇಂತಹ ಮಾರಿಕೊಂಡ ಮಾಧ್ಯಮಗಳದ್ದೂ ಪಾತ್ರವಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...