Homeಮುಖಪುಟಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ: ಕೇಂದ್ರಕ್ಕೆ ಟಿಎಂಸಿ ಪ್ರಶ್ನೆ

ಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ: ಕೇಂದ್ರಕ್ಕೆ ಟಿಎಂಸಿ ಪ್ರಶ್ನೆ

- Advertisement -
- Advertisement -

ಆಪರೇಷನ್ ಸಿಂಧೂರ್ ಬಗ್ಗೆಗಿನ ಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ‘ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ’ ಎಂದು ನಿಯೋಗದ ಭಾಗವಾಗಿರುವ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಸೋಮವಾರ ಪ್ರಶ್ನಿಸಿದ್ದಾರೆ. ಪಹಲ್ಗಾಮ್ ದಾಳಿಯ ನಂತರ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ತಿಳಿಸಲು ಇತ್ತೀಚಿನ ವಾರಗಳಲ್ಲಿ 33 ದೇಶಗಳಿಗೆ ಭಾರತೀಯ ನಿಯೋಗ ಭೇಟಿ ನೀಡಿತ್ತು. ಈ ನಿಯೋಗದಲ್ಲಿ ಅಭಿಷೇಕ್ ಬ್ಯಾನರ್ಜಿ ಅವರು ಕೂಡಾ ಇದ್ದರು. ಜಾಗತಿಕ ರಾಜತಾಂತ್ರಿಕ ಸಂಪರ್ಕದ

ಈ ಸಂಪರ್ಕದ ನಂತರ ಎಷ್ಟು ದೇಶಗಳು ಭಾರತಕ್ಕೆ ಸ್ಪಷ್ಟವಾಗಿ ಬೆಂಬಲ ನೀಡಿವೆ ಎಂದು ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಅಗಿರುವ ಅವರು ಕೇಳಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಸಂಬಂಧಿಸಿದಂತೆ ಸರ್ಕಾರದ ಪ್ರತಿಕ್ರಿಯೆಯಲ್ಲಿ ಭಾರತೀಯ ನಾಗರಿಕರೊಂದಿಗೆ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಇರಬೇಕು ಎಂದು ಅವರು ಹೇಳಿದ್ದಾರೆ.

“ನಾಲ್ವರು ಭಯೋತ್ಪಾದಕರು ಗಡಿಯೊಳಗೆ ನುಸುಳಿ 26 ಅಮಾಯಕ ನಾಗರಿಕರನ್ನು ಕೊಂದ ಈ ದಾಳಿ ಹೇಗೆ ನಡೆಯಿತು? ರಾಷ್ಟ್ರೀಯ ಭದ್ರತೆಯಲ್ಲಿನ ಈ ಬೃಹತ್ ಲೋಪಕ್ಕೆ ಹೊಣೆಗಾರಿಕೆ ಎಲ್ಲಿದೆ?” ಎಂದು ಅವರು ಕೇಳಿದ್ದಾರೆ. ಈ ಹತ್ಯಾಕಾಂಡಕ್ಕೆ ಕಾರಣವಾದ ನಾಲ್ವರು ಭಯೋತ್ಪಾದಕರನ್ನು ಕಾನೂನಿಯ ಅಡಿಯಲ್ಲಿ ತರಲಾಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಈ ದಾಳಿಯು ಗುಪ್ತಚರ ವೈಫಲ್ಯದ ಪರಿಣಾಮವೇ ಎಂದು ಪ್ರಶ್ನಿಸಿದ ಅಭಿಷೇಕ್, ದಾಳಿಯ ಕೇವಲ ಒಂದು ತಿಂಗಳ ನಂತರ ಗುಪ್ತಚರ ಬ್ಯೂರೋ ಮುಖ್ಯಸ್ಥ ತಪನ್ ಕುಮಾರ್ ದೇಕಾ ಅವರಿಗೆ ಒಂದು ವರ್ಷದ ಸೇವಾ ಅವಧಿ ವಿಸ್ತರಣೆ ಯಾಕೆ ನೀಡಲಾಯಿತು ಎಂದು ಪ್ರಶ್ನಿಸಿದ್ದಾರೆ. “ಘಟನೆಗೆ ಅವರನ್ನು ಹೊಣೆಗಾರರನ್ನಾಗಿ ಮಾಡುವ ಬದಲು ಅವರಿಗೆ ಏಕೆ ಬಹುಮಾನ ನೀಡಲಾಯಿತು?. ಅಂತಹ ಒತ್ತಡ ಏನಿತ್ತು” ಎಂದು ಅವರು ಕೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದೇನೆ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಸೋಮವಾರ ಪಕ್ಷದ ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರಿಯಾನ್ ಅವರು ಭಯೋತ್ಪಾದಕ ದಾಳಿ ನಡೆದು 55 ದಿನಗಳು ಕಳೆದಿವೆ ಎಂದು ಪುನರುಚ್ಚರಿಸಿದ್ದು, ಅಭಿಷೇಕ್ ಅವರು ಕೇಂದ್ರ ಸರ್ಕಾರಕ್ಕೆ ಕೇಳಿದ ಪ್ರಶ್ನೆಗಳಿಗೆ ಉತ್ತರಗಳನ್ನು ಕೋರಿದ್ದಾರೆ.

