Homeಮುಖಪುಟಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ: ಕೇಂದ್ರಕ್ಕೆ ಟಿಎಂಸಿ ಪ್ರಶ್ನೆ

ಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ: ಕೇಂದ್ರಕ್ಕೆ ಟಿಎಂಸಿ ಪ್ರಶ್ನೆ

- Advertisement -
- Advertisement -

ಆಪರೇಷನ್ ಸಿಂಧೂರ್ ಬಗ್ಗೆಗಿನ ಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ‘ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ’ ಎಂದು ನಿಯೋಗದ ಭಾಗವಾಗಿರುವ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಸೋಮವಾರ ಪ್ರಶ್ನಿಸಿದ್ದಾರೆ. ಪಹಲ್ಗಾಮ್ ದಾಳಿಯ ನಂತರ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ತಿಳಿಸಲು ಇತ್ತೀಚಿನ ವಾರಗಳಲ್ಲಿ 33 ದೇಶಗಳಿಗೆ ಭಾರತೀಯ ನಿಯೋಗ ಭೇಟಿ ನೀಡಿತ್ತು. ಈ ನಿಯೋಗದಲ್ಲಿ ಅಭಿಷೇಕ್ ಬ್ಯಾನರ್ಜಿ ಅವರು ಕೂಡಾ ಇದ್ದರು. ಜಾಗತಿಕ ರಾಜತಾಂತ್ರಿಕ ಸಂಪರ್ಕದ

ಈ ಸಂಪರ್ಕದ ನಂತರ ಎಷ್ಟು ದೇಶಗಳು ಭಾರತಕ್ಕೆ ಸ್ಪಷ್ಟವಾಗಿ ಬೆಂಬಲ ನೀಡಿವೆ ಎಂದು ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಅಗಿರುವ ಅವರು ಕೇಳಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಸಂಬಂಧಿಸಿದಂತೆ ಸರ್ಕಾರದ ಪ್ರತಿಕ್ರಿಯೆಯಲ್ಲಿ ಭಾರತೀಯ ನಾಗರಿಕರೊಂದಿಗೆ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಇರಬೇಕು ಎಂದು ಅವರು ಹೇಳಿದ್ದಾರೆ.

“ನಾಲ್ವರು ಭಯೋತ್ಪಾದಕರು ಗಡಿಯೊಳಗೆ ನುಸುಳಿ 26 ಅಮಾಯಕ ನಾಗರಿಕರನ್ನು ಕೊಂದ ಈ ದಾಳಿ ಹೇಗೆ ನಡೆಯಿತು? ರಾಷ್ಟ್ರೀಯ ಭದ್ರತೆಯಲ್ಲಿನ ಈ ಬೃಹತ್ ಲೋಪಕ್ಕೆ ಹೊಣೆಗಾರಿಕೆ ಎಲ್ಲಿದೆ?” ಎಂದು ಅವರು ಕೇಳಿದ್ದಾರೆ. ಈ ಹತ್ಯಾಕಾಂಡಕ್ಕೆ ಕಾರಣವಾದ ನಾಲ್ವರು ಭಯೋತ್ಪಾದಕರನ್ನು ಕಾನೂನಿಯ ಅಡಿಯಲ್ಲಿ ತರಲಾಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಈ ದಾಳಿಯು ಗುಪ್ತಚರ ವೈಫಲ್ಯದ ಪರಿಣಾಮವೇ ಎಂದು ಪ್ರಶ್ನಿಸಿದ ಅಭಿಷೇಕ್, ದಾಳಿಯ ಕೇವಲ ಒಂದು ತಿಂಗಳ ನಂತರ ಗುಪ್ತಚರ ಬ್ಯೂರೋ ಮುಖ್ಯಸ್ಥ ತಪನ್ ಕುಮಾರ್ ದೇಕಾ ಅವರಿಗೆ ಒಂದು ವರ್ಷದ ಸೇವಾ ಅವಧಿ ವಿಸ್ತರಣೆ ಯಾಕೆ ನೀಡಲಾಯಿತು ಎಂದು ಪ್ರಶ್ನಿಸಿದ್ದಾರೆ. “ಘಟನೆಗೆ ಅವರನ್ನು ಹೊಣೆಗಾರರನ್ನಾಗಿ ಮಾಡುವ ಬದಲು ಅವರಿಗೆ ಏಕೆ ಬಹುಮಾನ ನೀಡಲಾಯಿತು?. ಅಂತಹ ಒತ್ತಡ ಏನಿತ್ತು” ಎಂದು ಅವರು ಕೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದೇನೆ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಸೋಮವಾರ ಪಕ್ಷದ ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರಿಯಾನ್ ಅವರು ಭಯೋತ್ಪಾದಕ ದಾಳಿ ನಡೆದು 55 ದಿನಗಳು ಕಳೆದಿವೆ ಎಂದು ಪುನರುಚ್ಚರಿಸಿದ್ದು, ಅಭಿಷೇಕ್ ಅವರು ಕೇಂದ್ರ ಸರ್ಕಾರಕ್ಕೆ ಕೇಳಿದ ಪ್ರಶ್ನೆಗಳಿಗೆ ಉತ್ತರಗಳನ್ನು ಕೋರಿದ್ದಾರೆ.

