Homeಮುಖಪುಟಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ: ಕೇಂದ್ರಕ್ಕೆ ಟಿಎಂಸಿ ಪ್ರಶ್ನೆ

ಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ: ಕೇಂದ್ರಕ್ಕೆ ಟಿಎಂಸಿ ಪ್ರಶ್ನೆ

- Advertisement -
- Advertisement -

ಆಪರೇಷನ್ ಸಿಂಧೂರ್ ಬಗ್ಗೆಗಿನ ಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ‘ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ’ ಎಂದು ನಿಯೋಗದ ಭಾಗವಾಗಿರುವ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಸೋಮವಾರ ಪ್ರಶ್ನಿಸಿದ್ದಾರೆ. ಪಹಲ್ಗಾಮ್ ದಾಳಿಯ ನಂತರ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ತಿಳಿಸಲು ಇತ್ತೀಚಿನ ವಾರಗಳಲ್ಲಿ 33 ದೇಶಗಳಿಗೆ ಭಾರತೀಯ ನಿಯೋಗ ಭೇಟಿ ನೀಡಿತ್ತು. ಈ ನಿಯೋಗದಲ್ಲಿ ಅಭಿಷೇಕ್ ಬ್ಯಾನರ್ಜಿ ಅವರು ಕೂಡಾ ಇದ್ದರು. ಜಾಗತಿಕ ರಾಜತಾಂತ್ರಿಕ ಸಂಪರ್ಕದ

ಈ ಸಂಪರ್ಕದ ನಂತರ ಎಷ್ಟು ದೇಶಗಳು ಭಾರತಕ್ಕೆ ಸ್ಪಷ್ಟವಾಗಿ ಬೆಂಬಲ ನೀಡಿವೆ ಎಂದು ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಅಗಿರುವ ಅವರು ಕೇಳಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಸಂಬಂಧಿಸಿದಂತೆ ಸರ್ಕಾರದ ಪ್ರತಿಕ್ರಿಯೆಯಲ್ಲಿ ಭಾರತೀಯ ನಾಗರಿಕರೊಂದಿಗೆ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಇರಬೇಕು ಎಂದು ಅವರು ಹೇಳಿದ್ದಾರೆ.

“ನಾಲ್ವರು ಭಯೋತ್ಪಾದಕರು ಗಡಿಯೊಳಗೆ ನುಸುಳಿ 26 ಅಮಾಯಕ ನಾಗರಿಕರನ್ನು ಕೊಂದ ಈ ದಾಳಿ ಹೇಗೆ ನಡೆಯಿತು? ರಾಷ್ಟ್ರೀಯ ಭದ್ರತೆಯಲ್ಲಿನ ಈ ಬೃಹತ್ ಲೋಪಕ್ಕೆ ಹೊಣೆಗಾರಿಕೆ ಎಲ್ಲಿದೆ?” ಎಂದು ಅವರು ಕೇಳಿದ್ದಾರೆ. ಈ ಹತ್ಯಾಕಾಂಡಕ್ಕೆ ಕಾರಣವಾದ ನಾಲ್ವರು ಭಯೋತ್ಪಾದಕರನ್ನು ಕಾನೂನಿಯ ಅಡಿಯಲ್ಲಿ ತರಲಾಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಈ ದಾಳಿಯು ಗುಪ್ತಚರ ವೈಫಲ್ಯದ ಪರಿಣಾಮವೇ ಎಂದು ಪ್ರಶ್ನಿಸಿದ ಅಭಿಷೇಕ್, ದಾಳಿಯ ಕೇವಲ ಒಂದು ತಿಂಗಳ ನಂತರ ಗುಪ್ತಚರ ಬ್ಯೂರೋ ಮುಖ್ಯಸ್ಥ ತಪನ್ ಕುಮಾರ್ ದೇಕಾ ಅವರಿಗೆ ಒಂದು ವರ್ಷದ ಸೇವಾ ಅವಧಿ ವಿಸ್ತರಣೆ ಯಾಕೆ ನೀಡಲಾಯಿತು ಎಂದು ಪ್ರಶ್ನಿಸಿದ್ದಾರೆ. “ಘಟನೆಗೆ ಅವರನ್ನು ಹೊಣೆಗಾರರನ್ನಾಗಿ ಮಾಡುವ ಬದಲು ಅವರಿಗೆ ಏಕೆ ಬಹುಮಾನ ನೀಡಲಾಯಿತು?. ಅಂತಹ ಒತ್ತಡ ಏನಿತ್ತು” ಎಂದು ಅವರು ಕೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದೇನೆ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಸೋಮವಾರ ಪಕ್ಷದ ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರಿಯಾನ್ ಅವರು ಭಯೋತ್ಪಾದಕ ದಾಳಿ ನಡೆದು 55 ದಿನಗಳು ಕಳೆದಿವೆ ಎಂದು ಪುನರುಚ್ಚರಿಸಿದ್ದು, ಅಭಿಷೇಕ್ ಅವರು ಕೇಂದ್ರ ಸರ್ಕಾರಕ್ಕೆ ಕೇಳಿದ ಪ್ರಶ್ನೆಗಳಿಗೆ ಉತ್ತರಗಳನ್ನು ಕೋರಿದ್ದಾರೆ.