ಮಂಗಳವಾರ ಪ್ರತಿಕ್ರಿಯಿಸಿದ ಅವರ ಪಕ್ಷವೂ, ಅಭಿಷೇಕ್ ಬ್ಯಾನರ್ಜಿ ಅವರು ಉತ್ತರಗಳನ್ನು ನಿರೀಕ್ಷಿಸಿ ಕೇಳಲಾದ ಪ್ರಶ್ನೆಗಳಿಗೆ 24 ಗಂಟೆಗಳು ಕಳೆದಿವೆ, “ಉತ್ತರಕ್ಕಾಗಿ ರಾಷ್ಟ್ರ ಇನ್ನೂ ಕಾಯುತ್ತಿದೆ” ಎಂದು ಪಕ್ಷ ಹೇಳಿದೆ.

ಪಾಕಿಸ್ತಾನದ ಗಡಿಯಾಚೆಗಿನ ಭಯೋತ್ಪಾದನೆಯ ಕುರಿತು ಭಾರತದ ನಿಲುವನ್ನು ತಿಳಿಸಲು ಇತ್ತೀಚಿನ ವಾರಗಳಲ್ಲಿ 33 ದೇಶಗಳಿಗೆ ಭೇಟಿ ನೀಡಿದ್ದ ಮಾಜಿ ರಾಜತಾಂತ್ರಿಕರು ಮತ್ತು ಸಂಸದರನ್ನು ಒಳಗೊಂಡ ಭಾರತೀಯ ನಿಯೋಗಗಳ ಸದಸ್ಯರಿಗೆ ಪ್ರಧಾನಿ ಮೋದಿ ಆತಿಥ್ಯ ವಹಿಸಿದ ನಂತರ ಅಭಿಷೇಕ್ ಬ್ಯಾನರ್ಜಿ ಈ ಪ್ರಶ್ನೆಗಳನ್ನು ಕೇಳಿದ್ದಾರೆ.

ಸರ್ಕಾರ ಘೋಷಿಸಿದ ನಿಯೋಗದ ಸದಸ್ಯರಲ್ಲಿ ಅಭಿಷೇಕ್ ಬ್ಯಾನರ್ಜಿ ಅವರ ಹೆಸರು ಆರಂಭದಲ್ಲಿ ಇರಲಿಲ್ಲ. ಬಹರಾಮ್‌ಪುರ ಸಂಸದ ಯೂಸುಫ್ ಪಠಾಣ್ ಅವರನ್ನು ಪಕ್ಷವನ್ನು ಪ್ರತಿನಿಧಿಸಲು ಕೇಂದ್ರವು ಆಯ್ಕೆ ಮಾಡಿತ್ತು.

ಅದಾಗ್ಯೂ, ತೃಣಮೂಲ ಕಾಂಗ್ರೆಸ್ ಅನ್ನು ಪ್ರತಿನಿಧಿಸುವವರು ಯಾರಾಗಿರಬೇಕು ಎಂದು ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ನಿರ್ಧರಿಸಿದ್ದಕ್ಕಾಗಿ ಟೀಕೆ ವ್ಯಕ್ತವಾದ ನಂತರ, ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಯೂಸುಫ್ ಪಠಾಣ್ ಅವರ ಹೆಸರನ್ನು ಹಿಂತೆಗೆದುಕೊಂಡು ಮತ್ತು ಬದಲಿಗೆ ಅಭಿಷೇಕ್ ಬ್ಯಾನರ್ಜಿಯನ್ನು ಕಳುಹಿಸಿದರು. ಜಾಗತಿಕ ರಾಜತಾಂತ್ರಿಕ ಸಂಪರ್ಕದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: 10 ಜನರ ಬಂಧನ

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: 10 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...