ಮಂಗಳವಾರ ಪ್ರತಿಕ್ರಿಯಿಸಿದ ಅವರ ಪಕ್ಷವೂ, ಅಭಿಷೇಕ್ ಬ್ಯಾನರ್ಜಿ ಅವರು ಉತ್ತರಗಳನ್ನು ನಿರೀಕ್ಷಿಸಿ ಕೇಳಲಾದ ಪ್ರಶ್ನೆಗಳಿಗೆ 24 ಗಂಟೆಗಳು ಕಳೆದಿವೆ, “ಉತ್ತರಕ್ಕಾಗಿ ರಾಷ್ಟ್ರ ಇನ್ನೂ ಕಾಯುತ್ತಿದೆ” ಎಂದು ಪಕ್ಷ ಹೇಳಿದೆ.

ಪಾಕಿಸ್ತಾನದ ಗಡಿಯಾಚೆಗಿನ ಭಯೋತ್ಪಾದನೆಯ ಕುರಿತು ಭಾರತದ ನಿಲುವನ್ನು ತಿಳಿಸಲು ಇತ್ತೀಚಿನ ವಾರಗಳಲ್ಲಿ 33 ದೇಶಗಳಿಗೆ ಭೇಟಿ ನೀಡಿದ್ದ ಮಾಜಿ ರಾಜತಾಂತ್ರಿಕರು ಮತ್ತು ಸಂಸದರನ್ನು ಒಳಗೊಂಡ ಭಾರತೀಯ ನಿಯೋಗಗಳ ಸದಸ್ಯರಿಗೆ ಪ್ರಧಾನಿ ಮೋದಿ ಆತಿಥ್ಯ ವಹಿಸಿದ ನಂತರ ಅಭಿಷೇಕ್ ಬ್ಯಾನರ್ಜಿ ಈ ಪ್ರಶ್ನೆಗಳನ್ನು ಕೇಳಿದ್ದಾರೆ.

ಸರ್ಕಾರ ಘೋಷಿಸಿದ ನಿಯೋಗದ ಸದಸ್ಯರಲ್ಲಿ ಅಭಿಷೇಕ್ ಬ್ಯಾನರ್ಜಿ ಅವರ ಹೆಸರು ಆರಂಭದಲ್ಲಿ ಇರಲಿಲ್ಲ. ಬಹರಾಮ್‌ಪುರ ಸಂಸದ ಯೂಸುಫ್ ಪಠಾಣ್ ಅವರನ್ನು ಪಕ್ಷವನ್ನು ಪ್ರತಿನಿಧಿಸಲು ಕೇಂದ್ರವು ಆಯ್ಕೆ ಮಾಡಿತ್ತು.

ಅದಾಗ್ಯೂ, ತೃಣಮೂಲ ಕಾಂಗ್ರೆಸ್ ಅನ್ನು ಪ್ರತಿನಿಧಿಸುವವರು ಯಾರಾಗಿರಬೇಕು ಎಂದು ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ನಿರ್ಧರಿಸಿದ್ದಕ್ಕಾಗಿ ಟೀಕೆ ವ್ಯಕ್ತವಾದ ನಂತರ, ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಯೂಸುಫ್ ಪಠಾಣ್ ಅವರ ಹೆಸರನ್ನು ಹಿಂತೆಗೆದುಕೊಂಡು ಮತ್ತು ಬದಲಿಗೆ ಅಭಿಷೇಕ್ ಬ್ಯಾನರ್ಜಿಯನ್ನು ಕಳುಹಿಸಿದರು. ಜಾಗತಿಕ ರಾಜತಾಂತ್ರಿಕ ಸಂಪರ್ಕದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: 10 ಜನರ ಬಂಧನ

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: 10 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...