ಮಂಗಳವಾರ ಪ್ರತಿಕ್ರಿಯಿಸಿದ ಅವರ ಪಕ್ಷವೂ, ಅಭಿಷೇಕ್ ಬ್ಯಾನರ್ಜಿ ಅವರು ಉತ್ತರಗಳನ್ನು ನಿರೀಕ್ಷಿಸಿ ಕೇಳಲಾದ ಪ್ರಶ್ನೆಗಳಿಗೆ 24 ಗಂಟೆಗಳು ಕಳೆದಿವೆ, “ಉತ್ತರಕ್ಕಾಗಿ ರಾಷ್ಟ್ರ ಇನ್ನೂ ಕಾಯುತ್ತಿದೆ” ಎಂದು ಪಕ್ಷ ಹೇಳಿದೆ.

ಪಾಕಿಸ್ತಾನದ ಗಡಿಯಾಚೆಗಿನ ಭಯೋತ್ಪಾದನೆಯ ಕುರಿತು ಭಾರತದ ನಿಲುವನ್ನು ತಿಳಿಸಲು ಇತ್ತೀಚಿನ ವಾರಗಳಲ್ಲಿ 33 ದೇಶಗಳಿಗೆ ಭೇಟಿ ನೀಡಿದ್ದ ಮಾಜಿ ರಾಜತಾಂತ್ರಿಕರು ಮತ್ತು ಸಂಸದರನ್ನು ಒಳಗೊಂಡ ಭಾರತೀಯ ನಿಯೋಗಗಳ ಸದಸ್ಯರಿಗೆ ಪ್ರಧಾನಿ ಮೋದಿ ಆತಿಥ್ಯ ವಹಿಸಿದ ನಂತರ ಅಭಿಷೇಕ್ ಬ್ಯಾನರ್ಜಿ ಈ ಪ್ರಶ್ನೆಗಳನ್ನು ಕೇಳಿದ್ದಾರೆ.

ಸರ್ಕಾರ ಘೋಷಿಸಿದ ನಿಯೋಗದ ಸದಸ್ಯರಲ್ಲಿ ಅಭಿಷೇಕ್ ಬ್ಯಾನರ್ಜಿ ಅವರ ಹೆಸರು ಆರಂಭದಲ್ಲಿ ಇರಲಿಲ್ಲ. ಬಹರಾಮ್‌ಪುರ ಸಂಸದ ಯೂಸುಫ್ ಪಠಾಣ್ ಅವರನ್ನು ಪಕ್ಷವನ್ನು ಪ್ರತಿನಿಧಿಸಲು ಕೇಂದ್ರವು ಆಯ್ಕೆ ಮಾಡಿತ್ತು.

ಅದಾಗ್ಯೂ, ತೃಣಮೂಲ ಕಾಂಗ್ರೆಸ್ ಅನ್ನು ಪ್ರತಿನಿಧಿಸುವವರು ಯಾರಾಗಿರಬೇಕು ಎಂದು ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ನಿರ್ಧರಿಸಿದ್ದಕ್ಕಾಗಿ ಟೀಕೆ ವ್ಯಕ್ತವಾದ ನಂತರ, ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಯೂಸುಫ್ ಪಠಾಣ್ ಅವರ ಹೆಸರನ್ನು ಹಿಂತೆಗೆದುಕೊಂಡು ಮತ್ತು ಬದಲಿಗೆ ಅಭಿಷೇಕ್ ಬ್ಯಾನರ್ಜಿಯನ್ನು ಕಳುಹಿಸಿದರು. ಜಾಗತಿಕ ರಾಜತಾಂತ್ರಿಕ ಸಂಪರ್ಕದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: 10 ಜನರ ಬಂಧನ

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: 10 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...